Homeಕರೋನಾ ತಲ್ಲಣಇನ್ನೂ ಮೂರು ರಾಜ್ಯಗಳಿಂದ ಉಚಿತ ಲಸಿಕೆ ಘೋಷಣೆ: ಬಾಯಿ ಬಿಡದ ಕರ್ನಾಟಕ!

ಇನ್ನೂ ಮೂರು ರಾಜ್ಯಗಳಿಂದ ಉಚಿತ ಲಸಿಕೆ ಘೋಷಣೆ: ಬಾಯಿ ಬಿಡದ ಕರ್ನಾಟಕ!

ಬಿಹಾರ, ಉತ್ತರಪ್ರದೇಶ, ಛತ್ತೀಸಘಡ್ನಂತಹ ಆರ್ಥಿಕವಾಗಿ ಹಿಂದುಳಿದ ರಾಜ್ಯಗಳ ಸರ್ಕಾರಗಳೇ ಉಚಿತ ಲಸಿಕೆ ನೀಡಲು ತಯಾರು ಇರುವಾಗ, ಮುಂದುವರೆದ ರಾಜ್ಯ ಕರ್ನಾಟಕ ಈ ಕುರಿತು ಮಾತೇ ಆಡದಿರುವುದು ಆಶ್ಚರ್ಯ ಮೂಡಿಸಿದೆ.

- Advertisement -
- Advertisement -

ಗುಜರಾತ್, ಒಡಿಶಾ ಮತ್ತು ರಾಜಸ್ಥಾನ ಸರ್ಕಾರಗಳು ಎಲ್ಲರಿಗೂ ಉಚಿತ ಲಸಿಕೆ ಎಂದು ಭಾನುವಾರ ಘೋಷಣೆ ಮಾಡಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಈಗಾಗಲೇ ಉತ್ತರ ಪ್ರದೇಶ, ಅಸ್ಸಾಂ, ಕೇರಳ, ಛತ್ತೀಸ್‌ಗಡ, ಮಹಾರಾಷ್ಟ್ರ, ದೆಹಲಿ, ಬಿಹಾರ ಮತ್ತು ಮಧ್ಯಪ್ರದೇಶ ರಾಜ್ಯಗಳು ಉಚಿತ ಲಸಿಕೆ ನಿಡುವುದಾಗಿ ಘೋಷಿಸಿವೆ. ಸದ್ಯ ಒಟ್ಟು 11 ರಾಜ್ಯಗಳು ತಮ್ಮ ಸಂಪನ್ಮೂಲ ಬಳಸಿ ಉಚಿತ ಲಸಿಕೆ ಘೋಷಿಸಿದಂತಾಗಿದೆ.

ಮೇ 1ರಿಂದ ಆರಂಭವಾಗಬೇಕಿರುವ ಲಸಿಕಾ ಅಭಿಯಾನಕ್ಕೆ ಇನ್ನು ಐದು ದಿನಗಳು ಮಾತ್ರ ಇವೆ. ಆದರೆ ಕರ್ನಾಟಕ ಸರ್ಕಾರ ತನ್ನ ಬಳಿ ಎಷ್ಟು ಲಸಿಕೆಗಳು ಸ್ಟಾಕ್ ಇವೆ ಎಂಬುದನ್ನು ಸ್ಪಷ್ಟಪಡಿಸುತ್ತಿಲ್ಲ. ಹಾಗೆಯೇ 18-45 ವಯಸ್ಸಿನವರು ಲಸಿಕೆಗೆ ಹಣ ಪಾವತಿ ಮಾಡಬೇಕೆ ಅಥವಾ ಉಚಿತವೇ ಎಂಬುದರ ಕುರಿತು ಯಾವದೇ ನಿರ್ಧಾರ ತೆಗೆದುಕೊಂಡಿಲ್ಲ.

45 ವರ್ಷ ಮೇಲ್ಪಟ್ಟವರಿಗೆ ಮಾತ್ರ ಕೇಂದ್ರ ಸರ್ಕಾರ ಉಚಿತ ಲಸಿಕೆ ನೀಡಿತು. ಆದರೆ, ನಂತರದಲ್ಲಿ ಲಸಿಕಾ ಕಂಪನಿಗಳಿಗೆ ದರ ನಿಗದಿ ಮಾಡಲು ತಿಳಿಸಿತು. ಈಗ ರಾಜ್ಯ ಸರ್ಕಾರಗಳು ಲಸಿಕೆ ಖರೀದಿಸಿ ಅದನ್ನು ಜನರಿಗೆ ಒದಗಿಸಬೇಕಿದೆ.

ಗುಜರಾತ್ ಮತ್ತು ರಾಜಸ್ಥಾನಗಳು 18-45 ವಯಸ್ಸಿನವರಿಗೆ ಲಸಿಕೆಗಳನ್ನು ಉಚಿತವಾಗಿ ನೀಡಿವೆ. ಜೊತೆಗೆ ಒಡಿಶಾದಲ್ಲಿ 18 ರಿಂದ 44 ವಯಸ್ಸಿನ ನಡುವಿನವರಿಗೆ ಉಚಿತವೆಂದು ಘೋಷಿಸಿದೆ.

ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್, “ಮಹಾರಾಷ್ಟ್ರ ಸರ್ಕಾರ 18-45ರ ವಯಸ್ಸಿನವರಿಗೂ ಉಚಿತ ಲಸಿಕೆ ನಿಡಲು ಯೋಚಿಚಿದೆ. ಮೇ 1 ರಂದು ಸಿಎಂ ಉದ್ಧವ್ ಠಾಕ್ರೆ ಅವರು ಔಪಚಾರಿಕ ನಿರ್ಧಾರ ತೆಗೆದುಕೊಳ್ಳುತ್ತಾರೆ’ ಎಂದು ಹೇಳಿದ್ದಾರೆ.

ಕಾಂಗ್ರೆಸ್, ಎನ್‌ಸಿಪಿ ಮತ್ತು ಶಿವಸೇನೆ ಒಕ್ಕೂಟವು ರಾಜ್ಯದ ಪ್ರತಿಯೊಬ್ಬರಿಗೂ ಲಸಿಕೆ ಉಚಿತವಾಗಿರಬೇಕು ಎಂಬ ಅಭಿಪ್ರಾಯ ಹೊಂದಿದೆ. ಅದರಂತೆ ರಾಜ್ಯ ಸರ್ಕಾರ ತನ್ನ ಕಾರ್ಯತಂತ್ರವನ್ನು ರೂಪಿಸುತ್ತಿದೆ ಎನ್ನಲಾಗಿದೆ.

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು 18-44 ವಯಸ್ಸಿನ ಸುಮಾರು 2 ಕೋಟಿ ಜನರಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಾರೆ. “ಖರೀದಿಗಾಗಿ ಈಗಾಗಲೇ ಆರ್ಡರ್ ನೀಡಲಾಗಿದೆ ಮತ್ತು ಇದಕ್ಕಾಗಿ ಸರ್ಕಾರವು ಸುಮಾರು 2,000 ಕೋಟಿ ರೂ. ಖರ್ಚು ಮಾಡುತ್ತದೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ. 377 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ ಸಂಗ್ರಹಿಸಲು ರಾಜ್ಯ ಸಜ್ಜಾಗಿದೆ.

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ರಾಜ್ಯದಲ್ಲಿ 18-45 ವಯೋಮಾನದವರಲ್ಲಿ ಸುಮಾರು 3.75 ಕೋಟಿ ಜನರಿದ್ದಾರೆ, ಮತ್ತು ಪ್ರತಿ ವ್ಯಕ್ತಿಗೆ ಎರಡು ಲಸಿಕೆಗಳನ್ನು ಸುಮಾರು 3,000 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ವ್ಯಯಿಸಲಿದೆ ಎಂದಿದ್ದಾರೆ. ಆದರೆ ಸೀರಂ ಸಂಸ್ಥೆಗೆ ಲಸಿಕೆ ಬೇಕು ಎಂದು ತಿಳಿಸಿದರೆ ಮೇ 15ರ ವರೆಗೂ ಪೂರೈಕೆ ಸಾಧ್ಯವಿಲ್ಲ ಎನ್ನುತ್ತಿದ್ದಾರೆ ಎಂದು ದೂರಿದ್ದಾರೆ.

ಕರ್ನಾಟಕದ ಸಮಸ್ಯೆ ಏನು?

ಬಿಹಾರ, ಉತ್ತರಪ್ರದೇಶ, ಛತ್ತೀಸಘಡ್ನಂತಹ ಆರ್ಥಿಕವಾಗಿ ಹಿಂದುಳಿದ ರಾಜ್ಯಗಳ ಸರ್ಕಾರಗಳೇ ಉಚಿತ ಲಸಿಕೆ ನೀಡಲು ತಯಾರು ಇರುವಾಗ, ಮುಂದುವರೆದ ರಾಜ್ಯ ಕರ್ನಾಟಕ ಈ ಕುರಿತು ಮಾತೇ ಆಡದಿರುವುದು ಆಶ್ಚರ್ಯ ಮೂಡಿಸಿದೆ. ಖಜಾನೆಯಲ್ಲಿ ಸಂಪನ್ಮೂಲ ಇಲ್ಲವೆ ಎಂಬ ಸಂಶಯ ಜನರನ್ನು ಕಾಡತೊಡಗಿದೆ. ಇತ್ತೀಚೆಗೆ ಸರ್ಕಾರ ಅನ್ನಭಾಗ್ಯ ಅಕ್ಕಿ ಪ್ರಮಾಣವನ್ನು ಕಡಿತಗೊಳಿಸಿದ್ದನ್ನು ನೋಡಿದರೆ ಈ ಅನುಮಾನ ದಟ್ಟವಾಗುತ್ತಿದೆ ಎನ್ನಲಾಗಿದೆ.


ಇದನ್ನೂ ಓದಿ: ಲಸಿಕೆ ಸ್ಟಾಕ್ ಇಲ್ಲ: ಮೇ 1ರಿಂದ ‘ಎಲ್ಲರಿಗೂ ಲಸಿಕೆ’ ಅಭಿಯಾನ ಅಸಾಧ್ಯವೆಂದ 4 ರಾಜ್ಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...