Homeಮುಖಪುಟ2020ರ ಪ್ರತಿಷ್ಟಿತ ಪುಲಿಟ್ಜೆರ್ ಪ್ರಶಸ್ತಿ ಗೆದ್ದ ಕಾಶ್ಮೀರದ ಪತ್ರಕರ್ತರು ಸೆರೆಹಿಡಿದ ಫೋಟೊಗಳು

2020ರ ಪ್ರತಿಷ್ಟಿತ ಪುಲಿಟ್ಜೆರ್ ಪ್ರಶಸ್ತಿ ಗೆದ್ದ ಕಾಶ್ಮೀರದ ಪತ್ರಕರ್ತರು ಸೆರೆಹಿಡಿದ ಫೋಟೊಗಳು

- Advertisement -
- Advertisement -

2020ರ ಪುಲಿಟ್ಜೆರ್ ಪ್ರಶಸ್ತಿ ಜಮ್ಮುಕಾಶ್ಮೀರದ ಮೂವರು ಛಾಯಚಿತ್ರ ಪತ್ರಕರ್ತರಿಗೆ ಲಭಿಸಿದೆ. ಕೊರೊನಾ ಕಾರಣ ಪ್ರಶಸ್ತಿಗಳನ್ನು ಸಾಂಕೇತಿಕವಾಗಿ ಘೋಷಿಸಲಾಯಿತು.

ಅಸೋಸಿಯೇಟೆಡ್ ಪ್ರೆಸ್ ಛಾಯಾಗ್ರಾಹಕರಾದ ದಾರ್ ಯಾಸಿನ್, ಮುಖ್ತಾರ್ ಖಾನ್, ಮತ್ತು ಚನ್ನಿ ಆನಂದ್ ಅವರು ಕಳೆದ ವರ್ಷ ಆರ್ಟಿಕಲ್ 370 ರ ಅಡಿಯಲ್ಲಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಕಾಶ್ಮೀರದಲ್ಲಿನ ಲಾಕ್ ಡೌನನ್ನು ಸೆರೆಹಿಡಿಯುವಲ್ಲಿ ಅವರು ಮಾಡಿದ ಕಾರ್ಯಗಳಿಗಾಗಿ ಬಹುಮಾನಗಳನ್ನು ಗೆದ್ದರು.

ಆರ್ಟಿಕಲ್ 370 ನ್ನು ರದ್ದು ಮಾಡಿದ ನಂತರ, ಫೋನ್‌ಗಳು ಹಾಗೂ ಇಂಟರ್ನೆಟ್ ಸೇವೆಯನ್ನು ತಡೆ ಹಿಡಿದು ಜಮ್ಮುಕಾಶ್ಮೀರದಾದ್ಯಂತ ಕರ್ಫ್ಯೂ ಹಾಗೂ ಲಾಕ್ ಡೌನ್ ಮಾಡಲಾಗಿತ್ತು. ಮುಖ್ಯವಾಗಿ ಫೋನು ಹಾಗೂ ಇಂಟರ್ ನೆಟ್ ಕಡಿತದಿಂದಾಗಿ ಕಾಶ್ಮೀರದ ಜನ ಜೀವನದ ಪರಿಸ್ಥಿತಿಗಳನ್ನು ಲಾಕ್‌ಡೌನ್ ಪರಿಸ್ಥಿತಿಯಲ್ಲಿ ಜಗತ್ತಿಗೆ ತೋರಿಸುವುದು ಕಷ್ಟಕರವಾಗಿತ್ತು.

ಪ್ರಶಸ್ತಿ ಗೆದ್ದವರ ಕೆಲ ಫೋಟೊಗಳು ಈ ಕೆಳಗಿವೆ.

ಆದರೆ ಮೂವರು ಫೋಟೊ ಜರ್ನಲಿಸ್ಟ್‌ಗಳು ಪ್ರತಿಭಟನೆ, ಪೊಲೀಸ್ ಮತ್ತು ಅರೆಸೈನಿಕರ ನಡೆ ಮತ್ತು ದೈನಂದಿನ ಜೀವನದ ರಸ್ತೆ ತಡೆಗಳ ಚಿತ್ರಗಳನ್ನು ಸೆರೆಹಿಡಿದು, ಕೆಲವೊಮ್ಮೆ ಅಪರಿಚಿತರ ಮನೆಗಳಿಂದ ಕವರ್ ಪಡೆದುಕೊಂಡು ತರಕಾರಿ ಚೀಲಗಳಲ್ಲಿ ಕ್ಯಾಮೆರಾಗಳನ್ನು ಅಡಗಿಸಿ ನಂತರ ವಿಮಾನ ನಿಲ್ದಾಣಕ್ಕೆ ತೆರಳಿ ಪ್ರಯಾಣಿಕರೊಂದಿಗೆ ನವದೆಹಲಿಯ ಅಸೋಸಿಯೇಟೆಡ್ ಪ್ರೆಸ್ ಕಚೇರಿಗೆ ಫೋಟೋ ಫೈಲ್‌ಗಳನ್ನು ಕೊಂಡೊಯ್ಯಲು ಮನವೊಲಿಸಿದದ್ದರು.

ಪುಲಿಟ್ಜರ್ 1
ಕಾಶ್ಮೀರಿಗಳು 2019 ರ ಡಿಸೆಂಬರ್‌ನಲ್ಲಿ ಶ್ರೀನಗರದ ಸೂಫಿ ಸಂತರ ದರ್ಗಾದ ಹೊರಗೆ ಪ್ರಾರ್ಥನೆ ಸಲ್ಲಿಸುತ್ತಿರುವುದು. ಈ ಚಿತ್ರ 3 ಪ್ರಶಸ್ತಿ ವಿಜೇತ ಛಾಯಾಚಿತ್ರ ಪತ್ರಕರ್ತರ ಛಾಯಾಚಿತ್ರಗಳ ಸರಣಿಯ ಭಾಗವಾಗಿತ್ತು.

ವಿಜೇತರಲ್ಲಿ ಒಬ್ಬರಾದ ಯಾಸಿನ್ “ಇದು ಯಾವಾಗಲೂ ಇಲಿ ಮತ್ತು ಬೆಕ್ಕಿನ ಆಟ, ಇಂತಹ ಕಷ್ಟಡಗಳು ನಮ್ಮನ್ನು ಎಂದಿಗೂ ಮೌನವಾಗದಂತೆ ಗಟ್ಟಿಗೊಳಿಸುತ್ತದೆ. ಬಹುಮಾನಕ್ಕೆ ನಾನು ಆಯ್ಕೆಯಾಗಿದ್ದು ನನ್ನ ಸಹೋದ್ಯೋಗಿಗಳ ಮೂಲಕ ಕೇಳಿ ತುಂಬಾ ಖುಷಿಗೊಂಡೆ. ಇದಕ್ಕಾಗಿ ನಾವು ತುಂಬಾ ಶ್ರಮಿಸಿದ್ಧೇವೆ. ಬೆಂಬಲ ನೀಡಿದ ನಮ್ಮ ಕುಟುಂಬ ಹಾಗೂ ಸ್ನೇಹಿತರಿಗೆ ಕೃತಜ್ಞರಾಗಿರುತ್ತೇವೆ.”

ಫೋಟೋ ಕೃಪೆ: ದಾರ್ ಯಾಸಿನ್

ಬಹುಮಾನವನ್ನು ನಿರ್ವಾಹಕರಾದ ಡಾನಾ ಕ್ಯಾನೆಡಿ ಯೂಟ್ಯೂಬ್‌ನಲ್ಲಿ ಲೈವ್ ಸ್ಟ್ರೀಮ್ ಮೂಲಕ ಪ್ರಕಟಿಸಿದರು. ಜಮ್ಮುಕಾಶ್ಮೀರದಲ್ಲಿ ಲಾಕ್‌ಡೌನ್ ಮತ್ತು ಸಂಪರ್ಕ ನಿರ್ಬಂಧದ ಮಧ್ಯೆ ಜನ ಜೀವನದ ಗಮನಾರ್ಹ ಚಿತ್ರಗಳನ್ನು ಸೆರೆ ಹಿಡಿದಿದ್ದಕ್ಕಾಗಿ ಈ ಪ್ರಶಸ್ತಿಗಳನ್ನು ನೀಡಲಾಯಿತು.

ಫೋಟೋ ಕ್ರೆಡಿಟ್: ಚನ್ನಿ ಆನಂದ್

ಆದರೆ ವಿಪರ್ಯಾಸವೇನೆಂದರೆ ಈ ಪತ್ರಕರ್ತರಿಗೆ ಪುಲಿಟ್ಜೆರ್ ಬಹುಮಾನ ಘೋಷಿಸುವಾಗ ಈ ಕಡೆ ಕಾಶ್ಮೀರದಲ್ಲಿ “ರಾಷ್ಟ್ರ ವಿರೋಧಿ” ಚಟುವಟಿಕೆ ಮಾಡಿದ್ದಾರೆಂದು ಮೂವರು ಕಾಶ್ಮೀರಿ ಪತ್ರಕರ್ತರರಾದ ಪೀರ್ಜಾಡಾ ಆಶಿಕ್, ಗೌಹರ್ ಗೀಲಾನಿ ಮತ್ತು ಮಸ್ರತ್ ಜಹ್ರಾ ಅವರನ್ನು ಬಂಧಿಸಲಾಗಿದೆ. ಫ್ರೀಲಾನ್ಸಿಂಗ್ ಫೋಟೊ ಜರ್ನಲಿಸ್ಟ್ ಆಗಿರುವ ಮಸ್ರತ್ ಜಹರಾ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ, ಇದರ ಅಡಿಯಲ್ಲಿ ಒಬ್ಬ ವ್ಯಕ್ತಿಯನ್ನು ಏಳು ವರ್ಷಗಳವರೆಗೆ ಜೈಲಿನಲ್ಲಿಡಬಹುದು.

ಪೀರ್ಜಾಡಾ ಆಶಿಕ್ (ಎಡ), ಗೌಹರ್ ಗೀಲಾನಿ (ಮಧ್ಯೆ), ಮತ್ತು ಮಸ್ರತ್ ಜಹ್ರಾ (ಬಲ) ಇವರೆಲ್ಲರೂ ಕಾಶ್ಮೀರಿ ಪತ್ರಕರ್ತರಾಗಿದ್ದಾರೆ.

ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರ ಪುತ್ರಿ ಟ್ವಿಟರ್ ಇಲ್ತಿಜಾ ಮುಫ್ತಿ ಅಸೋಸಿಯೇಟೆಡ್ ಪ್ರೆಸ್ ಪತ್ರಿಕೆಯ ಮೂವರು ಫೋಟೋ ಜರ್ನಲಿಸ್ಟ್‌ಗಳನ್ನು ತನ್ನ ತಾಯಿಯ ಟ್ವಿಟ್ಟರ್ ಖಾತೆಯಿಂದ ಅಭಿನಂದಿಸಿದ್ದಾರೆ.

ಕೇಂದ್ರ ಸರ್ಕಾರದಿಂದ ಈ ಪತ್ರಕರ್ತರಿಗೆ ಪ್ರಶಸ್ತಿ ಬಂದಿರುವುದಕ್ಕೆ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಆದರೆ ಒಮರ್ ಅಬ್ದುಲ್ಲಾ ಸೇರಿದಂತೆ ಹಲವರು ಇವರಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಬಹುಮಾನಿತರಿಗೆ ಅಭಿನಂದನಾ ಟ್ವೀಟ್ ಕಳುಹಿಸಿದ್ದಾರೆ.


ಇದನ್ನೂ ಓದಿ: ಮಾಜಿ IAS ಕಣ್ಣನ್ ಗೋಪಿನಾಥನ್ ಅವರಿಗೆ ಕಾಶ್ಮೀರಿ ವಿದ್ಯಾರ್ಥಿಯಿಂದ ಭಾವನಾತ್ಮಕ ಪತ್ರ


ಮ್ಮ Facebook ಪುಟಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...