Homeಮುಖಪುಟಆಪರೇಷನ್‌ ಕಮಲದ ಮೂಲಕ ಅನೈತಿಕವಾಗಿ ಹುಟ್ಟಿದ ಕೂಸು ಈ  ಸರ್ಕಾರ : ಸಿದ್ದರಾಮಯ್ಯ

ಆಪರೇಷನ್‌ ಕಮಲದ ಮೂಲಕ ಅನೈತಿಕವಾಗಿ ಹುಟ್ಟಿದ ಕೂಸು ಈ  ಸರ್ಕಾರ : ಸಿದ್ದರಾಮಯ್ಯ

- Advertisement -
- Advertisement -

ರಾಜ್ಯಪಾಲರ ಭಾಷಣ ಎಂದರೆ ನಿರ್ದಿಷ್ಟ ವಿಷಯದ ಮೇಲೆ ಮಾತನಾಡಬೇಕು ಎಂದೇನಿಲ್ಲ. ರಾಜ್ಯಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ಮಾತನಾಡಬಹುದು. ರಾಜಕೀಯ ಕೂಡ ಮಾತಾಡಬಹುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಸದನದಲ್ಲಿ ಮಾತು ಆರಂಭಿಸಿದರು.

ನಾಲ್ಕನೇ ದಿನ ಸದನ ಆರಂಭದಲ್ಲಿ ಮಾತನಾಡಿದ ಅವರು ಇತ್ತೀಚಿನ ವರ್ಷಗಳಲ್ಲಿ ಶ್ರದ್ಧಾ ರೀತಿ ಆಗಿಬಿಟ್ಟಿದೆ. ಪಾಲಿಸಿಗಳ ಬಗ್ಗೆ ಚರ್ಚೆ ಕಡಿಮೆಯಾಗಿದೆ. ಈ ರಾಜ್ಯಪಾಲರ ಭಾಷಣದಲ್ಲಿ ಅಂತಹ ಮಹತ್ವದ ಅಂಶಗಳಿಲ್ಲ ಎಂದರು.

ಚುನಾವಣೆ ನಡೆದಾಗ ಈ ರಾಜ್ಯದ ಜನ ಯಾರಿಗೂ ಬಹುಮತ ಕೊಡಲಿಲ್ಲ. ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರಿಂದ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶಕೊಟ್ಟರು. ಯಡಿಯೂರಪ್ಪನವರು ಮುಖ್ಯಮಂತ್ರಿಯಾದರು. ಬಹುಮತ ಸಾಬೀತುಪಡಿಸಲು ಸಾಧ್ಯವಾಗದೇ ರಾಜೀನಾಮೆ ಕೊಟ್ಟರು. ಆನಂತರ ಜೆಡಿಎಸ್‌ ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ರಚಿಸಿ ಎಚ್‌.ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆದರು. ಆನಂತರ ಬಿಜೆಪಿ ಪಕ್ಷವು ಕಾಂಗ್ರೆಸ್‌ನ 14 ಮತ್ತು ಜೆಡಿಎಸ್‌ನ 03 ಶಾಸಕರನ್ನು ರಾಜೀನಾಮೆ ಕೊಡಿಸಿ ಸರ್ಕಾರ ಬೀಳಿಸಿ ಈ ಸರ್ಕಾರ ತಂದರು ಎಂದರು.

ಆಪರೇಷನ್‌ ಕಮಲದ ಮೂಲಕ ಅನೈತಿಕವಾಗಿ ಹುಟ್ಟಿದ ಕೂಸು ಈ  ಸರ್ಕಾರ ಎಂದು ಹೇಳುತ್ತೇನೆ. ಇದು ಜನಾದೇಶದ ಮೂಲಕ ರಚನೆಯಾದುದ್ದು ಅಲ್ಲ. 17ಜನ ಶಾಸಕರು ರಾಜೀನಾಮೆ ಕೊಟ್ಟು ಬಿಜೆಪಿ ಸೇರಿದ್ದರಿಂದ ಸರ್ಕಾರ ರಚನೆಯಾಗಿದೆಯೇ ಹೊರತು, ಜನಾರ್ಶಿವಾದದಿಂದ ಅಲ್ಲ. ಹಾಗಾಗಿ ಆಪರೇಷನ್‌ ಕಮಲದಿಂದ ಬಂದಿದ್ದೇವೆ ಎಂದು ಹೇಳಬೇಕು ಎಂದರು.

ರಾಜ್ಯಪಾಲರು ಜಂಟಿ ಸದನ ಉಲ್ಲೇಖಿಸಿ ಭಾಷಣ ಮಾಡಿದ್ದಾರೆ. ಈ ಸರ್ಕಾರದ ಕಾರ್ಯಕ್ರಮ, ಮುನ್ನೋಟ,  ನೀತಿಯ ಕುರಿತು ಏನೂ ಇಲ್ಲ ಅದರಲ್ಲಿ. ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಬಿಟ್ಟರೆ ಮತ್ತೇನಿಲ್ಲ. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಏಳು ತಿಂಗಳಾಗುತ್ತಾ ಬಂದಿದೆ. ಇಷ್ಟರಲ್ಲಿ ಹೆಸರಿಸಬಹುದಾದ ಯಾವುದೇ ಕಾರ್ಯಕ್ರಮಗಳಿಲ್ಲ ಎಂದರು.

2 ಲಕ್ಷದವರೆಗೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಮತ್ತು 1 ಲಕ್ಷದವರೆಗಿನ ಸಹಕಾರಿ ಬ್ಯಾಂಕುಗಳ ಸಾಲ ಮನ್ನಾ ಮಾಡಿದ್ದು ಕುಮಾರಸ್ವಾಮಿಯವರು. ಉಳಿದೆಲ್ಲ ಕಾರ್ಯಕ್ರಮಗಳು ನಮ್ಮ ಸರ್ಕಾರ 2013-18ರವರೆಗೆ ನಾವು ಮಾಡಿದ್ದು. ಕಾಡು ಬೆಳವಣಿಗೆಯಲ್ಲಿ ಕರ್ನಾಟಕ ನಂಬರ್‌ 1 ಆಗಲು ಕಾಡು ಬೆಳೆಸಿದ್ದು ನಾವು. ಹೈನುಗಾರಿಕೆಯಲ್ಲಿ ಗುಜರಾತ್‌ ಬಿಟ್ಟರೆ ಎರಡನೇ ಸ್ಥಾನದಲ್ಲಿ ನಾವಿದ್ದೇವೆ. ದಿನಕ್ಕೆ 80 ಲಕ್ಷ ಹಾಲು ಉತ್ಪಾದನೆಯಾಗುತ್ತಿದೆ. ಇದಕ್ಕೆ ಕಾರಣ ಲೀಟರ್‌ 5 ರೂ ಪ್ರೋತ್ಸಾಹ ಧನ ಕೊಡಲು ಆರಂಭಿಸಿದೆವು. ಅಂದಾಜು 4 ಕೋಟಿ ರೂ ದಿನಕ್ಕೆ ಕೊಡಲು ಶುರು ಮಾಡಿದ್ದೇ ನಾವು ಎಂದರು.

ಸಿದ್ದರಾಮಯ್ಯ ಭಾಷಣ ಆರಂಭಕ್ಕೂ ಮೊದಲು ಸದನದ ಅವಧಿ ವಿಸ್ತರಿಸಲು ಸದಸ್ಯರು ಮನವಿ ಮಾಡಿದರು. ಸದನದಲ್ಲಿ ಜಟಾಪಟಿ ನಡೆಯಿತು. ಯತ್ನಾಳ್‌ ಮಾತನಾಡಲು ಅವಕಾಶ ಕೋರಿದರು.

ಸಿದ್ದರಾಮಯ್ಯನವರು ಮಾತನಾಡಿ ಯತ್ನಾಳ್‌ ನೀವು ಸೀನಿಯರ್‌ ಲೀಡರ್‌ ನೀವು ಹೀಗೆ ಹೇಳಿದರೆ ಹೇಗೆ ಎಂದರು. ಆಗ ನಮಗೆ ಏನು ಕೊಡುತ್ತಿಲ್ಲ ಎಂದು ಯತ್ನಾಳ್‌ ಹೇಳಿದರು.

ಮಾಧುಸ್ವಾಮಿಯವರು ಮಧ್ಯಪ್ರವೇಶಿಸಿ ಆಡಳಿತ ಪಕ್ಷ ನಾವು ಉತ್ತರ ಕೊಡಲು ಇದ್ದೇವೆ. ಮಾತನಾಡಲು ಅಲ್ಲ ಸುಮ್ಮನಿರಿ ಎಂದು ಯತ್ನಾಳ್‌ಗೆ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...