Homeಮುಖಪುಟಬಿಜೆಪಿಯನ್ನು ಬಂಗಾಳಕೊಲ್ಲಿಗೆ ಎಸೆಯಿರಿ: ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್‌ ಕರೆ

ಬಿಜೆಪಿಯನ್ನು ಬಂಗಾಳಕೊಲ್ಲಿಗೆ ಎಸೆಯಿರಿ: ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್‌ ಕರೆ

“ನಾವು ಭಾರತಕ್ಕೆ ಹೊಸ ಸಂವಿಧಾನವನ್ನು ರಚಿಸಬೇಕಾಗಿದೆ. ಎಷ್ಟೋ ರಾಷ್ಟ್ರಗಳು ತಮಗೆ ಬೇಕು ಅನ್ನಿಸಿದಾಗಲೆಲ್ಲ ತಮ್ಮ ಸಂವಿಧಾನಗಳನ್ನು ಬರೆದುಕೊಂಡಿದ್ದಾರೆ" ಎಂದು ರಾವ್ ಹೇಳಿದ್ದಾರೆ.

- Advertisement -
- Advertisement -

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ಮಂಗಳವಾರ ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮತ ಹಾಕದಂತೆ ಕರೆ ನೀಡಿದ್ದಾರೆ. “ಬಿಜೆಪಿಯನ್ನು ಬಂಗಾಳ ಕೊಲ್ಲಿಗೆ ಎಸೆಯುವ ಅಗತ್ಯವಿದೆ” ಎಂದು ಅವರು ಹೇಳಿರುವುದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನು ಮಾಡದ ಹೊರತು ಈ ದೇಶವು ಅಭಿವೃದ್ಧಿಯಾಗಲು ಸಾಧ್ಯವಿಲ್ಲ ಎಂದು ರಾವ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಬಿಜೆಪಿಯು ಧಾರ್ಮಿಕ ನೆಲೆಯಲ್ಲಿ ದ್ವೇಷವನ್ನು ಹರಡುತ್ತಿದೆ. ರಾಜಕೀಯ ಲಾಭಕ್ಕಾಗಿ ದೇಶವನ್ನು ಬಿಜೆಪಿ ವಿಭಜಿಸುತ್ತಿದೆ ಎಂದಿರುವ ಕೆ.ಚಂದ್ರಶೇಖರ್‌ ರಾವ್‌, ಬಿಜೆಪಿ ಈ ದೇಶದ ದೌರ್ಭಾಗ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಟೀಕಿಸಿರುವ ಅವರು, “ಪ್ರಜ್ಞಾಶೂನ್ಯ ಪಕ್ಷಗಳು ಮತ್ತು ನಾಯಕರಿಂದ ವಿಮೋಚನೆ ಅಗತ್ಯವಿದೆ. ದೇಶಕ್ಕೆ ಬದಲಾವಣೆಗೆ ಬೇಕಿದೆ. ದೇಶದ ನಾಗರಿಕರ ನಿರೀಕ್ಷೆಗಳನ್ನು ಈಡೇರಿಸಲು ಭಾರತದ ಸಂವಿಧಾನವನ್ನು ಪುನಃ ಬರೆಯುವ ಅಗತ್ಯವಿದೆ” ಎಂದು ಹೇಳಿರುವುದಾಗಿ ಸ್ಕ್ರಾಲ್‌.ಇನ್‌ ವರದಿ ಮಾಡಿದೆ.

ಸ್ವಾತಂತ್ರ್ಯಾ ನಂತರದ 75 ವರ್ಷಗಳಲ್ಲಿ ಜನರ ಮೂಲಭೂತ ಅಗತ್ಯಗಳನ್ನು ಪೂರೈಸುವಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ವಿಫಲವಾಗಿವೆ ಎಂದು ರಾವ್ ದೂರಿದ್ದಾರೆ.

“ನಾವು ಭಾರತಕ್ಕೆ ಹೊಸ ಸಂವಿಧಾನವನ್ನು ರಚಿಸಬೇಕಾಗಿದೆ. ಎಷ್ಟೋ ರಾಷ್ಟ್ರಗಳು ತಮಗೆ ಬೇಕು ಅನ್ನಿಸಿದಾಗಲೆಲ್ಲ ತಮ್ಮ ಹೊಸ ಸಂವಿಧಾನಗಳನ್ನು ಬರೆದುಕೊಂಡಿದ್ದಾರೆ. ಹೊಸ ಸಂವಿಧಾನ, ಹೊಸ ಚಿಂತನೆ, ಹೊಸ ದಿಕ್ಕು…. ಇದು ನಮ್ಮ ಘೋಷಣೆಯಾಗಲಿದೆ. ನೀವು ಕಾದು ನೋಡಿ” ಎಂದಿದ್ದಾರೆ.

ರಾವ್ ಅವರು 2018 ರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಹೊರತುಪಡಿಸಿ ಇತರ ಪಕ್ಷಗಳ ಮೈತ್ರಿಯನ್ನು ಒಟ್ಟುಗೂಡಿಸಲು ಪ್ರಯತ್ನಿಸುತ್ತಿದ್ದಾರೆ.

2019ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ, ರಾವ್ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಅವರ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಮತ್ತು ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಸೇರಿದಂತೆ ಹಲವಾರು ರಾಜಕೀಯ ನಾಯಕರನ್ನು ಭೇಟಿಯಾಗಿದ್ದರು.

“ನಾನು ದೇಶದ ಅನೇಕ ಜನರೊಂದಿಗೆ ಮಾತನಾಡುತ್ತಿದ್ದೇನೆ. ಕೆಲವೇ ದಿನಗಳಲ್ಲಿ ನಾವು ನೀತಿಯನ್ನು ಘೋಷಿಸುತ್ತೇವೆ. 75 ವರ್ಷಗಳ ನಂತರ ಭಾರತಕ್ಕೆ ಹೊಸ ಕಾರ್ಯಸೂಚಿಯನ್ನು ಹೊಂದಿಸಬೇಕಾಗಿದೆ” ಎಂದಿದ್ದಾರೆ.

ಐಎಎಸ್‌ ನಿಯಮಗಳನ್ನು ತಿದ್ದುಪಡಿ ಮಾಡುವ ಕೇಂದ್ರದ ಪ್ರಸ್ತಾವನೆಯು ರಾಜ್ಯ ಸರ್ಕಾರಗಳ ವಿರುದ್ಧದ “ಪಿತೂರಿ” ಎಂದು ಅವರು ಆರೋಪಿಸಿದ್ದಾರೆ.

ಬದಲಾವಣೆಯನ್ನು ತರಲು ಇತರ ರಾಜಕೀಯ ನಾಯಕರೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ಅವರು ಹೇಳಿದ್ದಾರೆ. ಈಗಾಗಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಶೀಘ್ರದಲ್ಲೇ ಅವರನ್ನು ಭೇಟಿ ಮಾಡುವುದಾಗಿ ಮಾಹಿತಿ ನೀಡಿದ್ದಾರೆ.

ಈ ದೇಶದ ಒಳಿತಿಗಾಗಿ ನಾವು ಸೈನಿಕರಂತೆ ಹೋರಾಡುತ್ತಲೇ ಇರುತ್ತೇವೆ. ನಾನು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಲು ಸಿದ್ಧನಿದ್ದೇನೆ. ಹಗಲು ರಾತ್ರಿ ಬೊಗಳುತ್ತಲೇ ಇರುವ ಹುಚ್ಚು ನಾಯಿಗಳಿಗೆ ನಾವು ಹೆದರುವುದಿಲ್ಲ ಎಂದು ಎಚ್ಚರಿಸಿದ್ದಾರೆ.


ಇದನ್ನೂ ಓದಿರಿ: BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ಸಂವಿಧಾನವನ್ನು ಬದಲಾಯಿಸಬೇಕು ಎನ್ನುವವರನ್ನು, ಈ ದೇಶದ ಅಹಿಂದ ವರ್ಗ ಯಾವ ಕಾರಣಕ್ಕೂ ನಂಬಬಾರದು. ಏಕೆಂದರೆ ಇವರು ಗೋಮುಕ ವ್ಯಾಗ್ರಗಳು.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...