Homeಮುಖಪುಟ2018-19ರಲ್ಲಿ ಬಿಜೆಪಿ ಆದಾಯದಲ್ಲಿ 135ರಷ್ಟು ಏರಿಕೆ : ಚುನಾವಣಾ ಬಾಂಡ್‌ಗಳ ಮೂಲಕವೇ ಹೆಚ್ಚು..

2018-19ರಲ್ಲಿ ಬಿಜೆಪಿ ಆದಾಯದಲ್ಲಿ 135ರಷ್ಟು ಏರಿಕೆ : ಚುನಾವಣಾ ಬಾಂಡ್‌ಗಳ ಮೂಲಕವೇ ಹೆಚ್ಚು..

- Advertisement -
- Advertisement -

ದೇಶದ ಆರು ರಾಷ್ಟ್ರೀಯ ಪಕ್ಷಗಳು 2018-19ನೇ ಸಾಲಿನಲ್ಲಿ ಚುನಾವಣಾ ಖರ್ಚು ವೆಚ್ಚ ಮತ್ತು ಆದಾಯದ ಕುರಿತು ಘೋಷಿಸಿಕೊಂಡಿರುವುದನ್ನು ವಿಶ್ಲೇಷಣೆ ನಡೆಸಿರುವ ಸರ್ಕಾರೇತರ ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆ(ADR) ಎರಡು ವರ್ಷದ ಅವಧಿಯಲ್ಲಿ ಬಿಜೆಪಿ ಆದಾಯದಲ್ಲಿ ಶೇಕಡ 134.59ರಷ್ಟು ಹೆಚ್ಚಳವಾಗಿರುವುದನ್ನು ಗುರುತಿಸಿದೆ. 2018-19ರಲ್ಲಿ ಬಿಜೆಪಿಗೆ 2410.08 ಕೋಟಿ ರೂಪಾಯಿ ಆದಾಯ ಬಂದಿದ್ದು ಅದು ಆರು ರಾಷ್ಟ್ರೀಯ ಪಕ್ಷಗಳಿಗಿಂತ 65.16ರಷ್ಟು ಹೆಚ್ಚಾಗಿದೆ.

2018-19ರಲ್ಲಿ 2410 ಕೋಟಿ ಆದಾಯ ಬಂದಿದೆ ಎಂದು ಬಿಜೆಪಿ ಘೋಷಿಸಿಕೊಂಡಿದೆ. ಇದರಲ್ಲಿ ಚುನಾವಣೆಗಾಗಿ ಒಟ್ಟು ಆದಾಯದಲ್ಲಿ ಶೇ. 41.714ಷ್ಟು ಅಂದರೆ 1005.33 ಕೋಟಿ ವೆಚ್ಚ ಮಾಡಿದೆ ಎಂದು ಎಡಿಆರ್ ವಿಶ್ಲೇಷಣೆ ಮಾಡಿದೆ ಎಂದು ನ್ಯಾಷನಲ್ ಹೆರಾಲ್ಡ್ ವೆಬ್ ಸೈಟ್ ವರದಿ ಮಾಡಿದೆ.

ಇದೇ ಅವಧಿಯಲ್ಲಿ 918.03 ಕೋಟಿ ಆದಾಯ ಬಂದಿದೆ ಎಂದು ಕಾಂಗ್ರೆಸ್ ಘೋಷಿಸಿಕೊಂಡಿದ್ದು ಈ ಆದಾಯದಲ್ಲಿ ಶೇ 51.19ರಷ್ಟು ಅಂದರೆ 469.92 ಕೋಟಿ ರೂಪಾಯಿ ಚುನಾವಣೆಗಾಗಿ ವೆಚ್ಚ ಮಾಡಿದೆ. ಭಾರತೀಯ ಜನತಾ ಪಕ್ಷವನ್ನು ಬಿಟ್ಟರೆ ಆದಾಯ ಸಂಗ್ರಹದಲ್ಲಿ ಕಾಂಗ್ರೆಸ್ ಎರಡನೇ ಸ್ಥಾನ ಪಡೆದಿದೆ. ಅದಕ್ಕೆ 2018-19ರ ಅವಧಿಯಲ್ಲಿ ಎಲ್ಲಾ ಆರು ರಾಜಕೀಯ ಪಕ್ಷಗಳ ಒಟ್ಟು ಆದಾಯದ ಶೇ24.82ರಷ್ಟು ಆದಾಯ ಬಂದಿದೆ ಎಂದು ಅಂಕಿಅಂಶಗಳು ದೃಡಪಡಿಸಿವೆ.

ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಸಿಪಿಎಂ, ಬಿಎಸ್.ಪಿ, ಟಿಎಂಸಿ ಮತ್ತು ಸಿಪಿಐ ದೇಶಾದ್ಯಂತ ಸಂಗ್ರಹಿಸಿದ ಒಟ್ಟು ಆದಾಯ 3698.66 ಕೋಟಿ ರೂಪಾಯಿ ಎಂದು ಘೋಷಿಸಲಾಗಿದೆ.

2017-18 ಮತ್ತು 2018-19ರ ನಡುವೆ ಬಿಜೆಪಿ ಆದಾಯ 134.59ರಷ್ಟು ಹೆಚ್ಚಳವಾಗಿದೆ. ಅಂದರೆ 1382.74ಕೋಟಿ ರೂ ಏರಿದೆ. 2017-18ರ ಅವಧಿಯಲ್ಲಿ 1,027.34 ಕೋಟಿ ರೂಪಾಯಿ ಇದ್ದುದು 2018-19ರಲ್ಲಿ 2410.08 ಕೋಟಿಗೆ ಏರಿದೆ. 2018-19ನೇ ಸಾಲಿನಲ್ಲಿ ಸ್ವಯಂ ಪ್ರೇರಿತ ದೇಣಿಗೆ 2354.02 ಕೋಟಿ ಎಂದು ಬಿಜೆಪಿ ಘೋಷಿಸಿಕೊಂಡಿದೆ. ಈ ಅವಧಿಯಲ್ಲಿ ಅದರ ಒಟ್ಟು ಆದಾಯ 97.67ರಷ್ಟು ಆಗಿದೆ.

ಕಾಂಗ್ರೆಸ್ ಪಕ್ಷಕ್ಕೆ 551.55 ಕೋಟಿ ರೂಪಾಯಿ ಗ್ರಾಂಟ್/ ದಾನ/ ದೇಣಿಗೆಯಿಂದ ಬಂದಿದೆ ಎಂದು ಘೋಷಿಸಿಕೊಂಡಿದೆ. ಇದು 2018-19ರ ಅವಧಿಯಲ್ಲಿ ಪಕ್ಷಕ್ಕೆ ಒಟ್ಟು ಆದಾಯದ ಶೇ.60.08ರಷ್ಟು ಅತಿಹೆಚ್ಚು ಆದಾಯ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.

ಬಿಜೆಪಿ ಸಾಮಾನ್ಯ ಪ್ರಚಾರಕ್ಕಾಗಿ 792.39 ಕೋಟಿ ವೆಚ್ಚ ಮಾಡಿದ್ದರೆ, ಆಡಳಿತಾತ್ಮಕ ವೆಚ್ಚವಾಗಿ 178.35 ಕೋಟಿ ವೆಚ್ಚ ಮಾಡಿದೆ ಎಂದು ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆ ವಿಶ್ಲೇಷಿಸಿದೆ .2018-19ರಲ್ಲಿ ಎಲ್ಲಾ ಆರು ರಾಷ್ಟ್ರೀಯಮಟ್ಟದ ರಾಜಕೀಯ ಪಕ್ಷಗಳಿಗೆ ಚುನಾವಣಾ ಬಾಂಡ್ ಗಳ ಮೂಲಕ ಅತಿ ಹೆಚ್ಚು ದೇಣಿಗೆ ಬಂದಿದೆ. ಶೇ.52ರಷ್ಟಕ್ಕೂ ಹೆಚ್ಚಿನ ಆದಾಯ ಚುನಾವಣಾ ಬಾಂಡ್ ಗಳ ಮೂಲಕ ದಾನವಾಗಿ ರಾಜಕೀಯ ಪಕ್ಷಗಳಿಗೆ 1931.43 ಕೋಟಿ ರೂ ಹಣ ಬಂದಿದೆ. ಆದರೆ ಹಣ ನೀಡಿದ ದಾನಿಗಳ ಹೆಸರನ್ನು ಸಾರ್ವಜನಿಕರ ಮಾಹಿತಿಗೆ ಪ್ರಕಟಿಸಿಲ್ಲ.

2018-19ರಲ್ಲಿ ಚುನಾವಣಾ ಬಾಂಡ್ ಗಳ ಮೌಲ್ಯ 2539.58 ಕೋಟಿ ರೂ ಆಗಿದ್ದು ಬಾಂಡ್ ಗಳ ಮೂಲಕ ಬಿಜೆಪಿ, ಕಾಂಗ್ರೆಸ್ ಸಿಪಿಎಂ, ಬಿಎಸ್.ಪಿ, ತೃಣಮೂಲ ಕಾಂಗ್ರೆಸ್, ಸಿಪಿಐ ಪಕ್ಷಗಳು ಶೇಕಡ 76ರಷ್ಟು ಹಣ ಸ್ವೀಕರಿಸಿವೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು 2018-19ರಲ್ಲಿ ಚುನಾವಣಾ ಬಾಂಡ್ ಗಳ ಮೂಲಕ ಹಣವನ್ನು ಪಡೆದಿದ್ದು 2422.02 ಕೋಟಿ ಆಗಿದೆ. ಈ ಅವಧಿಯಲ್ಲಿ ಆರು ರಾಜಕೀಯ ಪಕ್ಷಗಳ ಅದಾಯದ 2/3ರಷ್ಟು ಆದಾಯ ಬಿಜೆಪಿಗೆ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...