Homeಮುಖಪುಟ2020ರ ಪ್ರತಿಷ್ಟಿತ ಪುಲಿಟ್ಜೆರ್ ಪ್ರಶಸ್ತಿ ಗೆದ್ದ ಕಾಶ್ಮೀರದ ಪತ್ರಕರ್ತರು ಸೆರೆಹಿಡಿದ ಫೋಟೊಗಳು

2020ರ ಪ್ರತಿಷ್ಟಿತ ಪುಲಿಟ್ಜೆರ್ ಪ್ರಶಸ್ತಿ ಗೆದ್ದ ಕಾಶ್ಮೀರದ ಪತ್ರಕರ್ತರು ಸೆರೆಹಿಡಿದ ಫೋಟೊಗಳು

- Advertisement -
- Advertisement -

2020ರ ಪುಲಿಟ್ಜೆರ್ ಪ್ರಶಸ್ತಿ ಜಮ್ಮುಕಾಶ್ಮೀರದ ಮೂವರು ಛಾಯಚಿತ್ರ ಪತ್ರಕರ್ತರಿಗೆ ಲಭಿಸಿದೆ. ಕೊರೊನಾ ಕಾರಣ ಪ್ರಶಸ್ತಿಗಳನ್ನು ಸಾಂಕೇತಿಕವಾಗಿ ಘೋಷಿಸಲಾಯಿತು.

ಅಸೋಸಿಯೇಟೆಡ್ ಪ್ರೆಸ್ ಛಾಯಾಗ್ರಾಹಕರಾದ ದಾರ್ ಯಾಸಿನ್, ಮುಖ್ತಾರ್ ಖಾನ್, ಮತ್ತು ಚನ್ನಿ ಆನಂದ್ ಅವರು ಕಳೆದ ವರ್ಷ ಆರ್ಟಿಕಲ್ 370 ರ ಅಡಿಯಲ್ಲಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಕಾಶ್ಮೀರದಲ್ಲಿನ ಲಾಕ್ ಡೌನನ್ನು ಸೆರೆಹಿಡಿಯುವಲ್ಲಿ ಅವರು ಮಾಡಿದ ಕಾರ್ಯಗಳಿಗಾಗಿ ಬಹುಮಾನಗಳನ್ನು ಗೆದ್ದರು.

ಆರ್ಟಿಕಲ್ 370 ನ್ನು ರದ್ದು ಮಾಡಿದ ನಂತರ, ಫೋನ್‌ಗಳು ಹಾಗೂ ಇಂಟರ್ನೆಟ್ ಸೇವೆಯನ್ನು ತಡೆ ಹಿಡಿದು ಜಮ್ಮುಕಾಶ್ಮೀರದಾದ್ಯಂತ ಕರ್ಫ್ಯೂ ಹಾಗೂ ಲಾಕ್ ಡೌನ್ ಮಾಡಲಾಗಿತ್ತು. ಮುಖ್ಯವಾಗಿ ಫೋನು ಹಾಗೂ ಇಂಟರ್ ನೆಟ್ ಕಡಿತದಿಂದಾಗಿ ಕಾಶ್ಮೀರದ ಜನ ಜೀವನದ ಪರಿಸ್ಥಿತಿಗಳನ್ನು ಲಾಕ್‌ಡೌನ್ ಪರಿಸ್ಥಿತಿಯಲ್ಲಿ ಜಗತ್ತಿಗೆ ತೋರಿಸುವುದು ಕಷ್ಟಕರವಾಗಿತ್ತು.

ಪ್ರಶಸ್ತಿ ಗೆದ್ದವರ ಕೆಲ ಫೋಟೊಗಳು ಈ ಕೆಳಗಿವೆ.

ಆದರೆ ಮೂವರು ಫೋಟೊ ಜರ್ನಲಿಸ್ಟ್‌ಗಳು ಪ್ರತಿಭಟನೆ, ಪೊಲೀಸ್ ಮತ್ತು ಅರೆಸೈನಿಕರ ನಡೆ ಮತ್ತು ದೈನಂದಿನ ಜೀವನದ ರಸ್ತೆ ತಡೆಗಳ ಚಿತ್ರಗಳನ್ನು ಸೆರೆಹಿಡಿದು, ಕೆಲವೊಮ್ಮೆ ಅಪರಿಚಿತರ ಮನೆಗಳಿಂದ ಕವರ್ ಪಡೆದುಕೊಂಡು ತರಕಾರಿ ಚೀಲಗಳಲ್ಲಿ ಕ್ಯಾಮೆರಾಗಳನ್ನು ಅಡಗಿಸಿ ನಂತರ ವಿಮಾನ ನಿಲ್ದಾಣಕ್ಕೆ ತೆರಳಿ ಪ್ರಯಾಣಿಕರೊಂದಿಗೆ ನವದೆಹಲಿಯ ಅಸೋಸಿಯೇಟೆಡ್ ಪ್ರೆಸ್ ಕಚೇರಿಗೆ ಫೋಟೋ ಫೈಲ್‌ಗಳನ್ನು ಕೊಂಡೊಯ್ಯಲು ಮನವೊಲಿಸಿದದ್ದರು.

ಪುಲಿಟ್ಜರ್ 1
ಕಾಶ್ಮೀರಿಗಳು 2019 ರ ಡಿಸೆಂಬರ್‌ನಲ್ಲಿ ಶ್ರೀನಗರದ ಸೂಫಿ ಸಂತರ ದರ್ಗಾದ ಹೊರಗೆ ಪ್ರಾರ್ಥನೆ ಸಲ್ಲಿಸುತ್ತಿರುವುದು. ಈ ಚಿತ್ರ 3 ಪ್ರಶಸ್ತಿ ವಿಜೇತ ಛಾಯಾಚಿತ್ರ ಪತ್ರಕರ್ತರ ಛಾಯಾಚಿತ್ರಗಳ ಸರಣಿಯ ಭಾಗವಾಗಿತ್ತು.

ವಿಜೇತರಲ್ಲಿ ಒಬ್ಬರಾದ ಯಾಸಿನ್ “ಇದು ಯಾವಾಗಲೂ ಇಲಿ ಮತ್ತು ಬೆಕ್ಕಿನ ಆಟ, ಇಂತಹ ಕಷ್ಟಡಗಳು ನಮ್ಮನ್ನು ಎಂದಿಗೂ ಮೌನವಾಗದಂತೆ ಗಟ್ಟಿಗೊಳಿಸುತ್ತದೆ. ಬಹುಮಾನಕ್ಕೆ ನಾನು ಆಯ್ಕೆಯಾಗಿದ್ದು ನನ್ನ ಸಹೋದ್ಯೋಗಿಗಳ ಮೂಲಕ ಕೇಳಿ ತುಂಬಾ ಖುಷಿಗೊಂಡೆ. ಇದಕ್ಕಾಗಿ ನಾವು ತುಂಬಾ ಶ್ರಮಿಸಿದ್ಧೇವೆ. ಬೆಂಬಲ ನೀಡಿದ ನಮ್ಮ ಕುಟುಂಬ ಹಾಗೂ ಸ್ನೇಹಿತರಿಗೆ ಕೃತಜ್ಞರಾಗಿರುತ್ತೇವೆ.”

ಫೋಟೋ ಕೃಪೆ: ದಾರ್ ಯಾಸಿನ್

ಬಹುಮಾನವನ್ನು ನಿರ್ವಾಹಕರಾದ ಡಾನಾ ಕ್ಯಾನೆಡಿ ಯೂಟ್ಯೂಬ್‌ನಲ್ಲಿ ಲೈವ್ ಸ್ಟ್ರೀಮ್ ಮೂಲಕ ಪ್ರಕಟಿಸಿದರು. ಜಮ್ಮುಕಾಶ್ಮೀರದಲ್ಲಿ ಲಾಕ್‌ಡೌನ್ ಮತ್ತು ಸಂಪರ್ಕ ನಿರ್ಬಂಧದ ಮಧ್ಯೆ ಜನ ಜೀವನದ ಗಮನಾರ್ಹ ಚಿತ್ರಗಳನ್ನು ಸೆರೆ ಹಿಡಿದಿದ್ದಕ್ಕಾಗಿ ಈ ಪ್ರಶಸ್ತಿಗಳನ್ನು ನೀಡಲಾಯಿತು.

ಫೋಟೋ ಕ್ರೆಡಿಟ್: ಚನ್ನಿ ಆನಂದ್

ಆದರೆ ವಿಪರ್ಯಾಸವೇನೆಂದರೆ ಈ ಪತ್ರಕರ್ತರಿಗೆ ಪುಲಿಟ್ಜೆರ್ ಬಹುಮಾನ ಘೋಷಿಸುವಾಗ ಈ ಕಡೆ ಕಾಶ್ಮೀರದಲ್ಲಿ “ರಾಷ್ಟ್ರ ವಿರೋಧಿ” ಚಟುವಟಿಕೆ ಮಾಡಿದ್ದಾರೆಂದು ಮೂವರು ಕಾಶ್ಮೀರಿ ಪತ್ರಕರ್ತರರಾದ ಪೀರ್ಜಾಡಾ ಆಶಿಕ್, ಗೌಹರ್ ಗೀಲಾನಿ ಮತ್ತು ಮಸ್ರತ್ ಜಹ್ರಾ ಅವರನ್ನು ಬಂಧಿಸಲಾಗಿದೆ. ಫ್ರೀಲಾನ್ಸಿಂಗ್ ಫೋಟೊ ಜರ್ನಲಿಸ್ಟ್ ಆಗಿರುವ ಮಸ್ರತ್ ಜಹರಾ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ, ಇದರ ಅಡಿಯಲ್ಲಿ ಒಬ್ಬ ವ್ಯಕ್ತಿಯನ್ನು ಏಳು ವರ್ಷಗಳವರೆಗೆ ಜೈಲಿನಲ್ಲಿಡಬಹುದು.

ಪೀರ್ಜಾಡಾ ಆಶಿಕ್ (ಎಡ), ಗೌಹರ್ ಗೀಲಾನಿ (ಮಧ್ಯೆ), ಮತ್ತು ಮಸ್ರತ್ ಜಹ್ರಾ (ಬಲ) ಇವರೆಲ್ಲರೂ ಕಾಶ್ಮೀರಿ ಪತ್ರಕರ್ತರಾಗಿದ್ದಾರೆ.

ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರ ಪುತ್ರಿ ಟ್ವಿಟರ್ ಇಲ್ತಿಜಾ ಮುಫ್ತಿ ಅಸೋಸಿಯೇಟೆಡ್ ಪ್ರೆಸ್ ಪತ್ರಿಕೆಯ ಮೂವರು ಫೋಟೋ ಜರ್ನಲಿಸ್ಟ್‌ಗಳನ್ನು ತನ್ನ ತಾಯಿಯ ಟ್ವಿಟ್ಟರ್ ಖಾತೆಯಿಂದ ಅಭಿನಂದಿಸಿದ್ದಾರೆ.

ಕೇಂದ್ರ ಸರ್ಕಾರದಿಂದ ಈ ಪತ್ರಕರ್ತರಿಗೆ ಪ್ರಶಸ್ತಿ ಬಂದಿರುವುದಕ್ಕೆ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಆದರೆ ಒಮರ್ ಅಬ್ದುಲ್ಲಾ ಸೇರಿದಂತೆ ಹಲವರು ಇವರಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಬಹುಮಾನಿತರಿಗೆ ಅಭಿನಂದನಾ ಟ್ವೀಟ್ ಕಳುಹಿಸಿದ್ದಾರೆ.


ಇದನ್ನೂ ಓದಿ: ಮಾಜಿ IAS ಕಣ್ಣನ್ ಗೋಪಿನಾಥನ್ ಅವರಿಗೆ ಕಾಶ್ಮೀರಿ ವಿದ್ಯಾರ್ಥಿಯಿಂದ ಭಾವನಾತ್ಮಕ ಪತ್ರ


ಮ್ಮ Facebook ಪುಟಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...