Homeಮುಖಪುಟ2020ರ ಪ್ರತಿಷ್ಟಿತ ಪುಲಿಟ್ಜೆರ್ ಪ್ರಶಸ್ತಿ ಗೆದ್ದ ಕಾಶ್ಮೀರದ ಪತ್ರಕರ್ತರು ಸೆರೆಹಿಡಿದ ಫೋಟೊಗಳು

2020ರ ಪ್ರತಿಷ್ಟಿತ ಪುಲಿಟ್ಜೆರ್ ಪ್ರಶಸ್ತಿ ಗೆದ್ದ ಕಾಶ್ಮೀರದ ಪತ್ರಕರ್ತರು ಸೆರೆಹಿಡಿದ ಫೋಟೊಗಳು

- Advertisement -
- Advertisement -

2020ರ ಪುಲಿಟ್ಜೆರ್ ಪ್ರಶಸ್ತಿ ಜಮ್ಮುಕಾಶ್ಮೀರದ ಮೂವರು ಛಾಯಚಿತ್ರ ಪತ್ರಕರ್ತರಿಗೆ ಲಭಿಸಿದೆ. ಕೊರೊನಾ ಕಾರಣ ಪ್ರಶಸ್ತಿಗಳನ್ನು ಸಾಂಕೇತಿಕವಾಗಿ ಘೋಷಿಸಲಾಯಿತು.

ಅಸೋಸಿಯೇಟೆಡ್ ಪ್ರೆಸ್ ಛಾಯಾಗ್ರಾಹಕರಾದ ದಾರ್ ಯಾಸಿನ್, ಮುಖ್ತಾರ್ ಖಾನ್, ಮತ್ತು ಚನ್ನಿ ಆನಂದ್ ಅವರು ಕಳೆದ ವರ್ಷ ಆರ್ಟಿಕಲ್ 370 ರ ಅಡಿಯಲ್ಲಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಕಾಶ್ಮೀರದಲ್ಲಿನ ಲಾಕ್ ಡೌನನ್ನು ಸೆರೆಹಿಡಿಯುವಲ್ಲಿ ಅವರು ಮಾಡಿದ ಕಾರ್ಯಗಳಿಗಾಗಿ ಬಹುಮಾನಗಳನ್ನು ಗೆದ್ದರು.

ಆರ್ಟಿಕಲ್ 370 ನ್ನು ರದ್ದು ಮಾಡಿದ ನಂತರ, ಫೋನ್‌ಗಳು ಹಾಗೂ ಇಂಟರ್ನೆಟ್ ಸೇವೆಯನ್ನು ತಡೆ ಹಿಡಿದು ಜಮ್ಮುಕಾಶ್ಮೀರದಾದ್ಯಂತ ಕರ್ಫ್ಯೂ ಹಾಗೂ ಲಾಕ್ ಡೌನ್ ಮಾಡಲಾಗಿತ್ತು. ಮುಖ್ಯವಾಗಿ ಫೋನು ಹಾಗೂ ಇಂಟರ್ ನೆಟ್ ಕಡಿತದಿಂದಾಗಿ ಕಾಶ್ಮೀರದ ಜನ ಜೀವನದ ಪರಿಸ್ಥಿತಿಗಳನ್ನು ಲಾಕ್‌ಡೌನ್ ಪರಿಸ್ಥಿತಿಯಲ್ಲಿ ಜಗತ್ತಿಗೆ ತೋರಿಸುವುದು ಕಷ್ಟಕರವಾಗಿತ್ತು.

ಪ್ರಶಸ್ತಿ ಗೆದ್ದವರ ಕೆಲ ಫೋಟೊಗಳು ಈ ಕೆಳಗಿವೆ.

ಆದರೆ ಮೂವರು ಫೋಟೊ ಜರ್ನಲಿಸ್ಟ್‌ಗಳು ಪ್ರತಿಭಟನೆ, ಪೊಲೀಸ್ ಮತ್ತು ಅರೆಸೈನಿಕರ ನಡೆ ಮತ್ತು ದೈನಂದಿನ ಜೀವನದ ರಸ್ತೆ ತಡೆಗಳ ಚಿತ್ರಗಳನ್ನು ಸೆರೆಹಿಡಿದು, ಕೆಲವೊಮ್ಮೆ ಅಪರಿಚಿತರ ಮನೆಗಳಿಂದ ಕವರ್ ಪಡೆದುಕೊಂಡು ತರಕಾರಿ ಚೀಲಗಳಲ್ಲಿ ಕ್ಯಾಮೆರಾಗಳನ್ನು ಅಡಗಿಸಿ ನಂತರ ವಿಮಾನ ನಿಲ್ದಾಣಕ್ಕೆ ತೆರಳಿ ಪ್ರಯಾಣಿಕರೊಂದಿಗೆ ನವದೆಹಲಿಯ ಅಸೋಸಿಯೇಟೆಡ್ ಪ್ರೆಸ್ ಕಚೇರಿಗೆ ಫೋಟೋ ಫೈಲ್‌ಗಳನ್ನು ಕೊಂಡೊಯ್ಯಲು ಮನವೊಲಿಸಿದದ್ದರು.

ಪುಲಿಟ್ಜರ್ 1
ಕಾಶ್ಮೀರಿಗಳು 2019 ರ ಡಿಸೆಂಬರ್‌ನಲ್ಲಿ ಶ್ರೀನಗರದ ಸೂಫಿ ಸಂತರ ದರ್ಗಾದ ಹೊರಗೆ ಪ್ರಾರ್ಥನೆ ಸಲ್ಲಿಸುತ್ತಿರುವುದು. ಈ ಚಿತ್ರ 3 ಪ್ರಶಸ್ತಿ ವಿಜೇತ ಛಾಯಾಚಿತ್ರ ಪತ್ರಕರ್ತರ ಛಾಯಾಚಿತ್ರಗಳ ಸರಣಿಯ ಭಾಗವಾಗಿತ್ತು.

ವಿಜೇತರಲ್ಲಿ ಒಬ್ಬರಾದ ಯಾಸಿನ್ “ಇದು ಯಾವಾಗಲೂ ಇಲಿ ಮತ್ತು ಬೆಕ್ಕಿನ ಆಟ, ಇಂತಹ ಕಷ್ಟಡಗಳು ನಮ್ಮನ್ನು ಎಂದಿಗೂ ಮೌನವಾಗದಂತೆ ಗಟ್ಟಿಗೊಳಿಸುತ್ತದೆ. ಬಹುಮಾನಕ್ಕೆ ನಾನು ಆಯ್ಕೆಯಾಗಿದ್ದು ನನ್ನ ಸಹೋದ್ಯೋಗಿಗಳ ಮೂಲಕ ಕೇಳಿ ತುಂಬಾ ಖುಷಿಗೊಂಡೆ. ಇದಕ್ಕಾಗಿ ನಾವು ತುಂಬಾ ಶ್ರಮಿಸಿದ್ಧೇವೆ. ಬೆಂಬಲ ನೀಡಿದ ನಮ್ಮ ಕುಟುಂಬ ಹಾಗೂ ಸ್ನೇಹಿತರಿಗೆ ಕೃತಜ್ಞರಾಗಿರುತ್ತೇವೆ.”

ಫೋಟೋ ಕೃಪೆ: ದಾರ್ ಯಾಸಿನ್

ಬಹುಮಾನವನ್ನು ನಿರ್ವಾಹಕರಾದ ಡಾನಾ ಕ್ಯಾನೆಡಿ ಯೂಟ್ಯೂಬ್‌ನಲ್ಲಿ ಲೈವ್ ಸ್ಟ್ರೀಮ್ ಮೂಲಕ ಪ್ರಕಟಿಸಿದರು. ಜಮ್ಮುಕಾಶ್ಮೀರದಲ್ಲಿ ಲಾಕ್‌ಡೌನ್ ಮತ್ತು ಸಂಪರ್ಕ ನಿರ್ಬಂಧದ ಮಧ್ಯೆ ಜನ ಜೀವನದ ಗಮನಾರ್ಹ ಚಿತ್ರಗಳನ್ನು ಸೆರೆ ಹಿಡಿದಿದ್ದಕ್ಕಾಗಿ ಈ ಪ್ರಶಸ್ತಿಗಳನ್ನು ನೀಡಲಾಯಿತು.

ಫೋಟೋ ಕ್ರೆಡಿಟ್: ಚನ್ನಿ ಆನಂದ್

ಆದರೆ ವಿಪರ್ಯಾಸವೇನೆಂದರೆ ಈ ಪತ್ರಕರ್ತರಿಗೆ ಪುಲಿಟ್ಜೆರ್ ಬಹುಮಾನ ಘೋಷಿಸುವಾಗ ಈ ಕಡೆ ಕಾಶ್ಮೀರದಲ್ಲಿ “ರಾಷ್ಟ್ರ ವಿರೋಧಿ” ಚಟುವಟಿಕೆ ಮಾಡಿದ್ದಾರೆಂದು ಮೂವರು ಕಾಶ್ಮೀರಿ ಪತ್ರಕರ್ತರರಾದ ಪೀರ್ಜಾಡಾ ಆಶಿಕ್, ಗೌಹರ್ ಗೀಲಾನಿ ಮತ್ತು ಮಸ್ರತ್ ಜಹ್ರಾ ಅವರನ್ನು ಬಂಧಿಸಲಾಗಿದೆ. ಫ್ರೀಲಾನ್ಸಿಂಗ್ ಫೋಟೊ ಜರ್ನಲಿಸ್ಟ್ ಆಗಿರುವ ಮಸ್ರತ್ ಜಹರಾ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ, ಇದರ ಅಡಿಯಲ್ಲಿ ಒಬ್ಬ ವ್ಯಕ್ತಿಯನ್ನು ಏಳು ವರ್ಷಗಳವರೆಗೆ ಜೈಲಿನಲ್ಲಿಡಬಹುದು.

ಪೀರ್ಜಾಡಾ ಆಶಿಕ್ (ಎಡ), ಗೌಹರ್ ಗೀಲಾನಿ (ಮಧ್ಯೆ), ಮತ್ತು ಮಸ್ರತ್ ಜಹ್ರಾ (ಬಲ) ಇವರೆಲ್ಲರೂ ಕಾಶ್ಮೀರಿ ಪತ್ರಕರ್ತರಾಗಿದ್ದಾರೆ.

ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರ ಪುತ್ರಿ ಟ್ವಿಟರ್ ಇಲ್ತಿಜಾ ಮುಫ್ತಿ ಅಸೋಸಿಯೇಟೆಡ್ ಪ್ರೆಸ್ ಪತ್ರಿಕೆಯ ಮೂವರು ಫೋಟೋ ಜರ್ನಲಿಸ್ಟ್‌ಗಳನ್ನು ತನ್ನ ತಾಯಿಯ ಟ್ವಿಟ್ಟರ್ ಖಾತೆಯಿಂದ ಅಭಿನಂದಿಸಿದ್ದಾರೆ.

ಕೇಂದ್ರ ಸರ್ಕಾರದಿಂದ ಈ ಪತ್ರಕರ್ತರಿಗೆ ಪ್ರಶಸ್ತಿ ಬಂದಿರುವುದಕ್ಕೆ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಆದರೆ ಒಮರ್ ಅಬ್ದುಲ್ಲಾ ಸೇರಿದಂತೆ ಹಲವರು ಇವರಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಬಹುಮಾನಿತರಿಗೆ ಅಭಿನಂದನಾ ಟ್ವೀಟ್ ಕಳುಹಿಸಿದ್ದಾರೆ.


ಇದನ್ನೂ ಓದಿ: ಮಾಜಿ IAS ಕಣ್ಣನ್ ಗೋಪಿನಾಥನ್ ಅವರಿಗೆ ಕಾಶ್ಮೀರಿ ವಿದ್ಯಾರ್ಥಿಯಿಂದ ಭಾವನಾತ್ಮಕ ಪತ್ರ


ಮ್ಮ Facebook ಪುಟಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...