Homeಮುಖಪುಟ2020ರ ಪ್ರತಿಷ್ಟಿತ ಪುಲಿಟ್ಜೆರ್ ಪ್ರಶಸ್ತಿ ಗೆದ್ದ ಕಾಶ್ಮೀರದ ಪತ್ರಕರ್ತರು ಸೆರೆಹಿಡಿದ ಫೋಟೊಗಳು

2020ರ ಪ್ರತಿಷ್ಟಿತ ಪುಲಿಟ್ಜೆರ್ ಪ್ರಶಸ್ತಿ ಗೆದ್ದ ಕಾಶ್ಮೀರದ ಪತ್ರಕರ್ತರು ಸೆರೆಹಿಡಿದ ಫೋಟೊಗಳು

- Advertisement -
- Advertisement -

2020ರ ಪುಲಿಟ್ಜೆರ್ ಪ್ರಶಸ್ತಿ ಜಮ್ಮುಕಾಶ್ಮೀರದ ಮೂವರು ಛಾಯಚಿತ್ರ ಪತ್ರಕರ್ತರಿಗೆ ಲಭಿಸಿದೆ. ಕೊರೊನಾ ಕಾರಣ ಪ್ರಶಸ್ತಿಗಳನ್ನು ಸಾಂಕೇತಿಕವಾಗಿ ಘೋಷಿಸಲಾಯಿತು.

ಅಸೋಸಿಯೇಟೆಡ್ ಪ್ರೆಸ್ ಛಾಯಾಗ್ರಾಹಕರಾದ ದಾರ್ ಯಾಸಿನ್, ಮುಖ್ತಾರ್ ಖಾನ್, ಮತ್ತು ಚನ್ನಿ ಆನಂದ್ ಅವರು ಕಳೆದ ವರ್ಷ ಆರ್ಟಿಕಲ್ 370 ರ ಅಡಿಯಲ್ಲಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಕಾಶ್ಮೀರದಲ್ಲಿನ ಲಾಕ್ ಡೌನನ್ನು ಸೆರೆಹಿಡಿಯುವಲ್ಲಿ ಅವರು ಮಾಡಿದ ಕಾರ್ಯಗಳಿಗಾಗಿ ಬಹುಮಾನಗಳನ್ನು ಗೆದ್ದರು.

ಆರ್ಟಿಕಲ್ 370 ನ್ನು ರದ್ದು ಮಾಡಿದ ನಂತರ, ಫೋನ್‌ಗಳು ಹಾಗೂ ಇಂಟರ್ನೆಟ್ ಸೇವೆಯನ್ನು ತಡೆ ಹಿಡಿದು ಜಮ್ಮುಕಾಶ್ಮೀರದಾದ್ಯಂತ ಕರ್ಫ್ಯೂ ಹಾಗೂ ಲಾಕ್ ಡೌನ್ ಮಾಡಲಾಗಿತ್ತು. ಮುಖ್ಯವಾಗಿ ಫೋನು ಹಾಗೂ ಇಂಟರ್ ನೆಟ್ ಕಡಿತದಿಂದಾಗಿ ಕಾಶ್ಮೀರದ ಜನ ಜೀವನದ ಪರಿಸ್ಥಿತಿಗಳನ್ನು ಲಾಕ್‌ಡೌನ್ ಪರಿಸ್ಥಿತಿಯಲ್ಲಿ ಜಗತ್ತಿಗೆ ತೋರಿಸುವುದು ಕಷ್ಟಕರವಾಗಿತ್ತು.

ಪ್ರಶಸ್ತಿ ಗೆದ್ದವರ ಕೆಲ ಫೋಟೊಗಳು ಈ ಕೆಳಗಿವೆ.

ಆದರೆ ಮೂವರು ಫೋಟೊ ಜರ್ನಲಿಸ್ಟ್‌ಗಳು ಪ್ರತಿಭಟನೆ, ಪೊಲೀಸ್ ಮತ್ತು ಅರೆಸೈನಿಕರ ನಡೆ ಮತ್ತು ದೈನಂದಿನ ಜೀವನದ ರಸ್ತೆ ತಡೆಗಳ ಚಿತ್ರಗಳನ್ನು ಸೆರೆಹಿಡಿದು, ಕೆಲವೊಮ್ಮೆ ಅಪರಿಚಿತರ ಮನೆಗಳಿಂದ ಕವರ್ ಪಡೆದುಕೊಂಡು ತರಕಾರಿ ಚೀಲಗಳಲ್ಲಿ ಕ್ಯಾಮೆರಾಗಳನ್ನು ಅಡಗಿಸಿ ನಂತರ ವಿಮಾನ ನಿಲ್ದಾಣಕ್ಕೆ ತೆರಳಿ ಪ್ರಯಾಣಿಕರೊಂದಿಗೆ ನವದೆಹಲಿಯ ಅಸೋಸಿಯೇಟೆಡ್ ಪ್ರೆಸ್ ಕಚೇರಿಗೆ ಫೋಟೋ ಫೈಲ್‌ಗಳನ್ನು ಕೊಂಡೊಯ್ಯಲು ಮನವೊಲಿಸಿದದ್ದರು.

ಪುಲಿಟ್ಜರ್ 1
ಕಾಶ್ಮೀರಿಗಳು 2019 ರ ಡಿಸೆಂಬರ್‌ನಲ್ಲಿ ಶ್ರೀನಗರದ ಸೂಫಿ ಸಂತರ ದರ್ಗಾದ ಹೊರಗೆ ಪ್ರಾರ್ಥನೆ ಸಲ್ಲಿಸುತ್ತಿರುವುದು. ಈ ಚಿತ್ರ 3 ಪ್ರಶಸ್ತಿ ವಿಜೇತ ಛಾಯಾಚಿತ್ರ ಪತ್ರಕರ್ತರ ಛಾಯಾಚಿತ್ರಗಳ ಸರಣಿಯ ಭಾಗವಾಗಿತ್ತು.

ವಿಜೇತರಲ್ಲಿ ಒಬ್ಬರಾದ ಯಾಸಿನ್ “ಇದು ಯಾವಾಗಲೂ ಇಲಿ ಮತ್ತು ಬೆಕ್ಕಿನ ಆಟ, ಇಂತಹ ಕಷ್ಟಡಗಳು ನಮ್ಮನ್ನು ಎಂದಿಗೂ ಮೌನವಾಗದಂತೆ ಗಟ್ಟಿಗೊಳಿಸುತ್ತದೆ. ಬಹುಮಾನಕ್ಕೆ ನಾನು ಆಯ್ಕೆಯಾಗಿದ್ದು ನನ್ನ ಸಹೋದ್ಯೋಗಿಗಳ ಮೂಲಕ ಕೇಳಿ ತುಂಬಾ ಖುಷಿಗೊಂಡೆ. ಇದಕ್ಕಾಗಿ ನಾವು ತುಂಬಾ ಶ್ರಮಿಸಿದ್ಧೇವೆ. ಬೆಂಬಲ ನೀಡಿದ ನಮ್ಮ ಕುಟುಂಬ ಹಾಗೂ ಸ್ನೇಹಿತರಿಗೆ ಕೃತಜ್ಞರಾಗಿರುತ್ತೇವೆ.”

ಫೋಟೋ ಕೃಪೆ: ದಾರ್ ಯಾಸಿನ್

ಬಹುಮಾನವನ್ನು ನಿರ್ವಾಹಕರಾದ ಡಾನಾ ಕ್ಯಾನೆಡಿ ಯೂಟ್ಯೂಬ್‌ನಲ್ಲಿ ಲೈವ್ ಸ್ಟ್ರೀಮ್ ಮೂಲಕ ಪ್ರಕಟಿಸಿದರು. ಜಮ್ಮುಕಾಶ್ಮೀರದಲ್ಲಿ ಲಾಕ್‌ಡೌನ್ ಮತ್ತು ಸಂಪರ್ಕ ನಿರ್ಬಂಧದ ಮಧ್ಯೆ ಜನ ಜೀವನದ ಗಮನಾರ್ಹ ಚಿತ್ರಗಳನ್ನು ಸೆರೆ ಹಿಡಿದಿದ್ದಕ್ಕಾಗಿ ಈ ಪ್ರಶಸ್ತಿಗಳನ್ನು ನೀಡಲಾಯಿತು.

ಫೋಟೋ ಕ್ರೆಡಿಟ್: ಚನ್ನಿ ಆನಂದ್

ಆದರೆ ವಿಪರ್ಯಾಸವೇನೆಂದರೆ ಈ ಪತ್ರಕರ್ತರಿಗೆ ಪುಲಿಟ್ಜೆರ್ ಬಹುಮಾನ ಘೋಷಿಸುವಾಗ ಈ ಕಡೆ ಕಾಶ್ಮೀರದಲ್ಲಿ “ರಾಷ್ಟ್ರ ವಿರೋಧಿ” ಚಟುವಟಿಕೆ ಮಾಡಿದ್ದಾರೆಂದು ಮೂವರು ಕಾಶ್ಮೀರಿ ಪತ್ರಕರ್ತರರಾದ ಪೀರ್ಜಾಡಾ ಆಶಿಕ್, ಗೌಹರ್ ಗೀಲಾನಿ ಮತ್ತು ಮಸ್ರತ್ ಜಹ್ರಾ ಅವರನ್ನು ಬಂಧಿಸಲಾಗಿದೆ. ಫ್ರೀಲಾನ್ಸಿಂಗ್ ಫೋಟೊ ಜರ್ನಲಿಸ್ಟ್ ಆಗಿರುವ ಮಸ್ರತ್ ಜಹರಾ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ, ಇದರ ಅಡಿಯಲ್ಲಿ ಒಬ್ಬ ವ್ಯಕ್ತಿಯನ್ನು ಏಳು ವರ್ಷಗಳವರೆಗೆ ಜೈಲಿನಲ್ಲಿಡಬಹುದು.

ಪೀರ್ಜಾಡಾ ಆಶಿಕ್ (ಎಡ), ಗೌಹರ್ ಗೀಲಾನಿ (ಮಧ್ಯೆ), ಮತ್ತು ಮಸ್ರತ್ ಜಹ್ರಾ (ಬಲ) ಇವರೆಲ್ಲರೂ ಕಾಶ್ಮೀರಿ ಪತ್ರಕರ್ತರಾಗಿದ್ದಾರೆ.

ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರ ಪುತ್ರಿ ಟ್ವಿಟರ್ ಇಲ್ತಿಜಾ ಮುಫ್ತಿ ಅಸೋಸಿಯೇಟೆಡ್ ಪ್ರೆಸ್ ಪತ್ರಿಕೆಯ ಮೂವರು ಫೋಟೋ ಜರ್ನಲಿಸ್ಟ್‌ಗಳನ್ನು ತನ್ನ ತಾಯಿಯ ಟ್ವಿಟ್ಟರ್ ಖಾತೆಯಿಂದ ಅಭಿನಂದಿಸಿದ್ದಾರೆ.

ಕೇಂದ್ರ ಸರ್ಕಾರದಿಂದ ಈ ಪತ್ರಕರ್ತರಿಗೆ ಪ್ರಶಸ್ತಿ ಬಂದಿರುವುದಕ್ಕೆ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಆದರೆ ಒಮರ್ ಅಬ್ದುಲ್ಲಾ ಸೇರಿದಂತೆ ಹಲವರು ಇವರಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಬಹುಮಾನಿತರಿಗೆ ಅಭಿನಂದನಾ ಟ್ವೀಟ್ ಕಳುಹಿಸಿದ್ದಾರೆ.


ಇದನ್ನೂ ಓದಿ: ಮಾಜಿ IAS ಕಣ್ಣನ್ ಗೋಪಿನಾಥನ್ ಅವರಿಗೆ ಕಾಶ್ಮೀರಿ ವಿದ್ಯಾರ್ಥಿಯಿಂದ ಭಾವನಾತ್ಮಕ ಪತ್ರ


ಮ್ಮ Facebook ಪುಟಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...