Homeಮುಖಪುಟ2018-19ರಲ್ಲಿ ಬಿಜೆಪಿ ಆದಾಯದಲ್ಲಿ 135ರಷ್ಟು ಏರಿಕೆ : ಚುನಾವಣಾ ಬಾಂಡ್‌ಗಳ ಮೂಲಕವೇ ಹೆಚ್ಚು..

2018-19ರಲ್ಲಿ ಬಿಜೆಪಿ ಆದಾಯದಲ್ಲಿ 135ರಷ್ಟು ಏರಿಕೆ : ಚುನಾವಣಾ ಬಾಂಡ್‌ಗಳ ಮೂಲಕವೇ ಹೆಚ್ಚು..

- Advertisement -
- Advertisement -

ದೇಶದ ಆರು ರಾಷ್ಟ್ರೀಯ ಪಕ್ಷಗಳು 2018-19ನೇ ಸಾಲಿನಲ್ಲಿ ಚುನಾವಣಾ ಖರ್ಚು ವೆಚ್ಚ ಮತ್ತು ಆದಾಯದ ಕುರಿತು ಘೋಷಿಸಿಕೊಂಡಿರುವುದನ್ನು ವಿಶ್ಲೇಷಣೆ ನಡೆಸಿರುವ ಸರ್ಕಾರೇತರ ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆ(ADR) ಎರಡು ವರ್ಷದ ಅವಧಿಯಲ್ಲಿ ಬಿಜೆಪಿ ಆದಾಯದಲ್ಲಿ ಶೇಕಡ 134.59ರಷ್ಟು ಹೆಚ್ಚಳವಾಗಿರುವುದನ್ನು ಗುರುತಿಸಿದೆ. 2018-19ರಲ್ಲಿ ಬಿಜೆಪಿಗೆ 2410.08 ಕೋಟಿ ರೂಪಾಯಿ ಆದಾಯ ಬಂದಿದ್ದು ಅದು ಆರು ರಾಷ್ಟ್ರೀಯ ಪಕ್ಷಗಳಿಗಿಂತ 65.16ರಷ್ಟು ಹೆಚ್ಚಾಗಿದೆ.

2018-19ರಲ್ಲಿ 2410 ಕೋಟಿ ಆದಾಯ ಬಂದಿದೆ ಎಂದು ಬಿಜೆಪಿ ಘೋಷಿಸಿಕೊಂಡಿದೆ. ಇದರಲ್ಲಿ ಚುನಾವಣೆಗಾಗಿ ಒಟ್ಟು ಆದಾಯದಲ್ಲಿ ಶೇ. 41.714ಷ್ಟು ಅಂದರೆ 1005.33 ಕೋಟಿ ವೆಚ್ಚ ಮಾಡಿದೆ ಎಂದು ಎಡಿಆರ್ ವಿಶ್ಲೇಷಣೆ ಮಾಡಿದೆ ಎಂದು ನ್ಯಾಷನಲ್ ಹೆರಾಲ್ಡ್ ವೆಬ್ ಸೈಟ್ ವರದಿ ಮಾಡಿದೆ.

ಇದೇ ಅವಧಿಯಲ್ಲಿ 918.03 ಕೋಟಿ ಆದಾಯ ಬಂದಿದೆ ಎಂದು ಕಾಂಗ್ರೆಸ್ ಘೋಷಿಸಿಕೊಂಡಿದ್ದು ಈ ಆದಾಯದಲ್ಲಿ ಶೇ 51.19ರಷ್ಟು ಅಂದರೆ 469.92 ಕೋಟಿ ರೂಪಾಯಿ ಚುನಾವಣೆಗಾಗಿ ವೆಚ್ಚ ಮಾಡಿದೆ. ಭಾರತೀಯ ಜನತಾ ಪಕ್ಷವನ್ನು ಬಿಟ್ಟರೆ ಆದಾಯ ಸಂಗ್ರಹದಲ್ಲಿ ಕಾಂಗ್ರೆಸ್ ಎರಡನೇ ಸ್ಥಾನ ಪಡೆದಿದೆ. ಅದಕ್ಕೆ 2018-19ರ ಅವಧಿಯಲ್ಲಿ ಎಲ್ಲಾ ಆರು ರಾಜಕೀಯ ಪಕ್ಷಗಳ ಒಟ್ಟು ಆದಾಯದ ಶೇ24.82ರಷ್ಟು ಆದಾಯ ಬಂದಿದೆ ಎಂದು ಅಂಕಿಅಂಶಗಳು ದೃಡಪಡಿಸಿವೆ.

ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಸಿಪಿಎಂ, ಬಿಎಸ್.ಪಿ, ಟಿಎಂಸಿ ಮತ್ತು ಸಿಪಿಐ ದೇಶಾದ್ಯಂತ ಸಂಗ್ರಹಿಸಿದ ಒಟ್ಟು ಆದಾಯ 3698.66 ಕೋಟಿ ರೂಪಾಯಿ ಎಂದು ಘೋಷಿಸಲಾಗಿದೆ.

2017-18 ಮತ್ತು 2018-19ರ ನಡುವೆ ಬಿಜೆಪಿ ಆದಾಯ 134.59ರಷ್ಟು ಹೆಚ್ಚಳವಾಗಿದೆ. ಅಂದರೆ 1382.74ಕೋಟಿ ರೂ ಏರಿದೆ. 2017-18ರ ಅವಧಿಯಲ್ಲಿ 1,027.34 ಕೋಟಿ ರೂಪಾಯಿ ಇದ್ದುದು 2018-19ರಲ್ಲಿ 2410.08 ಕೋಟಿಗೆ ಏರಿದೆ. 2018-19ನೇ ಸಾಲಿನಲ್ಲಿ ಸ್ವಯಂ ಪ್ರೇರಿತ ದೇಣಿಗೆ 2354.02 ಕೋಟಿ ಎಂದು ಬಿಜೆಪಿ ಘೋಷಿಸಿಕೊಂಡಿದೆ. ಈ ಅವಧಿಯಲ್ಲಿ ಅದರ ಒಟ್ಟು ಆದಾಯ 97.67ರಷ್ಟು ಆಗಿದೆ.

ಕಾಂಗ್ರೆಸ್ ಪಕ್ಷಕ್ಕೆ 551.55 ಕೋಟಿ ರೂಪಾಯಿ ಗ್ರಾಂಟ್/ ದಾನ/ ದೇಣಿಗೆಯಿಂದ ಬಂದಿದೆ ಎಂದು ಘೋಷಿಸಿಕೊಂಡಿದೆ. ಇದು 2018-19ರ ಅವಧಿಯಲ್ಲಿ ಪಕ್ಷಕ್ಕೆ ಒಟ್ಟು ಆದಾಯದ ಶೇ.60.08ರಷ್ಟು ಅತಿಹೆಚ್ಚು ಆದಾಯ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.

ಬಿಜೆಪಿ ಸಾಮಾನ್ಯ ಪ್ರಚಾರಕ್ಕಾಗಿ 792.39 ಕೋಟಿ ವೆಚ್ಚ ಮಾಡಿದ್ದರೆ, ಆಡಳಿತಾತ್ಮಕ ವೆಚ್ಚವಾಗಿ 178.35 ಕೋಟಿ ವೆಚ್ಚ ಮಾಡಿದೆ ಎಂದು ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆ ವಿಶ್ಲೇಷಿಸಿದೆ .2018-19ರಲ್ಲಿ ಎಲ್ಲಾ ಆರು ರಾಷ್ಟ್ರೀಯಮಟ್ಟದ ರಾಜಕೀಯ ಪಕ್ಷಗಳಿಗೆ ಚುನಾವಣಾ ಬಾಂಡ್ ಗಳ ಮೂಲಕ ಅತಿ ಹೆಚ್ಚು ದೇಣಿಗೆ ಬಂದಿದೆ. ಶೇ.52ರಷ್ಟಕ್ಕೂ ಹೆಚ್ಚಿನ ಆದಾಯ ಚುನಾವಣಾ ಬಾಂಡ್ ಗಳ ಮೂಲಕ ದಾನವಾಗಿ ರಾಜಕೀಯ ಪಕ್ಷಗಳಿಗೆ 1931.43 ಕೋಟಿ ರೂ ಹಣ ಬಂದಿದೆ. ಆದರೆ ಹಣ ನೀಡಿದ ದಾನಿಗಳ ಹೆಸರನ್ನು ಸಾರ್ವಜನಿಕರ ಮಾಹಿತಿಗೆ ಪ್ರಕಟಿಸಿಲ್ಲ.

2018-19ರಲ್ಲಿ ಚುನಾವಣಾ ಬಾಂಡ್ ಗಳ ಮೌಲ್ಯ 2539.58 ಕೋಟಿ ರೂ ಆಗಿದ್ದು ಬಾಂಡ್ ಗಳ ಮೂಲಕ ಬಿಜೆಪಿ, ಕಾಂಗ್ರೆಸ್ ಸಿಪಿಎಂ, ಬಿಎಸ್.ಪಿ, ತೃಣಮೂಲ ಕಾಂಗ್ರೆಸ್, ಸಿಪಿಐ ಪಕ್ಷಗಳು ಶೇಕಡ 76ರಷ್ಟು ಹಣ ಸ್ವೀಕರಿಸಿವೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು 2018-19ರಲ್ಲಿ ಚುನಾವಣಾ ಬಾಂಡ್ ಗಳ ಮೂಲಕ ಹಣವನ್ನು ಪಡೆದಿದ್ದು 2422.02 ಕೋಟಿ ಆಗಿದೆ. ಈ ಅವಧಿಯಲ್ಲಿ ಆರು ರಾಜಕೀಯ ಪಕ್ಷಗಳ ಅದಾಯದ 2/3ರಷ್ಟು ಆದಾಯ ಬಿಜೆಪಿಗೆ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...