Homeಮುಖಪುಟ2018-19ರಲ್ಲಿ ಬಿಜೆಪಿ ಆದಾಯದಲ್ಲಿ 135ರಷ್ಟು ಏರಿಕೆ : ಚುನಾವಣಾ ಬಾಂಡ್‌ಗಳ ಮೂಲಕವೇ ಹೆಚ್ಚು..

2018-19ರಲ್ಲಿ ಬಿಜೆಪಿ ಆದಾಯದಲ್ಲಿ 135ರಷ್ಟು ಏರಿಕೆ : ಚುನಾವಣಾ ಬಾಂಡ್‌ಗಳ ಮೂಲಕವೇ ಹೆಚ್ಚು..

- Advertisement -
- Advertisement -

ದೇಶದ ಆರು ರಾಷ್ಟ್ರೀಯ ಪಕ್ಷಗಳು 2018-19ನೇ ಸಾಲಿನಲ್ಲಿ ಚುನಾವಣಾ ಖರ್ಚು ವೆಚ್ಚ ಮತ್ತು ಆದಾಯದ ಕುರಿತು ಘೋಷಿಸಿಕೊಂಡಿರುವುದನ್ನು ವಿಶ್ಲೇಷಣೆ ನಡೆಸಿರುವ ಸರ್ಕಾರೇತರ ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆ(ADR) ಎರಡು ವರ್ಷದ ಅವಧಿಯಲ್ಲಿ ಬಿಜೆಪಿ ಆದಾಯದಲ್ಲಿ ಶೇಕಡ 134.59ರಷ್ಟು ಹೆಚ್ಚಳವಾಗಿರುವುದನ್ನು ಗುರುತಿಸಿದೆ. 2018-19ರಲ್ಲಿ ಬಿಜೆಪಿಗೆ 2410.08 ಕೋಟಿ ರೂಪಾಯಿ ಆದಾಯ ಬಂದಿದ್ದು ಅದು ಆರು ರಾಷ್ಟ್ರೀಯ ಪಕ್ಷಗಳಿಗಿಂತ 65.16ರಷ್ಟು ಹೆಚ್ಚಾಗಿದೆ.

2018-19ರಲ್ಲಿ 2410 ಕೋಟಿ ಆದಾಯ ಬಂದಿದೆ ಎಂದು ಬಿಜೆಪಿ ಘೋಷಿಸಿಕೊಂಡಿದೆ. ಇದರಲ್ಲಿ ಚುನಾವಣೆಗಾಗಿ ಒಟ್ಟು ಆದಾಯದಲ್ಲಿ ಶೇ. 41.714ಷ್ಟು ಅಂದರೆ 1005.33 ಕೋಟಿ ವೆಚ್ಚ ಮಾಡಿದೆ ಎಂದು ಎಡಿಆರ್ ವಿಶ್ಲೇಷಣೆ ಮಾಡಿದೆ ಎಂದು ನ್ಯಾಷನಲ್ ಹೆರಾಲ್ಡ್ ವೆಬ್ ಸೈಟ್ ವರದಿ ಮಾಡಿದೆ.

ಇದೇ ಅವಧಿಯಲ್ಲಿ 918.03 ಕೋಟಿ ಆದಾಯ ಬಂದಿದೆ ಎಂದು ಕಾಂಗ್ರೆಸ್ ಘೋಷಿಸಿಕೊಂಡಿದ್ದು ಈ ಆದಾಯದಲ್ಲಿ ಶೇ 51.19ರಷ್ಟು ಅಂದರೆ 469.92 ಕೋಟಿ ರೂಪಾಯಿ ಚುನಾವಣೆಗಾಗಿ ವೆಚ್ಚ ಮಾಡಿದೆ. ಭಾರತೀಯ ಜನತಾ ಪಕ್ಷವನ್ನು ಬಿಟ್ಟರೆ ಆದಾಯ ಸಂಗ್ರಹದಲ್ಲಿ ಕಾಂಗ್ರೆಸ್ ಎರಡನೇ ಸ್ಥಾನ ಪಡೆದಿದೆ. ಅದಕ್ಕೆ 2018-19ರ ಅವಧಿಯಲ್ಲಿ ಎಲ್ಲಾ ಆರು ರಾಜಕೀಯ ಪಕ್ಷಗಳ ಒಟ್ಟು ಆದಾಯದ ಶೇ24.82ರಷ್ಟು ಆದಾಯ ಬಂದಿದೆ ಎಂದು ಅಂಕಿಅಂಶಗಳು ದೃಡಪಡಿಸಿವೆ.

ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಸಿಪಿಎಂ, ಬಿಎಸ್.ಪಿ, ಟಿಎಂಸಿ ಮತ್ತು ಸಿಪಿಐ ದೇಶಾದ್ಯಂತ ಸಂಗ್ರಹಿಸಿದ ಒಟ್ಟು ಆದಾಯ 3698.66 ಕೋಟಿ ರೂಪಾಯಿ ಎಂದು ಘೋಷಿಸಲಾಗಿದೆ.

2017-18 ಮತ್ತು 2018-19ರ ನಡುವೆ ಬಿಜೆಪಿ ಆದಾಯ 134.59ರಷ್ಟು ಹೆಚ್ಚಳವಾಗಿದೆ. ಅಂದರೆ 1382.74ಕೋಟಿ ರೂ ಏರಿದೆ. 2017-18ರ ಅವಧಿಯಲ್ಲಿ 1,027.34 ಕೋಟಿ ರೂಪಾಯಿ ಇದ್ದುದು 2018-19ರಲ್ಲಿ 2410.08 ಕೋಟಿಗೆ ಏರಿದೆ. 2018-19ನೇ ಸಾಲಿನಲ್ಲಿ ಸ್ವಯಂ ಪ್ರೇರಿತ ದೇಣಿಗೆ 2354.02 ಕೋಟಿ ಎಂದು ಬಿಜೆಪಿ ಘೋಷಿಸಿಕೊಂಡಿದೆ. ಈ ಅವಧಿಯಲ್ಲಿ ಅದರ ಒಟ್ಟು ಆದಾಯ 97.67ರಷ್ಟು ಆಗಿದೆ.

ಕಾಂಗ್ರೆಸ್ ಪಕ್ಷಕ್ಕೆ 551.55 ಕೋಟಿ ರೂಪಾಯಿ ಗ್ರಾಂಟ್/ ದಾನ/ ದೇಣಿಗೆಯಿಂದ ಬಂದಿದೆ ಎಂದು ಘೋಷಿಸಿಕೊಂಡಿದೆ. ಇದು 2018-19ರ ಅವಧಿಯಲ್ಲಿ ಪಕ್ಷಕ್ಕೆ ಒಟ್ಟು ಆದಾಯದ ಶೇ.60.08ರಷ್ಟು ಅತಿಹೆಚ್ಚು ಆದಾಯ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.

ಬಿಜೆಪಿ ಸಾಮಾನ್ಯ ಪ್ರಚಾರಕ್ಕಾಗಿ 792.39 ಕೋಟಿ ವೆಚ್ಚ ಮಾಡಿದ್ದರೆ, ಆಡಳಿತಾತ್ಮಕ ವೆಚ್ಚವಾಗಿ 178.35 ಕೋಟಿ ವೆಚ್ಚ ಮಾಡಿದೆ ಎಂದು ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆ ವಿಶ್ಲೇಷಿಸಿದೆ .2018-19ರಲ್ಲಿ ಎಲ್ಲಾ ಆರು ರಾಷ್ಟ್ರೀಯಮಟ್ಟದ ರಾಜಕೀಯ ಪಕ್ಷಗಳಿಗೆ ಚುನಾವಣಾ ಬಾಂಡ್ ಗಳ ಮೂಲಕ ಅತಿ ಹೆಚ್ಚು ದೇಣಿಗೆ ಬಂದಿದೆ. ಶೇ.52ರಷ್ಟಕ್ಕೂ ಹೆಚ್ಚಿನ ಆದಾಯ ಚುನಾವಣಾ ಬಾಂಡ್ ಗಳ ಮೂಲಕ ದಾನವಾಗಿ ರಾಜಕೀಯ ಪಕ್ಷಗಳಿಗೆ 1931.43 ಕೋಟಿ ರೂ ಹಣ ಬಂದಿದೆ. ಆದರೆ ಹಣ ನೀಡಿದ ದಾನಿಗಳ ಹೆಸರನ್ನು ಸಾರ್ವಜನಿಕರ ಮಾಹಿತಿಗೆ ಪ್ರಕಟಿಸಿಲ್ಲ.

2018-19ರಲ್ಲಿ ಚುನಾವಣಾ ಬಾಂಡ್ ಗಳ ಮೌಲ್ಯ 2539.58 ಕೋಟಿ ರೂ ಆಗಿದ್ದು ಬಾಂಡ್ ಗಳ ಮೂಲಕ ಬಿಜೆಪಿ, ಕಾಂಗ್ರೆಸ್ ಸಿಪಿಎಂ, ಬಿಎಸ್.ಪಿ, ತೃಣಮೂಲ ಕಾಂಗ್ರೆಸ್, ಸಿಪಿಐ ಪಕ್ಷಗಳು ಶೇಕಡ 76ರಷ್ಟು ಹಣ ಸ್ವೀಕರಿಸಿವೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು 2018-19ರಲ್ಲಿ ಚುನಾವಣಾ ಬಾಂಡ್ ಗಳ ಮೂಲಕ ಹಣವನ್ನು ಪಡೆದಿದ್ದು 2422.02 ಕೋಟಿ ಆಗಿದೆ. ಈ ಅವಧಿಯಲ್ಲಿ ಆರು ರಾಜಕೀಯ ಪಕ್ಷಗಳ ಅದಾಯದ 2/3ರಷ್ಟು ಆದಾಯ ಬಿಜೆಪಿಗೆ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...