Homeಮುಖಪುಟದಿಲ್ಲಿ ಗಲಭೆಗಳ ಕುರಿತು ಗೃಹ ಸಚಿವ ಅಮಿತ್ ಶಾಗೆ ಮೂರು ಪ್ರಶ್ನೆಗಳು..

ದಿಲ್ಲಿ ಗಲಭೆಗಳ ಕುರಿತು ಗೃಹ ಸಚಿವ ಅಮಿತ್ ಶಾಗೆ ಮೂರು ಪ್ರಶ್ನೆಗಳು..

ಒಂದು ಘಟನೆಯಲ್ಲಂತೂ ದಿಲ್ಲಿ ಪೊಲೀಸರೇ ಮುಸ್ಲಿಮ್ ಯುವಕನೊಬ್ಬನ ಸಾವಿಗೆ ಕಾರಣವಾಗಿರುವುದಕ್ಕೆ ಸ್ಪಷ್ಟ ದಾಖಲೆಗಳಿವೆ. ಆತನಿಗೆ ಮತ್ತು ಇನ್ನೊಬ್ಬ ಯುವಕನಿಗೆ ಪೊಲೀಸರೇ ಹೊಡೆದು ರಾಷ್ಟ್ರಗೀತೆ ಹಾಡುವಂತೆ ಒತ್ತಾಯಿಸುವ ಘಟನೆ ಹಲವಾರು ವಿಡಿಯೋಗಳಲ್ಲಿ ದಾಖಲಾಗಿದೆ.

- Advertisement -
- Advertisement -

ಕೃಪೆ: ಸ್ಕ್ರೋಲ್‌ -ರೋಹನ್ ವೆಂಕಟರಾಮಕೃಷ್ಣನ್

ಅನುವಾದ: ನಿಖಿಲ್ ಕೋಲ್ಪೆ

ದಿಲ್ಲಿ ಪೊಲೀಸರು ಕೇಂದ್ರ ಗೃಹಸಚಿವ ಅಮಿತ್ ಶಾ ಅಡಿಯಲ್ಲಿ ಕೆಲಸ ಮಾಡುತ್ತಾರೆ. ಹೀಗಿರುವಾಗ ಅವರ ಕ್ರೌರ್ಯ ಹಿಂಸೆಗಳ ಬಗ್ಗೆ ವಿಡಿಯೋ ಸಾಕ್ಷ್ಯಗಳು ಇರುವಾಗ ಈ ಅಮಿತ್ ಶಾ ಅವರನ್ನು ಸಮರ್ಥಿಸಿ ಭಾಷಣ ಮಾಡುವುದು ಹೇಗೆ ಸಾಧ್ಯ?

ದಶಕಗಳ ನಂತರ ಅತ್ಯಂತ ಕ್ರೂರ ಕೋಮುಗಲಭೆಗೆ ಒಳಗಾಗಿ 50ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡ ದಿಲ್ಲಿಯ ಘಟನೆಗಳ ಕುರಿತು ಕೇಂದ್ರ ಗೃಹಸಚಿವ ಅಮಿತ್ ಶಾ ಕೊನೆಗೂ ಸಂಸತ್ತಿನಲ್ಲಿ ಬಾಯಿ ಬಿಟ್ಟಿದ್ದಾರೆ. ದಿಲ್ಲಿಯಲ್ಲಿ ನಡೆದ ಗಲಭೆಗಳ ಕುರಿತು ಲೋಕಸಭೆಯಲ್ಲಿ ನಡೆದ ಚರ್ಚೆಗಳ ಕೊನೆಯಲ್ಲಿ, “ಇದೊಂದು ಅತ್ಯಂತ ಯೋಜಿತ ಸಂಚಿನ ಹೊರತು” ಸಾಧ್ಯವಿರಲಿಲ್ಲ ಎಂದು ಹೇಳಿದ್ದಾರೆ. ಗಲಭೆಗಳ ನಿಯಂತ್ರಣಕ್ಕೆ 36 ಗಂಟೆಗಳನ್ನು ತೆಗೆದುಕೊಂಡ ದಿಲ್ಲಿ ಪೊಲೀಸರನ್ನು ಅವರು ಶ್ಲಾಘಿಸಿದ್ದಾರೆ. ಅದೂ ಕೂಡಾ ಪೊಲೀಸರು ತಮ್ಮ ನಾಲಾಯಕ್‌ತನ ಮತ್ತು ನೇರ ಶಾಮೀಲಾತಿಯ ಆರೋಪಗಳಿಗೆ ಗುರಿಯಾಗಿರುವಾಗ…!!

ಈಶಾನ್ಯ ದಿಲ್ಲಿಯ ಮುಖ್ಯ ರಸ್ತೆಯೊಂದರಲ್ಲಿ ಪೌರತ್ವ ಕಾಯಿದೆಗೆ ನಡೆದ ತಿದ್ದುಪಡಿಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ದಾಳಿಗಳು ನಡೆದ ಬಳಿಕ ಫೆಬ್ರವರಿ 23ರಂದು ಗಲಭೆಗಳು ಆರಂಭಗೊಂಡಿದ್ದವು. ಭಾರತೀಯ ಜನತಾ ಪಕ್ಷದ ನಾಯಕ ಕಪಿಲ್ ಮಿಶ್ರಾ ಜನರನ್ನು ಬೀದಿಗಿಳಿಯುವಂತೆ ಪ್ರಚೋದನೆ ನೀಡಿದ್ದರು. ಫೆಬ್ರವರಿ 26ರಂದು ಕೊನೆಗೂ ಶಾಂತಿ ಸ್ಥಾಪನೆಯಾಗುವ ಹೊತ್ತಿಗೆ ಮುಖ್ಯವಾಗಿ ಮುಸ್ಲಿಮರನ್ನೇ ಗುರಿಯಾಗಿಸಿದ ದೊಡ್ಡ ಪ್ರಮಾಣದ ಹಿಂಸಾಚಾರ, ಲೂಟಿ, ಬೆಂಕಿಹಚ್ಚುವಿಕೆ ನಡೆದವು. 53 ಜನರು ಪ್ರಾಣ ಕಳೆದುಕೊಂಡರು ಮತ್ತು ಬಹಳಷ್ಟು ಜನರ ಜೀವನವೇ ನಷ್ಟವಾಯಿತು.

ಮೂರು ದಿನಗಳ ಹಿಂಸಾಚಾರದ ಬಳಿಕ ಎದ್ದಿರುವ ಹಲವಾರು ಪ್ರಶ್ನೆಗಳಿಗೆ ಉತ್ತರಿಸುವ ಬದಲು ಅಮಿತ್ ಶಾ ಭಾಷಣವು ಕೇವಲ ರಾಜಧಾನಿ ಮತ್ತು ದೇಶದ ಜನರ ರಕ್ಷಣೆ ಹೊತ್ತಿರುವ, ಕಾನೂನು ಮತ್ತು ಶಿಸ್ತು ಕಾಪಾಡುವ ಜವಾಬ್ದಾರಿ ಹೊತ್ತಿರುವ ಅಧಿಕಾರಿಗಳಿಂದ ಇನ್ನಷ್ಟು ವಿವರಣೆಗಳನ್ನು ಮಾತ್ರ ಕೇಳುತ್ತಿದೆ.

ಗುಪ್ತಚರ ವೈಫಲ್ಯವೇ?

ದಿಲ್ಲಿ ಗಲಭೆಗಳು “ಅತ್ಯಂತ ಯೋಜಿತ ಸಂಚಿನ” ಪರಿಣಾಮ ಎಂದು ಅಮಿತ್ ಶಾ ಹೇಳಿಕೊಂಡಿದ್ದಾರೆ. ಉತ್ತರಪ್ರದೇಶದಿಂದ ಬಂದ ನೂರಾರು ಜನರು ಇದರಲ್ಲಿ ಶಾಮೀಲಾಗಿದ್ದಾರೆಂದು ತನಿಖೆಗಳು ತಿಳಿಸಿವೆ ಎಂದೂ ಹೇಳಿದ್ದಾರೆ. ಮೊದಲೇ ಹೇಳಿರುವಂತೆ ಹಿಂಸಾಚಾರಗಳು ಕಪಿಲ್ ಮಿಶ್ರಾ ಭಾಷಣದ ಬಳಿಕ ಆರಂಭವಾಗಿದ್ದವು. ಮಿಶ್ರಾ ಭಾಷಣ ಈಶಾನ್ಯ ದಿಲ್ಲಿಯ ಅತ್ಯುನ್ನತ ಪೊಲೀಸ್ ಅಧಿಕಾರಿಯ ಕಣ್ಣುಗಳ ಮುಂದೆಯೇ ನಡೆದಿತ್ತು ಎಂದು ವರದಿಗಳು ಹೇಳುತ್ತವೆ. ಪ್ರತಿಭಟನಕಾರರನ್ನು ತೆರವು ಮಾಡಲು ಪೊಲೀಸರಿಗೆ ಗಡು ನೀಡಿದ್ದ ಮಿಶ್ರಾ, ಇಲ್ಲದಿದ್ದರೆ ತಾನು ಮತ್ತು ತನ್ನ ಬೆಂಬಲಿಗರೇ ಅವರನ್ನು ತೆರವು ಮಾಡುವುದಾಗಿ ಬೆದರಿಕೆ ಹಾಕಿದ್ದ.

ಫೆಬ್ರವರಿ 24ರ ಭಾನುವಾರವೇ ಸಂಭಾವ್ಯ ಹಿಂಸಾಚಾರಗಳ ಕುರಿತು ಕನಿಷ್ಟ ಆರು ಗುಪ್ತಚರ ವರದಿಗಳನ್ನು ಸಲ್ಲಿಸಲಾಗಿತ್ತು. ಮೇಲಾಗಿ ಗಲಭೆ ಎಬ್ಬಿಸುವುದಕ್ಕೆ ಜನರು ಬಂದಿದ್ದ ಉತ್ತರ ಪ್ರದೇಶದಲ್ಲಿ ಬಿಜೆಪಿಯ ಆಡಳಿತವಿದೆ ಮತ್ತು ಗಲಭೆ ನಿಯಂತ್ರಿಸಬೇಕಾದ ದಿಲ್ಲಿ ಪೊಲೀಸರು ಅಮಿತ್ ಶಾ ನಿಯಂತ್ರಣದಲ್ಲಿಯೇ ಇದ್ದಾರೆ. ಹೀಗಿರುವಾಗ ಇದೊಂದು ಅತ್ಯಂತ ಯೋಜಿತ ಸಂಚಿನ ಪರಿಣಾಮವೇ ಆಗಿದ್ದರೆ, ಹಿಂಸಾಚಾರ ನಡೆಯಲಿದೆ ಎಂದು ಮೊದಲೇ ಗುಪ್ತಚರ ವರದಿಗಳು ಬಂದಿದ್ದರೆ, ಮೂರು ದಿನಗಳ ಕಾಲ ಹಿಂಸಾಚಾರ ಯಾಕೆ ಮುಂದುವರಿಯಿತು?

ಮುಖ ಚಹರೆ ಗುರುತು ತಂತ್ರಜ್ಞಾನ?

ಮುಖ ಚಹರೆ ಗುರುತು ಪತ್ತೆ ತಂತ್ರಜ್ಞಾನ ಬಳಸಿ ಹಿಂಸಾಚಾರದಲ್ಲಿ ಪಾಲುಗೊಂಡ 1,100ರಷ್ಟು ಜನರನ್ನು ಗುರುತಿಸಲಾಗಿದೆ ಎಂದು ಗೃಹಸಚಿವ ತನ್ನ ಭಾಷಣದಲ್ಲಿ ಹೇಳಿದ್ದಾರೆ. ಜನರ ಮತದಾರರ ಗುರುತುಚೀಟಿ, ಡ್ರೈವಿಂಗ್ ಲೈಸನ್ಸ್ ಮುಂತಾದ ಮಾಹಿತಿ ಸಂಗ್ರಹದಿಂದ ಸಿ.ಸಿ. ಕ್ಯಾಮರಾದ ಫೊಟೊಗಳನ್ನು ಹೋಲಿಸಿ ಈ ತಂತ್ರಜ್ಞಾನವು ಜನರನ್ನು ಗುರುತಿಸುತ್ತದೆ ಎಂದು ಅವರು ಹೇಳಿದ್ದಾರೆ. ಇದನ್ನು ಹೇಗೆ ಬಳಸಲಾಗುತ್ತದೆ ಎಂಬ ಬಗ್ಗೆ ಯಾವುದೇ ಸ್ಪಷ್ಟತೆಯಿಲ್ಲ. ಪೊಲೀಸರು ಬಳಸಿದಾಗ ಈ ಮುಖ ಚಹರೆ ಪತ್ತೆ ತಂತ್ರಜ್ಞಾನ ತೀರಾ ದೋಷಯುಕ್ತವಾಗಿದೆ ಎಂಬುದು ನಮಗೆ ಗೊತ್ತಿದೆ. ಇಂಗ್ಲೆಂಡ್‌ನಲ್ಲಿ ನಡೆದ ಒಂದು ಸಂಶೋಧನೆಯು ಅಲ್ಲಿನ ನಗರ ಪೊಲೀಸರು ಬಳಸುವ ಮುಖ ಚಹರೆ ಪತ್ತೆ ತಂತ್ರಜ್ಞಾನದಲ್ಲಿ ಐದರಲ್ಲಿ ನಾಲ್ಕು ಸಲ ಅಮಾಯಕ ಜನರನ್ನು ಗುರುತಿಸಲಾಗಿದೆ ಎಂದು ತಿಳಿಸುತ್ತದೆ.

ಇಂತಹಾ ತಂತ್ರಜ್ಞಾನಗಳು ಜನರು ಮತ್ತು ಮಾಹಿತಿಯನ್ನು ಕಂಪ್ಯೂಟರಿಗೆ ತುಂಬುವವರ ಪೂರ್ವಗ್ರಹಗಳನ್ನು ಪ್ರತಿಫಲಿಸುತ್ತವೆ ಎಂದೂ ಸಂಶೋಧಕರು ತೋರಿಸಿಕೊಟ್ಟಿದ್ದಾರೆ. ಯಾವುದೇ ಖಾಸಗಿತನ ರಕ್ಷಣಾ ಕಾಯಿದೆಯಾಗಲೀ, ಸ್ಪಷ್ಟ ನಿರ್ದೇಶನಗಳಾಗಲೀ ಇಲ್ಲದೇ ಇರುವಾಗ ಈ ತಂತ್ರಜ್ಞಾನ ತೀರಾ ಅಪಾಯಕಾರಿಯಗಬಲ್ಲದು.

ಪೊಲೀಸರ ಮೇಲೇ ಪೊಲೀಸ್?

ಒಂದು ಬೀಸು ಹೇಳಿಕೆಯಲ್ಲಿ ಅಮಿತ್ ಶಾ ದಿಲ್ಲಿ ಪೊಲೀಸರ ಮೇಲಿರುವ ಎಲ್ಲಾ ಆರೋಪಗಳನ್ನು ಬದಿಗೆ ಗುಡಿಸಿ, ಇಂತಹಾ ಆರೋಪಗಳು ಅವರ ನೈತಿಕ ಸ್ಥೈರ್ಯ ಕುಸಿಯುವಂತೆ ಮಾಡುತ್ತವೆ ಎಂದು ಹೇಳಿ ಕೈತೊಳೆದುಕೊಂಡಿದ್ದಾರೆ. ಅಷ್ಟು ಮಾತ್ರವಲ್ಲ, 36 ಗಂಟೆಗಳ ದೀರ್ಘಕಾಲದಲ್ಲಿ ಗಲಭೆಯನ್ನು ನಿಯಂತ್ರಿಸಿದಕ್ಕಾಗಿ ದಿಲ್ಲಿ ಪೊಲೀಸರನ್ನು ಅಭಿನಂದಿಸಿದ್ದಾರೆ. ಆ ಸಮಯದಲ್ಲಿ ಯಾಕೆ ಅವರು ಹೆಚ್ಚು ಸಕ್ರಿಯವಾಗಿ ಕೆಲಸಮಾಡಲಿಲ್ಲ ಎಂಬುದಕ್ಕೆ ತೀರಾ ದುರ್ಬಲ ಸಮರ್ಥನೆಯನ್ನೂ ನೀಡಿದ್ದಾರೆ. ಅದೆಂದರೆ, ತಾನು ತನ್ನ ಸಂಸದೀಯ ಕ್ಷೇತ್ರವಾದ ಅಹಮದಾಬಾದ್‌ಗೆ ಯುಎಸ್‌ಎ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂದಿದ್ದುದರಿಂದ ತಾನು ಅಲ್ಲಿ ವ್ಯಸ್ತವಾಗಿದ್ದೆ; ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್‌ಗೆ ಜವಾಬ್ದಾರಿ ತೆಗೆದುಕೊಳ್ಳುವಂತೆ ಹೇಳಿದ್ದೆ ಎಂದು ನುಣುಚಿಕೊಂಡಿರುವುದು.

ಆದರೆ, ವಿಡಿಯೋ ದಾಖಲೆಗಳೂ, ವರದಿಗಳೂ ಪೊಲೀಸರು ಮುಸ್ಲಿಮ್ ವಿರೋಧಿ ಗುಂಪುಗಳ ಪರ ಪಕ್ಷಪಾತದಿಂದ ವರ್ತಿಸಿರುವುದು ಮತ್ತು ನೇರವಾಗಿ ಕಲ್ಲೆಸತದಲ್ಲಿ ಭಾಗವಹಿಸಿರುವುದು ಸ್ಪಷ್ಟವಾಗಿದೆ.

ಒಂದು ಘಟನೆಯಲ್ಲಂತೂ ದಿಲ್ಲಿ ಪೊಲೀಸರೇ ಮುಸ್ಲಿಮ್ ಯುವಕನೊಬ್ಬನ ಸಾವಿಗೆ ಕಾರಣವಾಗಿರುವುದಕ್ಕೆ ಸ್ಪಷ್ಟ ದಾಖಲೆಗಳಿವೆ. ಆತನಿಗೆ ಮತ್ತು ಇನ್ನೊಬ್ಬ ಯುವಕನಿಗೆ ಪೊಲೀಸರೇ ಹೊಡೆದು ರಾಷ್ಟ್ರಗೀತೆ ಹಾಡುವಂತೆ ಒತ್ತಾಯಿಸುವ ಘಟನೆ ಹಲವಾರು ವಿಡಿಯೋಗಳಲ್ಲಿ ದಾಖಲಾಗಿದೆ.

ದಿಲ್ಲಿ ಪೊಲೀಸರು ಹೇಗೆ ಗಲಭೆಗಳ ನಂತರದಲ್ಲಿ ಹಲವಾರು ದೂರುಗಳನ್ನು ದಾಖಲಿಸಲು ನಿರಾಕರಿಸಿ ತನಿಖೆಯನ್ನೂ ನಡೆಸಲಿಲ್ಲ ಎಂಬ ಬಗ್ಗೆ ‘ಸ್ಕ್ರೋಲ್ ಡಾಟ್ ಇನ್’ ವರದಿ ಮಾಡಿದೆ. ದಿಲ್ಲಿ ಪೊಲೀಸರು ಪ್ರಶ್ನಾರ್ಹವಾಗಿ ವರ್ತಿಸುತ್ತಿರುವಾಗ, ಅದು ಹೇಗೆ ಈ ಅಮಿತ್ ಶಾ ಅವರಿಗೆ ಕ್ಲೀನ್ ಚಿಟ್ ಕೊಡಬಲ್ಲರು? ಗೃಹ ಸಚಿವ ಮತ್ತು ಸರಕಾರವೇ ದಿಲ್ಲಿ ಪೊಲೀಸರ ಧಣಿಗಳಾಗಿರುವಾಗ ಹೇಗೆ ಇದನ್ನು ಮಾಡಬಲ್ಲರು? ಆದುದರಿಂದ ಸರಕಾರವನ್ನು ಹೊರತುಪಡಿಸಿದ ಬೇರೊಂದು ಸ್ವತಂತ್ರ ಸಂಸ್ಥೆ ಇದರ ತನಿಖೆ ನಡೆಸುವುದು ನ್ಯಾಯವಲ್ಲವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...