Homeಕರ್ನಾಟಕಬೆಂಗಳೂರು | ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ : ಮತ್ತೆ ಮೂವರ ಬಂಧನ

ಬೆಂಗಳೂರು | ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ : ಮತ್ತೆ ಮೂವರ ಬಂಧನ

- Advertisement -
- Advertisement -

ಬೆಂಗಳೂರಿನ ಜಕ್ಕೂರು ಬಳಿಯ ವಿಲ್ಲಾವೊಂದರಲ್ಲಿ ತಮಿಳುನಾಡಿನ 19 ವರ್ಷದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಅಮೃತಹಳ್ಳಿ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದು, ಈ ಮೂಲಕ ಬಂಧಿತರ ಸಂಖ್ಯೆ ಐದಕ್ಕೇರಿದೆ.

ಹೊಸದಾಗಿ ಬಂಧಿತರಾದ ಆರೋಪಿಗಳನ್ನು ಶಿವಮೊಗ್ಗ ಮೂಲದ ಶ್ರವಣ್ (21), ದಾವಣಗೆರೆ ಮೂಲದ ಅನಿರುದ್ಧ್ (33) ಮತ್ತು ಗುಜರಾತ್ ಮೂಲದ ಮೋಹಿತ್ ಜೈನ್ (23) ಎಂದು ಗುರುತಿಸಲಾಗಿದೆ. ಈ ಹಿಂದೆ ಕೋಲ್ಕತ್ತಾದ ಡಿಕ್ಸನ್ ಸಂತ್ರಾ (21) ಮತ್ತು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಹಾಸನ ಜಿಲ್ಲೆಯ ಸಕಲೇಶಪುರ ನಿವಾಸಿ ನಿಖಿಲ್ ಎಚ್‌ಡಿ (34) ಅನ್ನು ಪೊಲೀಸರು ಬಂಧಿಸಿದ್ದರು.

ಬೆಂಗಳೂರು ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತ ಜಿ.ಕೆ ಮಿಥುನ್ ಕುಮಾರ್ ಅವರ ಪ್ರಕಾರ, ಈ ಹಿಂದೆ ಬಂಧಿತರಾಗಿದ್ದ ಇಬ್ಬರು ಆರೋಪಿಗಳು ನೀಡಿದ ತಪ್ಪೊಪ್ಪಿಗೆಯ ಆಧಾರದ ಮೇಲೆ ಹೊಸದಾಗಿ ಮೂವರನ್ನು ಬಂಧಿಸಲಾಗಿದೆ. ಈ ಆರೋಪಿಗಳು ಅಪರಾಧ ಕೃತ್ಯಕ್ಕೆ ವಿವಿಧ ರೀತಿಯಲ್ಲಿ ಬೆಂಬಲ ನೀಡಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ವರದಿಗಳ ಪ್ರಕಾರ, ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆಗೆ, ಇನ್‌ಸ್ಟಾಗ್ರಾಮ್ ಮೂಲಕ ಡಿಕ್ಸನ್ ಪರಿಚಯವಾಗಿದ್ದ. ಬಳಿಕ ಪ್ರೀತಿಯ ನೆಪದಲ್ಲಿ ಆಕೆಯನ್ನು ಬಲೆಗೆ ಬೀಳಿಸಿಕೊಂಡು ಫೆಬ್ರವರಿ 14ರ ರಾತ್ರಿ ವಿಲ್ಲಾವೊಂದರಲ್ಲಿ ಪಾರ್ಟಿಗೆ ಆಹ್ವಾನಿಸಿದ್ದ ಎಂದು ಆರೋಪಿಸಲಾಗಿದೆ.

ಫೆ.15ರಂದು ಯುವತಿ ವಿಲ್ಲಾಗೆ ತಲುಪಿದ್ದಳು. ಅಲ್ಲಿ ಡಿಕ್ಸನ್ ಆಕೆಯನ್ನು ನಿಖಿಲ್‌ಗೆ ಪರಿಚಯಿಸಿದ್ದ. ಬಳಿಕ ಯುವತಿಗೆ ಬಲವಂತವಾಗಿ ಮತ್ತು ಬರುವ ಮಾತ್ರೆ ನೀಡಿದ ಆರೋಪಿಗಳು, ಆಕೆ ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ವರದಿಯಾಗಿದೆ.

ಹನಿಟ್ರ್ಯಾಪ್ ಪ್ರಯತ್ನದ ಆರೋಪದ ಮೇಲೆ ನಿಖಿಲ್ ಮಲ್ಲೇಶ್ವರಂ ಪೊಲೀಸರನ್ನು ಸಂಪರ್ಕಿಸಿದ ನಂತರ ದೂರು ದಾಖಲಿಸಲಾಗಿದೆ.

ಐಪಿಎಸ್ ಅಧಿಕಾರಿಯೊಬ್ಬರಿಗೆ ಸೇರಿದ ವಿಲ್ಲಾವನ್ನು ಬುಕ್ ಮಾಡಲು ಗುತ್ತಿಗೆದಾರ ಅನಿರುದ್ಧ್ ಸಹಾಯ ಮಾಡಿದ್ದ. ಇತರ ಆರೋಪಿಗಳು ಕಾರು ವ್ಯವಸ್ಥೆ ಸೇರಿದಂತೆ ವಿವಿಧ ರೀತಿಯ ಬೆಂಬಲವನ್ನು ನೀಡಿದ್ದರು. ಐಪಿಎಸ್ ಅಧಿಕಾರಿ ವಿಲ್ಲಾವನ್ನು ಒಬ್ಬ ವ್ಯಕ್ತಿಗೆ ಬಾಡಿಗೆಗೆ ನೀಡಿದ್ದರು, ಆತ ಅದನ್ನು ಮೂರನೇ ವ್ಯಕ್ತಿಗೆ ಸಬ್-ಲೀಸ್ ನೀಡಿದ್ದರು. ಈ ವ್ಯಕ್ತಿ ವಿಲ್ಲಾವನ್ನು ಪಾರ್ಟಿ ಮಾಡಲು ನೀಡುತ್ತಿದ್ದರು. ಈ ವಿಚಾರ ವಿಲ್ಲಾ ಮಾಲೀಕರಾದ ಐಪಿಎಸ್‌ ಅಧಿಕಾರಿಗೆ ತಿಳಿದಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್‌ಐಆರ್‌: 5 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್; 60 ಲಕ್ಷಕ್ಕೂ ಹೆಚ್ಚು ಪ್ರಕರಣಗಳ ವಿಚಾರಣೆ ಬಾಕಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್‌) ಪ್ರಕ್ರಿಯೆ ನಂತರ ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ 5.46 ಲಕ್ಷ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ. ಅನುಮಾನಾಸ್ಪದ ಎಂಬ ಕಾರಣಕ್ಕೆ 60,06,675 ಹೆಸರುಗಳು...

‘ರಾಜಕೀಯ ಭಿನ್ನಾಭಿಪ್ರಾಯ..ಸಂಘಟಿತ ಅಪರಾಧವಲ್ಲ’: ಎಐ ಶೃಂಗಸಭೆಯಲ್ಲಿ ಪ್ರತಿಭಟಿಸಿದ್ದಕ್ಕೆ ಬಂಧಿಸಲ್ಪಟ್ಟ 9 ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಜಾಮೀನು

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ನಡೆದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಬಂಧಿಸಿದ್ದ ಒಂಬತ್ತು ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಕಾರ್ಯಕರ್ತರಿಗೆ ದೆಹಲಿ ನ್ಯಾಯಾಲಯ ಭಾನುವಾರ (ಮಾ.1) ಸಂಜೆ ಜಾಮೀನು ನೀಡಿದೆ barandbench.com...

ವಯನಾಡ್ ಭೂಕುಸಿತ; ಪುನರ್ವಸತಿ ಕಾರ್ಯದಲ್ಲಿ ಸಂತ್ರಸ್ತರಿಗೆ 229 ಮನೆಗಳನ್ನು ಹಸ್ತಾಂತರಿಸಿದ ಕೇರಳ ಸರ್ಕಾರ, ಐಯುಎಂಎಲ್

ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಬೃಹತ್ ಭೂಕುಸಿತದ ಸುಮಾರು ಎರಡು ವರ್ಷಗಳ ನಂತರ, ರಾಜ್ಯ ಸರ್ಕಾರವು ಭಾನುವಾರ ಕಲ್ಪೆಟ್ಟಾದ ಪುನರ್ವಸತಿ ಪಟ್ಟಣದಲ್ಲಿ ಸಂತ್ರಸ್ತರಿಗೆ ಮನೆಗಳನ್ನು ಹಸ್ತಾಂತರಿಸಿತು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ₹299...

ಇಸ್ರೇಲ್-ಅಮೆರಿಕ ದಾಳಿ: ಇರಾನ್‌ನ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಹತ್ಯೆ

ಇಸ್ರೇಲ್ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್‌ನ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಶನಿವಾರ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯು ಟೆಹ್ರಾನ್‌ನ ಈಶಾನ್ಯ ನರ್ಮಕ್ ಜಿಲ್ಲೆಯಲ್ಲಿರುವ ಅಹ್ಮದಿನೆಜಾದ್...

ಇಸ್ರೇಲ್-ಇರಾನ್ ಕಾಳಗಕ್ಕೆ ಹಿಝ್ಬುಲ್ಲಾ ಎಂಟ್ರಿ : ಐಡಿಎಫ್‌ ದಾಳಿಗೆ ಬೈರುತ್‌ನಲ್ಲಿ 10 ಸಾವು

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ನಡುವಿನ ಸಂಘರ್ಷಕ್ಕೆ ಈಗ ಹಿಝ್ಬುಲ್ಲಾ ಎಂಟ್ರಿಯಾಗಿದೆ. ಇಸ್ರೇಲ್ ಮತ್ತು ಲೆಬನಾನ್‌ನ ಹಿಝ್ಬುಲ್ಲಾ ನಡುವಿನ ಕಾಳಗ ಸೋಮವಾರ (ಮಾ.2) ತೀವ್ರಗೊಂಡಿದೆ. ಇಸ್ರೇಲ್ ಪಡೆಗಳು ಹಿಝ್ಬುಲ್ಲಾವನ್ನು ಗುರಿಯಾಗಿಸಿಕೊಂಡು ಲೆಬನಾನ್...

ಎಸ್‌ಐಆರ್ ಬಡವರ ವಿರುದ್ಧದ ‘ಅಘೋಷಿತ ಯುದ್ಧ’: ಶಿವಸುಂದರ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಡವರ ವಿರುದ್ದದ 'ಅಘೋಷಿತ ಯುದ್ದ'ವಾಗಿದೆ. ಇದು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರನ್ನು ಗುರಿಯಾಗಿಸಿಕೊಂಡಿದೆ ಚಿಂತಕ ಶಿವಸುಂದರ್ ಹೇಳಿದರು. ಕಲಬುರಗಿ...

ಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ನಡೆಸುತ್ತಿರುವ ಟ್ರಂಪ್ : ಅಧ್ಯಕ್ಷರ ಯುದ್ದೋನ್ಮಾದಕ್ಕೆ ಲಗಾಮು ಹಾಕಲು ಮುಂದಾದ ಯುಎಸ್ ಕಾಂಗ್ರೆಸ್

"ನಾನು ಶಾಂತಿದೂತ, ವಿಶ್ವ ಶಾಂತಿಯ ರಾಯಭಾರಿ, ಹಲವು ದೇಶಗಳ ನಡುವಿನ ಸಂಘರ್ಷಗಳನ್ನು ನಿಲ್ಲಿಸಿ ಜಗತ್ತಿನಲ್ಲಿ ಶಾಂತಿ ನೆಲೆಸುವಂತೆ ಮಾಡಿರುವ ನನಗೆ 'ನೊಬೆಲ್ ಶಾಂತಿ ಪ್ರಶಸ್ತಿ' ಕೊಡಿ" ಎನ್ನುತ್ತಲೇ, ಸಿಕ್ಕ ಸಿಕ್ಕ ದೇಶಗಳ ಮೇಲೆ...

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...