Homeಮುಖಪುಟಭೀಕರ ಅಪಘಾತದಲ್ಲಿ ಮೂವರು ಸಹೋದರಿಯರು ಸಾವು : ದುರಂತ ಸ್ಥಳದಲ್ಲಿ ಹೆತ್ತವರ ಆಕ್ರಂದನ

ಭೀಕರ ಅಪಘಾತದಲ್ಲಿ ಮೂವರು ಸಹೋದರಿಯರು ಸಾವು : ದುರಂತ ಸ್ಥಳದಲ್ಲಿ ಹೆತ್ತವರ ಆಕ್ರಂದನ

- Advertisement -
- Advertisement -

“ದಯವಿಟ್ಟು ನಮ್ಮ ಮಕ್ಕಳನ್ನು ವಾಪಸ್ ತಂದುಕೊಡಿ” ಎಂದು ತೆಲಂಗಾಣ ಅಪಘಾತದ ಸ್ಥಳದಲ್ಲಿ ನೆರೆದಿದ್ದ ಸಾವಿರಾರು ಜನರ ಮುಂದೆ ಮೂವರು ಹೆಣ್ಣು ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಹೃದಯ ವಿದ್ರಾವಕವಾಗಿತ್ತು ಎಂದು ವರದಿಗಳು ಹೇಳಿವೆ.

ಇಂದು (ನ.3, ಸೋಮವಾರ) ಬೆಳಿಗ್ಗೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಮಂಡಲದ ಮಿರ್ಜಗೂಡ ಬಳಿ ಹೈದರಾಬಾದ್-ಬಿಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಲ್ಲಿಕಲ್ಲುಗಳನ್ನು ತುಂಬಿದ್ದ ಲಾರಿ ಮತ್ತು ಸಾರಿಗೆ ಸಂಸ್ಥೆಯ ಬಸ್‌ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಈ ದುರಂತದಲ್ಲಿ ಸಾವನ್ನಪ್ಪಿದ 20 ಜನರಲ್ಲಿ ತನುಷಾ, ಸಾಯಿಪ್ರಿಯಾ ಮತ್ತು ನಂದಿನಿ ಎಂಬ ಮೂವರು ಸಹೋದರಿಯೂ ಸೇರಿದ್ದಾರೆ.

ಇವರ ತಾಯಿ ಅಂಬಿಕಾರ ಘಟನಾ ಸ್ಥಳದಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದರು. “ಓ ದೇವರೆ..ನನ್ನ ಮಕ್ಕಳನ್ನು ವಾಪಸ್ ತಂದು ಕೊಡುವವರು ಯಾರು? ಅವರೇನು ತಪ್ಪು ಮಾಡಿದ್ದರು?” ಎಂಬ ತಾಯಿಯ ಆಕ್ರಂದನ ನೆರೆದಿದ್ದವರ ಕಣ್ಣಾಲಿಗಳನ್ನು ಒದ್ದೆಯಾಗಿಸಿತು ಎಂದು ವರದಿಗಳು ತಿಳಿಸಿವೆ.

ಮೂವರು ಸಹೋದರಿಯರು ಶುಕ್ರವಾರ (ಅ.31) ಹೈದರಾಬಾದ್‌ಗೆ ಹಿಂತಿರುಗಬೇಕಿತ್ತು, ಆದರೆ, ತಾಯಿ ಅಂಬಿಕಾ ವಾರಾಂತ್ಯದಲ್ಲಿ ಅವರನ್ನು ಮನೆಯಲ್ಲೇ ಇರಲು ಕೇಳಿಕೊಂಡಿದ್ದರು. ತನ್ನ ಹೆಣ್ಣುಮಕ್ಕಳೊಂದಿಗೆ ಕೆಲವು ದಿನಗಳನ್ನು ಕಳೆಯಬೇಕೆಂಬ ಆಸೆ ಆ ತಾಯಿಯದ್ದಾಗಿತ್ತು.

ಇಂದು ಬೆಳಿಗ್ಗೆ ಮಕ್ಕಳನ್ನು ಹೈದರಾಬಾದ್ ರೈಲು ಹತ್ತಿಸಲು ತಂದೆ ಯೆಲ್ಲಯ್ಯ ಸ್ಥಳೀಯ ರೈಲು ನಿಲ್ದಾಣಕ್ಕೆ ಕರೆದೊಯ್ದಿದ್ದರು. ಆದರೆ, ಅವರಿಗೆ ರೈಲು ತಪ್ಪಿತ್ತು. ಹಾಗಾಗಿ, ಮೂವರು ಸಹೋದರಿಯರು ಹೈದರಾಬಾದ್ ಬಸ್‌ ಹತ್ತಿದ್ದರು.

ಮಕ್ಕಳನ್ನು ಬಸ್‌ ಹತ್ತಿಸಿ ಯಲ್ಲಯ್ಯ ಮನೆಗೆ ಹಿಂದಿರುಗಿದ ಕೆಲವೇ ಹೊತ್ತಿನಲ್ಲಿ ಮೂವರ ಸಾವಿನ ಸುದ್ದಿ ಬರ ಸಿಡಿಲು ಬಡಿದಂತೆ ಬಂದಿದೆ. ಜೀವಂತ ಇದ್ದಾಗ ಒಬ್ಬರಿಗೊಬ್ಬರು ಬಹಳ ಅನ್ಯೋನ್ಯತೆಯಿಂದ ಇದ್ದ ಮೂವರು ಸಹೋದರಿಯರು ಸಾವಲ್ಲೂ ಒಂದಾದರು ಎಂದು ವರದಿಗಳು ಹೇಳಿವೆ.

ಮೃತ ಮೂವರು ಸಹೋದರಿಯರ ಊರು ರಂಗಾರೆಡ್ಡಿ ಜಿಲ್ಲೆಯ ಗಾಂಧಿನಗರದ ವಡ್ಡೇರಗಲ್ಲಿ. ಇವರು ಹೈದರಾಬಾದ್‌ನಲ್ಲಿ ಓದುತ್ತಿದ್ದರು. ತನುಷಾ ಎಂಬಿಎ ವ್ಯಾಸಂಗ ಮಾಡುತ್ತಿದ್ದರೆ, ಆಕೆಯ ಸಹೋದರಿ ಸಾಯಿ ಪ್ರಿಯಾ ಪದವಿ ಕೋರ್ಸ್‌ನ ಅಂತಿಮ ವರ್ಷದಲ್ಲಿದ್ದರು. ಇನ್ನೊಬ್ಬರು ನಂದಿನಿ ಪದವಿ ಕೋರ್ಸ್‌ನ ಮೊದಲ ವರ್ಷದಲ್ಲಿದ್ದರು. ಇವರೆಲ್ಲರ ಹಿರಿಯ ಸಹೋದರಿ ಅನುಷಾ ಅವರ ಮದುವೆ ಕೇವಲ 20 ದಿನಗಳ ಹಿಂದೆ, ಅಂದರೆ ಅಕ್ಟೋಬರ್ 17 ರಂದು ನಡೆದಿತ್ತು. ಆ ಮದುವೆ ನಿಮಿತ್ತ ಮೂವರು ಊರಿಗೆ ಹೋಗಿದ್ದರು.

ಬಸ್ ಅಪಘಾತದಲ್ಲಿ ಸಾವನ್ನಪ್ಪಿದ ಇನೊಬ್ಬರು ಹೆಣ್ಣು ಮಗಳು ಅಖಿಲಾ ರೆಡ್ಡಿಯ ತಾಯಿ ಕೂಡ ಘಟನಾ ಸ್ಥಳದಲ್ಲಿ ಆಕ್ರಂದನ ವ್ಯಕ್ತಪಡಿಸುತ್ತಿದ್ದರು. “ರಸ್ತೆ ಪ್ರಯಾಣದ ಬಗ್ಗೆ ನನಗೆ ಸದಾ ಭಯ ಇತ್ತು. ಇವತ್ತು ನನ್ನ ಮಗಳನ್ನು ಕಳೆದುಕೊಳ್ಳುವ ಮೂಲಕ ನನ್ನ ಆತಂಕ ನಿಜವಾಗಿದೆ” ಎಂದು ಅಖಿಲಾ ಅವರ ತಾಯಿ ಸುದ್ದಿಗಾರರಿಗೆ ನೋವಿನಲ್ಲಿ ಹೇಳಿದ್ದಾರೆ.

ಅಖಿಲಾ ರೆಡ್ಡಿ ಯಲಾಲ್ ಮಂಡಲದ ಲಕ್ಷ್ಮೀನಾರಾಯಣ ಪುರ ಗ್ರಾಮದವರು. ಹೈದರಾಬಾದ್‌ನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದರು.

ದುರಂತ ಘಟನೆಯಲ್ಲಿ ತಾಯಿ ಮತ್ತು ಆಕೆಯ ಮೂರು ತಿಂಗಳ ಕಂದಮ್ಮ ಸಾವನ್ನಪ್ಪಿರುವ ಮತ್ತೊಂದು ಹೃದಯ ವಿದ್ರಾವಕ ಫೋಟೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಜಲ್ಲಿಕಲ್ಲು ತುಂಬಿಕೊಂಡು ಹೈದರಾಬಾದ್ ಕಡೆಯಿಂದ ಬಿಜಾಪುರ ಕಡೆಗೆ ಹೋಗುತ್ತಿದ್ದ ಲಾರಿಯೊಂದು ತಾಂಡೂರ್‌ನಿಂದ ಹೈದರಾಬಾದ್ ಕಡೆಗೆ ತೆರಳುತ್ತಿದ್ದ ತೆಲಂಗಾಣ ಸಾರಿಗೆ ಸಂಸ್ಥೆಯ (ಟಿಜಿಎಸ್‌ಆರ್‌ಟಿಸಿ) ಬಸ್‌ಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಚೆವೆಲ್ಲಾ ಮಂಡಲದ ಮಿರ್ಜಗೂಡ ಬಳಿ ಹೈದರಾಬಾದ್-ಬಿಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.

ವಾರದ ಹಿಂದೆ ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್‌ ಕರ್ನೂಲ್ ಜಿಲ್ಲೆಯಲ್ಲಿ ಬೆಂಕಿಗಾಹುತಿಯಾಗಿ 21 ಜನರು ಸಜೀವ ದಹನವಾಗಿದ್ದರು. ಹಲವರು ಗಾಯಗೊಂಡಿದ್ದರು. ಆ ಘಟನೆ ಕಣ್ಣಿಂದ ಮಾಸುವ ಮುನ್ನವೇ ತೆಲುಗು ನಾಡಿನಲ್ಲಿ ಮತ್ತೊಂದು ಭೀಕರ ದುರಂತ ಸಂಭವಿಸಿದೆ.

ತೆಲಂಗಾಣದ ರಂಗಾರೆಡ್ಡಿಯಲ್ಲಿ ಭೀಕರ ರಸ್ತೆ ಅಪಘಾತ : 20 ಜನರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...