Homeಮುಖಪುಟಆಪರೇಷನ್‌ ಕಮಲದ ಮೂಲಕ ಅನೈತಿಕವಾಗಿ ಹುಟ್ಟಿದ ಕೂಸು ಈ  ಸರ್ಕಾರ : ಸಿದ್ದರಾಮಯ್ಯ

ಆಪರೇಷನ್‌ ಕಮಲದ ಮೂಲಕ ಅನೈತಿಕವಾಗಿ ಹುಟ್ಟಿದ ಕೂಸು ಈ  ಸರ್ಕಾರ : ಸಿದ್ದರಾಮಯ್ಯ

- Advertisement -
- Advertisement -

ರಾಜ್ಯಪಾಲರ ಭಾಷಣ ಎಂದರೆ ನಿರ್ದಿಷ್ಟ ವಿಷಯದ ಮೇಲೆ ಮಾತನಾಡಬೇಕು ಎಂದೇನಿಲ್ಲ. ರಾಜ್ಯಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ಮಾತನಾಡಬಹುದು. ರಾಜಕೀಯ ಕೂಡ ಮಾತಾಡಬಹುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಸದನದಲ್ಲಿ ಮಾತು ಆರಂಭಿಸಿದರು.

ನಾಲ್ಕನೇ ದಿನ ಸದನ ಆರಂಭದಲ್ಲಿ ಮಾತನಾಡಿದ ಅವರು ಇತ್ತೀಚಿನ ವರ್ಷಗಳಲ್ಲಿ ಶ್ರದ್ಧಾ ರೀತಿ ಆಗಿಬಿಟ್ಟಿದೆ. ಪಾಲಿಸಿಗಳ ಬಗ್ಗೆ ಚರ್ಚೆ ಕಡಿಮೆಯಾಗಿದೆ. ಈ ರಾಜ್ಯಪಾಲರ ಭಾಷಣದಲ್ಲಿ ಅಂತಹ ಮಹತ್ವದ ಅಂಶಗಳಿಲ್ಲ ಎಂದರು.

ಚುನಾವಣೆ ನಡೆದಾಗ ಈ ರಾಜ್ಯದ ಜನ ಯಾರಿಗೂ ಬಹುಮತ ಕೊಡಲಿಲ್ಲ. ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರಿಂದ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶಕೊಟ್ಟರು. ಯಡಿಯೂರಪ್ಪನವರು ಮುಖ್ಯಮಂತ್ರಿಯಾದರು. ಬಹುಮತ ಸಾಬೀತುಪಡಿಸಲು ಸಾಧ್ಯವಾಗದೇ ರಾಜೀನಾಮೆ ಕೊಟ್ಟರು. ಆನಂತರ ಜೆಡಿಎಸ್‌ ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ರಚಿಸಿ ಎಚ್‌.ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆದರು. ಆನಂತರ ಬಿಜೆಪಿ ಪಕ್ಷವು ಕಾಂಗ್ರೆಸ್‌ನ 14 ಮತ್ತು ಜೆಡಿಎಸ್‌ನ 03 ಶಾಸಕರನ್ನು ರಾಜೀನಾಮೆ ಕೊಡಿಸಿ ಸರ್ಕಾರ ಬೀಳಿಸಿ ಈ ಸರ್ಕಾರ ತಂದರು ಎಂದರು.

ಆಪರೇಷನ್‌ ಕಮಲದ ಮೂಲಕ ಅನೈತಿಕವಾಗಿ ಹುಟ್ಟಿದ ಕೂಸು ಈ  ಸರ್ಕಾರ ಎಂದು ಹೇಳುತ್ತೇನೆ. ಇದು ಜನಾದೇಶದ ಮೂಲಕ ರಚನೆಯಾದುದ್ದು ಅಲ್ಲ. 17ಜನ ಶಾಸಕರು ರಾಜೀನಾಮೆ ಕೊಟ್ಟು ಬಿಜೆಪಿ ಸೇರಿದ್ದರಿಂದ ಸರ್ಕಾರ ರಚನೆಯಾಗಿದೆಯೇ ಹೊರತು, ಜನಾರ್ಶಿವಾದದಿಂದ ಅಲ್ಲ. ಹಾಗಾಗಿ ಆಪರೇಷನ್‌ ಕಮಲದಿಂದ ಬಂದಿದ್ದೇವೆ ಎಂದು ಹೇಳಬೇಕು ಎಂದರು.

ರಾಜ್ಯಪಾಲರು ಜಂಟಿ ಸದನ ಉಲ್ಲೇಖಿಸಿ ಭಾಷಣ ಮಾಡಿದ್ದಾರೆ. ಈ ಸರ್ಕಾರದ ಕಾರ್ಯಕ್ರಮ, ಮುನ್ನೋಟ,  ನೀತಿಯ ಕುರಿತು ಏನೂ ಇಲ್ಲ ಅದರಲ್ಲಿ. ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಬಿಟ್ಟರೆ ಮತ್ತೇನಿಲ್ಲ. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಏಳು ತಿಂಗಳಾಗುತ್ತಾ ಬಂದಿದೆ. ಇಷ್ಟರಲ್ಲಿ ಹೆಸರಿಸಬಹುದಾದ ಯಾವುದೇ ಕಾರ್ಯಕ್ರಮಗಳಿಲ್ಲ ಎಂದರು.

2 ಲಕ್ಷದವರೆಗೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಮತ್ತು 1 ಲಕ್ಷದವರೆಗಿನ ಸಹಕಾರಿ ಬ್ಯಾಂಕುಗಳ ಸಾಲ ಮನ್ನಾ ಮಾಡಿದ್ದು ಕುಮಾರಸ್ವಾಮಿಯವರು. ಉಳಿದೆಲ್ಲ ಕಾರ್ಯಕ್ರಮಗಳು ನಮ್ಮ ಸರ್ಕಾರ 2013-18ರವರೆಗೆ ನಾವು ಮಾಡಿದ್ದು. ಕಾಡು ಬೆಳವಣಿಗೆಯಲ್ಲಿ ಕರ್ನಾಟಕ ನಂಬರ್‌ 1 ಆಗಲು ಕಾಡು ಬೆಳೆಸಿದ್ದು ನಾವು. ಹೈನುಗಾರಿಕೆಯಲ್ಲಿ ಗುಜರಾತ್‌ ಬಿಟ್ಟರೆ ಎರಡನೇ ಸ್ಥಾನದಲ್ಲಿ ನಾವಿದ್ದೇವೆ. ದಿನಕ್ಕೆ 80 ಲಕ್ಷ ಹಾಲು ಉತ್ಪಾದನೆಯಾಗುತ್ತಿದೆ. ಇದಕ್ಕೆ ಕಾರಣ ಲೀಟರ್‌ 5 ರೂ ಪ್ರೋತ್ಸಾಹ ಧನ ಕೊಡಲು ಆರಂಭಿಸಿದೆವು. ಅಂದಾಜು 4 ಕೋಟಿ ರೂ ದಿನಕ್ಕೆ ಕೊಡಲು ಶುರು ಮಾಡಿದ್ದೇ ನಾವು ಎಂದರು.

ಸಿದ್ದರಾಮಯ್ಯ ಭಾಷಣ ಆರಂಭಕ್ಕೂ ಮೊದಲು ಸದನದ ಅವಧಿ ವಿಸ್ತರಿಸಲು ಸದಸ್ಯರು ಮನವಿ ಮಾಡಿದರು. ಸದನದಲ್ಲಿ ಜಟಾಪಟಿ ನಡೆಯಿತು. ಯತ್ನಾಳ್‌ ಮಾತನಾಡಲು ಅವಕಾಶ ಕೋರಿದರು.

ಸಿದ್ದರಾಮಯ್ಯನವರು ಮಾತನಾಡಿ ಯತ್ನಾಳ್‌ ನೀವು ಸೀನಿಯರ್‌ ಲೀಡರ್‌ ನೀವು ಹೀಗೆ ಹೇಳಿದರೆ ಹೇಗೆ ಎಂದರು. ಆಗ ನಮಗೆ ಏನು ಕೊಡುತ್ತಿಲ್ಲ ಎಂದು ಯತ್ನಾಳ್‌ ಹೇಳಿದರು.

ಮಾಧುಸ್ವಾಮಿಯವರು ಮಧ್ಯಪ್ರವೇಶಿಸಿ ಆಡಳಿತ ಪಕ್ಷ ನಾವು ಉತ್ತರ ಕೊಡಲು ಇದ್ದೇವೆ. ಮಾತನಾಡಲು ಅಲ್ಲ ಸುಮ್ಮನಿರಿ ಎಂದು ಯತ್ನಾಳ್‌ಗೆ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...