Homeಮುಖಪುಟ2020ರ ಪ್ರತಿಷ್ಟಿತ ಪುಲಿಟ್ಜೆರ್ ಪ್ರಶಸ್ತಿ ಗೆದ್ದ ಕಾಶ್ಮೀರದ ಪತ್ರಕರ್ತರು ಸೆರೆಹಿಡಿದ ಫೋಟೊಗಳು

2020ರ ಪ್ರತಿಷ್ಟಿತ ಪುಲಿಟ್ಜೆರ್ ಪ್ರಶಸ್ತಿ ಗೆದ್ದ ಕಾಶ್ಮೀರದ ಪತ್ರಕರ್ತರು ಸೆರೆಹಿಡಿದ ಫೋಟೊಗಳು

- Advertisement -
- Advertisement -

2020ರ ಪುಲಿಟ್ಜೆರ್ ಪ್ರಶಸ್ತಿ ಜಮ್ಮುಕಾಶ್ಮೀರದ ಮೂವರು ಛಾಯಚಿತ್ರ ಪತ್ರಕರ್ತರಿಗೆ ಲಭಿಸಿದೆ. ಕೊರೊನಾ ಕಾರಣ ಪ್ರಶಸ್ತಿಗಳನ್ನು ಸಾಂಕೇತಿಕವಾಗಿ ಘೋಷಿಸಲಾಯಿತು.

ಅಸೋಸಿಯೇಟೆಡ್ ಪ್ರೆಸ್ ಛಾಯಾಗ್ರಾಹಕರಾದ ದಾರ್ ಯಾಸಿನ್, ಮುಖ್ತಾರ್ ಖಾನ್, ಮತ್ತು ಚನ್ನಿ ಆನಂದ್ ಅವರು ಕಳೆದ ವರ್ಷ ಆರ್ಟಿಕಲ್ 370 ರ ಅಡಿಯಲ್ಲಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಕಾಶ್ಮೀರದಲ್ಲಿನ ಲಾಕ್ ಡೌನನ್ನು ಸೆರೆಹಿಡಿಯುವಲ್ಲಿ ಅವರು ಮಾಡಿದ ಕಾರ್ಯಗಳಿಗಾಗಿ ಬಹುಮಾನಗಳನ್ನು ಗೆದ್ದರು.

ಆರ್ಟಿಕಲ್ 370 ನ್ನು ರದ್ದು ಮಾಡಿದ ನಂತರ, ಫೋನ್‌ಗಳು ಹಾಗೂ ಇಂಟರ್ನೆಟ್ ಸೇವೆಯನ್ನು ತಡೆ ಹಿಡಿದು ಜಮ್ಮುಕಾಶ್ಮೀರದಾದ್ಯಂತ ಕರ್ಫ್ಯೂ ಹಾಗೂ ಲಾಕ್ ಡೌನ್ ಮಾಡಲಾಗಿತ್ತು. ಮುಖ್ಯವಾಗಿ ಫೋನು ಹಾಗೂ ಇಂಟರ್ ನೆಟ್ ಕಡಿತದಿಂದಾಗಿ ಕಾಶ್ಮೀರದ ಜನ ಜೀವನದ ಪರಿಸ್ಥಿತಿಗಳನ್ನು ಲಾಕ್‌ಡೌನ್ ಪರಿಸ್ಥಿತಿಯಲ್ಲಿ ಜಗತ್ತಿಗೆ ತೋರಿಸುವುದು ಕಷ್ಟಕರವಾಗಿತ್ತು.

ಪ್ರಶಸ್ತಿ ಗೆದ್ದವರ ಕೆಲ ಫೋಟೊಗಳು ಈ ಕೆಳಗಿವೆ.

ಆದರೆ ಮೂವರು ಫೋಟೊ ಜರ್ನಲಿಸ್ಟ್‌ಗಳು ಪ್ರತಿಭಟನೆ, ಪೊಲೀಸ್ ಮತ್ತು ಅರೆಸೈನಿಕರ ನಡೆ ಮತ್ತು ದೈನಂದಿನ ಜೀವನದ ರಸ್ತೆ ತಡೆಗಳ ಚಿತ್ರಗಳನ್ನು ಸೆರೆಹಿಡಿದು, ಕೆಲವೊಮ್ಮೆ ಅಪರಿಚಿತರ ಮನೆಗಳಿಂದ ಕವರ್ ಪಡೆದುಕೊಂಡು ತರಕಾರಿ ಚೀಲಗಳಲ್ಲಿ ಕ್ಯಾಮೆರಾಗಳನ್ನು ಅಡಗಿಸಿ ನಂತರ ವಿಮಾನ ನಿಲ್ದಾಣಕ್ಕೆ ತೆರಳಿ ಪ್ರಯಾಣಿಕರೊಂದಿಗೆ ನವದೆಹಲಿಯ ಅಸೋಸಿಯೇಟೆಡ್ ಪ್ರೆಸ್ ಕಚೇರಿಗೆ ಫೋಟೋ ಫೈಲ್‌ಗಳನ್ನು ಕೊಂಡೊಯ್ಯಲು ಮನವೊಲಿಸಿದದ್ದರು.

ಪುಲಿಟ್ಜರ್ 1
ಕಾಶ್ಮೀರಿಗಳು 2019 ರ ಡಿಸೆಂಬರ್‌ನಲ್ಲಿ ಶ್ರೀನಗರದ ಸೂಫಿ ಸಂತರ ದರ್ಗಾದ ಹೊರಗೆ ಪ್ರಾರ್ಥನೆ ಸಲ್ಲಿಸುತ್ತಿರುವುದು. ಈ ಚಿತ್ರ 3 ಪ್ರಶಸ್ತಿ ವಿಜೇತ ಛಾಯಾಚಿತ್ರ ಪತ್ರಕರ್ತರ ಛಾಯಾಚಿತ್ರಗಳ ಸರಣಿಯ ಭಾಗವಾಗಿತ್ತು.

ವಿಜೇತರಲ್ಲಿ ಒಬ್ಬರಾದ ಯಾಸಿನ್ “ಇದು ಯಾವಾಗಲೂ ಇಲಿ ಮತ್ತು ಬೆಕ್ಕಿನ ಆಟ, ಇಂತಹ ಕಷ್ಟಡಗಳು ನಮ್ಮನ್ನು ಎಂದಿಗೂ ಮೌನವಾಗದಂತೆ ಗಟ್ಟಿಗೊಳಿಸುತ್ತದೆ. ಬಹುಮಾನಕ್ಕೆ ನಾನು ಆಯ್ಕೆಯಾಗಿದ್ದು ನನ್ನ ಸಹೋದ್ಯೋಗಿಗಳ ಮೂಲಕ ಕೇಳಿ ತುಂಬಾ ಖುಷಿಗೊಂಡೆ. ಇದಕ್ಕಾಗಿ ನಾವು ತುಂಬಾ ಶ್ರಮಿಸಿದ್ಧೇವೆ. ಬೆಂಬಲ ನೀಡಿದ ನಮ್ಮ ಕುಟುಂಬ ಹಾಗೂ ಸ್ನೇಹಿತರಿಗೆ ಕೃತಜ್ಞರಾಗಿರುತ್ತೇವೆ.”

ಫೋಟೋ ಕೃಪೆ: ದಾರ್ ಯಾಸಿನ್

ಬಹುಮಾನವನ್ನು ನಿರ್ವಾಹಕರಾದ ಡಾನಾ ಕ್ಯಾನೆಡಿ ಯೂಟ್ಯೂಬ್‌ನಲ್ಲಿ ಲೈವ್ ಸ್ಟ್ರೀಮ್ ಮೂಲಕ ಪ್ರಕಟಿಸಿದರು. ಜಮ್ಮುಕಾಶ್ಮೀರದಲ್ಲಿ ಲಾಕ್‌ಡೌನ್ ಮತ್ತು ಸಂಪರ್ಕ ನಿರ್ಬಂಧದ ಮಧ್ಯೆ ಜನ ಜೀವನದ ಗಮನಾರ್ಹ ಚಿತ್ರಗಳನ್ನು ಸೆರೆ ಹಿಡಿದಿದ್ದಕ್ಕಾಗಿ ಈ ಪ್ರಶಸ್ತಿಗಳನ್ನು ನೀಡಲಾಯಿತು.

ಫೋಟೋ ಕ್ರೆಡಿಟ್: ಚನ್ನಿ ಆನಂದ್

ಆದರೆ ವಿಪರ್ಯಾಸವೇನೆಂದರೆ ಈ ಪತ್ರಕರ್ತರಿಗೆ ಪುಲಿಟ್ಜೆರ್ ಬಹುಮಾನ ಘೋಷಿಸುವಾಗ ಈ ಕಡೆ ಕಾಶ್ಮೀರದಲ್ಲಿ “ರಾಷ್ಟ್ರ ವಿರೋಧಿ” ಚಟುವಟಿಕೆ ಮಾಡಿದ್ದಾರೆಂದು ಮೂವರು ಕಾಶ್ಮೀರಿ ಪತ್ರಕರ್ತರರಾದ ಪೀರ್ಜಾಡಾ ಆಶಿಕ್, ಗೌಹರ್ ಗೀಲಾನಿ ಮತ್ತು ಮಸ್ರತ್ ಜಹ್ರಾ ಅವರನ್ನು ಬಂಧಿಸಲಾಗಿದೆ. ಫ್ರೀಲಾನ್ಸಿಂಗ್ ಫೋಟೊ ಜರ್ನಲಿಸ್ಟ್ ಆಗಿರುವ ಮಸ್ರತ್ ಜಹರಾ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ, ಇದರ ಅಡಿಯಲ್ಲಿ ಒಬ್ಬ ವ್ಯಕ್ತಿಯನ್ನು ಏಳು ವರ್ಷಗಳವರೆಗೆ ಜೈಲಿನಲ್ಲಿಡಬಹುದು.

ಪೀರ್ಜಾಡಾ ಆಶಿಕ್ (ಎಡ), ಗೌಹರ್ ಗೀಲಾನಿ (ಮಧ್ಯೆ), ಮತ್ತು ಮಸ್ರತ್ ಜಹ್ರಾ (ಬಲ) ಇವರೆಲ್ಲರೂ ಕಾಶ್ಮೀರಿ ಪತ್ರಕರ್ತರಾಗಿದ್ದಾರೆ.

ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರ ಪುತ್ರಿ ಟ್ವಿಟರ್ ಇಲ್ತಿಜಾ ಮುಫ್ತಿ ಅಸೋಸಿಯೇಟೆಡ್ ಪ್ರೆಸ್ ಪತ್ರಿಕೆಯ ಮೂವರು ಫೋಟೋ ಜರ್ನಲಿಸ್ಟ್‌ಗಳನ್ನು ತನ್ನ ತಾಯಿಯ ಟ್ವಿಟ್ಟರ್ ಖಾತೆಯಿಂದ ಅಭಿನಂದಿಸಿದ್ದಾರೆ.

ಕೇಂದ್ರ ಸರ್ಕಾರದಿಂದ ಈ ಪತ್ರಕರ್ತರಿಗೆ ಪ್ರಶಸ್ತಿ ಬಂದಿರುವುದಕ್ಕೆ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಆದರೆ ಒಮರ್ ಅಬ್ದುಲ್ಲಾ ಸೇರಿದಂತೆ ಹಲವರು ಇವರಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಬಹುಮಾನಿತರಿಗೆ ಅಭಿನಂದನಾ ಟ್ವೀಟ್ ಕಳುಹಿಸಿದ್ದಾರೆ.


ಇದನ್ನೂ ಓದಿ: ಮಾಜಿ IAS ಕಣ್ಣನ್ ಗೋಪಿನಾಥನ್ ಅವರಿಗೆ ಕಾಶ್ಮೀರಿ ವಿದ್ಯಾರ್ಥಿಯಿಂದ ಭಾವನಾತ್ಮಕ ಪತ್ರ


ಮ್ಮ Facebook ಪುಟಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...