Homeಮುಖಪುಟ2018-19ರಲ್ಲಿ ಬಿಜೆಪಿ ಆದಾಯದಲ್ಲಿ 135ರಷ್ಟು ಏರಿಕೆ : ಚುನಾವಣಾ ಬಾಂಡ್‌ಗಳ ಮೂಲಕವೇ ಹೆಚ್ಚು..

2018-19ರಲ್ಲಿ ಬಿಜೆಪಿ ಆದಾಯದಲ್ಲಿ 135ರಷ್ಟು ಏರಿಕೆ : ಚುನಾವಣಾ ಬಾಂಡ್‌ಗಳ ಮೂಲಕವೇ ಹೆಚ್ಚು..

- Advertisement -
- Advertisement -

ದೇಶದ ಆರು ರಾಷ್ಟ್ರೀಯ ಪಕ್ಷಗಳು 2018-19ನೇ ಸಾಲಿನಲ್ಲಿ ಚುನಾವಣಾ ಖರ್ಚು ವೆಚ್ಚ ಮತ್ತು ಆದಾಯದ ಕುರಿತು ಘೋಷಿಸಿಕೊಂಡಿರುವುದನ್ನು ವಿಶ್ಲೇಷಣೆ ನಡೆಸಿರುವ ಸರ್ಕಾರೇತರ ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆ(ADR) ಎರಡು ವರ್ಷದ ಅವಧಿಯಲ್ಲಿ ಬಿಜೆಪಿ ಆದಾಯದಲ್ಲಿ ಶೇಕಡ 134.59ರಷ್ಟು ಹೆಚ್ಚಳವಾಗಿರುವುದನ್ನು ಗುರುತಿಸಿದೆ. 2018-19ರಲ್ಲಿ ಬಿಜೆಪಿಗೆ 2410.08 ಕೋಟಿ ರೂಪಾಯಿ ಆದಾಯ ಬಂದಿದ್ದು ಅದು ಆರು ರಾಷ್ಟ್ರೀಯ ಪಕ್ಷಗಳಿಗಿಂತ 65.16ರಷ್ಟು ಹೆಚ್ಚಾಗಿದೆ.

2018-19ರಲ್ಲಿ 2410 ಕೋಟಿ ಆದಾಯ ಬಂದಿದೆ ಎಂದು ಬಿಜೆಪಿ ಘೋಷಿಸಿಕೊಂಡಿದೆ. ಇದರಲ್ಲಿ ಚುನಾವಣೆಗಾಗಿ ಒಟ್ಟು ಆದಾಯದಲ್ಲಿ ಶೇ. 41.714ಷ್ಟು ಅಂದರೆ 1005.33 ಕೋಟಿ ವೆಚ್ಚ ಮಾಡಿದೆ ಎಂದು ಎಡಿಆರ್ ವಿಶ್ಲೇಷಣೆ ಮಾಡಿದೆ ಎಂದು ನ್ಯಾಷನಲ್ ಹೆರಾಲ್ಡ್ ವೆಬ್ ಸೈಟ್ ವರದಿ ಮಾಡಿದೆ.

ಇದೇ ಅವಧಿಯಲ್ಲಿ 918.03 ಕೋಟಿ ಆದಾಯ ಬಂದಿದೆ ಎಂದು ಕಾಂಗ್ರೆಸ್ ಘೋಷಿಸಿಕೊಂಡಿದ್ದು ಈ ಆದಾಯದಲ್ಲಿ ಶೇ 51.19ರಷ್ಟು ಅಂದರೆ 469.92 ಕೋಟಿ ರೂಪಾಯಿ ಚುನಾವಣೆಗಾಗಿ ವೆಚ್ಚ ಮಾಡಿದೆ. ಭಾರತೀಯ ಜನತಾ ಪಕ್ಷವನ್ನು ಬಿಟ್ಟರೆ ಆದಾಯ ಸಂಗ್ರಹದಲ್ಲಿ ಕಾಂಗ್ರೆಸ್ ಎರಡನೇ ಸ್ಥಾನ ಪಡೆದಿದೆ. ಅದಕ್ಕೆ 2018-19ರ ಅವಧಿಯಲ್ಲಿ ಎಲ್ಲಾ ಆರು ರಾಜಕೀಯ ಪಕ್ಷಗಳ ಒಟ್ಟು ಆದಾಯದ ಶೇ24.82ರಷ್ಟು ಆದಾಯ ಬಂದಿದೆ ಎಂದು ಅಂಕಿಅಂಶಗಳು ದೃಡಪಡಿಸಿವೆ.

ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಸಿಪಿಎಂ, ಬಿಎಸ್.ಪಿ, ಟಿಎಂಸಿ ಮತ್ತು ಸಿಪಿಐ ದೇಶಾದ್ಯಂತ ಸಂಗ್ರಹಿಸಿದ ಒಟ್ಟು ಆದಾಯ 3698.66 ಕೋಟಿ ರೂಪಾಯಿ ಎಂದು ಘೋಷಿಸಲಾಗಿದೆ.

2017-18 ಮತ್ತು 2018-19ರ ನಡುವೆ ಬಿಜೆಪಿ ಆದಾಯ 134.59ರಷ್ಟು ಹೆಚ್ಚಳವಾಗಿದೆ. ಅಂದರೆ 1382.74ಕೋಟಿ ರೂ ಏರಿದೆ. 2017-18ರ ಅವಧಿಯಲ್ಲಿ 1,027.34 ಕೋಟಿ ರೂಪಾಯಿ ಇದ್ದುದು 2018-19ರಲ್ಲಿ 2410.08 ಕೋಟಿಗೆ ಏರಿದೆ. 2018-19ನೇ ಸಾಲಿನಲ್ಲಿ ಸ್ವಯಂ ಪ್ರೇರಿತ ದೇಣಿಗೆ 2354.02 ಕೋಟಿ ಎಂದು ಬಿಜೆಪಿ ಘೋಷಿಸಿಕೊಂಡಿದೆ. ಈ ಅವಧಿಯಲ್ಲಿ ಅದರ ಒಟ್ಟು ಆದಾಯ 97.67ರಷ್ಟು ಆಗಿದೆ.

ಕಾಂಗ್ರೆಸ್ ಪಕ್ಷಕ್ಕೆ 551.55 ಕೋಟಿ ರೂಪಾಯಿ ಗ್ರಾಂಟ್/ ದಾನ/ ದೇಣಿಗೆಯಿಂದ ಬಂದಿದೆ ಎಂದು ಘೋಷಿಸಿಕೊಂಡಿದೆ. ಇದು 2018-19ರ ಅವಧಿಯಲ್ಲಿ ಪಕ್ಷಕ್ಕೆ ಒಟ್ಟು ಆದಾಯದ ಶೇ.60.08ರಷ್ಟು ಅತಿಹೆಚ್ಚು ಆದಾಯ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.

ಬಿಜೆಪಿ ಸಾಮಾನ್ಯ ಪ್ರಚಾರಕ್ಕಾಗಿ 792.39 ಕೋಟಿ ವೆಚ್ಚ ಮಾಡಿದ್ದರೆ, ಆಡಳಿತಾತ್ಮಕ ವೆಚ್ಚವಾಗಿ 178.35 ಕೋಟಿ ವೆಚ್ಚ ಮಾಡಿದೆ ಎಂದು ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆ ವಿಶ್ಲೇಷಿಸಿದೆ .2018-19ರಲ್ಲಿ ಎಲ್ಲಾ ಆರು ರಾಷ್ಟ್ರೀಯಮಟ್ಟದ ರಾಜಕೀಯ ಪಕ್ಷಗಳಿಗೆ ಚುನಾವಣಾ ಬಾಂಡ್ ಗಳ ಮೂಲಕ ಅತಿ ಹೆಚ್ಚು ದೇಣಿಗೆ ಬಂದಿದೆ. ಶೇ.52ರಷ್ಟಕ್ಕೂ ಹೆಚ್ಚಿನ ಆದಾಯ ಚುನಾವಣಾ ಬಾಂಡ್ ಗಳ ಮೂಲಕ ದಾನವಾಗಿ ರಾಜಕೀಯ ಪಕ್ಷಗಳಿಗೆ 1931.43 ಕೋಟಿ ರೂ ಹಣ ಬಂದಿದೆ. ಆದರೆ ಹಣ ನೀಡಿದ ದಾನಿಗಳ ಹೆಸರನ್ನು ಸಾರ್ವಜನಿಕರ ಮಾಹಿತಿಗೆ ಪ್ರಕಟಿಸಿಲ್ಲ.

2018-19ರಲ್ಲಿ ಚುನಾವಣಾ ಬಾಂಡ್ ಗಳ ಮೌಲ್ಯ 2539.58 ಕೋಟಿ ರೂ ಆಗಿದ್ದು ಬಾಂಡ್ ಗಳ ಮೂಲಕ ಬಿಜೆಪಿ, ಕಾಂಗ್ರೆಸ್ ಸಿಪಿಎಂ, ಬಿಎಸ್.ಪಿ, ತೃಣಮೂಲ ಕಾಂಗ್ರೆಸ್, ಸಿಪಿಐ ಪಕ್ಷಗಳು ಶೇಕಡ 76ರಷ್ಟು ಹಣ ಸ್ವೀಕರಿಸಿವೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು 2018-19ರಲ್ಲಿ ಚುನಾವಣಾ ಬಾಂಡ್ ಗಳ ಮೂಲಕ ಹಣವನ್ನು ಪಡೆದಿದ್ದು 2422.02 ಕೋಟಿ ಆಗಿದೆ. ಈ ಅವಧಿಯಲ್ಲಿ ಆರು ರಾಜಕೀಯ ಪಕ್ಷಗಳ ಅದಾಯದ 2/3ರಷ್ಟು ಆದಾಯ ಬಿಜೆಪಿಗೆ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...