Homeಕರೋನಾ ತಲ್ಲಣಇನ್ನೂ ಮೂರು ರಾಜ್ಯಗಳಿಂದ ಉಚಿತ ಲಸಿಕೆ ಘೋಷಣೆ: ಬಾಯಿ ಬಿಡದ ಕರ್ನಾಟಕ!

ಇನ್ನೂ ಮೂರು ರಾಜ್ಯಗಳಿಂದ ಉಚಿತ ಲಸಿಕೆ ಘೋಷಣೆ: ಬಾಯಿ ಬಿಡದ ಕರ್ನಾಟಕ!

ಬಿಹಾರ, ಉತ್ತರಪ್ರದೇಶ, ಛತ್ತೀಸಘಡ್ನಂತಹ ಆರ್ಥಿಕವಾಗಿ ಹಿಂದುಳಿದ ರಾಜ್ಯಗಳ ಸರ್ಕಾರಗಳೇ ಉಚಿತ ಲಸಿಕೆ ನೀಡಲು ತಯಾರು ಇರುವಾಗ, ಮುಂದುವರೆದ ರಾಜ್ಯ ಕರ್ನಾಟಕ ಈ ಕುರಿತು ಮಾತೇ ಆಡದಿರುವುದು ಆಶ್ಚರ್ಯ ಮೂಡಿಸಿದೆ.

- Advertisement -
- Advertisement -

ಗುಜರಾತ್, ಒಡಿಶಾ ಮತ್ತು ರಾಜಸ್ಥಾನ ಸರ್ಕಾರಗಳು ಎಲ್ಲರಿಗೂ ಉಚಿತ ಲಸಿಕೆ ಎಂದು ಭಾನುವಾರ ಘೋಷಣೆ ಮಾಡಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಈಗಾಗಲೇ ಉತ್ತರ ಪ್ರದೇಶ, ಅಸ್ಸಾಂ, ಕೇರಳ, ಛತ್ತೀಸ್‌ಗಡ, ಮಹಾರಾಷ್ಟ್ರ, ದೆಹಲಿ, ಬಿಹಾರ ಮತ್ತು ಮಧ್ಯಪ್ರದೇಶ ರಾಜ್ಯಗಳು ಉಚಿತ ಲಸಿಕೆ ನಿಡುವುದಾಗಿ ಘೋಷಿಸಿವೆ. ಸದ್ಯ ಒಟ್ಟು 11 ರಾಜ್ಯಗಳು ತಮ್ಮ ಸಂಪನ್ಮೂಲ ಬಳಸಿ ಉಚಿತ ಲಸಿಕೆ ಘೋಷಿಸಿದಂತಾಗಿದೆ.

ಮೇ 1ರಿಂದ ಆರಂಭವಾಗಬೇಕಿರುವ ಲಸಿಕಾ ಅಭಿಯಾನಕ್ಕೆ ಇನ್ನು ಐದು ದಿನಗಳು ಮಾತ್ರ ಇವೆ. ಆದರೆ ಕರ್ನಾಟಕ ಸರ್ಕಾರ ತನ್ನ ಬಳಿ ಎಷ್ಟು ಲಸಿಕೆಗಳು ಸ್ಟಾಕ್ ಇವೆ ಎಂಬುದನ್ನು ಸ್ಪಷ್ಟಪಡಿಸುತ್ತಿಲ್ಲ. ಹಾಗೆಯೇ 18-45 ವಯಸ್ಸಿನವರು ಲಸಿಕೆಗೆ ಹಣ ಪಾವತಿ ಮಾಡಬೇಕೆ ಅಥವಾ ಉಚಿತವೇ ಎಂಬುದರ ಕುರಿತು ಯಾವದೇ ನಿರ್ಧಾರ ತೆಗೆದುಕೊಂಡಿಲ್ಲ.

45 ವರ್ಷ ಮೇಲ್ಪಟ್ಟವರಿಗೆ ಮಾತ್ರ ಕೇಂದ್ರ ಸರ್ಕಾರ ಉಚಿತ ಲಸಿಕೆ ನೀಡಿತು. ಆದರೆ, ನಂತರದಲ್ಲಿ ಲಸಿಕಾ ಕಂಪನಿಗಳಿಗೆ ದರ ನಿಗದಿ ಮಾಡಲು ತಿಳಿಸಿತು. ಈಗ ರಾಜ್ಯ ಸರ್ಕಾರಗಳು ಲಸಿಕೆ ಖರೀದಿಸಿ ಅದನ್ನು ಜನರಿಗೆ ಒದಗಿಸಬೇಕಿದೆ.

ಗುಜರಾತ್ ಮತ್ತು ರಾಜಸ್ಥಾನಗಳು 18-45 ವಯಸ್ಸಿನವರಿಗೆ ಲಸಿಕೆಗಳನ್ನು ಉಚಿತವಾಗಿ ನೀಡಿವೆ. ಜೊತೆಗೆ ಒಡಿಶಾದಲ್ಲಿ 18 ರಿಂದ 44 ವಯಸ್ಸಿನ ನಡುವಿನವರಿಗೆ ಉಚಿತವೆಂದು ಘೋಷಿಸಿದೆ.

ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್, “ಮಹಾರಾಷ್ಟ್ರ ಸರ್ಕಾರ 18-45ರ ವಯಸ್ಸಿನವರಿಗೂ ಉಚಿತ ಲಸಿಕೆ ನಿಡಲು ಯೋಚಿಚಿದೆ. ಮೇ 1 ರಂದು ಸಿಎಂ ಉದ್ಧವ್ ಠಾಕ್ರೆ ಅವರು ಔಪಚಾರಿಕ ನಿರ್ಧಾರ ತೆಗೆದುಕೊಳ್ಳುತ್ತಾರೆ’ ಎಂದು ಹೇಳಿದ್ದಾರೆ.

ಕಾಂಗ್ರೆಸ್, ಎನ್‌ಸಿಪಿ ಮತ್ತು ಶಿವಸೇನೆ ಒಕ್ಕೂಟವು ರಾಜ್ಯದ ಪ್ರತಿಯೊಬ್ಬರಿಗೂ ಲಸಿಕೆ ಉಚಿತವಾಗಿರಬೇಕು ಎಂಬ ಅಭಿಪ್ರಾಯ ಹೊಂದಿದೆ. ಅದರಂತೆ ರಾಜ್ಯ ಸರ್ಕಾರ ತನ್ನ ಕಾರ್ಯತಂತ್ರವನ್ನು ರೂಪಿಸುತ್ತಿದೆ ಎನ್ನಲಾಗಿದೆ.

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು 18-44 ವಯಸ್ಸಿನ ಸುಮಾರು 2 ಕೋಟಿ ಜನರಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಾರೆ. “ಖರೀದಿಗಾಗಿ ಈಗಾಗಲೇ ಆರ್ಡರ್ ನೀಡಲಾಗಿದೆ ಮತ್ತು ಇದಕ್ಕಾಗಿ ಸರ್ಕಾರವು ಸುಮಾರು 2,000 ಕೋಟಿ ರೂ. ಖರ್ಚು ಮಾಡುತ್ತದೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ. 377 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ ಸಂಗ್ರಹಿಸಲು ರಾಜ್ಯ ಸಜ್ಜಾಗಿದೆ.

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ರಾಜ್ಯದಲ್ಲಿ 18-45 ವಯೋಮಾನದವರಲ್ಲಿ ಸುಮಾರು 3.75 ಕೋಟಿ ಜನರಿದ್ದಾರೆ, ಮತ್ತು ಪ್ರತಿ ವ್ಯಕ್ತಿಗೆ ಎರಡು ಲಸಿಕೆಗಳನ್ನು ಸುಮಾರು 3,000 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ವ್ಯಯಿಸಲಿದೆ ಎಂದಿದ್ದಾರೆ. ಆದರೆ ಸೀರಂ ಸಂಸ್ಥೆಗೆ ಲಸಿಕೆ ಬೇಕು ಎಂದು ತಿಳಿಸಿದರೆ ಮೇ 15ರ ವರೆಗೂ ಪೂರೈಕೆ ಸಾಧ್ಯವಿಲ್ಲ ಎನ್ನುತ್ತಿದ್ದಾರೆ ಎಂದು ದೂರಿದ್ದಾರೆ.

ಕರ್ನಾಟಕದ ಸಮಸ್ಯೆ ಏನು?

ಬಿಹಾರ, ಉತ್ತರಪ್ರದೇಶ, ಛತ್ತೀಸಘಡ್ನಂತಹ ಆರ್ಥಿಕವಾಗಿ ಹಿಂದುಳಿದ ರಾಜ್ಯಗಳ ಸರ್ಕಾರಗಳೇ ಉಚಿತ ಲಸಿಕೆ ನೀಡಲು ತಯಾರು ಇರುವಾಗ, ಮುಂದುವರೆದ ರಾಜ್ಯ ಕರ್ನಾಟಕ ಈ ಕುರಿತು ಮಾತೇ ಆಡದಿರುವುದು ಆಶ್ಚರ್ಯ ಮೂಡಿಸಿದೆ. ಖಜಾನೆಯಲ್ಲಿ ಸಂಪನ್ಮೂಲ ಇಲ್ಲವೆ ಎಂಬ ಸಂಶಯ ಜನರನ್ನು ಕಾಡತೊಡಗಿದೆ. ಇತ್ತೀಚೆಗೆ ಸರ್ಕಾರ ಅನ್ನಭಾಗ್ಯ ಅಕ್ಕಿ ಪ್ರಮಾಣವನ್ನು ಕಡಿತಗೊಳಿಸಿದ್ದನ್ನು ನೋಡಿದರೆ ಈ ಅನುಮಾನ ದಟ್ಟವಾಗುತ್ತಿದೆ ಎನ್ನಲಾಗಿದೆ.


ಇದನ್ನೂ ಓದಿ: ಲಸಿಕೆ ಸ್ಟಾಕ್ ಇಲ್ಲ: ಮೇ 1ರಿಂದ ‘ಎಲ್ಲರಿಗೂ ಲಸಿಕೆ’ ಅಭಿಯಾನ ಅಸಾಧ್ಯವೆಂದ 4 ರಾಜ್ಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಒಂದು ವಿಶ್ಲೇಷಣೆ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...