Homeಮುಖಪುಟಭೀಕರ ಅಪಘಾತದಲ್ಲಿ ಮೂವರು ಸಹೋದರಿಯರು ಸಾವು : ದುರಂತ ಸ್ಥಳದಲ್ಲಿ ಹೆತ್ತವರ ಆಕ್ರಂದನ

ಭೀಕರ ಅಪಘಾತದಲ್ಲಿ ಮೂವರು ಸಹೋದರಿಯರು ಸಾವು : ದುರಂತ ಸ್ಥಳದಲ್ಲಿ ಹೆತ್ತವರ ಆಕ್ರಂದನ

- Advertisement -
- Advertisement -

“ದಯವಿಟ್ಟು ನಮ್ಮ ಮಕ್ಕಳನ್ನು ವಾಪಸ್ ತಂದುಕೊಡಿ” ಎಂದು ತೆಲಂಗಾಣ ಅಪಘಾತದ ಸ್ಥಳದಲ್ಲಿ ನೆರೆದಿದ್ದ ಸಾವಿರಾರು ಜನರ ಮುಂದೆ ಮೂವರು ಹೆಣ್ಣು ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಹೃದಯ ವಿದ್ರಾವಕವಾಗಿತ್ತು ಎಂದು ವರದಿಗಳು ಹೇಳಿವೆ.

ಇಂದು (ನ.3, ಸೋಮವಾರ) ಬೆಳಿಗ್ಗೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಮಂಡಲದ ಮಿರ್ಜಗೂಡ ಬಳಿ ಹೈದರಾಬಾದ್-ಬಿಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಲ್ಲಿಕಲ್ಲುಗಳನ್ನು ತುಂಬಿದ್ದ ಲಾರಿ ಮತ್ತು ಸಾರಿಗೆ ಸಂಸ್ಥೆಯ ಬಸ್‌ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಈ ದುರಂತದಲ್ಲಿ ಸಾವನ್ನಪ್ಪಿದ 20 ಜನರಲ್ಲಿ ತನುಷಾ, ಸಾಯಿಪ್ರಿಯಾ ಮತ್ತು ನಂದಿನಿ ಎಂಬ ಮೂವರು ಸಹೋದರಿಯೂ ಸೇರಿದ್ದಾರೆ.

ಇವರ ತಾಯಿ ಅಂಬಿಕಾರ ಘಟನಾ ಸ್ಥಳದಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದರು. “ಓ ದೇವರೆ..ನನ್ನ ಮಕ್ಕಳನ್ನು ವಾಪಸ್ ತಂದು ಕೊಡುವವರು ಯಾರು? ಅವರೇನು ತಪ್ಪು ಮಾಡಿದ್ದರು?” ಎಂಬ ತಾಯಿಯ ಆಕ್ರಂದನ ನೆರೆದಿದ್ದವರ ಕಣ್ಣಾಲಿಗಳನ್ನು ಒದ್ದೆಯಾಗಿಸಿತು ಎಂದು ವರದಿಗಳು ತಿಳಿಸಿವೆ.

ಮೂವರು ಸಹೋದರಿಯರು ಶುಕ್ರವಾರ (ಅ.31) ಹೈದರಾಬಾದ್‌ಗೆ ಹಿಂತಿರುಗಬೇಕಿತ್ತು, ಆದರೆ, ತಾಯಿ ಅಂಬಿಕಾ ವಾರಾಂತ್ಯದಲ್ಲಿ ಅವರನ್ನು ಮನೆಯಲ್ಲೇ ಇರಲು ಕೇಳಿಕೊಂಡಿದ್ದರು. ತನ್ನ ಹೆಣ್ಣುಮಕ್ಕಳೊಂದಿಗೆ ಕೆಲವು ದಿನಗಳನ್ನು ಕಳೆಯಬೇಕೆಂಬ ಆಸೆ ಆ ತಾಯಿಯದ್ದಾಗಿತ್ತು.

ಇಂದು ಬೆಳಿಗ್ಗೆ ಮಕ್ಕಳನ್ನು ಹೈದರಾಬಾದ್ ರೈಲು ಹತ್ತಿಸಲು ತಂದೆ ಯೆಲ್ಲಯ್ಯ ಸ್ಥಳೀಯ ರೈಲು ನಿಲ್ದಾಣಕ್ಕೆ ಕರೆದೊಯ್ದಿದ್ದರು. ಆದರೆ, ಅವರಿಗೆ ರೈಲು ತಪ್ಪಿತ್ತು. ಹಾಗಾಗಿ, ಮೂವರು ಸಹೋದರಿಯರು ಹೈದರಾಬಾದ್ ಬಸ್‌ ಹತ್ತಿದ್ದರು.

ಮಕ್ಕಳನ್ನು ಬಸ್‌ ಹತ್ತಿಸಿ ಯಲ್ಲಯ್ಯ ಮನೆಗೆ ಹಿಂದಿರುಗಿದ ಕೆಲವೇ ಹೊತ್ತಿನಲ್ಲಿ ಮೂವರ ಸಾವಿನ ಸುದ್ದಿ ಬರ ಸಿಡಿಲು ಬಡಿದಂತೆ ಬಂದಿದೆ. ಜೀವಂತ ಇದ್ದಾಗ ಒಬ್ಬರಿಗೊಬ್ಬರು ಬಹಳ ಅನ್ಯೋನ್ಯತೆಯಿಂದ ಇದ್ದ ಮೂವರು ಸಹೋದರಿಯರು ಸಾವಲ್ಲೂ ಒಂದಾದರು ಎಂದು ವರದಿಗಳು ಹೇಳಿವೆ.

ಮೃತ ಮೂವರು ಸಹೋದರಿಯರ ಊರು ರಂಗಾರೆಡ್ಡಿ ಜಿಲ್ಲೆಯ ಗಾಂಧಿನಗರದ ವಡ್ಡೇರಗಲ್ಲಿ. ಇವರು ಹೈದರಾಬಾದ್‌ನಲ್ಲಿ ಓದುತ್ತಿದ್ದರು. ತನುಷಾ ಎಂಬಿಎ ವ್ಯಾಸಂಗ ಮಾಡುತ್ತಿದ್ದರೆ, ಆಕೆಯ ಸಹೋದರಿ ಸಾಯಿ ಪ್ರಿಯಾ ಪದವಿ ಕೋರ್ಸ್‌ನ ಅಂತಿಮ ವರ್ಷದಲ್ಲಿದ್ದರು. ಇನ್ನೊಬ್ಬರು ನಂದಿನಿ ಪದವಿ ಕೋರ್ಸ್‌ನ ಮೊದಲ ವರ್ಷದಲ್ಲಿದ್ದರು. ಇವರೆಲ್ಲರ ಹಿರಿಯ ಸಹೋದರಿ ಅನುಷಾ ಅವರ ಮದುವೆ ಕೇವಲ 20 ದಿನಗಳ ಹಿಂದೆ, ಅಂದರೆ ಅಕ್ಟೋಬರ್ 17 ರಂದು ನಡೆದಿತ್ತು. ಆ ಮದುವೆ ನಿಮಿತ್ತ ಮೂವರು ಊರಿಗೆ ಹೋಗಿದ್ದರು.

ಬಸ್ ಅಪಘಾತದಲ್ಲಿ ಸಾವನ್ನಪ್ಪಿದ ಇನೊಬ್ಬರು ಹೆಣ್ಣು ಮಗಳು ಅಖಿಲಾ ರೆಡ್ಡಿಯ ತಾಯಿ ಕೂಡ ಘಟನಾ ಸ್ಥಳದಲ್ಲಿ ಆಕ್ರಂದನ ವ್ಯಕ್ತಪಡಿಸುತ್ತಿದ್ದರು. “ರಸ್ತೆ ಪ್ರಯಾಣದ ಬಗ್ಗೆ ನನಗೆ ಸದಾ ಭಯ ಇತ್ತು. ಇವತ್ತು ನನ್ನ ಮಗಳನ್ನು ಕಳೆದುಕೊಳ್ಳುವ ಮೂಲಕ ನನ್ನ ಆತಂಕ ನಿಜವಾಗಿದೆ” ಎಂದು ಅಖಿಲಾ ಅವರ ತಾಯಿ ಸುದ್ದಿಗಾರರಿಗೆ ನೋವಿನಲ್ಲಿ ಹೇಳಿದ್ದಾರೆ.

ಅಖಿಲಾ ರೆಡ್ಡಿ ಯಲಾಲ್ ಮಂಡಲದ ಲಕ್ಷ್ಮೀನಾರಾಯಣ ಪುರ ಗ್ರಾಮದವರು. ಹೈದರಾಬಾದ್‌ನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದರು.

ದುರಂತ ಘಟನೆಯಲ್ಲಿ ತಾಯಿ ಮತ್ತು ಆಕೆಯ ಮೂರು ತಿಂಗಳ ಕಂದಮ್ಮ ಸಾವನ್ನಪ್ಪಿರುವ ಮತ್ತೊಂದು ಹೃದಯ ವಿದ್ರಾವಕ ಫೋಟೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಜಲ್ಲಿಕಲ್ಲು ತುಂಬಿಕೊಂಡು ಹೈದರಾಬಾದ್ ಕಡೆಯಿಂದ ಬಿಜಾಪುರ ಕಡೆಗೆ ಹೋಗುತ್ತಿದ್ದ ಲಾರಿಯೊಂದು ತಾಂಡೂರ್‌ನಿಂದ ಹೈದರಾಬಾದ್ ಕಡೆಗೆ ತೆರಳುತ್ತಿದ್ದ ತೆಲಂಗಾಣ ಸಾರಿಗೆ ಸಂಸ್ಥೆಯ (ಟಿಜಿಎಸ್‌ಆರ್‌ಟಿಸಿ) ಬಸ್‌ಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಚೆವೆಲ್ಲಾ ಮಂಡಲದ ಮಿರ್ಜಗೂಡ ಬಳಿ ಹೈದರಾಬಾದ್-ಬಿಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.

ವಾರದ ಹಿಂದೆ ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್‌ ಕರ್ನೂಲ್ ಜಿಲ್ಲೆಯಲ್ಲಿ ಬೆಂಕಿಗಾಹುತಿಯಾಗಿ 21 ಜನರು ಸಜೀವ ದಹನವಾಗಿದ್ದರು. ಹಲವರು ಗಾಯಗೊಂಡಿದ್ದರು. ಆ ಘಟನೆ ಕಣ್ಣಿಂದ ಮಾಸುವ ಮುನ್ನವೇ ತೆಲುಗು ನಾಡಿನಲ್ಲಿ ಮತ್ತೊಂದು ಭೀಕರ ದುರಂತ ಸಂಭವಿಸಿದೆ.

ತೆಲಂಗಾಣದ ರಂಗಾರೆಡ್ಡಿಯಲ್ಲಿ ಭೀಕರ ರಸ್ತೆ ಅಪಘಾತ : 20 ಜನರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಂದಣಿಯಾಗದ ಆರ್‌ಎಸ್‌ಎಸ್ ಮುಖ್ಯಸ್ಥರಿಗೆ ಪ್ರಧಾನಿಗೆ ಸಮನಾದ ಪ್ರೋಟೋಕಾಲ್ ಏಕೆ?..ಪ್ರಿಯಾಂಕ್ ಖರ್ಗೆ

ತನ್ನದು ನೋಂದಾಯಿತ ಸಂಸ್ಥೆಯಲ್ಲ ಎಂದು ಆರ್‌ಎಸ್‌ಎಸ್ ಲಿಖಿತ ರೂಪದಲ್ಲಿ ಅಧಿಕೃತವಾಗಿ ತಿಳಿಸಿದೆ. ನೋಂದಾಯಿಸದ ಸಂಸ್ಥೆಯೊಂದರ ಮುಖ್ಯಸ್ಥರು ಪ್ರಧಾನಿ ಮತ್ತು ಗೃಹ ಸಚಿವರಿಗೆ ಸಮಾನವಾಗಿ ಅಡ್ವಾನ್ಸಡ್‌ ಸೆಕ್ಯುರಿಟಿ ಲಿಯಾಸನ್ ಪ್ರೋಟೋಕಾಲ್ ಏಕೆ ಪಡೆಯುತ್ತಾರೆ? ಎಂದು...

ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ : ನ.6ಕ್ಕೆ ವಿಚಾರಣೆ ಮುಂದೂಡಿಕೆ

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಮೀರಾನ್ ಹೈದರ್, ಗುಲ್ಫಿಶಾ ಫಾತಿಮಾ, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಂ ಖಾನ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ...

ಶಬರಿಮಲೆ ಬೇಸ್ ಕ್ಯಾಂಪ್‌ನಲ್ಲಿ ₹ 6.12 ಕೋಟಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲಿರುವ ಕೇರಳ ಸರ್ಕಾರ

ಪತ್ತನಂತಿಟ್ಟ: ಶಬರಿಮಲೆ ಸಮೀಪದ ನಿಲಕ್ಕಲ್‌ನಲ್ಲಿ ₹ 6.12ಕೋಟಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಕೇರಳ ಆರೋಗ್ಯ ಇಲಾಖೆ ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದೆ.  ಶಬರಿಮಲೆ ತೀರ್ಥಯಾತ್ರೆ ಆರಂಭವಾಗುವ ಕೆಲವೇ ದಿನಗಳ ಮೊದಲು...

ತನ್ನನ್ನು ಹೈಕೋರ್ಟ್ ನ್ಯಾಯಾಧೀಶನಾಗಿ ನೇಮಿಸಲು ನಿರ್ದೇಶಿಸುವಂತೆ ಕೋರಿದ ವ್ಯಕ್ತಿ : ವ್ಯವಸ್ಥೆಯ ಅಣಕ ಎಂದ ಸುಪ್ರೀಂ ಕೋರ್ಟ್

ತನ್ನನ್ನು ತೆಲಂಗಾಣ ಹೈಕೋರ್ಟ್ ನ್ಯಾಯಾಧೀಶನಾಗಿ ನೇಮಿಸುವಂತೆ ನಿರ್ದೇಶನ ನೀಡಲು ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ (ನ.3) ನಿರಾಕರಿಸಿದ್ದು, "ಇದು ವ್ಯವಸ್ಥೆಯ ಅಣಕ" ಎಂದಿದೆ. ಸಿಜೆಐ ಬಿ.ಆರ್ ಗವಾಯಿ...

ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಬಿಹಾರದಲ್ಲಿನ ಅಧಿಕಾರ ವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಜಯಸಾಧಿಸುವ ಭರವಸೆಯಿದೆ ಎಂದು ಮುಖ್ಯಮಂತ್ರಿ...

ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ : ಆರೋಪಿಗಳ ಪತ್ತೆಗೆ 7 ತಂಡ ರಚನೆ

ಮೂವರು ವ್ಯಕ್ತಿಗಳು ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಕೊಯಮತ್ತೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಳಿಕ ಭಾನುವಾರ (ನ.2) ತಡರಾತ್ರಿ ನಡೆದಿದೆ. ಮಧುರೈ ಮೂಲದ ವಿದ್ಯಾರ್ಥಿನಿ ಕೊಯಮತ್ತೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದರು....

ರಾಹುಲ್, ತೇಜಸ್ವಿ, ಅಖಿಲೇಶ್, ‘ಪಪ್ಪು, ತಪ್ಪು, ಅಕ್ಕು’ ಗಾಂಧಿಯವರ ಮೂರು ಹೊಸ ಮಂಗಗಳು ಎಂದ ಯೋಗಿ ಆದಿತ್ಯನಾಥ್

ಇಂಡಿಯಾ ಬ್ಲಾಕ್ ನಾಯಕರನ್ನು 'ಪಪ್ಪು', 'ತಪ್ಪು' ಮತ್ತು 'ಅಕ್ಕು' ಮಹಾತ್ಮಾ ಗಾಂಧಿಯವರ ಮೂರು ಹೊಸ ಮಂಗಗಳು" ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟೀಕಿಸಿದರು.  2025ನೇ ಸಾಲಿನ ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ...

ಉತ್ತರ ಪ್ರದೇಶ| ಮಥುರಾದಲ್ಲಿ 10 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಹಳ್ಳಿಯೊಂದರಲ್ಲಿ 10 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ಭಾನುವಾರ (ನವೆಂಬರ್ 2, 2025) ತಿಳಿಸಿದ್ದಾರೆ. ಶನಿವಾರ (ನವೆಂಬರ್ 1, 2025), ಸಂತ್ರಸ್ತ ಬಾಲಕಿ...

ಕಣ್ಣೂರ್ | ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಸಾವು

ಕೇರಳದ ಕಣ್ಣೂರಿನ ಪಯ್ಯಂಬಲಂ ಬೀಚ್‌ಗೆ ಪ್ರವಾಸಕ್ಕೆ ತೆರಳಿದ ಕರ್ನಾಟಕದ ಮೂವರು ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಭಾನುವಾರ (ನ.2) ನಡೆದಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರದ ಅಫ್ನಾನ್ ಅಹ್ಮದ್ (26), ಬೀದರ್‌ನ ಮೊಹಮ್ಮದ್ ರೆಹಾನುದ್ದೀನ್...

ಶಿಮ್ಲಾ: ದಲಿತ ಬಾಲಕನ ಮೇಲೆ ಹಲ್ಲೆ ನಡೆಸಿ, ಪ್ಯಾಂಟ್‌ನಲ್ಲಿ ಚೇಳು ಬಿಟ್ಟ ಶಾಲಾ ಶಿಕ್ಷಕರು; ಮೂವರ ವಿರುದ್ಧ ಪ್ರಕರಣ ದಾಖಲು

ಎಂಟು ವರ್ಷದ ದಲಿತ ಬಾಲಕನ ಮೇಲೆ ಹಲ್ಲೆ ನಡೆಸಿ, ಆತನ ಪ್ಯಾಂಟ್‌ನಲ್ಲಿ ಚೇಳು ಬಿಟ್ಟಿದ್ದಕ್ಕಾಗಿ ಹಿಮಾಚಲ ಪ್ರದೇಶದ ಶಿಮ್ಲಾದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಸೇರಿದಂತೆ ಮೂವರು ಶಿಕ್ಷಕರ ವಿರುದ್ಧ ಭಾನುವಾರ ಪ್ರಕರಣ ದಾಖಲಿಸಲಾಗಿದೆ...