Homeಮುಖಪುಟಆಪರೇಷನ್‌ ಕಮಲದ ಮೂಲಕ ಅನೈತಿಕವಾಗಿ ಹುಟ್ಟಿದ ಕೂಸು ಈ  ಸರ್ಕಾರ : ಸಿದ್ದರಾಮಯ್ಯ

ಆಪರೇಷನ್‌ ಕಮಲದ ಮೂಲಕ ಅನೈತಿಕವಾಗಿ ಹುಟ್ಟಿದ ಕೂಸು ಈ  ಸರ್ಕಾರ : ಸಿದ್ದರಾಮಯ್ಯ

- Advertisement -
- Advertisement -

ರಾಜ್ಯಪಾಲರ ಭಾಷಣ ಎಂದರೆ ನಿರ್ದಿಷ್ಟ ವಿಷಯದ ಮೇಲೆ ಮಾತನಾಡಬೇಕು ಎಂದೇನಿಲ್ಲ. ರಾಜ್ಯಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ಮಾತನಾಡಬಹುದು. ರಾಜಕೀಯ ಕೂಡ ಮಾತಾಡಬಹುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಸದನದಲ್ಲಿ ಮಾತು ಆರಂಭಿಸಿದರು.

ನಾಲ್ಕನೇ ದಿನ ಸದನ ಆರಂಭದಲ್ಲಿ ಮಾತನಾಡಿದ ಅವರು ಇತ್ತೀಚಿನ ವರ್ಷಗಳಲ್ಲಿ ಶ್ರದ್ಧಾ ರೀತಿ ಆಗಿಬಿಟ್ಟಿದೆ. ಪಾಲಿಸಿಗಳ ಬಗ್ಗೆ ಚರ್ಚೆ ಕಡಿಮೆಯಾಗಿದೆ. ಈ ರಾಜ್ಯಪಾಲರ ಭಾಷಣದಲ್ಲಿ ಅಂತಹ ಮಹತ್ವದ ಅಂಶಗಳಿಲ್ಲ ಎಂದರು.

ಚುನಾವಣೆ ನಡೆದಾಗ ಈ ರಾಜ್ಯದ ಜನ ಯಾರಿಗೂ ಬಹುಮತ ಕೊಡಲಿಲ್ಲ. ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರಿಂದ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶಕೊಟ್ಟರು. ಯಡಿಯೂರಪ್ಪನವರು ಮುಖ್ಯಮಂತ್ರಿಯಾದರು. ಬಹುಮತ ಸಾಬೀತುಪಡಿಸಲು ಸಾಧ್ಯವಾಗದೇ ರಾಜೀನಾಮೆ ಕೊಟ್ಟರು. ಆನಂತರ ಜೆಡಿಎಸ್‌ ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ರಚಿಸಿ ಎಚ್‌.ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆದರು. ಆನಂತರ ಬಿಜೆಪಿ ಪಕ್ಷವು ಕಾಂಗ್ರೆಸ್‌ನ 14 ಮತ್ತು ಜೆಡಿಎಸ್‌ನ 03 ಶಾಸಕರನ್ನು ರಾಜೀನಾಮೆ ಕೊಡಿಸಿ ಸರ್ಕಾರ ಬೀಳಿಸಿ ಈ ಸರ್ಕಾರ ತಂದರು ಎಂದರು.

ಆಪರೇಷನ್‌ ಕಮಲದ ಮೂಲಕ ಅನೈತಿಕವಾಗಿ ಹುಟ್ಟಿದ ಕೂಸು ಈ  ಸರ್ಕಾರ ಎಂದು ಹೇಳುತ್ತೇನೆ. ಇದು ಜನಾದೇಶದ ಮೂಲಕ ರಚನೆಯಾದುದ್ದು ಅಲ್ಲ. 17ಜನ ಶಾಸಕರು ರಾಜೀನಾಮೆ ಕೊಟ್ಟು ಬಿಜೆಪಿ ಸೇರಿದ್ದರಿಂದ ಸರ್ಕಾರ ರಚನೆಯಾಗಿದೆಯೇ ಹೊರತು, ಜನಾರ್ಶಿವಾದದಿಂದ ಅಲ್ಲ. ಹಾಗಾಗಿ ಆಪರೇಷನ್‌ ಕಮಲದಿಂದ ಬಂದಿದ್ದೇವೆ ಎಂದು ಹೇಳಬೇಕು ಎಂದರು.

ರಾಜ್ಯಪಾಲರು ಜಂಟಿ ಸದನ ಉಲ್ಲೇಖಿಸಿ ಭಾಷಣ ಮಾಡಿದ್ದಾರೆ. ಈ ಸರ್ಕಾರದ ಕಾರ್ಯಕ್ರಮ, ಮುನ್ನೋಟ,  ನೀತಿಯ ಕುರಿತು ಏನೂ ಇಲ್ಲ ಅದರಲ್ಲಿ. ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಬಿಟ್ಟರೆ ಮತ್ತೇನಿಲ್ಲ. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಏಳು ತಿಂಗಳಾಗುತ್ತಾ ಬಂದಿದೆ. ಇಷ್ಟರಲ್ಲಿ ಹೆಸರಿಸಬಹುದಾದ ಯಾವುದೇ ಕಾರ್ಯಕ್ರಮಗಳಿಲ್ಲ ಎಂದರು.

2 ಲಕ್ಷದವರೆಗೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಮತ್ತು 1 ಲಕ್ಷದವರೆಗಿನ ಸಹಕಾರಿ ಬ್ಯಾಂಕುಗಳ ಸಾಲ ಮನ್ನಾ ಮಾಡಿದ್ದು ಕುಮಾರಸ್ವಾಮಿಯವರು. ಉಳಿದೆಲ್ಲ ಕಾರ್ಯಕ್ರಮಗಳು ನಮ್ಮ ಸರ್ಕಾರ 2013-18ರವರೆಗೆ ನಾವು ಮಾಡಿದ್ದು. ಕಾಡು ಬೆಳವಣಿಗೆಯಲ್ಲಿ ಕರ್ನಾಟಕ ನಂಬರ್‌ 1 ಆಗಲು ಕಾಡು ಬೆಳೆಸಿದ್ದು ನಾವು. ಹೈನುಗಾರಿಕೆಯಲ್ಲಿ ಗುಜರಾತ್‌ ಬಿಟ್ಟರೆ ಎರಡನೇ ಸ್ಥಾನದಲ್ಲಿ ನಾವಿದ್ದೇವೆ. ದಿನಕ್ಕೆ 80 ಲಕ್ಷ ಹಾಲು ಉತ್ಪಾದನೆಯಾಗುತ್ತಿದೆ. ಇದಕ್ಕೆ ಕಾರಣ ಲೀಟರ್‌ 5 ರೂ ಪ್ರೋತ್ಸಾಹ ಧನ ಕೊಡಲು ಆರಂಭಿಸಿದೆವು. ಅಂದಾಜು 4 ಕೋಟಿ ರೂ ದಿನಕ್ಕೆ ಕೊಡಲು ಶುರು ಮಾಡಿದ್ದೇ ನಾವು ಎಂದರು.

ಸಿದ್ದರಾಮಯ್ಯ ಭಾಷಣ ಆರಂಭಕ್ಕೂ ಮೊದಲು ಸದನದ ಅವಧಿ ವಿಸ್ತರಿಸಲು ಸದಸ್ಯರು ಮನವಿ ಮಾಡಿದರು. ಸದನದಲ್ಲಿ ಜಟಾಪಟಿ ನಡೆಯಿತು. ಯತ್ನಾಳ್‌ ಮಾತನಾಡಲು ಅವಕಾಶ ಕೋರಿದರು.

ಸಿದ್ದರಾಮಯ್ಯನವರು ಮಾತನಾಡಿ ಯತ್ನಾಳ್‌ ನೀವು ಸೀನಿಯರ್‌ ಲೀಡರ್‌ ನೀವು ಹೀಗೆ ಹೇಳಿದರೆ ಹೇಗೆ ಎಂದರು. ಆಗ ನಮಗೆ ಏನು ಕೊಡುತ್ತಿಲ್ಲ ಎಂದು ಯತ್ನಾಳ್‌ ಹೇಳಿದರು.

ಮಾಧುಸ್ವಾಮಿಯವರು ಮಧ್ಯಪ್ರವೇಶಿಸಿ ಆಡಳಿತ ಪಕ್ಷ ನಾವು ಉತ್ತರ ಕೊಡಲು ಇದ್ದೇವೆ. ಮಾತನಾಡಲು ಅಲ್ಲ ಸುಮ್ಮನಿರಿ ಎಂದು ಯತ್ನಾಳ್‌ಗೆ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...