Homeಮುಖಪುಟ2020ರ ಪ್ರತಿಷ್ಟಿತ ಪುಲಿಟ್ಜೆರ್ ಪ್ರಶಸ್ತಿ ಗೆದ್ದ ಕಾಶ್ಮೀರದ ಪತ್ರಕರ್ತರು ಸೆರೆಹಿಡಿದ ಫೋಟೊಗಳು

2020ರ ಪ್ರತಿಷ್ಟಿತ ಪುಲಿಟ್ಜೆರ್ ಪ್ರಶಸ್ತಿ ಗೆದ್ದ ಕಾಶ್ಮೀರದ ಪತ್ರಕರ್ತರು ಸೆರೆಹಿಡಿದ ಫೋಟೊಗಳು

- Advertisement -
- Advertisement -

2020ರ ಪುಲಿಟ್ಜೆರ್ ಪ್ರಶಸ್ತಿ ಜಮ್ಮುಕಾಶ್ಮೀರದ ಮೂವರು ಛಾಯಚಿತ್ರ ಪತ್ರಕರ್ತರಿಗೆ ಲಭಿಸಿದೆ. ಕೊರೊನಾ ಕಾರಣ ಪ್ರಶಸ್ತಿಗಳನ್ನು ಸಾಂಕೇತಿಕವಾಗಿ ಘೋಷಿಸಲಾಯಿತು.

ಅಸೋಸಿಯೇಟೆಡ್ ಪ್ರೆಸ್ ಛಾಯಾಗ್ರಾಹಕರಾದ ದಾರ್ ಯಾಸಿನ್, ಮುಖ್ತಾರ್ ಖಾನ್, ಮತ್ತು ಚನ್ನಿ ಆನಂದ್ ಅವರು ಕಳೆದ ವರ್ಷ ಆರ್ಟಿಕಲ್ 370 ರ ಅಡಿಯಲ್ಲಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಕಾಶ್ಮೀರದಲ್ಲಿನ ಲಾಕ್ ಡೌನನ್ನು ಸೆರೆಹಿಡಿಯುವಲ್ಲಿ ಅವರು ಮಾಡಿದ ಕಾರ್ಯಗಳಿಗಾಗಿ ಬಹುಮಾನಗಳನ್ನು ಗೆದ್ದರು.

ಆರ್ಟಿಕಲ್ 370 ನ್ನು ರದ್ದು ಮಾಡಿದ ನಂತರ, ಫೋನ್‌ಗಳು ಹಾಗೂ ಇಂಟರ್ನೆಟ್ ಸೇವೆಯನ್ನು ತಡೆ ಹಿಡಿದು ಜಮ್ಮುಕಾಶ್ಮೀರದಾದ್ಯಂತ ಕರ್ಫ್ಯೂ ಹಾಗೂ ಲಾಕ್ ಡೌನ್ ಮಾಡಲಾಗಿತ್ತು. ಮುಖ್ಯವಾಗಿ ಫೋನು ಹಾಗೂ ಇಂಟರ್ ನೆಟ್ ಕಡಿತದಿಂದಾಗಿ ಕಾಶ್ಮೀರದ ಜನ ಜೀವನದ ಪರಿಸ್ಥಿತಿಗಳನ್ನು ಲಾಕ್‌ಡೌನ್ ಪರಿಸ್ಥಿತಿಯಲ್ಲಿ ಜಗತ್ತಿಗೆ ತೋರಿಸುವುದು ಕಷ್ಟಕರವಾಗಿತ್ತು.

ಪ್ರಶಸ್ತಿ ಗೆದ್ದವರ ಕೆಲ ಫೋಟೊಗಳು ಈ ಕೆಳಗಿವೆ.

ಆದರೆ ಮೂವರು ಫೋಟೊ ಜರ್ನಲಿಸ್ಟ್‌ಗಳು ಪ್ರತಿಭಟನೆ, ಪೊಲೀಸ್ ಮತ್ತು ಅರೆಸೈನಿಕರ ನಡೆ ಮತ್ತು ದೈನಂದಿನ ಜೀವನದ ರಸ್ತೆ ತಡೆಗಳ ಚಿತ್ರಗಳನ್ನು ಸೆರೆಹಿಡಿದು, ಕೆಲವೊಮ್ಮೆ ಅಪರಿಚಿತರ ಮನೆಗಳಿಂದ ಕವರ್ ಪಡೆದುಕೊಂಡು ತರಕಾರಿ ಚೀಲಗಳಲ್ಲಿ ಕ್ಯಾಮೆರಾಗಳನ್ನು ಅಡಗಿಸಿ ನಂತರ ವಿಮಾನ ನಿಲ್ದಾಣಕ್ಕೆ ತೆರಳಿ ಪ್ರಯಾಣಿಕರೊಂದಿಗೆ ನವದೆಹಲಿಯ ಅಸೋಸಿಯೇಟೆಡ್ ಪ್ರೆಸ್ ಕಚೇರಿಗೆ ಫೋಟೋ ಫೈಲ್‌ಗಳನ್ನು ಕೊಂಡೊಯ್ಯಲು ಮನವೊಲಿಸಿದದ್ದರು.

ಪುಲಿಟ್ಜರ್ 1
ಕಾಶ್ಮೀರಿಗಳು 2019 ರ ಡಿಸೆಂಬರ್‌ನಲ್ಲಿ ಶ್ರೀನಗರದ ಸೂಫಿ ಸಂತರ ದರ್ಗಾದ ಹೊರಗೆ ಪ್ರಾರ್ಥನೆ ಸಲ್ಲಿಸುತ್ತಿರುವುದು. ಈ ಚಿತ್ರ 3 ಪ್ರಶಸ್ತಿ ವಿಜೇತ ಛಾಯಾಚಿತ್ರ ಪತ್ರಕರ್ತರ ಛಾಯಾಚಿತ್ರಗಳ ಸರಣಿಯ ಭಾಗವಾಗಿತ್ತು.

ವಿಜೇತರಲ್ಲಿ ಒಬ್ಬರಾದ ಯಾಸಿನ್ “ಇದು ಯಾವಾಗಲೂ ಇಲಿ ಮತ್ತು ಬೆಕ್ಕಿನ ಆಟ, ಇಂತಹ ಕಷ್ಟಡಗಳು ನಮ್ಮನ್ನು ಎಂದಿಗೂ ಮೌನವಾಗದಂತೆ ಗಟ್ಟಿಗೊಳಿಸುತ್ತದೆ. ಬಹುಮಾನಕ್ಕೆ ನಾನು ಆಯ್ಕೆಯಾಗಿದ್ದು ನನ್ನ ಸಹೋದ್ಯೋಗಿಗಳ ಮೂಲಕ ಕೇಳಿ ತುಂಬಾ ಖುಷಿಗೊಂಡೆ. ಇದಕ್ಕಾಗಿ ನಾವು ತುಂಬಾ ಶ್ರಮಿಸಿದ್ಧೇವೆ. ಬೆಂಬಲ ನೀಡಿದ ನಮ್ಮ ಕುಟುಂಬ ಹಾಗೂ ಸ್ನೇಹಿತರಿಗೆ ಕೃತಜ್ಞರಾಗಿರುತ್ತೇವೆ.”

ಫೋಟೋ ಕೃಪೆ: ದಾರ್ ಯಾಸಿನ್

ಬಹುಮಾನವನ್ನು ನಿರ್ವಾಹಕರಾದ ಡಾನಾ ಕ್ಯಾನೆಡಿ ಯೂಟ್ಯೂಬ್‌ನಲ್ಲಿ ಲೈವ್ ಸ್ಟ್ರೀಮ್ ಮೂಲಕ ಪ್ರಕಟಿಸಿದರು. ಜಮ್ಮುಕಾಶ್ಮೀರದಲ್ಲಿ ಲಾಕ್‌ಡೌನ್ ಮತ್ತು ಸಂಪರ್ಕ ನಿರ್ಬಂಧದ ಮಧ್ಯೆ ಜನ ಜೀವನದ ಗಮನಾರ್ಹ ಚಿತ್ರಗಳನ್ನು ಸೆರೆ ಹಿಡಿದಿದ್ದಕ್ಕಾಗಿ ಈ ಪ್ರಶಸ್ತಿಗಳನ್ನು ನೀಡಲಾಯಿತು.

ಫೋಟೋ ಕ್ರೆಡಿಟ್: ಚನ್ನಿ ಆನಂದ್

ಆದರೆ ವಿಪರ್ಯಾಸವೇನೆಂದರೆ ಈ ಪತ್ರಕರ್ತರಿಗೆ ಪುಲಿಟ್ಜೆರ್ ಬಹುಮಾನ ಘೋಷಿಸುವಾಗ ಈ ಕಡೆ ಕಾಶ್ಮೀರದಲ್ಲಿ “ರಾಷ್ಟ್ರ ವಿರೋಧಿ” ಚಟುವಟಿಕೆ ಮಾಡಿದ್ದಾರೆಂದು ಮೂವರು ಕಾಶ್ಮೀರಿ ಪತ್ರಕರ್ತರರಾದ ಪೀರ್ಜಾಡಾ ಆಶಿಕ್, ಗೌಹರ್ ಗೀಲಾನಿ ಮತ್ತು ಮಸ್ರತ್ ಜಹ್ರಾ ಅವರನ್ನು ಬಂಧಿಸಲಾಗಿದೆ. ಫ್ರೀಲಾನ್ಸಿಂಗ್ ಫೋಟೊ ಜರ್ನಲಿಸ್ಟ್ ಆಗಿರುವ ಮಸ್ರತ್ ಜಹರಾ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ, ಇದರ ಅಡಿಯಲ್ಲಿ ಒಬ್ಬ ವ್ಯಕ್ತಿಯನ್ನು ಏಳು ವರ್ಷಗಳವರೆಗೆ ಜೈಲಿನಲ್ಲಿಡಬಹುದು.

ಪೀರ್ಜಾಡಾ ಆಶಿಕ್ (ಎಡ), ಗೌಹರ್ ಗೀಲಾನಿ (ಮಧ್ಯೆ), ಮತ್ತು ಮಸ್ರತ್ ಜಹ್ರಾ (ಬಲ) ಇವರೆಲ್ಲರೂ ಕಾಶ್ಮೀರಿ ಪತ್ರಕರ್ತರಾಗಿದ್ದಾರೆ.

ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರ ಪುತ್ರಿ ಟ್ವಿಟರ್ ಇಲ್ತಿಜಾ ಮುಫ್ತಿ ಅಸೋಸಿಯೇಟೆಡ್ ಪ್ರೆಸ್ ಪತ್ರಿಕೆಯ ಮೂವರು ಫೋಟೋ ಜರ್ನಲಿಸ್ಟ್‌ಗಳನ್ನು ತನ್ನ ತಾಯಿಯ ಟ್ವಿಟ್ಟರ್ ಖಾತೆಯಿಂದ ಅಭಿನಂದಿಸಿದ್ದಾರೆ.

ಕೇಂದ್ರ ಸರ್ಕಾರದಿಂದ ಈ ಪತ್ರಕರ್ತರಿಗೆ ಪ್ರಶಸ್ತಿ ಬಂದಿರುವುದಕ್ಕೆ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಆದರೆ ಒಮರ್ ಅಬ್ದುಲ್ಲಾ ಸೇರಿದಂತೆ ಹಲವರು ಇವರಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಬಹುಮಾನಿತರಿಗೆ ಅಭಿನಂದನಾ ಟ್ವೀಟ್ ಕಳುಹಿಸಿದ್ದಾರೆ.


ಇದನ್ನೂ ಓದಿ: ಮಾಜಿ IAS ಕಣ್ಣನ್ ಗೋಪಿನಾಥನ್ ಅವರಿಗೆ ಕಾಶ್ಮೀರಿ ವಿದ್ಯಾರ್ಥಿಯಿಂದ ಭಾವನಾತ್ಮಕ ಪತ್ರ


ಮ್ಮ Facebook ಪುಟಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...