Homeಕರೋನಾ ತಲ್ಲಣಕೆಲಸಕ್ಕೆ ಸೇರಿ 3 ತಿಂಗಳಾದರೂ ದಾದಿಯರಿಗೆ ಸಂಬಳ ಕೊಡದ ಬಿಎಂಸಿ!

ಕೆಲಸಕ್ಕೆ ಸೇರಿ 3 ತಿಂಗಳಾದರೂ ದಾದಿಯರಿಗೆ ಸಂಬಳ ಕೊಡದ ಬಿಎಂಸಿ!

ಏಪ್ರಿಲ್-ಮೇ ತಿಂಗಳಲ್ಲಿ ಬೃಹಮ್‌ಮುಂಬೈ ಮುನ್ಸಿಪಲ್‌ ಕಾರ್ಪೊರೇಶನ್ ಈ ದಾದಿಯರನ್ನು ವಿಶೇಷ ನೇಮಕಾತಿ ಅಡಿಯಲ್ಲಿ ನೇಮಕ ಮಾಡಿತ್ತು.

- Advertisement -
- Advertisement -

ಮುಂಬೈ ಮಹಾನಗರದಲ್ಲಿ ಕೊರೊನಾ ವೈರಸ್ ವಿರುದ್ಧದ ಹೋರಾಟವನ್ನು ಬಲಪಡಿಸಲು ಹೊಸದಾಗಿ ನೇಮಕಗೊಂಡ 209 ದಾದಿಯರಿಗೆ ಮುಂಬೈ ನಾಗರಿಕ ಸಂಸ್ಥೆಯಾದ ಬೃಹನ್‌‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಸಂಬಳ ಹಾಗೂ ವಿಶೇಷ ದೈನಂದಿನ ಭತ್ಯೆಯನ್ನು ನೀಡಿಲ್ಲ ಎಂದು ಕಾರ್ಮಿಕ ಸಂಘಟನೆ ಆರೋಪಿಸಿದೆ.

ನಗರದಲ್ಲಿ ಕೊರೊನಾ ವೈರಸ್ ಹರಡಲು ಪ್ರಾರಂಭವಾದ ಏಪ್ರಿಲ್-ಮೇ ತಿಂಗಳಲ್ಲಿ ಬಿಎಂಸಿ ಈ ದಾದಿಯರನ್ನು ವಿಶೇಷ ನೇಮಕಾತಿ ಅಡಿಯಲ್ಲಿ ನೇಮಕ ಮಾಡಿದೆ ಎಂದು ಮುನ್ಸಿಪಲ್ ಮಜ್ದೂರ್ ಯೂನಿಯನ್ (ಎಂಎಂಯು) ತಿಳಿಸಿದೆ.

ಆದಾಗ್ಯೂ, ಕಳೆದ ಮೂರು ತಿಂಗಳುಗಳಿಂದ ಬಿಎಂಸಿ ಅವರಿಗೆ ಸಂಬಳ ಹಾಗೂ ದೈನಂದಿನ 300 ರೂ. ವಿಶೇಷ ಭತ್ಯೆ ನೀಡಿಲ್ಲ ಎಂದು ಎಂಎಂಯು ಹೇಳಿದೆ.

ರೋಸ್ಟರ್ (ನೇಮಕಾತಿ) ಪರಿಶೀಲನೆ ನಡೆಯುತ್ತಿರುವ ಪ್ರಕ್ರಿಯೆಯಿಂದಾಗಿ ವೇತನ ವಿತರಣೆ ವಿಳಂಬವಾಗಿದೆ. ಆದರೆ ದಾದಿಯರಿಗೆ ಶೀಘ್ರದಲ್ಲೇ ಅವರ ವೇತನವನ್ನು ನೀಡಲಾಗುವುದು ಎಂದು ಬಿಎಂಸಿ ಆರೋಗ್ಯ ಇಲಾಖೆ ಅಧಿಕಾರಿ ಭರವಸೆ ನೀಡಿದ್ದಾರೆ.

“ನಾನು ಮೇ ಮೊದಲ ವಾರದಲ್ಲಿ ಬಿಎಂಸಿಯ ಕರ್ತವ್ಯಕ್ಕೆ ಸೇರಿಕೊಂಡೆ. ಅಂದಿನಿಂದ ನಾನು ಕೊರೊನಾ ಸೌಲಭ್ಯದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಲ್ಲದೆ ಬಿಎಂಸಿ ಆಹಾರ ಮತ್ತು ವಸತಿ ವ್ಯವಸ್ಥೆ ಮಾಡಿದ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದೇನೆ, ಆದರೆ ನನಗೆ ಸಂಬಳ ಅಥವಾ 300 ರೂ. ದಿನದ ವಿಶೇಷ ಭತ್ಯೆ ಇನ್ನು ಸಿಕ್ಕಿಲ್ಲ” ಎಂದು ದಾದಿಯೊಬ್ಬರು ಹೇಳಿದ್ದಾಗಿ ನ್ಯೂಸ್ ಕ್ಲಿಕ್ ವರದಿ ಮಾಡಿದೆ.

ಅವರು ಬಿಎಂಸಿಗೆ ಸೇರುವ ಮೊದಲು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಮುನ್ಸಿಪಾಲಿಟಿಯು ಶಾಶ್ವತ ಆಧಾರದ ಮೇಲೆ ದಾದಿಯರನ್ನು ನೇಮಿಸಲು ಜಾಹೀರಾತುಗಳನ್ನು ನೀಡಿದ್ದರಿಂದ ಉದ್ಯೋಗ ಬದಲಿಸಿದ್ದಾರೆ ಎನ್ನಲಾಗಿದೆ.

ಆದರೆ ಪ್ರಸ್ತುತ ಎದುರಿಸುತ್ತಿರುವ ಆರ್ಥಿಕ ತೊಂದರೆಯಿಂದಾಗಿ ಈ ನಿರ್ಧಾರಕ್ಕೆ ಮಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತಿದ್ದಾರೆ. “ಹಣಕಾಸಿನ ಹೊಣೆಗಾರಿಕೆಗಳನ್ನು ಹೊಂದಿರುವಾಗ, ಮೂರು ತಿಂಗಳವರೆಗೆ ಸಂಬಳವಿಲ್ಲದೆ ಬದುಕುವುದು ಕಷ್ಟ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಪುರಸಭೆ ಆಯುಕ್ತ ಇಕ್ಬಾಲ್ ಸಿಂಗ್ ಚಾಹಲ್ ಅವರಿಗೆ ಜುಲೈ 25 ರಂದು ಬರೆದ ಪತ್ರದಲ್ಲಿ, ಹೊಸದಾಗಿ ನೇಮಕಗೊಂಡಿರುವ ಈ 209 ದಾದಿಯರಿಗೆ ತಕ್ಷಣ ಸಂಬಳ ಮತ್ತು ಭತ್ಯೆಯನ್ನು ನೀಡಬೇಕೆಂದು ಎಂಎಂಯು ಒತ್ತಾಯಿಸಿದೆ.

ಅವರು ಕರ್ತವ್ಯಕ್ಕೆ ಸೇರಿದ ದಿನಾಂಕದಿಂದ ಬಿಎಂಸಿ ನಡೆಸುವ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಳನ್ನು ಪರಿಗಣಿಸುವಂತೆ ಯೂನಿಯನ್ ಪಾಲಿಕೆಯನ್ನು ಕೇಳಿದೆ.

ಈ ಎಲ್ಲ ದಾದಿಯರಿಗೆ ಬಿಎಂಸಿಯ ನರ್ಸಿಂಗ್ ಕಾಲೇಜಿನಲ್ಲಿ ತರಬೇತಿ ನೀಡಲಾಗಿದೆ. ಏಪ್ರಿಲ್-ಮೇ ತಿಂಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳು ತೀವ್ರವಾಗಿ ಏರಿಕೆಯಾಗಲು ಪ್ರಾರಂಭವಾದಾಗ ಅವರನ್ನು ತಕ್ಷಣ ಸೇರಲು ತಿಳಿಸಲಾಗಿದೆ ಎಂದು ಎಂಎಂಯು ಕಾರ್ಯದರ್ಶಿ ಪ್ರದೀಪ್ ನರ್ಕರ್ ಹೇಳಿದ್ದಾರೆ.

“ಹೆಚ್ಚಿನ ಎಲ್ಲಾ ದಾದಿಯರು ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದರು. ಅವರು ತಮ್ಮ ಸೇವೆಗಳನ್ನು ತುರ್ತಾಗಿ ಅಗತ್ಯವಿರುವ ಬಿಎಂಸಿಗೆ ಸೇರಲು ತಮ್ಮ ಉದ್ಯೋಗವನ್ನು ತೊರೆದರು. ಆದರೆ ಈಗ ಅವರು ಸಂಬಳ ಮತ್ತು ಭತ್ಯೆಗಳಿಂದ ವಂಚಿತರಾಗಿದ್ದಾರೆ, ಇದರಿಂದಾಗಿ ಅವರಿಗೆ ಬದುಕುಳಿಯುವುದು ಕಷ್ಟಕರವಾಗಿದೆ” ಎಂದು ಅವರು ಹೇಳಿದರು.


ಓದಿ: ಕಾರ್ಮಿಕ ಕಾನೂನು ತಿದ್ದುಪಡಿಗೆ ವಿರೋಧ: ಸುಗ್ರೀವಾಜ್ಞೆ ಪ್ರತಿ ಸುಟ್ಟು ಪ್ರತಿಭಟನೆಗೆ ನಿರ್ಧಾರ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...