Homeಮುಖಪುಟಬಿಜೆಪಿಯನ್ನು ಬಂಗಾಳಕೊಲ್ಲಿಗೆ ಎಸೆಯಿರಿ: ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್‌ ಕರೆ

ಬಿಜೆಪಿಯನ್ನು ಬಂಗಾಳಕೊಲ್ಲಿಗೆ ಎಸೆಯಿರಿ: ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್‌ ಕರೆ

“ನಾವು ಭಾರತಕ್ಕೆ ಹೊಸ ಸಂವಿಧಾನವನ್ನು ರಚಿಸಬೇಕಾಗಿದೆ. ಎಷ್ಟೋ ರಾಷ್ಟ್ರಗಳು ತಮಗೆ ಬೇಕು ಅನ್ನಿಸಿದಾಗಲೆಲ್ಲ ತಮ್ಮ ಸಂವಿಧಾನಗಳನ್ನು ಬರೆದುಕೊಂಡಿದ್ದಾರೆ" ಎಂದು ರಾವ್ ಹೇಳಿದ್ದಾರೆ.

- Advertisement -
- Advertisement -

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ಮಂಗಳವಾರ ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮತ ಹಾಕದಂತೆ ಕರೆ ನೀಡಿದ್ದಾರೆ. “ಬಿಜೆಪಿಯನ್ನು ಬಂಗಾಳ ಕೊಲ್ಲಿಗೆ ಎಸೆಯುವ ಅಗತ್ಯವಿದೆ” ಎಂದು ಅವರು ಹೇಳಿರುವುದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನು ಮಾಡದ ಹೊರತು ಈ ದೇಶವು ಅಭಿವೃದ್ಧಿಯಾಗಲು ಸಾಧ್ಯವಿಲ್ಲ ಎಂದು ರಾವ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಬಿಜೆಪಿಯು ಧಾರ್ಮಿಕ ನೆಲೆಯಲ್ಲಿ ದ್ವೇಷವನ್ನು ಹರಡುತ್ತಿದೆ. ರಾಜಕೀಯ ಲಾಭಕ್ಕಾಗಿ ದೇಶವನ್ನು ಬಿಜೆಪಿ ವಿಭಜಿಸುತ್ತಿದೆ ಎಂದಿರುವ ಕೆ.ಚಂದ್ರಶೇಖರ್‌ ರಾವ್‌, ಬಿಜೆಪಿ ಈ ದೇಶದ ದೌರ್ಭಾಗ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಟೀಕಿಸಿರುವ ಅವರು, “ಪ್ರಜ್ಞಾಶೂನ್ಯ ಪಕ್ಷಗಳು ಮತ್ತು ನಾಯಕರಿಂದ ವಿಮೋಚನೆ ಅಗತ್ಯವಿದೆ. ದೇಶಕ್ಕೆ ಬದಲಾವಣೆಗೆ ಬೇಕಿದೆ. ದೇಶದ ನಾಗರಿಕರ ನಿರೀಕ್ಷೆಗಳನ್ನು ಈಡೇರಿಸಲು ಭಾರತದ ಸಂವಿಧಾನವನ್ನು ಪುನಃ ಬರೆಯುವ ಅಗತ್ಯವಿದೆ” ಎಂದು ಹೇಳಿರುವುದಾಗಿ ಸ್ಕ್ರಾಲ್‌.ಇನ್‌ ವರದಿ ಮಾಡಿದೆ.

ಸ್ವಾತಂತ್ರ್ಯಾ ನಂತರದ 75 ವರ್ಷಗಳಲ್ಲಿ ಜನರ ಮೂಲಭೂತ ಅಗತ್ಯಗಳನ್ನು ಪೂರೈಸುವಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ವಿಫಲವಾಗಿವೆ ಎಂದು ರಾವ್ ದೂರಿದ್ದಾರೆ.

“ನಾವು ಭಾರತಕ್ಕೆ ಹೊಸ ಸಂವಿಧಾನವನ್ನು ರಚಿಸಬೇಕಾಗಿದೆ. ಎಷ್ಟೋ ರಾಷ್ಟ್ರಗಳು ತಮಗೆ ಬೇಕು ಅನ್ನಿಸಿದಾಗಲೆಲ್ಲ ತಮ್ಮ ಹೊಸ ಸಂವಿಧಾನಗಳನ್ನು ಬರೆದುಕೊಂಡಿದ್ದಾರೆ. ಹೊಸ ಸಂವಿಧಾನ, ಹೊಸ ಚಿಂತನೆ, ಹೊಸ ದಿಕ್ಕು…. ಇದು ನಮ್ಮ ಘೋಷಣೆಯಾಗಲಿದೆ. ನೀವು ಕಾದು ನೋಡಿ” ಎಂದಿದ್ದಾರೆ.

ರಾವ್ ಅವರು 2018 ರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಹೊರತುಪಡಿಸಿ ಇತರ ಪಕ್ಷಗಳ ಮೈತ್ರಿಯನ್ನು ಒಟ್ಟುಗೂಡಿಸಲು ಪ್ರಯತ್ನಿಸುತ್ತಿದ್ದಾರೆ.

2019ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ, ರಾವ್ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಅವರ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಮತ್ತು ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಸೇರಿದಂತೆ ಹಲವಾರು ರಾಜಕೀಯ ನಾಯಕರನ್ನು ಭೇಟಿಯಾಗಿದ್ದರು.

“ನಾನು ದೇಶದ ಅನೇಕ ಜನರೊಂದಿಗೆ ಮಾತನಾಡುತ್ತಿದ್ದೇನೆ. ಕೆಲವೇ ದಿನಗಳಲ್ಲಿ ನಾವು ನೀತಿಯನ್ನು ಘೋಷಿಸುತ್ತೇವೆ. 75 ವರ್ಷಗಳ ನಂತರ ಭಾರತಕ್ಕೆ ಹೊಸ ಕಾರ್ಯಸೂಚಿಯನ್ನು ಹೊಂದಿಸಬೇಕಾಗಿದೆ” ಎಂದಿದ್ದಾರೆ.

ಐಎಎಸ್‌ ನಿಯಮಗಳನ್ನು ತಿದ್ದುಪಡಿ ಮಾಡುವ ಕೇಂದ್ರದ ಪ್ರಸ್ತಾವನೆಯು ರಾಜ್ಯ ಸರ್ಕಾರಗಳ ವಿರುದ್ಧದ “ಪಿತೂರಿ” ಎಂದು ಅವರು ಆರೋಪಿಸಿದ್ದಾರೆ.

ಬದಲಾವಣೆಯನ್ನು ತರಲು ಇತರ ರಾಜಕೀಯ ನಾಯಕರೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ಅವರು ಹೇಳಿದ್ದಾರೆ. ಈಗಾಗಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಶೀಘ್ರದಲ್ಲೇ ಅವರನ್ನು ಭೇಟಿ ಮಾಡುವುದಾಗಿ ಮಾಹಿತಿ ನೀಡಿದ್ದಾರೆ.

ಈ ದೇಶದ ಒಳಿತಿಗಾಗಿ ನಾವು ಸೈನಿಕರಂತೆ ಹೋರಾಡುತ್ತಲೇ ಇರುತ್ತೇವೆ. ನಾನು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಲು ಸಿದ್ಧನಿದ್ದೇನೆ. ಹಗಲು ರಾತ್ರಿ ಬೊಗಳುತ್ತಲೇ ಇರುವ ಹುಚ್ಚು ನಾಯಿಗಳಿಗೆ ನಾವು ಹೆದರುವುದಿಲ್ಲ ಎಂದು ಎಚ್ಚರಿಸಿದ್ದಾರೆ.


ಇದನ್ನೂ ಓದಿರಿ: BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ಸಂವಿಧಾನವನ್ನು ಬದಲಾಯಿಸಬೇಕು ಎನ್ನುವವರನ್ನು, ಈ ದೇಶದ ಅಹಿಂದ ವರ್ಗ ಯಾವ ಕಾರಣಕ್ಕೂ ನಂಬಬಾರದು. ಏಕೆಂದರೆ ಇವರು ಗೋಮುಕ ವ್ಯಾಗ್ರಗಳು.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...