Homeಕರೋನಾ ತಲ್ಲಣಇನ್ನೂ ಮೂರು ರಾಜ್ಯಗಳಿಂದ ಉಚಿತ ಲಸಿಕೆ ಘೋಷಣೆ: ಬಾಯಿ ಬಿಡದ ಕರ್ನಾಟಕ!

ಇನ್ನೂ ಮೂರು ರಾಜ್ಯಗಳಿಂದ ಉಚಿತ ಲಸಿಕೆ ಘೋಷಣೆ: ಬಾಯಿ ಬಿಡದ ಕರ್ನಾಟಕ!

ಬಿಹಾರ, ಉತ್ತರಪ್ರದೇಶ, ಛತ್ತೀಸಘಡ್ನಂತಹ ಆರ್ಥಿಕವಾಗಿ ಹಿಂದುಳಿದ ರಾಜ್ಯಗಳ ಸರ್ಕಾರಗಳೇ ಉಚಿತ ಲಸಿಕೆ ನೀಡಲು ತಯಾರು ಇರುವಾಗ, ಮುಂದುವರೆದ ರಾಜ್ಯ ಕರ್ನಾಟಕ ಈ ಕುರಿತು ಮಾತೇ ಆಡದಿರುವುದು ಆಶ್ಚರ್ಯ ಮೂಡಿಸಿದೆ.

- Advertisement -
- Advertisement -

ಗುಜರಾತ್, ಒಡಿಶಾ ಮತ್ತು ರಾಜಸ್ಥಾನ ಸರ್ಕಾರಗಳು ಎಲ್ಲರಿಗೂ ಉಚಿತ ಲಸಿಕೆ ಎಂದು ಭಾನುವಾರ ಘೋಷಣೆ ಮಾಡಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಈಗಾಗಲೇ ಉತ್ತರ ಪ್ರದೇಶ, ಅಸ್ಸಾಂ, ಕೇರಳ, ಛತ್ತೀಸ್‌ಗಡ, ಮಹಾರಾಷ್ಟ್ರ, ದೆಹಲಿ, ಬಿಹಾರ ಮತ್ತು ಮಧ್ಯಪ್ರದೇಶ ರಾಜ್ಯಗಳು ಉಚಿತ ಲಸಿಕೆ ನಿಡುವುದಾಗಿ ಘೋಷಿಸಿವೆ. ಸದ್ಯ ಒಟ್ಟು 11 ರಾಜ್ಯಗಳು ತಮ್ಮ ಸಂಪನ್ಮೂಲ ಬಳಸಿ ಉಚಿತ ಲಸಿಕೆ ಘೋಷಿಸಿದಂತಾಗಿದೆ.

ಮೇ 1ರಿಂದ ಆರಂಭವಾಗಬೇಕಿರುವ ಲಸಿಕಾ ಅಭಿಯಾನಕ್ಕೆ ಇನ್ನು ಐದು ದಿನಗಳು ಮಾತ್ರ ಇವೆ. ಆದರೆ ಕರ್ನಾಟಕ ಸರ್ಕಾರ ತನ್ನ ಬಳಿ ಎಷ್ಟು ಲಸಿಕೆಗಳು ಸ್ಟಾಕ್ ಇವೆ ಎಂಬುದನ್ನು ಸ್ಪಷ್ಟಪಡಿಸುತ್ತಿಲ್ಲ. ಹಾಗೆಯೇ 18-45 ವಯಸ್ಸಿನವರು ಲಸಿಕೆಗೆ ಹಣ ಪಾವತಿ ಮಾಡಬೇಕೆ ಅಥವಾ ಉಚಿತವೇ ಎಂಬುದರ ಕುರಿತು ಯಾವದೇ ನಿರ್ಧಾರ ತೆಗೆದುಕೊಂಡಿಲ್ಲ.

45 ವರ್ಷ ಮೇಲ್ಪಟ್ಟವರಿಗೆ ಮಾತ್ರ ಕೇಂದ್ರ ಸರ್ಕಾರ ಉಚಿತ ಲಸಿಕೆ ನೀಡಿತು. ಆದರೆ, ನಂತರದಲ್ಲಿ ಲಸಿಕಾ ಕಂಪನಿಗಳಿಗೆ ದರ ನಿಗದಿ ಮಾಡಲು ತಿಳಿಸಿತು. ಈಗ ರಾಜ್ಯ ಸರ್ಕಾರಗಳು ಲಸಿಕೆ ಖರೀದಿಸಿ ಅದನ್ನು ಜನರಿಗೆ ಒದಗಿಸಬೇಕಿದೆ.

ಗುಜರಾತ್ ಮತ್ತು ರಾಜಸ್ಥಾನಗಳು 18-45 ವಯಸ್ಸಿನವರಿಗೆ ಲಸಿಕೆಗಳನ್ನು ಉಚಿತವಾಗಿ ನೀಡಿವೆ. ಜೊತೆಗೆ ಒಡಿಶಾದಲ್ಲಿ 18 ರಿಂದ 44 ವಯಸ್ಸಿನ ನಡುವಿನವರಿಗೆ ಉಚಿತವೆಂದು ಘೋಷಿಸಿದೆ.

ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್, “ಮಹಾರಾಷ್ಟ್ರ ಸರ್ಕಾರ 18-45ರ ವಯಸ್ಸಿನವರಿಗೂ ಉಚಿತ ಲಸಿಕೆ ನಿಡಲು ಯೋಚಿಚಿದೆ. ಮೇ 1 ರಂದು ಸಿಎಂ ಉದ್ಧವ್ ಠಾಕ್ರೆ ಅವರು ಔಪಚಾರಿಕ ನಿರ್ಧಾರ ತೆಗೆದುಕೊಳ್ಳುತ್ತಾರೆ’ ಎಂದು ಹೇಳಿದ್ದಾರೆ.

ಕಾಂಗ್ರೆಸ್, ಎನ್‌ಸಿಪಿ ಮತ್ತು ಶಿವಸೇನೆ ಒಕ್ಕೂಟವು ರಾಜ್ಯದ ಪ್ರತಿಯೊಬ್ಬರಿಗೂ ಲಸಿಕೆ ಉಚಿತವಾಗಿರಬೇಕು ಎಂಬ ಅಭಿಪ್ರಾಯ ಹೊಂದಿದೆ. ಅದರಂತೆ ರಾಜ್ಯ ಸರ್ಕಾರ ತನ್ನ ಕಾರ್ಯತಂತ್ರವನ್ನು ರೂಪಿಸುತ್ತಿದೆ ಎನ್ನಲಾಗಿದೆ.

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು 18-44 ವಯಸ್ಸಿನ ಸುಮಾರು 2 ಕೋಟಿ ಜನರಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಾರೆ. “ಖರೀದಿಗಾಗಿ ಈಗಾಗಲೇ ಆರ್ಡರ್ ನೀಡಲಾಗಿದೆ ಮತ್ತು ಇದಕ್ಕಾಗಿ ಸರ್ಕಾರವು ಸುಮಾರು 2,000 ಕೋಟಿ ರೂ. ಖರ್ಚು ಮಾಡುತ್ತದೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ. 377 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ ಸಂಗ್ರಹಿಸಲು ರಾಜ್ಯ ಸಜ್ಜಾಗಿದೆ.

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ರಾಜ್ಯದಲ್ಲಿ 18-45 ವಯೋಮಾನದವರಲ್ಲಿ ಸುಮಾರು 3.75 ಕೋಟಿ ಜನರಿದ್ದಾರೆ, ಮತ್ತು ಪ್ರತಿ ವ್ಯಕ್ತಿಗೆ ಎರಡು ಲಸಿಕೆಗಳನ್ನು ಸುಮಾರು 3,000 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ವ್ಯಯಿಸಲಿದೆ ಎಂದಿದ್ದಾರೆ. ಆದರೆ ಸೀರಂ ಸಂಸ್ಥೆಗೆ ಲಸಿಕೆ ಬೇಕು ಎಂದು ತಿಳಿಸಿದರೆ ಮೇ 15ರ ವರೆಗೂ ಪೂರೈಕೆ ಸಾಧ್ಯವಿಲ್ಲ ಎನ್ನುತ್ತಿದ್ದಾರೆ ಎಂದು ದೂರಿದ್ದಾರೆ.

ಕರ್ನಾಟಕದ ಸಮಸ್ಯೆ ಏನು?

ಬಿಹಾರ, ಉತ್ತರಪ್ರದೇಶ, ಛತ್ತೀಸಘಡ್ನಂತಹ ಆರ್ಥಿಕವಾಗಿ ಹಿಂದುಳಿದ ರಾಜ್ಯಗಳ ಸರ್ಕಾರಗಳೇ ಉಚಿತ ಲಸಿಕೆ ನೀಡಲು ತಯಾರು ಇರುವಾಗ, ಮುಂದುವರೆದ ರಾಜ್ಯ ಕರ್ನಾಟಕ ಈ ಕುರಿತು ಮಾತೇ ಆಡದಿರುವುದು ಆಶ್ಚರ್ಯ ಮೂಡಿಸಿದೆ. ಖಜಾನೆಯಲ್ಲಿ ಸಂಪನ್ಮೂಲ ಇಲ್ಲವೆ ಎಂಬ ಸಂಶಯ ಜನರನ್ನು ಕಾಡತೊಡಗಿದೆ. ಇತ್ತೀಚೆಗೆ ಸರ್ಕಾರ ಅನ್ನಭಾಗ್ಯ ಅಕ್ಕಿ ಪ್ರಮಾಣವನ್ನು ಕಡಿತಗೊಳಿಸಿದ್ದನ್ನು ನೋಡಿದರೆ ಈ ಅನುಮಾನ ದಟ್ಟವಾಗುತ್ತಿದೆ ಎನ್ನಲಾಗಿದೆ.


ಇದನ್ನೂ ಓದಿ: ಲಸಿಕೆ ಸ್ಟಾಕ್ ಇಲ್ಲ: ಮೇ 1ರಿಂದ ‘ಎಲ್ಲರಿಗೂ ಲಸಿಕೆ’ ಅಭಿಯಾನ ಅಸಾಧ್ಯವೆಂದ 4 ರಾಜ್ಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...