Homeಮುಖಪುಟ2018-19ರಲ್ಲಿ ಬಿಜೆಪಿ ಆದಾಯದಲ್ಲಿ 135ರಷ್ಟು ಏರಿಕೆ : ಚುನಾವಣಾ ಬಾಂಡ್‌ಗಳ ಮೂಲಕವೇ ಹೆಚ್ಚು..

2018-19ರಲ್ಲಿ ಬಿಜೆಪಿ ಆದಾಯದಲ್ಲಿ 135ರಷ್ಟು ಏರಿಕೆ : ಚುನಾವಣಾ ಬಾಂಡ್‌ಗಳ ಮೂಲಕವೇ ಹೆಚ್ಚು..

- Advertisement -
- Advertisement -

ದೇಶದ ಆರು ರಾಷ್ಟ್ರೀಯ ಪಕ್ಷಗಳು 2018-19ನೇ ಸಾಲಿನಲ್ಲಿ ಚುನಾವಣಾ ಖರ್ಚು ವೆಚ್ಚ ಮತ್ತು ಆದಾಯದ ಕುರಿತು ಘೋಷಿಸಿಕೊಂಡಿರುವುದನ್ನು ವಿಶ್ಲೇಷಣೆ ನಡೆಸಿರುವ ಸರ್ಕಾರೇತರ ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆ(ADR) ಎರಡು ವರ್ಷದ ಅವಧಿಯಲ್ಲಿ ಬಿಜೆಪಿ ಆದಾಯದಲ್ಲಿ ಶೇಕಡ 134.59ರಷ್ಟು ಹೆಚ್ಚಳವಾಗಿರುವುದನ್ನು ಗುರುತಿಸಿದೆ. 2018-19ರಲ್ಲಿ ಬಿಜೆಪಿಗೆ 2410.08 ಕೋಟಿ ರೂಪಾಯಿ ಆದಾಯ ಬಂದಿದ್ದು ಅದು ಆರು ರಾಷ್ಟ್ರೀಯ ಪಕ್ಷಗಳಿಗಿಂತ 65.16ರಷ್ಟು ಹೆಚ್ಚಾಗಿದೆ.

2018-19ರಲ್ಲಿ 2410 ಕೋಟಿ ಆದಾಯ ಬಂದಿದೆ ಎಂದು ಬಿಜೆಪಿ ಘೋಷಿಸಿಕೊಂಡಿದೆ. ಇದರಲ್ಲಿ ಚುನಾವಣೆಗಾಗಿ ಒಟ್ಟು ಆದಾಯದಲ್ಲಿ ಶೇ. 41.714ಷ್ಟು ಅಂದರೆ 1005.33 ಕೋಟಿ ವೆಚ್ಚ ಮಾಡಿದೆ ಎಂದು ಎಡಿಆರ್ ವಿಶ್ಲೇಷಣೆ ಮಾಡಿದೆ ಎಂದು ನ್ಯಾಷನಲ್ ಹೆರಾಲ್ಡ್ ವೆಬ್ ಸೈಟ್ ವರದಿ ಮಾಡಿದೆ.

ಇದೇ ಅವಧಿಯಲ್ಲಿ 918.03 ಕೋಟಿ ಆದಾಯ ಬಂದಿದೆ ಎಂದು ಕಾಂಗ್ರೆಸ್ ಘೋಷಿಸಿಕೊಂಡಿದ್ದು ಈ ಆದಾಯದಲ್ಲಿ ಶೇ 51.19ರಷ್ಟು ಅಂದರೆ 469.92 ಕೋಟಿ ರೂಪಾಯಿ ಚುನಾವಣೆಗಾಗಿ ವೆಚ್ಚ ಮಾಡಿದೆ. ಭಾರತೀಯ ಜನತಾ ಪಕ್ಷವನ್ನು ಬಿಟ್ಟರೆ ಆದಾಯ ಸಂಗ್ರಹದಲ್ಲಿ ಕಾಂಗ್ರೆಸ್ ಎರಡನೇ ಸ್ಥಾನ ಪಡೆದಿದೆ. ಅದಕ್ಕೆ 2018-19ರ ಅವಧಿಯಲ್ಲಿ ಎಲ್ಲಾ ಆರು ರಾಜಕೀಯ ಪಕ್ಷಗಳ ಒಟ್ಟು ಆದಾಯದ ಶೇ24.82ರಷ್ಟು ಆದಾಯ ಬಂದಿದೆ ಎಂದು ಅಂಕಿಅಂಶಗಳು ದೃಡಪಡಿಸಿವೆ.

ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಸಿಪಿಎಂ, ಬಿಎಸ್.ಪಿ, ಟಿಎಂಸಿ ಮತ್ತು ಸಿಪಿಐ ದೇಶಾದ್ಯಂತ ಸಂಗ್ರಹಿಸಿದ ಒಟ್ಟು ಆದಾಯ 3698.66 ಕೋಟಿ ರೂಪಾಯಿ ಎಂದು ಘೋಷಿಸಲಾಗಿದೆ.

2017-18 ಮತ್ತು 2018-19ರ ನಡುವೆ ಬಿಜೆಪಿ ಆದಾಯ 134.59ರಷ್ಟು ಹೆಚ್ಚಳವಾಗಿದೆ. ಅಂದರೆ 1382.74ಕೋಟಿ ರೂ ಏರಿದೆ. 2017-18ರ ಅವಧಿಯಲ್ಲಿ 1,027.34 ಕೋಟಿ ರೂಪಾಯಿ ಇದ್ದುದು 2018-19ರಲ್ಲಿ 2410.08 ಕೋಟಿಗೆ ಏರಿದೆ. 2018-19ನೇ ಸಾಲಿನಲ್ಲಿ ಸ್ವಯಂ ಪ್ರೇರಿತ ದೇಣಿಗೆ 2354.02 ಕೋಟಿ ಎಂದು ಬಿಜೆಪಿ ಘೋಷಿಸಿಕೊಂಡಿದೆ. ಈ ಅವಧಿಯಲ್ಲಿ ಅದರ ಒಟ್ಟು ಆದಾಯ 97.67ರಷ್ಟು ಆಗಿದೆ.

ಕಾಂಗ್ರೆಸ್ ಪಕ್ಷಕ್ಕೆ 551.55 ಕೋಟಿ ರೂಪಾಯಿ ಗ್ರಾಂಟ್/ ದಾನ/ ದೇಣಿಗೆಯಿಂದ ಬಂದಿದೆ ಎಂದು ಘೋಷಿಸಿಕೊಂಡಿದೆ. ಇದು 2018-19ರ ಅವಧಿಯಲ್ಲಿ ಪಕ್ಷಕ್ಕೆ ಒಟ್ಟು ಆದಾಯದ ಶೇ.60.08ರಷ್ಟು ಅತಿಹೆಚ್ಚು ಆದಾಯ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.

ಬಿಜೆಪಿ ಸಾಮಾನ್ಯ ಪ್ರಚಾರಕ್ಕಾಗಿ 792.39 ಕೋಟಿ ವೆಚ್ಚ ಮಾಡಿದ್ದರೆ, ಆಡಳಿತಾತ್ಮಕ ವೆಚ್ಚವಾಗಿ 178.35 ಕೋಟಿ ವೆಚ್ಚ ಮಾಡಿದೆ ಎಂದು ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆ ವಿಶ್ಲೇಷಿಸಿದೆ .2018-19ರಲ್ಲಿ ಎಲ್ಲಾ ಆರು ರಾಷ್ಟ್ರೀಯಮಟ್ಟದ ರಾಜಕೀಯ ಪಕ್ಷಗಳಿಗೆ ಚುನಾವಣಾ ಬಾಂಡ್ ಗಳ ಮೂಲಕ ಅತಿ ಹೆಚ್ಚು ದೇಣಿಗೆ ಬಂದಿದೆ. ಶೇ.52ರಷ್ಟಕ್ಕೂ ಹೆಚ್ಚಿನ ಆದಾಯ ಚುನಾವಣಾ ಬಾಂಡ್ ಗಳ ಮೂಲಕ ದಾನವಾಗಿ ರಾಜಕೀಯ ಪಕ್ಷಗಳಿಗೆ 1931.43 ಕೋಟಿ ರೂ ಹಣ ಬಂದಿದೆ. ಆದರೆ ಹಣ ನೀಡಿದ ದಾನಿಗಳ ಹೆಸರನ್ನು ಸಾರ್ವಜನಿಕರ ಮಾಹಿತಿಗೆ ಪ್ರಕಟಿಸಿಲ್ಲ.

2018-19ರಲ್ಲಿ ಚುನಾವಣಾ ಬಾಂಡ್ ಗಳ ಮೌಲ್ಯ 2539.58 ಕೋಟಿ ರೂ ಆಗಿದ್ದು ಬಾಂಡ್ ಗಳ ಮೂಲಕ ಬಿಜೆಪಿ, ಕಾಂಗ್ರೆಸ್ ಸಿಪಿಎಂ, ಬಿಎಸ್.ಪಿ, ತೃಣಮೂಲ ಕಾಂಗ್ರೆಸ್, ಸಿಪಿಐ ಪಕ್ಷಗಳು ಶೇಕಡ 76ರಷ್ಟು ಹಣ ಸ್ವೀಕರಿಸಿವೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು 2018-19ರಲ್ಲಿ ಚುನಾವಣಾ ಬಾಂಡ್ ಗಳ ಮೂಲಕ ಹಣವನ್ನು ಪಡೆದಿದ್ದು 2422.02 ಕೋಟಿ ಆಗಿದೆ. ಈ ಅವಧಿಯಲ್ಲಿ ಆರು ರಾಜಕೀಯ ಪಕ್ಷಗಳ ಅದಾಯದ 2/3ರಷ್ಟು ಆದಾಯ ಬಿಜೆಪಿಗೆ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....