Homeಮುಖಪುಟಭೀಕರ ಅಪಘಾತದಲ್ಲಿ ಮೂವರು ಸಹೋದರಿಯರು ಸಾವು : ದುರಂತ ಸ್ಥಳದಲ್ಲಿ ಹೆತ್ತವರ ಆಕ್ರಂದನ

ಭೀಕರ ಅಪಘಾತದಲ್ಲಿ ಮೂವರು ಸಹೋದರಿಯರು ಸಾವು : ದುರಂತ ಸ್ಥಳದಲ್ಲಿ ಹೆತ್ತವರ ಆಕ್ರಂದನ

- Advertisement -
- Advertisement -

“ದಯವಿಟ್ಟು ನಮ್ಮ ಮಕ್ಕಳನ್ನು ವಾಪಸ್ ತಂದುಕೊಡಿ” ಎಂದು ತೆಲಂಗಾಣ ಅಪಘಾತದ ಸ್ಥಳದಲ್ಲಿ ನೆರೆದಿದ್ದ ಸಾವಿರಾರು ಜನರ ಮುಂದೆ ಮೂವರು ಹೆಣ್ಣು ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಹೃದಯ ವಿದ್ರಾವಕವಾಗಿತ್ತು ಎಂದು ವರದಿಗಳು ಹೇಳಿವೆ.

ಇಂದು (ನ.3, ಸೋಮವಾರ) ಬೆಳಿಗ್ಗೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಮಂಡಲದ ಮಿರ್ಜಗೂಡ ಬಳಿ ಹೈದರಾಬಾದ್-ಬಿಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಲ್ಲಿಕಲ್ಲುಗಳನ್ನು ತುಂಬಿದ್ದ ಲಾರಿ ಮತ್ತು ಸಾರಿಗೆ ಸಂಸ್ಥೆಯ ಬಸ್‌ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಈ ದುರಂತದಲ್ಲಿ ಸಾವನ್ನಪ್ಪಿದ 20 ಜನರಲ್ಲಿ ತನುಷಾ, ಸಾಯಿಪ್ರಿಯಾ ಮತ್ತು ನಂದಿನಿ ಎಂಬ ಮೂವರು ಸಹೋದರಿಯೂ ಸೇರಿದ್ದಾರೆ.

ಇವರ ತಾಯಿ ಅಂಬಿಕಾರ ಘಟನಾ ಸ್ಥಳದಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದರು. “ಓ ದೇವರೆ..ನನ್ನ ಮಕ್ಕಳನ್ನು ವಾಪಸ್ ತಂದು ಕೊಡುವವರು ಯಾರು? ಅವರೇನು ತಪ್ಪು ಮಾಡಿದ್ದರು?” ಎಂಬ ತಾಯಿಯ ಆಕ್ರಂದನ ನೆರೆದಿದ್ದವರ ಕಣ್ಣಾಲಿಗಳನ್ನು ಒದ್ದೆಯಾಗಿಸಿತು ಎಂದು ವರದಿಗಳು ತಿಳಿಸಿವೆ.

ಮೂವರು ಸಹೋದರಿಯರು ಶುಕ್ರವಾರ (ಅ.31) ಹೈದರಾಬಾದ್‌ಗೆ ಹಿಂತಿರುಗಬೇಕಿತ್ತು, ಆದರೆ, ತಾಯಿ ಅಂಬಿಕಾ ವಾರಾಂತ್ಯದಲ್ಲಿ ಅವರನ್ನು ಮನೆಯಲ್ಲೇ ಇರಲು ಕೇಳಿಕೊಂಡಿದ್ದರು. ತನ್ನ ಹೆಣ್ಣುಮಕ್ಕಳೊಂದಿಗೆ ಕೆಲವು ದಿನಗಳನ್ನು ಕಳೆಯಬೇಕೆಂಬ ಆಸೆ ಆ ತಾಯಿಯದ್ದಾಗಿತ್ತು.

ಇಂದು ಬೆಳಿಗ್ಗೆ ಮಕ್ಕಳನ್ನು ಹೈದರಾಬಾದ್ ರೈಲು ಹತ್ತಿಸಲು ತಂದೆ ಯೆಲ್ಲಯ್ಯ ಸ್ಥಳೀಯ ರೈಲು ನಿಲ್ದಾಣಕ್ಕೆ ಕರೆದೊಯ್ದಿದ್ದರು. ಆದರೆ, ಅವರಿಗೆ ರೈಲು ತಪ್ಪಿತ್ತು. ಹಾಗಾಗಿ, ಮೂವರು ಸಹೋದರಿಯರು ಹೈದರಾಬಾದ್ ಬಸ್‌ ಹತ್ತಿದ್ದರು.

ಮಕ್ಕಳನ್ನು ಬಸ್‌ ಹತ್ತಿಸಿ ಯಲ್ಲಯ್ಯ ಮನೆಗೆ ಹಿಂದಿರುಗಿದ ಕೆಲವೇ ಹೊತ್ತಿನಲ್ಲಿ ಮೂವರ ಸಾವಿನ ಸುದ್ದಿ ಬರ ಸಿಡಿಲು ಬಡಿದಂತೆ ಬಂದಿದೆ. ಜೀವಂತ ಇದ್ದಾಗ ಒಬ್ಬರಿಗೊಬ್ಬರು ಬಹಳ ಅನ್ಯೋನ್ಯತೆಯಿಂದ ಇದ್ದ ಮೂವರು ಸಹೋದರಿಯರು ಸಾವಲ್ಲೂ ಒಂದಾದರು ಎಂದು ವರದಿಗಳು ಹೇಳಿವೆ.

ಮೃತ ಮೂವರು ಸಹೋದರಿಯರ ಊರು ರಂಗಾರೆಡ್ಡಿ ಜಿಲ್ಲೆಯ ಗಾಂಧಿನಗರದ ವಡ್ಡೇರಗಲ್ಲಿ. ಇವರು ಹೈದರಾಬಾದ್‌ನಲ್ಲಿ ಓದುತ್ತಿದ್ದರು. ತನುಷಾ ಎಂಬಿಎ ವ್ಯಾಸಂಗ ಮಾಡುತ್ತಿದ್ದರೆ, ಆಕೆಯ ಸಹೋದರಿ ಸಾಯಿ ಪ್ರಿಯಾ ಪದವಿ ಕೋರ್ಸ್‌ನ ಅಂತಿಮ ವರ್ಷದಲ್ಲಿದ್ದರು. ಇನ್ನೊಬ್ಬರು ನಂದಿನಿ ಪದವಿ ಕೋರ್ಸ್‌ನ ಮೊದಲ ವರ್ಷದಲ್ಲಿದ್ದರು. ಇವರೆಲ್ಲರ ಹಿರಿಯ ಸಹೋದರಿ ಅನುಷಾ ಅವರ ಮದುವೆ ಕೇವಲ 20 ದಿನಗಳ ಹಿಂದೆ, ಅಂದರೆ ಅಕ್ಟೋಬರ್ 17 ರಂದು ನಡೆದಿತ್ತು. ಆ ಮದುವೆ ನಿಮಿತ್ತ ಮೂವರು ಊರಿಗೆ ಹೋಗಿದ್ದರು.

ಬಸ್ ಅಪಘಾತದಲ್ಲಿ ಸಾವನ್ನಪ್ಪಿದ ಇನೊಬ್ಬರು ಹೆಣ್ಣು ಮಗಳು ಅಖಿಲಾ ರೆಡ್ಡಿಯ ತಾಯಿ ಕೂಡ ಘಟನಾ ಸ್ಥಳದಲ್ಲಿ ಆಕ್ರಂದನ ವ್ಯಕ್ತಪಡಿಸುತ್ತಿದ್ದರು. “ರಸ್ತೆ ಪ್ರಯಾಣದ ಬಗ್ಗೆ ನನಗೆ ಸದಾ ಭಯ ಇತ್ತು. ಇವತ್ತು ನನ್ನ ಮಗಳನ್ನು ಕಳೆದುಕೊಳ್ಳುವ ಮೂಲಕ ನನ್ನ ಆತಂಕ ನಿಜವಾಗಿದೆ” ಎಂದು ಅಖಿಲಾ ಅವರ ತಾಯಿ ಸುದ್ದಿಗಾರರಿಗೆ ನೋವಿನಲ್ಲಿ ಹೇಳಿದ್ದಾರೆ.

ಅಖಿಲಾ ರೆಡ್ಡಿ ಯಲಾಲ್ ಮಂಡಲದ ಲಕ್ಷ್ಮೀನಾರಾಯಣ ಪುರ ಗ್ರಾಮದವರು. ಹೈದರಾಬಾದ್‌ನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದರು.

ದುರಂತ ಘಟನೆಯಲ್ಲಿ ತಾಯಿ ಮತ್ತು ಆಕೆಯ ಮೂರು ತಿಂಗಳ ಕಂದಮ್ಮ ಸಾವನ್ನಪ್ಪಿರುವ ಮತ್ತೊಂದು ಹೃದಯ ವಿದ್ರಾವಕ ಫೋಟೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಜಲ್ಲಿಕಲ್ಲು ತುಂಬಿಕೊಂಡು ಹೈದರಾಬಾದ್ ಕಡೆಯಿಂದ ಬಿಜಾಪುರ ಕಡೆಗೆ ಹೋಗುತ್ತಿದ್ದ ಲಾರಿಯೊಂದು ತಾಂಡೂರ್‌ನಿಂದ ಹೈದರಾಬಾದ್ ಕಡೆಗೆ ತೆರಳುತ್ತಿದ್ದ ತೆಲಂಗಾಣ ಸಾರಿಗೆ ಸಂಸ್ಥೆಯ (ಟಿಜಿಎಸ್‌ಆರ್‌ಟಿಸಿ) ಬಸ್‌ಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಚೆವೆಲ್ಲಾ ಮಂಡಲದ ಮಿರ್ಜಗೂಡ ಬಳಿ ಹೈದರಾಬಾದ್-ಬಿಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.

ವಾರದ ಹಿಂದೆ ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್‌ ಕರ್ನೂಲ್ ಜಿಲ್ಲೆಯಲ್ಲಿ ಬೆಂಕಿಗಾಹುತಿಯಾಗಿ 21 ಜನರು ಸಜೀವ ದಹನವಾಗಿದ್ದರು. ಹಲವರು ಗಾಯಗೊಂಡಿದ್ದರು. ಆ ಘಟನೆ ಕಣ್ಣಿಂದ ಮಾಸುವ ಮುನ್ನವೇ ತೆಲುಗು ನಾಡಿನಲ್ಲಿ ಮತ್ತೊಂದು ಭೀಕರ ದುರಂತ ಸಂಭವಿಸಿದೆ.

ತೆಲಂಗಾಣದ ರಂಗಾರೆಡ್ಡಿಯಲ್ಲಿ ಭೀಕರ ರಸ್ತೆ ಅಪಘಾತ : 20 ಜನರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...