Homeಮುಖಪುಟಭೀಕರ ಅಪಘಾತದಲ್ಲಿ ಮೂವರು ಸಹೋದರಿಯರು ಸಾವು : ದುರಂತ ಸ್ಥಳದಲ್ಲಿ ಹೆತ್ತವರ ಆಕ್ರಂದನ

ಭೀಕರ ಅಪಘಾತದಲ್ಲಿ ಮೂವರು ಸಹೋದರಿಯರು ಸಾವು : ದುರಂತ ಸ್ಥಳದಲ್ಲಿ ಹೆತ್ತವರ ಆಕ್ರಂದನ

- Advertisement -
- Advertisement -

“ದಯವಿಟ್ಟು ನಮ್ಮ ಮಕ್ಕಳನ್ನು ವಾಪಸ್ ತಂದುಕೊಡಿ” ಎಂದು ತೆಲಂಗಾಣ ಅಪಘಾತದ ಸ್ಥಳದಲ್ಲಿ ನೆರೆದಿದ್ದ ಸಾವಿರಾರು ಜನರ ಮುಂದೆ ಮೂವರು ಹೆಣ್ಣು ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಹೃದಯ ವಿದ್ರಾವಕವಾಗಿತ್ತು ಎಂದು ವರದಿಗಳು ಹೇಳಿವೆ.

ಇಂದು (ನ.3, ಸೋಮವಾರ) ಬೆಳಿಗ್ಗೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಮಂಡಲದ ಮಿರ್ಜಗೂಡ ಬಳಿ ಹೈದರಾಬಾದ್-ಬಿಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಲ್ಲಿಕಲ್ಲುಗಳನ್ನು ತುಂಬಿದ್ದ ಲಾರಿ ಮತ್ತು ಸಾರಿಗೆ ಸಂಸ್ಥೆಯ ಬಸ್‌ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಈ ದುರಂತದಲ್ಲಿ ಸಾವನ್ನಪ್ಪಿದ 20 ಜನರಲ್ಲಿ ತನುಷಾ, ಸಾಯಿಪ್ರಿಯಾ ಮತ್ತು ನಂದಿನಿ ಎಂಬ ಮೂವರು ಸಹೋದರಿಯೂ ಸೇರಿದ್ದಾರೆ.

ಇವರ ತಾಯಿ ಅಂಬಿಕಾರ ಘಟನಾ ಸ್ಥಳದಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದರು. “ಓ ದೇವರೆ..ನನ್ನ ಮಕ್ಕಳನ್ನು ವಾಪಸ್ ತಂದು ಕೊಡುವವರು ಯಾರು? ಅವರೇನು ತಪ್ಪು ಮಾಡಿದ್ದರು?” ಎಂಬ ತಾಯಿಯ ಆಕ್ರಂದನ ನೆರೆದಿದ್ದವರ ಕಣ್ಣಾಲಿಗಳನ್ನು ಒದ್ದೆಯಾಗಿಸಿತು ಎಂದು ವರದಿಗಳು ತಿಳಿಸಿವೆ.

ಮೂವರು ಸಹೋದರಿಯರು ಶುಕ್ರವಾರ (ಅ.31) ಹೈದರಾಬಾದ್‌ಗೆ ಹಿಂತಿರುಗಬೇಕಿತ್ತು, ಆದರೆ, ತಾಯಿ ಅಂಬಿಕಾ ವಾರಾಂತ್ಯದಲ್ಲಿ ಅವರನ್ನು ಮನೆಯಲ್ಲೇ ಇರಲು ಕೇಳಿಕೊಂಡಿದ್ದರು. ತನ್ನ ಹೆಣ್ಣುಮಕ್ಕಳೊಂದಿಗೆ ಕೆಲವು ದಿನಗಳನ್ನು ಕಳೆಯಬೇಕೆಂಬ ಆಸೆ ಆ ತಾಯಿಯದ್ದಾಗಿತ್ತು.

ಇಂದು ಬೆಳಿಗ್ಗೆ ಮಕ್ಕಳನ್ನು ಹೈದರಾಬಾದ್ ರೈಲು ಹತ್ತಿಸಲು ತಂದೆ ಯೆಲ್ಲಯ್ಯ ಸ್ಥಳೀಯ ರೈಲು ನಿಲ್ದಾಣಕ್ಕೆ ಕರೆದೊಯ್ದಿದ್ದರು. ಆದರೆ, ಅವರಿಗೆ ರೈಲು ತಪ್ಪಿತ್ತು. ಹಾಗಾಗಿ, ಮೂವರು ಸಹೋದರಿಯರು ಹೈದರಾಬಾದ್ ಬಸ್‌ ಹತ್ತಿದ್ದರು.

ಮಕ್ಕಳನ್ನು ಬಸ್‌ ಹತ್ತಿಸಿ ಯಲ್ಲಯ್ಯ ಮನೆಗೆ ಹಿಂದಿರುಗಿದ ಕೆಲವೇ ಹೊತ್ತಿನಲ್ಲಿ ಮೂವರ ಸಾವಿನ ಸುದ್ದಿ ಬರ ಸಿಡಿಲು ಬಡಿದಂತೆ ಬಂದಿದೆ. ಜೀವಂತ ಇದ್ದಾಗ ಒಬ್ಬರಿಗೊಬ್ಬರು ಬಹಳ ಅನ್ಯೋನ್ಯತೆಯಿಂದ ಇದ್ದ ಮೂವರು ಸಹೋದರಿಯರು ಸಾವಲ್ಲೂ ಒಂದಾದರು ಎಂದು ವರದಿಗಳು ಹೇಳಿವೆ.

ಮೃತ ಮೂವರು ಸಹೋದರಿಯರ ಊರು ರಂಗಾರೆಡ್ಡಿ ಜಿಲ್ಲೆಯ ಗಾಂಧಿನಗರದ ವಡ್ಡೇರಗಲ್ಲಿ. ಇವರು ಹೈದರಾಬಾದ್‌ನಲ್ಲಿ ಓದುತ್ತಿದ್ದರು. ತನುಷಾ ಎಂಬಿಎ ವ್ಯಾಸಂಗ ಮಾಡುತ್ತಿದ್ದರೆ, ಆಕೆಯ ಸಹೋದರಿ ಸಾಯಿ ಪ್ರಿಯಾ ಪದವಿ ಕೋರ್ಸ್‌ನ ಅಂತಿಮ ವರ್ಷದಲ್ಲಿದ್ದರು. ಇನ್ನೊಬ್ಬರು ನಂದಿನಿ ಪದವಿ ಕೋರ್ಸ್‌ನ ಮೊದಲ ವರ್ಷದಲ್ಲಿದ್ದರು. ಇವರೆಲ್ಲರ ಹಿರಿಯ ಸಹೋದರಿ ಅನುಷಾ ಅವರ ಮದುವೆ ಕೇವಲ 20 ದಿನಗಳ ಹಿಂದೆ, ಅಂದರೆ ಅಕ್ಟೋಬರ್ 17 ರಂದು ನಡೆದಿತ್ತು. ಆ ಮದುವೆ ನಿಮಿತ್ತ ಮೂವರು ಊರಿಗೆ ಹೋಗಿದ್ದರು.

ಬಸ್ ಅಪಘಾತದಲ್ಲಿ ಸಾವನ್ನಪ್ಪಿದ ಇನೊಬ್ಬರು ಹೆಣ್ಣು ಮಗಳು ಅಖಿಲಾ ರೆಡ್ಡಿಯ ತಾಯಿ ಕೂಡ ಘಟನಾ ಸ್ಥಳದಲ್ಲಿ ಆಕ್ರಂದನ ವ್ಯಕ್ತಪಡಿಸುತ್ತಿದ್ದರು. “ರಸ್ತೆ ಪ್ರಯಾಣದ ಬಗ್ಗೆ ನನಗೆ ಸದಾ ಭಯ ಇತ್ತು. ಇವತ್ತು ನನ್ನ ಮಗಳನ್ನು ಕಳೆದುಕೊಳ್ಳುವ ಮೂಲಕ ನನ್ನ ಆತಂಕ ನಿಜವಾಗಿದೆ” ಎಂದು ಅಖಿಲಾ ಅವರ ತಾಯಿ ಸುದ್ದಿಗಾರರಿಗೆ ನೋವಿನಲ್ಲಿ ಹೇಳಿದ್ದಾರೆ.

ಅಖಿಲಾ ರೆಡ್ಡಿ ಯಲಾಲ್ ಮಂಡಲದ ಲಕ್ಷ್ಮೀನಾರಾಯಣ ಪುರ ಗ್ರಾಮದವರು. ಹೈದರಾಬಾದ್‌ನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದರು.

ದುರಂತ ಘಟನೆಯಲ್ಲಿ ತಾಯಿ ಮತ್ತು ಆಕೆಯ ಮೂರು ತಿಂಗಳ ಕಂದಮ್ಮ ಸಾವನ್ನಪ್ಪಿರುವ ಮತ್ತೊಂದು ಹೃದಯ ವಿದ್ರಾವಕ ಫೋಟೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಜಲ್ಲಿಕಲ್ಲು ತುಂಬಿಕೊಂಡು ಹೈದರಾಬಾದ್ ಕಡೆಯಿಂದ ಬಿಜಾಪುರ ಕಡೆಗೆ ಹೋಗುತ್ತಿದ್ದ ಲಾರಿಯೊಂದು ತಾಂಡೂರ್‌ನಿಂದ ಹೈದರಾಬಾದ್ ಕಡೆಗೆ ತೆರಳುತ್ತಿದ್ದ ತೆಲಂಗಾಣ ಸಾರಿಗೆ ಸಂಸ್ಥೆಯ (ಟಿಜಿಎಸ್‌ಆರ್‌ಟಿಸಿ) ಬಸ್‌ಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಚೆವೆಲ್ಲಾ ಮಂಡಲದ ಮಿರ್ಜಗೂಡ ಬಳಿ ಹೈದರಾಬಾದ್-ಬಿಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.

ವಾರದ ಹಿಂದೆ ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್‌ ಕರ್ನೂಲ್ ಜಿಲ್ಲೆಯಲ್ಲಿ ಬೆಂಕಿಗಾಹುತಿಯಾಗಿ 21 ಜನರು ಸಜೀವ ದಹನವಾಗಿದ್ದರು. ಹಲವರು ಗಾಯಗೊಂಡಿದ್ದರು. ಆ ಘಟನೆ ಕಣ್ಣಿಂದ ಮಾಸುವ ಮುನ್ನವೇ ತೆಲುಗು ನಾಡಿನಲ್ಲಿ ಮತ್ತೊಂದು ಭೀಕರ ದುರಂತ ಸಂಭವಿಸಿದೆ.

ತೆಲಂಗಾಣದ ರಂಗಾರೆಡ್ಡಿಯಲ್ಲಿ ಭೀಕರ ರಸ್ತೆ ಅಪಘಾತ : 20 ಜನರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...