Homeಮುಖಪುಟ2020ರ ಪ್ರತಿಷ್ಟಿತ ಪುಲಿಟ್ಜೆರ್ ಪ್ರಶಸ್ತಿ ಗೆದ್ದ ಕಾಶ್ಮೀರದ ಪತ್ರಕರ್ತರು ಸೆರೆಹಿಡಿದ ಫೋಟೊಗಳು

2020ರ ಪ್ರತಿಷ್ಟಿತ ಪುಲಿಟ್ಜೆರ್ ಪ್ರಶಸ್ತಿ ಗೆದ್ದ ಕಾಶ್ಮೀರದ ಪತ್ರಕರ್ತರು ಸೆರೆಹಿಡಿದ ಫೋಟೊಗಳು

- Advertisement -
- Advertisement -

2020ರ ಪುಲಿಟ್ಜೆರ್ ಪ್ರಶಸ್ತಿ ಜಮ್ಮುಕಾಶ್ಮೀರದ ಮೂವರು ಛಾಯಚಿತ್ರ ಪತ್ರಕರ್ತರಿಗೆ ಲಭಿಸಿದೆ. ಕೊರೊನಾ ಕಾರಣ ಪ್ರಶಸ್ತಿಗಳನ್ನು ಸಾಂಕೇತಿಕವಾಗಿ ಘೋಷಿಸಲಾಯಿತು.

ಅಸೋಸಿಯೇಟೆಡ್ ಪ್ರೆಸ್ ಛಾಯಾಗ್ರಾಹಕರಾದ ದಾರ್ ಯಾಸಿನ್, ಮುಖ್ತಾರ್ ಖಾನ್, ಮತ್ತು ಚನ್ನಿ ಆನಂದ್ ಅವರು ಕಳೆದ ವರ್ಷ ಆರ್ಟಿಕಲ್ 370 ರ ಅಡಿಯಲ್ಲಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಕಾಶ್ಮೀರದಲ್ಲಿನ ಲಾಕ್ ಡೌನನ್ನು ಸೆರೆಹಿಡಿಯುವಲ್ಲಿ ಅವರು ಮಾಡಿದ ಕಾರ್ಯಗಳಿಗಾಗಿ ಬಹುಮಾನಗಳನ್ನು ಗೆದ್ದರು.

ಆರ್ಟಿಕಲ್ 370 ನ್ನು ರದ್ದು ಮಾಡಿದ ನಂತರ, ಫೋನ್‌ಗಳು ಹಾಗೂ ಇಂಟರ್ನೆಟ್ ಸೇವೆಯನ್ನು ತಡೆ ಹಿಡಿದು ಜಮ್ಮುಕಾಶ್ಮೀರದಾದ್ಯಂತ ಕರ್ಫ್ಯೂ ಹಾಗೂ ಲಾಕ್ ಡೌನ್ ಮಾಡಲಾಗಿತ್ತು. ಮುಖ್ಯವಾಗಿ ಫೋನು ಹಾಗೂ ಇಂಟರ್ ನೆಟ್ ಕಡಿತದಿಂದಾಗಿ ಕಾಶ್ಮೀರದ ಜನ ಜೀವನದ ಪರಿಸ್ಥಿತಿಗಳನ್ನು ಲಾಕ್‌ಡೌನ್ ಪರಿಸ್ಥಿತಿಯಲ್ಲಿ ಜಗತ್ತಿಗೆ ತೋರಿಸುವುದು ಕಷ್ಟಕರವಾಗಿತ್ತು.

ಪ್ರಶಸ್ತಿ ಗೆದ್ದವರ ಕೆಲ ಫೋಟೊಗಳು ಈ ಕೆಳಗಿವೆ.

ಆದರೆ ಮೂವರು ಫೋಟೊ ಜರ್ನಲಿಸ್ಟ್‌ಗಳು ಪ್ರತಿಭಟನೆ, ಪೊಲೀಸ್ ಮತ್ತು ಅರೆಸೈನಿಕರ ನಡೆ ಮತ್ತು ದೈನಂದಿನ ಜೀವನದ ರಸ್ತೆ ತಡೆಗಳ ಚಿತ್ರಗಳನ್ನು ಸೆರೆಹಿಡಿದು, ಕೆಲವೊಮ್ಮೆ ಅಪರಿಚಿತರ ಮನೆಗಳಿಂದ ಕವರ್ ಪಡೆದುಕೊಂಡು ತರಕಾರಿ ಚೀಲಗಳಲ್ಲಿ ಕ್ಯಾಮೆರಾಗಳನ್ನು ಅಡಗಿಸಿ ನಂತರ ವಿಮಾನ ನಿಲ್ದಾಣಕ್ಕೆ ತೆರಳಿ ಪ್ರಯಾಣಿಕರೊಂದಿಗೆ ನವದೆಹಲಿಯ ಅಸೋಸಿಯೇಟೆಡ್ ಪ್ರೆಸ್ ಕಚೇರಿಗೆ ಫೋಟೋ ಫೈಲ್‌ಗಳನ್ನು ಕೊಂಡೊಯ್ಯಲು ಮನವೊಲಿಸಿದದ್ದರು.

ಪುಲಿಟ್ಜರ್ 1
ಕಾಶ್ಮೀರಿಗಳು 2019 ರ ಡಿಸೆಂಬರ್‌ನಲ್ಲಿ ಶ್ರೀನಗರದ ಸೂಫಿ ಸಂತರ ದರ್ಗಾದ ಹೊರಗೆ ಪ್ರಾರ್ಥನೆ ಸಲ್ಲಿಸುತ್ತಿರುವುದು. ಈ ಚಿತ್ರ 3 ಪ್ರಶಸ್ತಿ ವಿಜೇತ ಛಾಯಾಚಿತ್ರ ಪತ್ರಕರ್ತರ ಛಾಯಾಚಿತ್ರಗಳ ಸರಣಿಯ ಭಾಗವಾಗಿತ್ತು.

ವಿಜೇತರಲ್ಲಿ ಒಬ್ಬರಾದ ಯಾಸಿನ್ “ಇದು ಯಾವಾಗಲೂ ಇಲಿ ಮತ್ತು ಬೆಕ್ಕಿನ ಆಟ, ಇಂತಹ ಕಷ್ಟಡಗಳು ನಮ್ಮನ್ನು ಎಂದಿಗೂ ಮೌನವಾಗದಂತೆ ಗಟ್ಟಿಗೊಳಿಸುತ್ತದೆ. ಬಹುಮಾನಕ್ಕೆ ನಾನು ಆಯ್ಕೆಯಾಗಿದ್ದು ನನ್ನ ಸಹೋದ್ಯೋಗಿಗಳ ಮೂಲಕ ಕೇಳಿ ತುಂಬಾ ಖುಷಿಗೊಂಡೆ. ಇದಕ್ಕಾಗಿ ನಾವು ತುಂಬಾ ಶ್ರಮಿಸಿದ್ಧೇವೆ. ಬೆಂಬಲ ನೀಡಿದ ನಮ್ಮ ಕುಟುಂಬ ಹಾಗೂ ಸ್ನೇಹಿತರಿಗೆ ಕೃತಜ್ಞರಾಗಿರುತ್ತೇವೆ.”

ಫೋಟೋ ಕೃಪೆ: ದಾರ್ ಯಾಸಿನ್

ಬಹುಮಾನವನ್ನು ನಿರ್ವಾಹಕರಾದ ಡಾನಾ ಕ್ಯಾನೆಡಿ ಯೂಟ್ಯೂಬ್‌ನಲ್ಲಿ ಲೈವ್ ಸ್ಟ್ರೀಮ್ ಮೂಲಕ ಪ್ರಕಟಿಸಿದರು. ಜಮ್ಮುಕಾಶ್ಮೀರದಲ್ಲಿ ಲಾಕ್‌ಡೌನ್ ಮತ್ತು ಸಂಪರ್ಕ ನಿರ್ಬಂಧದ ಮಧ್ಯೆ ಜನ ಜೀವನದ ಗಮನಾರ್ಹ ಚಿತ್ರಗಳನ್ನು ಸೆರೆ ಹಿಡಿದಿದ್ದಕ್ಕಾಗಿ ಈ ಪ್ರಶಸ್ತಿಗಳನ್ನು ನೀಡಲಾಯಿತು.

ಫೋಟೋ ಕ್ರೆಡಿಟ್: ಚನ್ನಿ ಆನಂದ್

ಆದರೆ ವಿಪರ್ಯಾಸವೇನೆಂದರೆ ಈ ಪತ್ರಕರ್ತರಿಗೆ ಪುಲಿಟ್ಜೆರ್ ಬಹುಮಾನ ಘೋಷಿಸುವಾಗ ಈ ಕಡೆ ಕಾಶ್ಮೀರದಲ್ಲಿ “ರಾಷ್ಟ್ರ ವಿರೋಧಿ” ಚಟುವಟಿಕೆ ಮಾಡಿದ್ದಾರೆಂದು ಮೂವರು ಕಾಶ್ಮೀರಿ ಪತ್ರಕರ್ತರರಾದ ಪೀರ್ಜಾಡಾ ಆಶಿಕ್, ಗೌಹರ್ ಗೀಲಾನಿ ಮತ್ತು ಮಸ್ರತ್ ಜಹ್ರಾ ಅವರನ್ನು ಬಂಧಿಸಲಾಗಿದೆ. ಫ್ರೀಲಾನ್ಸಿಂಗ್ ಫೋಟೊ ಜರ್ನಲಿಸ್ಟ್ ಆಗಿರುವ ಮಸ್ರತ್ ಜಹರಾ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ, ಇದರ ಅಡಿಯಲ್ಲಿ ಒಬ್ಬ ವ್ಯಕ್ತಿಯನ್ನು ಏಳು ವರ್ಷಗಳವರೆಗೆ ಜೈಲಿನಲ್ಲಿಡಬಹುದು.

ಪೀರ್ಜಾಡಾ ಆಶಿಕ್ (ಎಡ), ಗೌಹರ್ ಗೀಲಾನಿ (ಮಧ್ಯೆ), ಮತ್ತು ಮಸ್ರತ್ ಜಹ್ರಾ (ಬಲ) ಇವರೆಲ್ಲರೂ ಕಾಶ್ಮೀರಿ ಪತ್ರಕರ್ತರಾಗಿದ್ದಾರೆ.

ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರ ಪುತ್ರಿ ಟ್ವಿಟರ್ ಇಲ್ತಿಜಾ ಮುಫ್ತಿ ಅಸೋಸಿಯೇಟೆಡ್ ಪ್ರೆಸ್ ಪತ್ರಿಕೆಯ ಮೂವರು ಫೋಟೋ ಜರ್ನಲಿಸ್ಟ್‌ಗಳನ್ನು ತನ್ನ ತಾಯಿಯ ಟ್ವಿಟ್ಟರ್ ಖಾತೆಯಿಂದ ಅಭಿನಂದಿಸಿದ್ದಾರೆ.

ಕೇಂದ್ರ ಸರ್ಕಾರದಿಂದ ಈ ಪತ್ರಕರ್ತರಿಗೆ ಪ್ರಶಸ್ತಿ ಬಂದಿರುವುದಕ್ಕೆ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಆದರೆ ಒಮರ್ ಅಬ್ದುಲ್ಲಾ ಸೇರಿದಂತೆ ಹಲವರು ಇವರಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಬಹುಮಾನಿತರಿಗೆ ಅಭಿನಂದನಾ ಟ್ವೀಟ್ ಕಳುಹಿಸಿದ್ದಾರೆ.


ಇದನ್ನೂ ಓದಿ: ಮಾಜಿ IAS ಕಣ್ಣನ್ ಗೋಪಿನಾಥನ್ ಅವರಿಗೆ ಕಾಶ್ಮೀರಿ ವಿದ್ಯಾರ್ಥಿಯಿಂದ ಭಾವನಾತ್ಮಕ ಪತ್ರ


ಮ್ಮ Facebook ಪುಟಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...