Homeಕರೋನಾ ತಲ್ಲಣಇನ್ನೂ ಮೂರು ರಾಜ್ಯಗಳಿಂದ ಉಚಿತ ಲಸಿಕೆ ಘೋಷಣೆ: ಬಾಯಿ ಬಿಡದ ಕರ್ನಾಟಕ!

ಇನ್ನೂ ಮೂರು ರಾಜ್ಯಗಳಿಂದ ಉಚಿತ ಲಸಿಕೆ ಘೋಷಣೆ: ಬಾಯಿ ಬಿಡದ ಕರ್ನಾಟಕ!

ಬಿಹಾರ, ಉತ್ತರಪ್ರದೇಶ, ಛತ್ತೀಸಘಡ್ನಂತಹ ಆರ್ಥಿಕವಾಗಿ ಹಿಂದುಳಿದ ರಾಜ್ಯಗಳ ಸರ್ಕಾರಗಳೇ ಉಚಿತ ಲಸಿಕೆ ನೀಡಲು ತಯಾರು ಇರುವಾಗ, ಮುಂದುವರೆದ ರಾಜ್ಯ ಕರ್ನಾಟಕ ಈ ಕುರಿತು ಮಾತೇ ಆಡದಿರುವುದು ಆಶ್ಚರ್ಯ ಮೂಡಿಸಿದೆ.

- Advertisement -
- Advertisement -

ಗುಜರಾತ್, ಒಡಿಶಾ ಮತ್ತು ರಾಜಸ್ಥಾನ ಸರ್ಕಾರಗಳು ಎಲ್ಲರಿಗೂ ಉಚಿತ ಲಸಿಕೆ ಎಂದು ಭಾನುವಾರ ಘೋಷಣೆ ಮಾಡಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಈಗಾಗಲೇ ಉತ್ತರ ಪ್ರದೇಶ, ಅಸ್ಸಾಂ, ಕೇರಳ, ಛತ್ತೀಸ್‌ಗಡ, ಮಹಾರಾಷ್ಟ್ರ, ದೆಹಲಿ, ಬಿಹಾರ ಮತ್ತು ಮಧ್ಯಪ್ರದೇಶ ರಾಜ್ಯಗಳು ಉಚಿತ ಲಸಿಕೆ ನಿಡುವುದಾಗಿ ಘೋಷಿಸಿವೆ. ಸದ್ಯ ಒಟ್ಟು 11 ರಾಜ್ಯಗಳು ತಮ್ಮ ಸಂಪನ್ಮೂಲ ಬಳಸಿ ಉಚಿತ ಲಸಿಕೆ ಘೋಷಿಸಿದಂತಾಗಿದೆ.

ಮೇ 1ರಿಂದ ಆರಂಭವಾಗಬೇಕಿರುವ ಲಸಿಕಾ ಅಭಿಯಾನಕ್ಕೆ ಇನ್ನು ಐದು ದಿನಗಳು ಮಾತ್ರ ಇವೆ. ಆದರೆ ಕರ್ನಾಟಕ ಸರ್ಕಾರ ತನ್ನ ಬಳಿ ಎಷ್ಟು ಲಸಿಕೆಗಳು ಸ್ಟಾಕ್ ಇವೆ ಎಂಬುದನ್ನು ಸ್ಪಷ್ಟಪಡಿಸುತ್ತಿಲ್ಲ. ಹಾಗೆಯೇ 18-45 ವಯಸ್ಸಿನವರು ಲಸಿಕೆಗೆ ಹಣ ಪಾವತಿ ಮಾಡಬೇಕೆ ಅಥವಾ ಉಚಿತವೇ ಎಂಬುದರ ಕುರಿತು ಯಾವದೇ ನಿರ್ಧಾರ ತೆಗೆದುಕೊಂಡಿಲ್ಲ.

45 ವರ್ಷ ಮೇಲ್ಪಟ್ಟವರಿಗೆ ಮಾತ್ರ ಕೇಂದ್ರ ಸರ್ಕಾರ ಉಚಿತ ಲಸಿಕೆ ನೀಡಿತು. ಆದರೆ, ನಂತರದಲ್ಲಿ ಲಸಿಕಾ ಕಂಪನಿಗಳಿಗೆ ದರ ನಿಗದಿ ಮಾಡಲು ತಿಳಿಸಿತು. ಈಗ ರಾಜ್ಯ ಸರ್ಕಾರಗಳು ಲಸಿಕೆ ಖರೀದಿಸಿ ಅದನ್ನು ಜನರಿಗೆ ಒದಗಿಸಬೇಕಿದೆ.

ಗುಜರಾತ್ ಮತ್ತು ರಾಜಸ್ಥಾನಗಳು 18-45 ವಯಸ್ಸಿನವರಿಗೆ ಲಸಿಕೆಗಳನ್ನು ಉಚಿತವಾಗಿ ನೀಡಿವೆ. ಜೊತೆಗೆ ಒಡಿಶಾದಲ್ಲಿ 18 ರಿಂದ 44 ವಯಸ್ಸಿನ ನಡುವಿನವರಿಗೆ ಉಚಿತವೆಂದು ಘೋಷಿಸಿದೆ.

ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್, “ಮಹಾರಾಷ್ಟ್ರ ಸರ್ಕಾರ 18-45ರ ವಯಸ್ಸಿನವರಿಗೂ ಉಚಿತ ಲಸಿಕೆ ನಿಡಲು ಯೋಚಿಚಿದೆ. ಮೇ 1 ರಂದು ಸಿಎಂ ಉದ್ಧವ್ ಠಾಕ್ರೆ ಅವರು ಔಪಚಾರಿಕ ನಿರ್ಧಾರ ತೆಗೆದುಕೊಳ್ಳುತ್ತಾರೆ’ ಎಂದು ಹೇಳಿದ್ದಾರೆ.

ಕಾಂಗ್ರೆಸ್, ಎನ್‌ಸಿಪಿ ಮತ್ತು ಶಿವಸೇನೆ ಒಕ್ಕೂಟವು ರಾಜ್ಯದ ಪ್ರತಿಯೊಬ್ಬರಿಗೂ ಲಸಿಕೆ ಉಚಿತವಾಗಿರಬೇಕು ಎಂಬ ಅಭಿಪ್ರಾಯ ಹೊಂದಿದೆ. ಅದರಂತೆ ರಾಜ್ಯ ಸರ್ಕಾರ ತನ್ನ ಕಾರ್ಯತಂತ್ರವನ್ನು ರೂಪಿಸುತ್ತಿದೆ ಎನ್ನಲಾಗಿದೆ.

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು 18-44 ವಯಸ್ಸಿನ ಸುಮಾರು 2 ಕೋಟಿ ಜನರಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಾರೆ. “ಖರೀದಿಗಾಗಿ ಈಗಾಗಲೇ ಆರ್ಡರ್ ನೀಡಲಾಗಿದೆ ಮತ್ತು ಇದಕ್ಕಾಗಿ ಸರ್ಕಾರವು ಸುಮಾರು 2,000 ಕೋಟಿ ರೂ. ಖರ್ಚು ಮಾಡುತ್ತದೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ. 377 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ ಸಂಗ್ರಹಿಸಲು ರಾಜ್ಯ ಸಜ್ಜಾಗಿದೆ.

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ರಾಜ್ಯದಲ್ಲಿ 18-45 ವಯೋಮಾನದವರಲ್ಲಿ ಸುಮಾರು 3.75 ಕೋಟಿ ಜನರಿದ್ದಾರೆ, ಮತ್ತು ಪ್ರತಿ ವ್ಯಕ್ತಿಗೆ ಎರಡು ಲಸಿಕೆಗಳನ್ನು ಸುಮಾರು 3,000 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ವ್ಯಯಿಸಲಿದೆ ಎಂದಿದ್ದಾರೆ. ಆದರೆ ಸೀರಂ ಸಂಸ್ಥೆಗೆ ಲಸಿಕೆ ಬೇಕು ಎಂದು ತಿಳಿಸಿದರೆ ಮೇ 15ರ ವರೆಗೂ ಪೂರೈಕೆ ಸಾಧ್ಯವಿಲ್ಲ ಎನ್ನುತ್ತಿದ್ದಾರೆ ಎಂದು ದೂರಿದ್ದಾರೆ.

ಕರ್ನಾಟಕದ ಸಮಸ್ಯೆ ಏನು?

ಬಿಹಾರ, ಉತ್ತರಪ್ರದೇಶ, ಛತ್ತೀಸಘಡ್ನಂತಹ ಆರ್ಥಿಕವಾಗಿ ಹಿಂದುಳಿದ ರಾಜ್ಯಗಳ ಸರ್ಕಾರಗಳೇ ಉಚಿತ ಲಸಿಕೆ ನೀಡಲು ತಯಾರು ಇರುವಾಗ, ಮುಂದುವರೆದ ರಾಜ್ಯ ಕರ್ನಾಟಕ ಈ ಕುರಿತು ಮಾತೇ ಆಡದಿರುವುದು ಆಶ್ಚರ್ಯ ಮೂಡಿಸಿದೆ. ಖಜಾನೆಯಲ್ಲಿ ಸಂಪನ್ಮೂಲ ಇಲ್ಲವೆ ಎಂಬ ಸಂಶಯ ಜನರನ್ನು ಕಾಡತೊಡಗಿದೆ. ಇತ್ತೀಚೆಗೆ ಸರ್ಕಾರ ಅನ್ನಭಾಗ್ಯ ಅಕ್ಕಿ ಪ್ರಮಾಣವನ್ನು ಕಡಿತಗೊಳಿಸಿದ್ದನ್ನು ನೋಡಿದರೆ ಈ ಅನುಮಾನ ದಟ್ಟವಾಗುತ್ತಿದೆ ಎನ್ನಲಾಗಿದೆ.


ಇದನ್ನೂ ಓದಿ: ಲಸಿಕೆ ಸ್ಟಾಕ್ ಇಲ್ಲ: ಮೇ 1ರಿಂದ ‘ಎಲ್ಲರಿಗೂ ಲಸಿಕೆ’ ಅಭಿಯಾನ ಅಸಾಧ್ಯವೆಂದ 4 ರಾಜ್ಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...