Homeಮುಖಪುಟ2018-19ರಲ್ಲಿ ಬಿಜೆಪಿ ಆದಾಯದಲ್ಲಿ 135ರಷ್ಟು ಏರಿಕೆ : ಚುನಾವಣಾ ಬಾಂಡ್‌ಗಳ ಮೂಲಕವೇ ಹೆಚ್ಚು..

2018-19ರಲ್ಲಿ ಬಿಜೆಪಿ ಆದಾಯದಲ್ಲಿ 135ರಷ್ಟು ಏರಿಕೆ : ಚುನಾವಣಾ ಬಾಂಡ್‌ಗಳ ಮೂಲಕವೇ ಹೆಚ್ಚು..

- Advertisement -
- Advertisement -

ದೇಶದ ಆರು ರಾಷ್ಟ್ರೀಯ ಪಕ್ಷಗಳು 2018-19ನೇ ಸಾಲಿನಲ್ಲಿ ಚುನಾವಣಾ ಖರ್ಚು ವೆಚ್ಚ ಮತ್ತು ಆದಾಯದ ಕುರಿತು ಘೋಷಿಸಿಕೊಂಡಿರುವುದನ್ನು ವಿಶ್ಲೇಷಣೆ ನಡೆಸಿರುವ ಸರ್ಕಾರೇತರ ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆ(ADR) ಎರಡು ವರ್ಷದ ಅವಧಿಯಲ್ಲಿ ಬಿಜೆಪಿ ಆದಾಯದಲ್ಲಿ ಶೇಕಡ 134.59ರಷ್ಟು ಹೆಚ್ಚಳವಾಗಿರುವುದನ್ನು ಗುರುತಿಸಿದೆ. 2018-19ರಲ್ಲಿ ಬಿಜೆಪಿಗೆ 2410.08 ಕೋಟಿ ರೂಪಾಯಿ ಆದಾಯ ಬಂದಿದ್ದು ಅದು ಆರು ರಾಷ್ಟ್ರೀಯ ಪಕ್ಷಗಳಿಗಿಂತ 65.16ರಷ್ಟು ಹೆಚ್ಚಾಗಿದೆ.

2018-19ರಲ್ಲಿ 2410 ಕೋಟಿ ಆದಾಯ ಬಂದಿದೆ ಎಂದು ಬಿಜೆಪಿ ಘೋಷಿಸಿಕೊಂಡಿದೆ. ಇದರಲ್ಲಿ ಚುನಾವಣೆಗಾಗಿ ಒಟ್ಟು ಆದಾಯದಲ್ಲಿ ಶೇ. 41.714ಷ್ಟು ಅಂದರೆ 1005.33 ಕೋಟಿ ವೆಚ್ಚ ಮಾಡಿದೆ ಎಂದು ಎಡಿಆರ್ ವಿಶ್ಲೇಷಣೆ ಮಾಡಿದೆ ಎಂದು ನ್ಯಾಷನಲ್ ಹೆರಾಲ್ಡ್ ವೆಬ್ ಸೈಟ್ ವರದಿ ಮಾಡಿದೆ.

ಇದೇ ಅವಧಿಯಲ್ಲಿ 918.03 ಕೋಟಿ ಆದಾಯ ಬಂದಿದೆ ಎಂದು ಕಾಂಗ್ರೆಸ್ ಘೋಷಿಸಿಕೊಂಡಿದ್ದು ಈ ಆದಾಯದಲ್ಲಿ ಶೇ 51.19ರಷ್ಟು ಅಂದರೆ 469.92 ಕೋಟಿ ರೂಪಾಯಿ ಚುನಾವಣೆಗಾಗಿ ವೆಚ್ಚ ಮಾಡಿದೆ. ಭಾರತೀಯ ಜನತಾ ಪಕ್ಷವನ್ನು ಬಿಟ್ಟರೆ ಆದಾಯ ಸಂಗ್ರಹದಲ್ಲಿ ಕಾಂಗ್ರೆಸ್ ಎರಡನೇ ಸ್ಥಾನ ಪಡೆದಿದೆ. ಅದಕ್ಕೆ 2018-19ರ ಅವಧಿಯಲ್ಲಿ ಎಲ್ಲಾ ಆರು ರಾಜಕೀಯ ಪಕ್ಷಗಳ ಒಟ್ಟು ಆದಾಯದ ಶೇ24.82ರಷ್ಟು ಆದಾಯ ಬಂದಿದೆ ಎಂದು ಅಂಕಿಅಂಶಗಳು ದೃಡಪಡಿಸಿವೆ.

ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಸಿಪಿಎಂ, ಬಿಎಸ್.ಪಿ, ಟಿಎಂಸಿ ಮತ್ತು ಸಿಪಿಐ ದೇಶಾದ್ಯಂತ ಸಂಗ್ರಹಿಸಿದ ಒಟ್ಟು ಆದಾಯ 3698.66 ಕೋಟಿ ರೂಪಾಯಿ ಎಂದು ಘೋಷಿಸಲಾಗಿದೆ.

2017-18 ಮತ್ತು 2018-19ರ ನಡುವೆ ಬಿಜೆಪಿ ಆದಾಯ 134.59ರಷ್ಟು ಹೆಚ್ಚಳವಾಗಿದೆ. ಅಂದರೆ 1382.74ಕೋಟಿ ರೂ ಏರಿದೆ. 2017-18ರ ಅವಧಿಯಲ್ಲಿ 1,027.34 ಕೋಟಿ ರೂಪಾಯಿ ಇದ್ದುದು 2018-19ರಲ್ಲಿ 2410.08 ಕೋಟಿಗೆ ಏರಿದೆ. 2018-19ನೇ ಸಾಲಿನಲ್ಲಿ ಸ್ವಯಂ ಪ್ರೇರಿತ ದೇಣಿಗೆ 2354.02 ಕೋಟಿ ಎಂದು ಬಿಜೆಪಿ ಘೋಷಿಸಿಕೊಂಡಿದೆ. ಈ ಅವಧಿಯಲ್ಲಿ ಅದರ ಒಟ್ಟು ಆದಾಯ 97.67ರಷ್ಟು ಆಗಿದೆ.

ಕಾಂಗ್ರೆಸ್ ಪಕ್ಷಕ್ಕೆ 551.55 ಕೋಟಿ ರೂಪಾಯಿ ಗ್ರಾಂಟ್/ ದಾನ/ ದೇಣಿಗೆಯಿಂದ ಬಂದಿದೆ ಎಂದು ಘೋಷಿಸಿಕೊಂಡಿದೆ. ಇದು 2018-19ರ ಅವಧಿಯಲ್ಲಿ ಪಕ್ಷಕ್ಕೆ ಒಟ್ಟು ಆದಾಯದ ಶೇ.60.08ರಷ್ಟು ಅತಿಹೆಚ್ಚು ಆದಾಯ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.

ಬಿಜೆಪಿ ಸಾಮಾನ್ಯ ಪ್ರಚಾರಕ್ಕಾಗಿ 792.39 ಕೋಟಿ ವೆಚ್ಚ ಮಾಡಿದ್ದರೆ, ಆಡಳಿತಾತ್ಮಕ ವೆಚ್ಚವಾಗಿ 178.35 ಕೋಟಿ ವೆಚ್ಚ ಮಾಡಿದೆ ಎಂದು ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆ ವಿಶ್ಲೇಷಿಸಿದೆ .2018-19ರಲ್ಲಿ ಎಲ್ಲಾ ಆರು ರಾಷ್ಟ್ರೀಯಮಟ್ಟದ ರಾಜಕೀಯ ಪಕ್ಷಗಳಿಗೆ ಚುನಾವಣಾ ಬಾಂಡ್ ಗಳ ಮೂಲಕ ಅತಿ ಹೆಚ್ಚು ದೇಣಿಗೆ ಬಂದಿದೆ. ಶೇ.52ರಷ್ಟಕ್ಕೂ ಹೆಚ್ಚಿನ ಆದಾಯ ಚುನಾವಣಾ ಬಾಂಡ್ ಗಳ ಮೂಲಕ ದಾನವಾಗಿ ರಾಜಕೀಯ ಪಕ್ಷಗಳಿಗೆ 1931.43 ಕೋಟಿ ರೂ ಹಣ ಬಂದಿದೆ. ಆದರೆ ಹಣ ನೀಡಿದ ದಾನಿಗಳ ಹೆಸರನ್ನು ಸಾರ್ವಜನಿಕರ ಮಾಹಿತಿಗೆ ಪ್ರಕಟಿಸಿಲ್ಲ.

2018-19ರಲ್ಲಿ ಚುನಾವಣಾ ಬಾಂಡ್ ಗಳ ಮೌಲ್ಯ 2539.58 ಕೋಟಿ ರೂ ಆಗಿದ್ದು ಬಾಂಡ್ ಗಳ ಮೂಲಕ ಬಿಜೆಪಿ, ಕಾಂಗ್ರೆಸ್ ಸಿಪಿಎಂ, ಬಿಎಸ್.ಪಿ, ತೃಣಮೂಲ ಕಾಂಗ್ರೆಸ್, ಸಿಪಿಐ ಪಕ್ಷಗಳು ಶೇಕಡ 76ರಷ್ಟು ಹಣ ಸ್ವೀಕರಿಸಿವೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು 2018-19ರಲ್ಲಿ ಚುನಾವಣಾ ಬಾಂಡ್ ಗಳ ಮೂಲಕ ಹಣವನ್ನು ಪಡೆದಿದ್ದು 2422.02 ಕೋಟಿ ಆಗಿದೆ. ಈ ಅವಧಿಯಲ್ಲಿ ಆರು ರಾಜಕೀಯ ಪಕ್ಷಗಳ ಅದಾಯದ 2/3ರಷ್ಟು ಆದಾಯ ಬಿಜೆಪಿಗೆ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...