Homeಮುಖಪುಟ2020ರ ಪ್ರತಿಷ್ಟಿತ ಪುಲಿಟ್ಜೆರ್ ಪ್ರಶಸ್ತಿ ಗೆದ್ದ ಕಾಶ್ಮೀರದ ಪತ್ರಕರ್ತರು ಸೆರೆಹಿಡಿದ ಫೋಟೊಗಳು

2020ರ ಪ್ರತಿಷ್ಟಿತ ಪುಲಿಟ್ಜೆರ್ ಪ್ರಶಸ್ತಿ ಗೆದ್ದ ಕಾಶ್ಮೀರದ ಪತ್ರಕರ್ತರು ಸೆರೆಹಿಡಿದ ಫೋಟೊಗಳು

- Advertisement -
- Advertisement -

2020ರ ಪುಲಿಟ್ಜೆರ್ ಪ್ರಶಸ್ತಿ ಜಮ್ಮುಕಾಶ್ಮೀರದ ಮೂವರು ಛಾಯಚಿತ್ರ ಪತ್ರಕರ್ತರಿಗೆ ಲಭಿಸಿದೆ. ಕೊರೊನಾ ಕಾರಣ ಪ್ರಶಸ್ತಿಗಳನ್ನು ಸಾಂಕೇತಿಕವಾಗಿ ಘೋಷಿಸಲಾಯಿತು.

ಅಸೋಸಿಯೇಟೆಡ್ ಪ್ರೆಸ್ ಛಾಯಾಗ್ರಾಹಕರಾದ ದಾರ್ ಯಾಸಿನ್, ಮುಖ್ತಾರ್ ಖಾನ್, ಮತ್ತು ಚನ್ನಿ ಆನಂದ್ ಅವರು ಕಳೆದ ವರ್ಷ ಆರ್ಟಿಕಲ್ 370 ರ ಅಡಿಯಲ್ಲಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಕಾಶ್ಮೀರದಲ್ಲಿನ ಲಾಕ್ ಡೌನನ್ನು ಸೆರೆಹಿಡಿಯುವಲ್ಲಿ ಅವರು ಮಾಡಿದ ಕಾರ್ಯಗಳಿಗಾಗಿ ಬಹುಮಾನಗಳನ್ನು ಗೆದ್ದರು.

ಆರ್ಟಿಕಲ್ 370 ನ್ನು ರದ್ದು ಮಾಡಿದ ನಂತರ, ಫೋನ್‌ಗಳು ಹಾಗೂ ಇಂಟರ್ನೆಟ್ ಸೇವೆಯನ್ನು ತಡೆ ಹಿಡಿದು ಜಮ್ಮುಕಾಶ್ಮೀರದಾದ್ಯಂತ ಕರ್ಫ್ಯೂ ಹಾಗೂ ಲಾಕ್ ಡೌನ್ ಮಾಡಲಾಗಿತ್ತು. ಮುಖ್ಯವಾಗಿ ಫೋನು ಹಾಗೂ ಇಂಟರ್ ನೆಟ್ ಕಡಿತದಿಂದಾಗಿ ಕಾಶ್ಮೀರದ ಜನ ಜೀವನದ ಪರಿಸ್ಥಿತಿಗಳನ್ನು ಲಾಕ್‌ಡೌನ್ ಪರಿಸ್ಥಿತಿಯಲ್ಲಿ ಜಗತ್ತಿಗೆ ತೋರಿಸುವುದು ಕಷ್ಟಕರವಾಗಿತ್ತು.

ಪ್ರಶಸ್ತಿ ಗೆದ್ದವರ ಕೆಲ ಫೋಟೊಗಳು ಈ ಕೆಳಗಿವೆ.

ಆದರೆ ಮೂವರು ಫೋಟೊ ಜರ್ನಲಿಸ್ಟ್‌ಗಳು ಪ್ರತಿಭಟನೆ, ಪೊಲೀಸ್ ಮತ್ತು ಅರೆಸೈನಿಕರ ನಡೆ ಮತ್ತು ದೈನಂದಿನ ಜೀವನದ ರಸ್ತೆ ತಡೆಗಳ ಚಿತ್ರಗಳನ್ನು ಸೆರೆಹಿಡಿದು, ಕೆಲವೊಮ್ಮೆ ಅಪರಿಚಿತರ ಮನೆಗಳಿಂದ ಕವರ್ ಪಡೆದುಕೊಂಡು ತರಕಾರಿ ಚೀಲಗಳಲ್ಲಿ ಕ್ಯಾಮೆರಾಗಳನ್ನು ಅಡಗಿಸಿ ನಂತರ ವಿಮಾನ ನಿಲ್ದಾಣಕ್ಕೆ ತೆರಳಿ ಪ್ರಯಾಣಿಕರೊಂದಿಗೆ ನವದೆಹಲಿಯ ಅಸೋಸಿಯೇಟೆಡ್ ಪ್ರೆಸ್ ಕಚೇರಿಗೆ ಫೋಟೋ ಫೈಲ್‌ಗಳನ್ನು ಕೊಂಡೊಯ್ಯಲು ಮನವೊಲಿಸಿದದ್ದರು.

ಪುಲಿಟ್ಜರ್ 1
ಕಾಶ್ಮೀರಿಗಳು 2019 ರ ಡಿಸೆಂಬರ್‌ನಲ್ಲಿ ಶ್ರೀನಗರದ ಸೂಫಿ ಸಂತರ ದರ್ಗಾದ ಹೊರಗೆ ಪ್ರಾರ್ಥನೆ ಸಲ್ಲಿಸುತ್ತಿರುವುದು. ಈ ಚಿತ್ರ 3 ಪ್ರಶಸ್ತಿ ವಿಜೇತ ಛಾಯಾಚಿತ್ರ ಪತ್ರಕರ್ತರ ಛಾಯಾಚಿತ್ರಗಳ ಸರಣಿಯ ಭಾಗವಾಗಿತ್ತು.

ವಿಜೇತರಲ್ಲಿ ಒಬ್ಬರಾದ ಯಾಸಿನ್ “ಇದು ಯಾವಾಗಲೂ ಇಲಿ ಮತ್ತು ಬೆಕ್ಕಿನ ಆಟ, ಇಂತಹ ಕಷ್ಟಡಗಳು ನಮ್ಮನ್ನು ಎಂದಿಗೂ ಮೌನವಾಗದಂತೆ ಗಟ್ಟಿಗೊಳಿಸುತ್ತದೆ. ಬಹುಮಾನಕ್ಕೆ ನಾನು ಆಯ್ಕೆಯಾಗಿದ್ದು ನನ್ನ ಸಹೋದ್ಯೋಗಿಗಳ ಮೂಲಕ ಕೇಳಿ ತುಂಬಾ ಖುಷಿಗೊಂಡೆ. ಇದಕ್ಕಾಗಿ ನಾವು ತುಂಬಾ ಶ್ರಮಿಸಿದ್ಧೇವೆ. ಬೆಂಬಲ ನೀಡಿದ ನಮ್ಮ ಕುಟುಂಬ ಹಾಗೂ ಸ್ನೇಹಿತರಿಗೆ ಕೃತಜ್ಞರಾಗಿರುತ್ತೇವೆ.”

ಫೋಟೋ ಕೃಪೆ: ದಾರ್ ಯಾಸಿನ್

ಬಹುಮಾನವನ್ನು ನಿರ್ವಾಹಕರಾದ ಡಾನಾ ಕ್ಯಾನೆಡಿ ಯೂಟ್ಯೂಬ್‌ನಲ್ಲಿ ಲೈವ್ ಸ್ಟ್ರೀಮ್ ಮೂಲಕ ಪ್ರಕಟಿಸಿದರು. ಜಮ್ಮುಕಾಶ್ಮೀರದಲ್ಲಿ ಲಾಕ್‌ಡೌನ್ ಮತ್ತು ಸಂಪರ್ಕ ನಿರ್ಬಂಧದ ಮಧ್ಯೆ ಜನ ಜೀವನದ ಗಮನಾರ್ಹ ಚಿತ್ರಗಳನ್ನು ಸೆರೆ ಹಿಡಿದಿದ್ದಕ್ಕಾಗಿ ಈ ಪ್ರಶಸ್ತಿಗಳನ್ನು ನೀಡಲಾಯಿತು.

ಫೋಟೋ ಕ್ರೆಡಿಟ್: ಚನ್ನಿ ಆನಂದ್

ಆದರೆ ವಿಪರ್ಯಾಸವೇನೆಂದರೆ ಈ ಪತ್ರಕರ್ತರಿಗೆ ಪುಲಿಟ್ಜೆರ್ ಬಹುಮಾನ ಘೋಷಿಸುವಾಗ ಈ ಕಡೆ ಕಾಶ್ಮೀರದಲ್ಲಿ “ರಾಷ್ಟ್ರ ವಿರೋಧಿ” ಚಟುವಟಿಕೆ ಮಾಡಿದ್ದಾರೆಂದು ಮೂವರು ಕಾಶ್ಮೀರಿ ಪತ್ರಕರ್ತರರಾದ ಪೀರ್ಜಾಡಾ ಆಶಿಕ್, ಗೌಹರ್ ಗೀಲಾನಿ ಮತ್ತು ಮಸ್ರತ್ ಜಹ್ರಾ ಅವರನ್ನು ಬಂಧಿಸಲಾಗಿದೆ. ಫ್ರೀಲಾನ್ಸಿಂಗ್ ಫೋಟೊ ಜರ್ನಲಿಸ್ಟ್ ಆಗಿರುವ ಮಸ್ರತ್ ಜಹರಾ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ, ಇದರ ಅಡಿಯಲ್ಲಿ ಒಬ್ಬ ವ್ಯಕ್ತಿಯನ್ನು ಏಳು ವರ್ಷಗಳವರೆಗೆ ಜೈಲಿನಲ್ಲಿಡಬಹುದು.

ಪೀರ್ಜಾಡಾ ಆಶಿಕ್ (ಎಡ), ಗೌಹರ್ ಗೀಲಾನಿ (ಮಧ್ಯೆ), ಮತ್ತು ಮಸ್ರತ್ ಜಹ್ರಾ (ಬಲ) ಇವರೆಲ್ಲರೂ ಕಾಶ್ಮೀರಿ ಪತ್ರಕರ್ತರಾಗಿದ್ದಾರೆ.

ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರ ಪುತ್ರಿ ಟ್ವಿಟರ್ ಇಲ್ತಿಜಾ ಮುಫ್ತಿ ಅಸೋಸಿಯೇಟೆಡ್ ಪ್ರೆಸ್ ಪತ್ರಿಕೆಯ ಮೂವರು ಫೋಟೋ ಜರ್ನಲಿಸ್ಟ್‌ಗಳನ್ನು ತನ್ನ ತಾಯಿಯ ಟ್ವಿಟ್ಟರ್ ಖಾತೆಯಿಂದ ಅಭಿನಂದಿಸಿದ್ದಾರೆ.

ಕೇಂದ್ರ ಸರ್ಕಾರದಿಂದ ಈ ಪತ್ರಕರ್ತರಿಗೆ ಪ್ರಶಸ್ತಿ ಬಂದಿರುವುದಕ್ಕೆ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಆದರೆ ಒಮರ್ ಅಬ್ದುಲ್ಲಾ ಸೇರಿದಂತೆ ಹಲವರು ಇವರಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಬಹುಮಾನಿತರಿಗೆ ಅಭಿನಂದನಾ ಟ್ವೀಟ್ ಕಳುಹಿಸಿದ್ದಾರೆ.


ಇದನ್ನೂ ಓದಿ: ಮಾಜಿ IAS ಕಣ್ಣನ್ ಗೋಪಿನಾಥನ್ ಅವರಿಗೆ ಕಾಶ್ಮೀರಿ ವಿದ್ಯಾರ್ಥಿಯಿಂದ ಭಾವನಾತ್ಮಕ ಪತ್ರ


ಮ್ಮ Facebook ಪುಟಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...