Homeಕರೋನಾ ತಲ್ಲಣಇನ್ನೂ ಮೂರು ರಾಜ್ಯಗಳಿಂದ ಉಚಿತ ಲಸಿಕೆ ಘೋಷಣೆ: ಬಾಯಿ ಬಿಡದ ಕರ್ನಾಟಕ!

ಇನ್ನೂ ಮೂರು ರಾಜ್ಯಗಳಿಂದ ಉಚಿತ ಲಸಿಕೆ ಘೋಷಣೆ: ಬಾಯಿ ಬಿಡದ ಕರ್ನಾಟಕ!

ಬಿಹಾರ, ಉತ್ತರಪ್ರದೇಶ, ಛತ್ತೀಸಘಡ್ನಂತಹ ಆರ್ಥಿಕವಾಗಿ ಹಿಂದುಳಿದ ರಾಜ್ಯಗಳ ಸರ್ಕಾರಗಳೇ ಉಚಿತ ಲಸಿಕೆ ನೀಡಲು ತಯಾರು ಇರುವಾಗ, ಮುಂದುವರೆದ ರಾಜ್ಯ ಕರ್ನಾಟಕ ಈ ಕುರಿತು ಮಾತೇ ಆಡದಿರುವುದು ಆಶ್ಚರ್ಯ ಮೂಡಿಸಿದೆ.

- Advertisement -
- Advertisement -

ಗುಜರಾತ್, ಒಡಿಶಾ ಮತ್ತು ರಾಜಸ್ಥಾನ ಸರ್ಕಾರಗಳು ಎಲ್ಲರಿಗೂ ಉಚಿತ ಲಸಿಕೆ ಎಂದು ಭಾನುವಾರ ಘೋಷಣೆ ಮಾಡಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಈಗಾಗಲೇ ಉತ್ತರ ಪ್ರದೇಶ, ಅಸ್ಸಾಂ, ಕೇರಳ, ಛತ್ತೀಸ್‌ಗಡ, ಮಹಾರಾಷ್ಟ್ರ, ದೆಹಲಿ, ಬಿಹಾರ ಮತ್ತು ಮಧ್ಯಪ್ರದೇಶ ರಾಜ್ಯಗಳು ಉಚಿತ ಲಸಿಕೆ ನಿಡುವುದಾಗಿ ಘೋಷಿಸಿವೆ. ಸದ್ಯ ಒಟ್ಟು 11 ರಾಜ್ಯಗಳು ತಮ್ಮ ಸಂಪನ್ಮೂಲ ಬಳಸಿ ಉಚಿತ ಲಸಿಕೆ ಘೋಷಿಸಿದಂತಾಗಿದೆ.

ಮೇ 1ರಿಂದ ಆರಂಭವಾಗಬೇಕಿರುವ ಲಸಿಕಾ ಅಭಿಯಾನಕ್ಕೆ ಇನ್ನು ಐದು ದಿನಗಳು ಮಾತ್ರ ಇವೆ. ಆದರೆ ಕರ್ನಾಟಕ ಸರ್ಕಾರ ತನ್ನ ಬಳಿ ಎಷ್ಟು ಲಸಿಕೆಗಳು ಸ್ಟಾಕ್ ಇವೆ ಎಂಬುದನ್ನು ಸ್ಪಷ್ಟಪಡಿಸುತ್ತಿಲ್ಲ. ಹಾಗೆಯೇ 18-45 ವಯಸ್ಸಿನವರು ಲಸಿಕೆಗೆ ಹಣ ಪಾವತಿ ಮಾಡಬೇಕೆ ಅಥವಾ ಉಚಿತವೇ ಎಂಬುದರ ಕುರಿತು ಯಾವದೇ ನಿರ್ಧಾರ ತೆಗೆದುಕೊಂಡಿಲ್ಲ.

45 ವರ್ಷ ಮೇಲ್ಪಟ್ಟವರಿಗೆ ಮಾತ್ರ ಕೇಂದ್ರ ಸರ್ಕಾರ ಉಚಿತ ಲಸಿಕೆ ನೀಡಿತು. ಆದರೆ, ನಂತರದಲ್ಲಿ ಲಸಿಕಾ ಕಂಪನಿಗಳಿಗೆ ದರ ನಿಗದಿ ಮಾಡಲು ತಿಳಿಸಿತು. ಈಗ ರಾಜ್ಯ ಸರ್ಕಾರಗಳು ಲಸಿಕೆ ಖರೀದಿಸಿ ಅದನ್ನು ಜನರಿಗೆ ಒದಗಿಸಬೇಕಿದೆ.

ಗುಜರಾತ್ ಮತ್ತು ರಾಜಸ್ಥಾನಗಳು 18-45 ವಯಸ್ಸಿನವರಿಗೆ ಲಸಿಕೆಗಳನ್ನು ಉಚಿತವಾಗಿ ನೀಡಿವೆ. ಜೊತೆಗೆ ಒಡಿಶಾದಲ್ಲಿ 18 ರಿಂದ 44 ವಯಸ್ಸಿನ ನಡುವಿನವರಿಗೆ ಉಚಿತವೆಂದು ಘೋಷಿಸಿದೆ.

ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್, “ಮಹಾರಾಷ್ಟ್ರ ಸರ್ಕಾರ 18-45ರ ವಯಸ್ಸಿನವರಿಗೂ ಉಚಿತ ಲಸಿಕೆ ನಿಡಲು ಯೋಚಿಚಿದೆ. ಮೇ 1 ರಂದು ಸಿಎಂ ಉದ್ಧವ್ ಠಾಕ್ರೆ ಅವರು ಔಪಚಾರಿಕ ನಿರ್ಧಾರ ತೆಗೆದುಕೊಳ್ಳುತ್ತಾರೆ’ ಎಂದು ಹೇಳಿದ್ದಾರೆ.

ಕಾಂಗ್ರೆಸ್, ಎನ್‌ಸಿಪಿ ಮತ್ತು ಶಿವಸೇನೆ ಒಕ್ಕೂಟವು ರಾಜ್ಯದ ಪ್ರತಿಯೊಬ್ಬರಿಗೂ ಲಸಿಕೆ ಉಚಿತವಾಗಿರಬೇಕು ಎಂಬ ಅಭಿಪ್ರಾಯ ಹೊಂದಿದೆ. ಅದರಂತೆ ರಾಜ್ಯ ಸರ್ಕಾರ ತನ್ನ ಕಾರ್ಯತಂತ್ರವನ್ನು ರೂಪಿಸುತ್ತಿದೆ ಎನ್ನಲಾಗಿದೆ.

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು 18-44 ವಯಸ್ಸಿನ ಸುಮಾರು 2 ಕೋಟಿ ಜನರಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಾರೆ. “ಖರೀದಿಗಾಗಿ ಈಗಾಗಲೇ ಆರ್ಡರ್ ನೀಡಲಾಗಿದೆ ಮತ್ತು ಇದಕ್ಕಾಗಿ ಸರ್ಕಾರವು ಸುಮಾರು 2,000 ಕೋಟಿ ರೂ. ಖರ್ಚು ಮಾಡುತ್ತದೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ. 377 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ ಸಂಗ್ರಹಿಸಲು ರಾಜ್ಯ ಸಜ್ಜಾಗಿದೆ.

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ರಾಜ್ಯದಲ್ಲಿ 18-45 ವಯೋಮಾನದವರಲ್ಲಿ ಸುಮಾರು 3.75 ಕೋಟಿ ಜನರಿದ್ದಾರೆ, ಮತ್ತು ಪ್ರತಿ ವ್ಯಕ್ತಿಗೆ ಎರಡು ಲಸಿಕೆಗಳನ್ನು ಸುಮಾರು 3,000 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ವ್ಯಯಿಸಲಿದೆ ಎಂದಿದ್ದಾರೆ. ಆದರೆ ಸೀರಂ ಸಂಸ್ಥೆಗೆ ಲಸಿಕೆ ಬೇಕು ಎಂದು ತಿಳಿಸಿದರೆ ಮೇ 15ರ ವರೆಗೂ ಪೂರೈಕೆ ಸಾಧ್ಯವಿಲ್ಲ ಎನ್ನುತ್ತಿದ್ದಾರೆ ಎಂದು ದೂರಿದ್ದಾರೆ.

ಕರ್ನಾಟಕದ ಸಮಸ್ಯೆ ಏನು?

ಬಿಹಾರ, ಉತ್ತರಪ್ರದೇಶ, ಛತ್ತೀಸಘಡ್ನಂತಹ ಆರ್ಥಿಕವಾಗಿ ಹಿಂದುಳಿದ ರಾಜ್ಯಗಳ ಸರ್ಕಾರಗಳೇ ಉಚಿತ ಲಸಿಕೆ ನೀಡಲು ತಯಾರು ಇರುವಾಗ, ಮುಂದುವರೆದ ರಾಜ್ಯ ಕರ್ನಾಟಕ ಈ ಕುರಿತು ಮಾತೇ ಆಡದಿರುವುದು ಆಶ್ಚರ್ಯ ಮೂಡಿಸಿದೆ. ಖಜಾನೆಯಲ್ಲಿ ಸಂಪನ್ಮೂಲ ಇಲ್ಲವೆ ಎಂಬ ಸಂಶಯ ಜನರನ್ನು ಕಾಡತೊಡಗಿದೆ. ಇತ್ತೀಚೆಗೆ ಸರ್ಕಾರ ಅನ್ನಭಾಗ್ಯ ಅಕ್ಕಿ ಪ್ರಮಾಣವನ್ನು ಕಡಿತಗೊಳಿಸಿದ್ದನ್ನು ನೋಡಿದರೆ ಈ ಅನುಮಾನ ದಟ್ಟವಾಗುತ್ತಿದೆ ಎನ್ನಲಾಗಿದೆ.


ಇದನ್ನೂ ಓದಿ: ಲಸಿಕೆ ಸ್ಟಾಕ್ ಇಲ್ಲ: ಮೇ 1ರಿಂದ ‘ಎಲ್ಲರಿಗೂ ಲಸಿಕೆ’ ಅಭಿಯಾನ ಅಸಾಧ್ಯವೆಂದ 4 ರಾಜ್ಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...