Homeಮುಖಪುಟಆಪರೇಷನ್‌ ಕಮಲದ ಮೂಲಕ ಅನೈತಿಕವಾಗಿ ಹುಟ್ಟಿದ ಕೂಸು ಈ  ಸರ್ಕಾರ : ಸಿದ್ದರಾಮಯ್ಯ

ಆಪರೇಷನ್‌ ಕಮಲದ ಮೂಲಕ ಅನೈತಿಕವಾಗಿ ಹುಟ್ಟಿದ ಕೂಸು ಈ  ಸರ್ಕಾರ : ಸಿದ್ದರಾಮಯ್ಯ

- Advertisement -
- Advertisement -

ರಾಜ್ಯಪಾಲರ ಭಾಷಣ ಎಂದರೆ ನಿರ್ದಿಷ್ಟ ವಿಷಯದ ಮೇಲೆ ಮಾತನಾಡಬೇಕು ಎಂದೇನಿಲ್ಲ. ರಾಜ್ಯಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ಮಾತನಾಡಬಹುದು. ರಾಜಕೀಯ ಕೂಡ ಮಾತಾಡಬಹುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಸದನದಲ್ಲಿ ಮಾತು ಆರಂಭಿಸಿದರು.

ನಾಲ್ಕನೇ ದಿನ ಸದನ ಆರಂಭದಲ್ಲಿ ಮಾತನಾಡಿದ ಅವರು ಇತ್ತೀಚಿನ ವರ್ಷಗಳಲ್ಲಿ ಶ್ರದ್ಧಾ ರೀತಿ ಆಗಿಬಿಟ್ಟಿದೆ. ಪಾಲಿಸಿಗಳ ಬಗ್ಗೆ ಚರ್ಚೆ ಕಡಿಮೆಯಾಗಿದೆ. ಈ ರಾಜ್ಯಪಾಲರ ಭಾಷಣದಲ್ಲಿ ಅಂತಹ ಮಹತ್ವದ ಅಂಶಗಳಿಲ್ಲ ಎಂದರು.

ಚುನಾವಣೆ ನಡೆದಾಗ ಈ ರಾಜ್ಯದ ಜನ ಯಾರಿಗೂ ಬಹುಮತ ಕೊಡಲಿಲ್ಲ. ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರಿಂದ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶಕೊಟ್ಟರು. ಯಡಿಯೂರಪ್ಪನವರು ಮುಖ್ಯಮಂತ್ರಿಯಾದರು. ಬಹುಮತ ಸಾಬೀತುಪಡಿಸಲು ಸಾಧ್ಯವಾಗದೇ ರಾಜೀನಾಮೆ ಕೊಟ್ಟರು. ಆನಂತರ ಜೆಡಿಎಸ್‌ ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ರಚಿಸಿ ಎಚ್‌.ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆದರು. ಆನಂತರ ಬಿಜೆಪಿ ಪಕ್ಷವು ಕಾಂಗ್ರೆಸ್‌ನ 14 ಮತ್ತು ಜೆಡಿಎಸ್‌ನ 03 ಶಾಸಕರನ್ನು ರಾಜೀನಾಮೆ ಕೊಡಿಸಿ ಸರ್ಕಾರ ಬೀಳಿಸಿ ಈ ಸರ್ಕಾರ ತಂದರು ಎಂದರು.

ಆಪರೇಷನ್‌ ಕಮಲದ ಮೂಲಕ ಅನೈತಿಕವಾಗಿ ಹುಟ್ಟಿದ ಕೂಸು ಈ  ಸರ್ಕಾರ ಎಂದು ಹೇಳುತ್ತೇನೆ. ಇದು ಜನಾದೇಶದ ಮೂಲಕ ರಚನೆಯಾದುದ್ದು ಅಲ್ಲ. 17ಜನ ಶಾಸಕರು ರಾಜೀನಾಮೆ ಕೊಟ್ಟು ಬಿಜೆಪಿ ಸೇರಿದ್ದರಿಂದ ಸರ್ಕಾರ ರಚನೆಯಾಗಿದೆಯೇ ಹೊರತು, ಜನಾರ್ಶಿವಾದದಿಂದ ಅಲ್ಲ. ಹಾಗಾಗಿ ಆಪರೇಷನ್‌ ಕಮಲದಿಂದ ಬಂದಿದ್ದೇವೆ ಎಂದು ಹೇಳಬೇಕು ಎಂದರು.

ರಾಜ್ಯಪಾಲರು ಜಂಟಿ ಸದನ ಉಲ್ಲೇಖಿಸಿ ಭಾಷಣ ಮಾಡಿದ್ದಾರೆ. ಈ ಸರ್ಕಾರದ ಕಾರ್ಯಕ್ರಮ, ಮುನ್ನೋಟ,  ನೀತಿಯ ಕುರಿತು ಏನೂ ಇಲ್ಲ ಅದರಲ್ಲಿ. ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಬಿಟ್ಟರೆ ಮತ್ತೇನಿಲ್ಲ. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಏಳು ತಿಂಗಳಾಗುತ್ತಾ ಬಂದಿದೆ. ಇಷ್ಟರಲ್ಲಿ ಹೆಸರಿಸಬಹುದಾದ ಯಾವುದೇ ಕಾರ್ಯಕ್ರಮಗಳಿಲ್ಲ ಎಂದರು.

2 ಲಕ್ಷದವರೆಗೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಮತ್ತು 1 ಲಕ್ಷದವರೆಗಿನ ಸಹಕಾರಿ ಬ್ಯಾಂಕುಗಳ ಸಾಲ ಮನ್ನಾ ಮಾಡಿದ್ದು ಕುಮಾರಸ್ವಾಮಿಯವರು. ಉಳಿದೆಲ್ಲ ಕಾರ್ಯಕ್ರಮಗಳು ನಮ್ಮ ಸರ್ಕಾರ 2013-18ರವರೆಗೆ ನಾವು ಮಾಡಿದ್ದು. ಕಾಡು ಬೆಳವಣಿಗೆಯಲ್ಲಿ ಕರ್ನಾಟಕ ನಂಬರ್‌ 1 ಆಗಲು ಕಾಡು ಬೆಳೆಸಿದ್ದು ನಾವು. ಹೈನುಗಾರಿಕೆಯಲ್ಲಿ ಗುಜರಾತ್‌ ಬಿಟ್ಟರೆ ಎರಡನೇ ಸ್ಥಾನದಲ್ಲಿ ನಾವಿದ್ದೇವೆ. ದಿನಕ್ಕೆ 80 ಲಕ್ಷ ಹಾಲು ಉತ್ಪಾದನೆಯಾಗುತ್ತಿದೆ. ಇದಕ್ಕೆ ಕಾರಣ ಲೀಟರ್‌ 5 ರೂ ಪ್ರೋತ್ಸಾಹ ಧನ ಕೊಡಲು ಆರಂಭಿಸಿದೆವು. ಅಂದಾಜು 4 ಕೋಟಿ ರೂ ದಿನಕ್ಕೆ ಕೊಡಲು ಶುರು ಮಾಡಿದ್ದೇ ನಾವು ಎಂದರು.

ಸಿದ್ದರಾಮಯ್ಯ ಭಾಷಣ ಆರಂಭಕ್ಕೂ ಮೊದಲು ಸದನದ ಅವಧಿ ವಿಸ್ತರಿಸಲು ಸದಸ್ಯರು ಮನವಿ ಮಾಡಿದರು. ಸದನದಲ್ಲಿ ಜಟಾಪಟಿ ನಡೆಯಿತು. ಯತ್ನಾಳ್‌ ಮಾತನಾಡಲು ಅವಕಾಶ ಕೋರಿದರು.

ಸಿದ್ದರಾಮಯ್ಯನವರು ಮಾತನಾಡಿ ಯತ್ನಾಳ್‌ ನೀವು ಸೀನಿಯರ್‌ ಲೀಡರ್‌ ನೀವು ಹೀಗೆ ಹೇಳಿದರೆ ಹೇಗೆ ಎಂದರು. ಆಗ ನಮಗೆ ಏನು ಕೊಡುತ್ತಿಲ್ಲ ಎಂದು ಯತ್ನಾಳ್‌ ಹೇಳಿದರು.

ಮಾಧುಸ್ವಾಮಿಯವರು ಮಧ್ಯಪ್ರವೇಶಿಸಿ ಆಡಳಿತ ಪಕ್ಷ ನಾವು ಉತ್ತರ ಕೊಡಲು ಇದ್ದೇವೆ. ಮಾತನಾಡಲು ಅಲ್ಲ ಸುಮ್ಮನಿರಿ ಎಂದು ಯತ್ನಾಳ್‌ಗೆ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...