Homeಮುಖಪುಟ2018-19ರಲ್ಲಿ ಬಿಜೆಪಿ ಆದಾಯದಲ್ಲಿ 135ರಷ್ಟು ಏರಿಕೆ : ಚುನಾವಣಾ ಬಾಂಡ್‌ಗಳ ಮೂಲಕವೇ ಹೆಚ್ಚು..

2018-19ರಲ್ಲಿ ಬಿಜೆಪಿ ಆದಾಯದಲ್ಲಿ 135ರಷ್ಟು ಏರಿಕೆ : ಚುನಾವಣಾ ಬಾಂಡ್‌ಗಳ ಮೂಲಕವೇ ಹೆಚ್ಚು..

- Advertisement -
- Advertisement -

ದೇಶದ ಆರು ರಾಷ್ಟ್ರೀಯ ಪಕ್ಷಗಳು 2018-19ನೇ ಸಾಲಿನಲ್ಲಿ ಚುನಾವಣಾ ಖರ್ಚು ವೆಚ್ಚ ಮತ್ತು ಆದಾಯದ ಕುರಿತು ಘೋಷಿಸಿಕೊಂಡಿರುವುದನ್ನು ವಿಶ್ಲೇಷಣೆ ನಡೆಸಿರುವ ಸರ್ಕಾರೇತರ ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆ(ADR) ಎರಡು ವರ್ಷದ ಅವಧಿಯಲ್ಲಿ ಬಿಜೆಪಿ ಆದಾಯದಲ್ಲಿ ಶೇಕಡ 134.59ರಷ್ಟು ಹೆಚ್ಚಳವಾಗಿರುವುದನ್ನು ಗುರುತಿಸಿದೆ. 2018-19ರಲ್ಲಿ ಬಿಜೆಪಿಗೆ 2410.08 ಕೋಟಿ ರೂಪಾಯಿ ಆದಾಯ ಬಂದಿದ್ದು ಅದು ಆರು ರಾಷ್ಟ್ರೀಯ ಪಕ್ಷಗಳಿಗಿಂತ 65.16ರಷ್ಟು ಹೆಚ್ಚಾಗಿದೆ.

2018-19ರಲ್ಲಿ 2410 ಕೋಟಿ ಆದಾಯ ಬಂದಿದೆ ಎಂದು ಬಿಜೆಪಿ ಘೋಷಿಸಿಕೊಂಡಿದೆ. ಇದರಲ್ಲಿ ಚುನಾವಣೆಗಾಗಿ ಒಟ್ಟು ಆದಾಯದಲ್ಲಿ ಶೇ. 41.714ಷ್ಟು ಅಂದರೆ 1005.33 ಕೋಟಿ ವೆಚ್ಚ ಮಾಡಿದೆ ಎಂದು ಎಡಿಆರ್ ವಿಶ್ಲೇಷಣೆ ಮಾಡಿದೆ ಎಂದು ನ್ಯಾಷನಲ್ ಹೆರಾಲ್ಡ್ ವೆಬ್ ಸೈಟ್ ವರದಿ ಮಾಡಿದೆ.

ಇದೇ ಅವಧಿಯಲ್ಲಿ 918.03 ಕೋಟಿ ಆದಾಯ ಬಂದಿದೆ ಎಂದು ಕಾಂಗ್ರೆಸ್ ಘೋಷಿಸಿಕೊಂಡಿದ್ದು ಈ ಆದಾಯದಲ್ಲಿ ಶೇ 51.19ರಷ್ಟು ಅಂದರೆ 469.92 ಕೋಟಿ ರೂಪಾಯಿ ಚುನಾವಣೆಗಾಗಿ ವೆಚ್ಚ ಮಾಡಿದೆ. ಭಾರತೀಯ ಜನತಾ ಪಕ್ಷವನ್ನು ಬಿಟ್ಟರೆ ಆದಾಯ ಸಂಗ್ರಹದಲ್ಲಿ ಕಾಂಗ್ರೆಸ್ ಎರಡನೇ ಸ್ಥಾನ ಪಡೆದಿದೆ. ಅದಕ್ಕೆ 2018-19ರ ಅವಧಿಯಲ್ಲಿ ಎಲ್ಲಾ ಆರು ರಾಜಕೀಯ ಪಕ್ಷಗಳ ಒಟ್ಟು ಆದಾಯದ ಶೇ24.82ರಷ್ಟು ಆದಾಯ ಬಂದಿದೆ ಎಂದು ಅಂಕಿಅಂಶಗಳು ದೃಡಪಡಿಸಿವೆ.

ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಸಿಪಿಎಂ, ಬಿಎಸ್.ಪಿ, ಟಿಎಂಸಿ ಮತ್ತು ಸಿಪಿಐ ದೇಶಾದ್ಯಂತ ಸಂಗ್ರಹಿಸಿದ ಒಟ್ಟು ಆದಾಯ 3698.66 ಕೋಟಿ ರೂಪಾಯಿ ಎಂದು ಘೋಷಿಸಲಾಗಿದೆ.

2017-18 ಮತ್ತು 2018-19ರ ನಡುವೆ ಬಿಜೆಪಿ ಆದಾಯ 134.59ರಷ್ಟು ಹೆಚ್ಚಳವಾಗಿದೆ. ಅಂದರೆ 1382.74ಕೋಟಿ ರೂ ಏರಿದೆ. 2017-18ರ ಅವಧಿಯಲ್ಲಿ 1,027.34 ಕೋಟಿ ರೂಪಾಯಿ ಇದ್ದುದು 2018-19ರಲ್ಲಿ 2410.08 ಕೋಟಿಗೆ ಏರಿದೆ. 2018-19ನೇ ಸಾಲಿನಲ್ಲಿ ಸ್ವಯಂ ಪ್ರೇರಿತ ದೇಣಿಗೆ 2354.02 ಕೋಟಿ ಎಂದು ಬಿಜೆಪಿ ಘೋಷಿಸಿಕೊಂಡಿದೆ. ಈ ಅವಧಿಯಲ್ಲಿ ಅದರ ಒಟ್ಟು ಆದಾಯ 97.67ರಷ್ಟು ಆಗಿದೆ.

ಕಾಂಗ್ರೆಸ್ ಪಕ್ಷಕ್ಕೆ 551.55 ಕೋಟಿ ರೂಪಾಯಿ ಗ್ರಾಂಟ್/ ದಾನ/ ದೇಣಿಗೆಯಿಂದ ಬಂದಿದೆ ಎಂದು ಘೋಷಿಸಿಕೊಂಡಿದೆ. ಇದು 2018-19ರ ಅವಧಿಯಲ್ಲಿ ಪಕ್ಷಕ್ಕೆ ಒಟ್ಟು ಆದಾಯದ ಶೇ.60.08ರಷ್ಟು ಅತಿಹೆಚ್ಚು ಆದಾಯ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.

ಬಿಜೆಪಿ ಸಾಮಾನ್ಯ ಪ್ರಚಾರಕ್ಕಾಗಿ 792.39 ಕೋಟಿ ವೆಚ್ಚ ಮಾಡಿದ್ದರೆ, ಆಡಳಿತಾತ್ಮಕ ವೆಚ್ಚವಾಗಿ 178.35 ಕೋಟಿ ವೆಚ್ಚ ಮಾಡಿದೆ ಎಂದು ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆ ವಿಶ್ಲೇಷಿಸಿದೆ .2018-19ರಲ್ಲಿ ಎಲ್ಲಾ ಆರು ರಾಷ್ಟ್ರೀಯಮಟ್ಟದ ರಾಜಕೀಯ ಪಕ್ಷಗಳಿಗೆ ಚುನಾವಣಾ ಬಾಂಡ್ ಗಳ ಮೂಲಕ ಅತಿ ಹೆಚ್ಚು ದೇಣಿಗೆ ಬಂದಿದೆ. ಶೇ.52ರಷ್ಟಕ್ಕೂ ಹೆಚ್ಚಿನ ಆದಾಯ ಚುನಾವಣಾ ಬಾಂಡ್ ಗಳ ಮೂಲಕ ದಾನವಾಗಿ ರಾಜಕೀಯ ಪಕ್ಷಗಳಿಗೆ 1931.43 ಕೋಟಿ ರೂ ಹಣ ಬಂದಿದೆ. ಆದರೆ ಹಣ ನೀಡಿದ ದಾನಿಗಳ ಹೆಸರನ್ನು ಸಾರ್ವಜನಿಕರ ಮಾಹಿತಿಗೆ ಪ್ರಕಟಿಸಿಲ್ಲ.

2018-19ರಲ್ಲಿ ಚುನಾವಣಾ ಬಾಂಡ್ ಗಳ ಮೌಲ್ಯ 2539.58 ಕೋಟಿ ರೂ ಆಗಿದ್ದು ಬಾಂಡ್ ಗಳ ಮೂಲಕ ಬಿಜೆಪಿ, ಕಾಂಗ್ರೆಸ್ ಸಿಪಿಎಂ, ಬಿಎಸ್.ಪಿ, ತೃಣಮೂಲ ಕಾಂಗ್ರೆಸ್, ಸಿಪಿಐ ಪಕ್ಷಗಳು ಶೇಕಡ 76ರಷ್ಟು ಹಣ ಸ್ವೀಕರಿಸಿವೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು 2018-19ರಲ್ಲಿ ಚುನಾವಣಾ ಬಾಂಡ್ ಗಳ ಮೂಲಕ ಹಣವನ್ನು ಪಡೆದಿದ್ದು 2422.02 ಕೋಟಿ ಆಗಿದೆ. ಈ ಅವಧಿಯಲ್ಲಿ ಆರು ರಾಜಕೀಯ ಪಕ್ಷಗಳ ಅದಾಯದ 2/3ರಷ್ಟು ಆದಾಯ ಬಿಜೆಪಿಗೆ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...