Homeಮುಖಪುಟದಿಲ್ಲಿ ಗಲಭೆಗಳ ಕುರಿತು ಗೃಹ ಸಚಿವ ಅಮಿತ್ ಶಾಗೆ ಮೂರು ಪ್ರಶ್ನೆಗಳು..

ದಿಲ್ಲಿ ಗಲಭೆಗಳ ಕುರಿತು ಗೃಹ ಸಚಿವ ಅಮಿತ್ ಶಾಗೆ ಮೂರು ಪ್ರಶ್ನೆಗಳು..

ಒಂದು ಘಟನೆಯಲ್ಲಂತೂ ದಿಲ್ಲಿ ಪೊಲೀಸರೇ ಮುಸ್ಲಿಮ್ ಯುವಕನೊಬ್ಬನ ಸಾವಿಗೆ ಕಾರಣವಾಗಿರುವುದಕ್ಕೆ ಸ್ಪಷ್ಟ ದಾಖಲೆಗಳಿವೆ. ಆತನಿಗೆ ಮತ್ತು ಇನ್ನೊಬ್ಬ ಯುವಕನಿಗೆ ಪೊಲೀಸರೇ ಹೊಡೆದು ರಾಷ್ಟ್ರಗೀತೆ ಹಾಡುವಂತೆ ಒತ್ತಾಯಿಸುವ ಘಟನೆ ಹಲವಾರು ವಿಡಿಯೋಗಳಲ್ಲಿ ದಾಖಲಾಗಿದೆ.

- Advertisement -
- Advertisement -

ಕೃಪೆ: ಸ್ಕ್ರೋಲ್‌ -ರೋಹನ್ ವೆಂಕಟರಾಮಕೃಷ್ಣನ್

ಅನುವಾದ: ನಿಖಿಲ್ ಕೋಲ್ಪೆ

ದಿಲ್ಲಿ ಪೊಲೀಸರು ಕೇಂದ್ರ ಗೃಹಸಚಿವ ಅಮಿತ್ ಶಾ ಅಡಿಯಲ್ಲಿ ಕೆಲಸ ಮಾಡುತ್ತಾರೆ. ಹೀಗಿರುವಾಗ ಅವರ ಕ್ರೌರ್ಯ ಹಿಂಸೆಗಳ ಬಗ್ಗೆ ವಿಡಿಯೋ ಸಾಕ್ಷ್ಯಗಳು ಇರುವಾಗ ಈ ಅಮಿತ್ ಶಾ ಅವರನ್ನು ಸಮರ್ಥಿಸಿ ಭಾಷಣ ಮಾಡುವುದು ಹೇಗೆ ಸಾಧ್ಯ?

ದಶಕಗಳ ನಂತರ ಅತ್ಯಂತ ಕ್ರೂರ ಕೋಮುಗಲಭೆಗೆ ಒಳಗಾಗಿ 50ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡ ದಿಲ್ಲಿಯ ಘಟನೆಗಳ ಕುರಿತು ಕೇಂದ್ರ ಗೃಹಸಚಿವ ಅಮಿತ್ ಶಾ ಕೊನೆಗೂ ಸಂಸತ್ತಿನಲ್ಲಿ ಬಾಯಿ ಬಿಟ್ಟಿದ್ದಾರೆ. ದಿಲ್ಲಿಯಲ್ಲಿ ನಡೆದ ಗಲಭೆಗಳ ಕುರಿತು ಲೋಕಸಭೆಯಲ್ಲಿ ನಡೆದ ಚರ್ಚೆಗಳ ಕೊನೆಯಲ್ಲಿ, “ಇದೊಂದು ಅತ್ಯಂತ ಯೋಜಿತ ಸಂಚಿನ ಹೊರತು” ಸಾಧ್ಯವಿರಲಿಲ್ಲ ಎಂದು ಹೇಳಿದ್ದಾರೆ. ಗಲಭೆಗಳ ನಿಯಂತ್ರಣಕ್ಕೆ 36 ಗಂಟೆಗಳನ್ನು ತೆಗೆದುಕೊಂಡ ದಿಲ್ಲಿ ಪೊಲೀಸರನ್ನು ಅವರು ಶ್ಲಾಘಿಸಿದ್ದಾರೆ. ಅದೂ ಕೂಡಾ ಪೊಲೀಸರು ತಮ್ಮ ನಾಲಾಯಕ್‌ತನ ಮತ್ತು ನೇರ ಶಾಮೀಲಾತಿಯ ಆರೋಪಗಳಿಗೆ ಗುರಿಯಾಗಿರುವಾಗ…!!

ಈಶಾನ್ಯ ದಿಲ್ಲಿಯ ಮುಖ್ಯ ರಸ್ತೆಯೊಂದರಲ್ಲಿ ಪೌರತ್ವ ಕಾಯಿದೆಗೆ ನಡೆದ ತಿದ್ದುಪಡಿಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ದಾಳಿಗಳು ನಡೆದ ಬಳಿಕ ಫೆಬ್ರವರಿ 23ರಂದು ಗಲಭೆಗಳು ಆರಂಭಗೊಂಡಿದ್ದವು. ಭಾರತೀಯ ಜನತಾ ಪಕ್ಷದ ನಾಯಕ ಕಪಿಲ್ ಮಿಶ್ರಾ ಜನರನ್ನು ಬೀದಿಗಿಳಿಯುವಂತೆ ಪ್ರಚೋದನೆ ನೀಡಿದ್ದರು. ಫೆಬ್ರವರಿ 26ರಂದು ಕೊನೆಗೂ ಶಾಂತಿ ಸ್ಥಾಪನೆಯಾಗುವ ಹೊತ್ತಿಗೆ ಮುಖ್ಯವಾಗಿ ಮುಸ್ಲಿಮರನ್ನೇ ಗುರಿಯಾಗಿಸಿದ ದೊಡ್ಡ ಪ್ರಮಾಣದ ಹಿಂಸಾಚಾರ, ಲೂಟಿ, ಬೆಂಕಿಹಚ್ಚುವಿಕೆ ನಡೆದವು. 53 ಜನರು ಪ್ರಾಣ ಕಳೆದುಕೊಂಡರು ಮತ್ತು ಬಹಳಷ್ಟು ಜನರ ಜೀವನವೇ ನಷ್ಟವಾಯಿತು.

ಮೂರು ದಿನಗಳ ಹಿಂಸಾಚಾರದ ಬಳಿಕ ಎದ್ದಿರುವ ಹಲವಾರು ಪ್ರಶ್ನೆಗಳಿಗೆ ಉತ್ತರಿಸುವ ಬದಲು ಅಮಿತ್ ಶಾ ಭಾಷಣವು ಕೇವಲ ರಾಜಧಾನಿ ಮತ್ತು ದೇಶದ ಜನರ ರಕ್ಷಣೆ ಹೊತ್ತಿರುವ, ಕಾನೂನು ಮತ್ತು ಶಿಸ್ತು ಕಾಪಾಡುವ ಜವಾಬ್ದಾರಿ ಹೊತ್ತಿರುವ ಅಧಿಕಾರಿಗಳಿಂದ ಇನ್ನಷ್ಟು ವಿವರಣೆಗಳನ್ನು ಮಾತ್ರ ಕೇಳುತ್ತಿದೆ.

ಗುಪ್ತಚರ ವೈಫಲ್ಯವೇ?

ದಿಲ್ಲಿ ಗಲಭೆಗಳು “ಅತ್ಯಂತ ಯೋಜಿತ ಸಂಚಿನ” ಪರಿಣಾಮ ಎಂದು ಅಮಿತ್ ಶಾ ಹೇಳಿಕೊಂಡಿದ್ದಾರೆ. ಉತ್ತರಪ್ರದೇಶದಿಂದ ಬಂದ ನೂರಾರು ಜನರು ಇದರಲ್ಲಿ ಶಾಮೀಲಾಗಿದ್ದಾರೆಂದು ತನಿಖೆಗಳು ತಿಳಿಸಿವೆ ಎಂದೂ ಹೇಳಿದ್ದಾರೆ. ಮೊದಲೇ ಹೇಳಿರುವಂತೆ ಹಿಂಸಾಚಾರಗಳು ಕಪಿಲ್ ಮಿಶ್ರಾ ಭಾಷಣದ ಬಳಿಕ ಆರಂಭವಾಗಿದ್ದವು. ಮಿಶ್ರಾ ಭಾಷಣ ಈಶಾನ್ಯ ದಿಲ್ಲಿಯ ಅತ್ಯುನ್ನತ ಪೊಲೀಸ್ ಅಧಿಕಾರಿಯ ಕಣ್ಣುಗಳ ಮುಂದೆಯೇ ನಡೆದಿತ್ತು ಎಂದು ವರದಿಗಳು ಹೇಳುತ್ತವೆ. ಪ್ರತಿಭಟನಕಾರರನ್ನು ತೆರವು ಮಾಡಲು ಪೊಲೀಸರಿಗೆ ಗಡು ನೀಡಿದ್ದ ಮಿಶ್ರಾ, ಇಲ್ಲದಿದ್ದರೆ ತಾನು ಮತ್ತು ತನ್ನ ಬೆಂಬಲಿಗರೇ ಅವರನ್ನು ತೆರವು ಮಾಡುವುದಾಗಿ ಬೆದರಿಕೆ ಹಾಕಿದ್ದ.

ಫೆಬ್ರವರಿ 24ರ ಭಾನುವಾರವೇ ಸಂಭಾವ್ಯ ಹಿಂಸಾಚಾರಗಳ ಕುರಿತು ಕನಿಷ್ಟ ಆರು ಗುಪ್ತಚರ ವರದಿಗಳನ್ನು ಸಲ್ಲಿಸಲಾಗಿತ್ತು. ಮೇಲಾಗಿ ಗಲಭೆ ಎಬ್ಬಿಸುವುದಕ್ಕೆ ಜನರು ಬಂದಿದ್ದ ಉತ್ತರ ಪ್ರದೇಶದಲ್ಲಿ ಬಿಜೆಪಿಯ ಆಡಳಿತವಿದೆ ಮತ್ತು ಗಲಭೆ ನಿಯಂತ್ರಿಸಬೇಕಾದ ದಿಲ್ಲಿ ಪೊಲೀಸರು ಅಮಿತ್ ಶಾ ನಿಯಂತ್ರಣದಲ್ಲಿಯೇ ಇದ್ದಾರೆ. ಹೀಗಿರುವಾಗ ಇದೊಂದು ಅತ್ಯಂತ ಯೋಜಿತ ಸಂಚಿನ ಪರಿಣಾಮವೇ ಆಗಿದ್ದರೆ, ಹಿಂಸಾಚಾರ ನಡೆಯಲಿದೆ ಎಂದು ಮೊದಲೇ ಗುಪ್ತಚರ ವರದಿಗಳು ಬಂದಿದ್ದರೆ, ಮೂರು ದಿನಗಳ ಕಾಲ ಹಿಂಸಾಚಾರ ಯಾಕೆ ಮುಂದುವರಿಯಿತು?

ಮುಖ ಚಹರೆ ಗುರುತು ತಂತ್ರಜ್ಞಾನ?

ಮುಖ ಚಹರೆ ಗುರುತು ಪತ್ತೆ ತಂತ್ರಜ್ಞಾನ ಬಳಸಿ ಹಿಂಸಾಚಾರದಲ್ಲಿ ಪಾಲುಗೊಂಡ 1,100ರಷ್ಟು ಜನರನ್ನು ಗುರುತಿಸಲಾಗಿದೆ ಎಂದು ಗೃಹಸಚಿವ ತನ್ನ ಭಾಷಣದಲ್ಲಿ ಹೇಳಿದ್ದಾರೆ. ಜನರ ಮತದಾರರ ಗುರುತುಚೀಟಿ, ಡ್ರೈವಿಂಗ್ ಲೈಸನ್ಸ್ ಮುಂತಾದ ಮಾಹಿತಿ ಸಂಗ್ರಹದಿಂದ ಸಿ.ಸಿ. ಕ್ಯಾಮರಾದ ಫೊಟೊಗಳನ್ನು ಹೋಲಿಸಿ ಈ ತಂತ್ರಜ್ಞಾನವು ಜನರನ್ನು ಗುರುತಿಸುತ್ತದೆ ಎಂದು ಅವರು ಹೇಳಿದ್ದಾರೆ. ಇದನ್ನು ಹೇಗೆ ಬಳಸಲಾಗುತ್ತದೆ ಎಂಬ ಬಗ್ಗೆ ಯಾವುದೇ ಸ್ಪಷ್ಟತೆಯಿಲ್ಲ. ಪೊಲೀಸರು ಬಳಸಿದಾಗ ಈ ಮುಖ ಚಹರೆ ಪತ್ತೆ ತಂತ್ರಜ್ಞಾನ ತೀರಾ ದೋಷಯುಕ್ತವಾಗಿದೆ ಎಂಬುದು ನಮಗೆ ಗೊತ್ತಿದೆ. ಇಂಗ್ಲೆಂಡ್‌ನಲ್ಲಿ ನಡೆದ ಒಂದು ಸಂಶೋಧನೆಯು ಅಲ್ಲಿನ ನಗರ ಪೊಲೀಸರು ಬಳಸುವ ಮುಖ ಚಹರೆ ಪತ್ತೆ ತಂತ್ರಜ್ಞಾನದಲ್ಲಿ ಐದರಲ್ಲಿ ನಾಲ್ಕು ಸಲ ಅಮಾಯಕ ಜನರನ್ನು ಗುರುತಿಸಲಾಗಿದೆ ಎಂದು ತಿಳಿಸುತ್ತದೆ.

ಇಂತಹಾ ತಂತ್ರಜ್ಞಾನಗಳು ಜನರು ಮತ್ತು ಮಾಹಿತಿಯನ್ನು ಕಂಪ್ಯೂಟರಿಗೆ ತುಂಬುವವರ ಪೂರ್ವಗ್ರಹಗಳನ್ನು ಪ್ರತಿಫಲಿಸುತ್ತವೆ ಎಂದೂ ಸಂಶೋಧಕರು ತೋರಿಸಿಕೊಟ್ಟಿದ್ದಾರೆ. ಯಾವುದೇ ಖಾಸಗಿತನ ರಕ್ಷಣಾ ಕಾಯಿದೆಯಾಗಲೀ, ಸ್ಪಷ್ಟ ನಿರ್ದೇಶನಗಳಾಗಲೀ ಇಲ್ಲದೇ ಇರುವಾಗ ಈ ತಂತ್ರಜ್ಞಾನ ತೀರಾ ಅಪಾಯಕಾರಿಯಗಬಲ್ಲದು.

ಪೊಲೀಸರ ಮೇಲೇ ಪೊಲೀಸ್?

ಒಂದು ಬೀಸು ಹೇಳಿಕೆಯಲ್ಲಿ ಅಮಿತ್ ಶಾ ದಿಲ್ಲಿ ಪೊಲೀಸರ ಮೇಲಿರುವ ಎಲ್ಲಾ ಆರೋಪಗಳನ್ನು ಬದಿಗೆ ಗುಡಿಸಿ, ಇಂತಹಾ ಆರೋಪಗಳು ಅವರ ನೈತಿಕ ಸ್ಥೈರ್ಯ ಕುಸಿಯುವಂತೆ ಮಾಡುತ್ತವೆ ಎಂದು ಹೇಳಿ ಕೈತೊಳೆದುಕೊಂಡಿದ್ದಾರೆ. ಅಷ್ಟು ಮಾತ್ರವಲ್ಲ, 36 ಗಂಟೆಗಳ ದೀರ್ಘಕಾಲದಲ್ಲಿ ಗಲಭೆಯನ್ನು ನಿಯಂತ್ರಿಸಿದಕ್ಕಾಗಿ ದಿಲ್ಲಿ ಪೊಲೀಸರನ್ನು ಅಭಿನಂದಿಸಿದ್ದಾರೆ. ಆ ಸಮಯದಲ್ಲಿ ಯಾಕೆ ಅವರು ಹೆಚ್ಚು ಸಕ್ರಿಯವಾಗಿ ಕೆಲಸಮಾಡಲಿಲ್ಲ ಎಂಬುದಕ್ಕೆ ತೀರಾ ದುರ್ಬಲ ಸಮರ್ಥನೆಯನ್ನೂ ನೀಡಿದ್ದಾರೆ. ಅದೆಂದರೆ, ತಾನು ತನ್ನ ಸಂಸದೀಯ ಕ್ಷೇತ್ರವಾದ ಅಹಮದಾಬಾದ್‌ಗೆ ಯುಎಸ್‌ಎ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂದಿದ್ದುದರಿಂದ ತಾನು ಅಲ್ಲಿ ವ್ಯಸ್ತವಾಗಿದ್ದೆ; ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್‌ಗೆ ಜವಾಬ್ದಾರಿ ತೆಗೆದುಕೊಳ್ಳುವಂತೆ ಹೇಳಿದ್ದೆ ಎಂದು ನುಣುಚಿಕೊಂಡಿರುವುದು.

ಆದರೆ, ವಿಡಿಯೋ ದಾಖಲೆಗಳೂ, ವರದಿಗಳೂ ಪೊಲೀಸರು ಮುಸ್ಲಿಮ್ ವಿರೋಧಿ ಗುಂಪುಗಳ ಪರ ಪಕ್ಷಪಾತದಿಂದ ವರ್ತಿಸಿರುವುದು ಮತ್ತು ನೇರವಾಗಿ ಕಲ್ಲೆಸತದಲ್ಲಿ ಭಾಗವಹಿಸಿರುವುದು ಸ್ಪಷ್ಟವಾಗಿದೆ.

ಒಂದು ಘಟನೆಯಲ್ಲಂತೂ ದಿಲ್ಲಿ ಪೊಲೀಸರೇ ಮುಸ್ಲಿಮ್ ಯುವಕನೊಬ್ಬನ ಸಾವಿಗೆ ಕಾರಣವಾಗಿರುವುದಕ್ಕೆ ಸ್ಪಷ್ಟ ದಾಖಲೆಗಳಿವೆ. ಆತನಿಗೆ ಮತ್ತು ಇನ್ನೊಬ್ಬ ಯುವಕನಿಗೆ ಪೊಲೀಸರೇ ಹೊಡೆದು ರಾಷ್ಟ್ರಗೀತೆ ಹಾಡುವಂತೆ ಒತ್ತಾಯಿಸುವ ಘಟನೆ ಹಲವಾರು ವಿಡಿಯೋಗಳಲ್ಲಿ ದಾಖಲಾಗಿದೆ.

ದಿಲ್ಲಿ ಪೊಲೀಸರು ಹೇಗೆ ಗಲಭೆಗಳ ನಂತರದಲ್ಲಿ ಹಲವಾರು ದೂರುಗಳನ್ನು ದಾಖಲಿಸಲು ನಿರಾಕರಿಸಿ ತನಿಖೆಯನ್ನೂ ನಡೆಸಲಿಲ್ಲ ಎಂಬ ಬಗ್ಗೆ ‘ಸ್ಕ್ರೋಲ್ ಡಾಟ್ ಇನ್’ ವರದಿ ಮಾಡಿದೆ. ದಿಲ್ಲಿ ಪೊಲೀಸರು ಪ್ರಶ್ನಾರ್ಹವಾಗಿ ವರ್ತಿಸುತ್ತಿರುವಾಗ, ಅದು ಹೇಗೆ ಈ ಅಮಿತ್ ಶಾ ಅವರಿಗೆ ಕ್ಲೀನ್ ಚಿಟ್ ಕೊಡಬಲ್ಲರು? ಗೃಹ ಸಚಿವ ಮತ್ತು ಸರಕಾರವೇ ದಿಲ್ಲಿ ಪೊಲೀಸರ ಧಣಿಗಳಾಗಿರುವಾಗ ಹೇಗೆ ಇದನ್ನು ಮಾಡಬಲ್ಲರು? ಆದುದರಿಂದ ಸರಕಾರವನ್ನು ಹೊರತುಪಡಿಸಿದ ಬೇರೊಂದು ಸ್ವತಂತ್ರ ಸಂಸ್ಥೆ ಇದರ ತನಿಖೆ ನಡೆಸುವುದು ನ್ಯಾಯವಲ್ಲವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...