Homeಮುಖಪುಟ2018-19ರಲ್ಲಿ ಬಿಜೆಪಿ ಆದಾಯದಲ್ಲಿ 135ರಷ್ಟು ಏರಿಕೆ : ಚುನಾವಣಾ ಬಾಂಡ್‌ಗಳ ಮೂಲಕವೇ ಹೆಚ್ಚು..

2018-19ರಲ್ಲಿ ಬಿಜೆಪಿ ಆದಾಯದಲ್ಲಿ 135ರಷ್ಟು ಏರಿಕೆ : ಚುನಾವಣಾ ಬಾಂಡ್‌ಗಳ ಮೂಲಕವೇ ಹೆಚ್ಚು..

- Advertisement -
- Advertisement -

ದೇಶದ ಆರು ರಾಷ್ಟ್ರೀಯ ಪಕ್ಷಗಳು 2018-19ನೇ ಸಾಲಿನಲ್ಲಿ ಚುನಾವಣಾ ಖರ್ಚು ವೆಚ್ಚ ಮತ್ತು ಆದಾಯದ ಕುರಿತು ಘೋಷಿಸಿಕೊಂಡಿರುವುದನ್ನು ವಿಶ್ಲೇಷಣೆ ನಡೆಸಿರುವ ಸರ್ಕಾರೇತರ ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆ(ADR) ಎರಡು ವರ್ಷದ ಅವಧಿಯಲ್ಲಿ ಬಿಜೆಪಿ ಆದಾಯದಲ್ಲಿ ಶೇಕಡ 134.59ರಷ್ಟು ಹೆಚ್ಚಳವಾಗಿರುವುದನ್ನು ಗುರುತಿಸಿದೆ. 2018-19ರಲ್ಲಿ ಬಿಜೆಪಿಗೆ 2410.08 ಕೋಟಿ ರೂಪಾಯಿ ಆದಾಯ ಬಂದಿದ್ದು ಅದು ಆರು ರಾಷ್ಟ್ರೀಯ ಪಕ್ಷಗಳಿಗಿಂತ 65.16ರಷ್ಟು ಹೆಚ್ಚಾಗಿದೆ.

2018-19ರಲ್ಲಿ 2410 ಕೋಟಿ ಆದಾಯ ಬಂದಿದೆ ಎಂದು ಬಿಜೆಪಿ ಘೋಷಿಸಿಕೊಂಡಿದೆ. ಇದರಲ್ಲಿ ಚುನಾವಣೆಗಾಗಿ ಒಟ್ಟು ಆದಾಯದಲ್ಲಿ ಶೇ. 41.714ಷ್ಟು ಅಂದರೆ 1005.33 ಕೋಟಿ ವೆಚ್ಚ ಮಾಡಿದೆ ಎಂದು ಎಡಿಆರ್ ವಿಶ್ಲೇಷಣೆ ಮಾಡಿದೆ ಎಂದು ನ್ಯಾಷನಲ್ ಹೆರಾಲ್ಡ್ ವೆಬ್ ಸೈಟ್ ವರದಿ ಮಾಡಿದೆ.

ಇದೇ ಅವಧಿಯಲ್ಲಿ 918.03 ಕೋಟಿ ಆದಾಯ ಬಂದಿದೆ ಎಂದು ಕಾಂಗ್ರೆಸ್ ಘೋಷಿಸಿಕೊಂಡಿದ್ದು ಈ ಆದಾಯದಲ್ಲಿ ಶೇ 51.19ರಷ್ಟು ಅಂದರೆ 469.92 ಕೋಟಿ ರೂಪಾಯಿ ಚುನಾವಣೆಗಾಗಿ ವೆಚ್ಚ ಮಾಡಿದೆ. ಭಾರತೀಯ ಜನತಾ ಪಕ್ಷವನ್ನು ಬಿಟ್ಟರೆ ಆದಾಯ ಸಂಗ್ರಹದಲ್ಲಿ ಕಾಂಗ್ರೆಸ್ ಎರಡನೇ ಸ್ಥಾನ ಪಡೆದಿದೆ. ಅದಕ್ಕೆ 2018-19ರ ಅವಧಿಯಲ್ಲಿ ಎಲ್ಲಾ ಆರು ರಾಜಕೀಯ ಪಕ್ಷಗಳ ಒಟ್ಟು ಆದಾಯದ ಶೇ24.82ರಷ್ಟು ಆದಾಯ ಬಂದಿದೆ ಎಂದು ಅಂಕಿಅಂಶಗಳು ದೃಡಪಡಿಸಿವೆ.

ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಸಿಪಿಎಂ, ಬಿಎಸ್.ಪಿ, ಟಿಎಂಸಿ ಮತ್ತು ಸಿಪಿಐ ದೇಶಾದ್ಯಂತ ಸಂಗ್ರಹಿಸಿದ ಒಟ್ಟು ಆದಾಯ 3698.66 ಕೋಟಿ ರೂಪಾಯಿ ಎಂದು ಘೋಷಿಸಲಾಗಿದೆ.

2017-18 ಮತ್ತು 2018-19ರ ನಡುವೆ ಬಿಜೆಪಿ ಆದಾಯ 134.59ರಷ್ಟು ಹೆಚ್ಚಳವಾಗಿದೆ. ಅಂದರೆ 1382.74ಕೋಟಿ ರೂ ಏರಿದೆ. 2017-18ರ ಅವಧಿಯಲ್ಲಿ 1,027.34 ಕೋಟಿ ರೂಪಾಯಿ ಇದ್ದುದು 2018-19ರಲ್ಲಿ 2410.08 ಕೋಟಿಗೆ ಏರಿದೆ. 2018-19ನೇ ಸಾಲಿನಲ್ಲಿ ಸ್ವಯಂ ಪ್ರೇರಿತ ದೇಣಿಗೆ 2354.02 ಕೋಟಿ ಎಂದು ಬಿಜೆಪಿ ಘೋಷಿಸಿಕೊಂಡಿದೆ. ಈ ಅವಧಿಯಲ್ಲಿ ಅದರ ಒಟ್ಟು ಆದಾಯ 97.67ರಷ್ಟು ಆಗಿದೆ.

ಕಾಂಗ್ರೆಸ್ ಪಕ್ಷಕ್ಕೆ 551.55 ಕೋಟಿ ರೂಪಾಯಿ ಗ್ರಾಂಟ್/ ದಾನ/ ದೇಣಿಗೆಯಿಂದ ಬಂದಿದೆ ಎಂದು ಘೋಷಿಸಿಕೊಂಡಿದೆ. ಇದು 2018-19ರ ಅವಧಿಯಲ್ಲಿ ಪಕ್ಷಕ್ಕೆ ಒಟ್ಟು ಆದಾಯದ ಶೇ.60.08ರಷ್ಟು ಅತಿಹೆಚ್ಚು ಆದಾಯ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.

ಬಿಜೆಪಿ ಸಾಮಾನ್ಯ ಪ್ರಚಾರಕ್ಕಾಗಿ 792.39 ಕೋಟಿ ವೆಚ್ಚ ಮಾಡಿದ್ದರೆ, ಆಡಳಿತಾತ್ಮಕ ವೆಚ್ಚವಾಗಿ 178.35 ಕೋಟಿ ವೆಚ್ಚ ಮಾಡಿದೆ ಎಂದು ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆ ವಿಶ್ಲೇಷಿಸಿದೆ .2018-19ರಲ್ಲಿ ಎಲ್ಲಾ ಆರು ರಾಷ್ಟ್ರೀಯಮಟ್ಟದ ರಾಜಕೀಯ ಪಕ್ಷಗಳಿಗೆ ಚುನಾವಣಾ ಬಾಂಡ್ ಗಳ ಮೂಲಕ ಅತಿ ಹೆಚ್ಚು ದೇಣಿಗೆ ಬಂದಿದೆ. ಶೇ.52ರಷ್ಟಕ್ಕೂ ಹೆಚ್ಚಿನ ಆದಾಯ ಚುನಾವಣಾ ಬಾಂಡ್ ಗಳ ಮೂಲಕ ದಾನವಾಗಿ ರಾಜಕೀಯ ಪಕ್ಷಗಳಿಗೆ 1931.43 ಕೋಟಿ ರೂ ಹಣ ಬಂದಿದೆ. ಆದರೆ ಹಣ ನೀಡಿದ ದಾನಿಗಳ ಹೆಸರನ್ನು ಸಾರ್ವಜನಿಕರ ಮಾಹಿತಿಗೆ ಪ್ರಕಟಿಸಿಲ್ಲ.

2018-19ರಲ್ಲಿ ಚುನಾವಣಾ ಬಾಂಡ್ ಗಳ ಮೌಲ್ಯ 2539.58 ಕೋಟಿ ರೂ ಆಗಿದ್ದು ಬಾಂಡ್ ಗಳ ಮೂಲಕ ಬಿಜೆಪಿ, ಕಾಂಗ್ರೆಸ್ ಸಿಪಿಎಂ, ಬಿಎಸ್.ಪಿ, ತೃಣಮೂಲ ಕಾಂಗ್ರೆಸ್, ಸಿಪಿಐ ಪಕ್ಷಗಳು ಶೇಕಡ 76ರಷ್ಟು ಹಣ ಸ್ವೀಕರಿಸಿವೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು 2018-19ರಲ್ಲಿ ಚುನಾವಣಾ ಬಾಂಡ್ ಗಳ ಮೂಲಕ ಹಣವನ್ನು ಪಡೆದಿದ್ದು 2422.02 ಕೋಟಿ ಆಗಿದೆ. ಈ ಅವಧಿಯಲ್ಲಿ ಆರು ರಾಜಕೀಯ ಪಕ್ಷಗಳ ಅದಾಯದ 2/3ರಷ್ಟು ಆದಾಯ ಬಿಜೆಪಿಗೆ ಬಂದಿದೆ ಎಂದು ವಿಶ್ಲೇಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...