Homeಕರ್ನಾಟಕಕನ್ನಡಿಗರ ಸಹನೆ ಪರೀಕ್ಷಿಸಬೇಡಿ, ಪರಿಷ್ಕೃತ ಪಠ್ಯ ಕಸದ ಬುಟ್ಟಿಗೆ ಎಸೆಯಿರಿ: ಸಿದ್ದರಾಮಯ್ಯ

ಕನ್ನಡಿಗರ ಸಹನೆ ಪರೀಕ್ಷಿಸಬೇಡಿ, ಪರಿಷ್ಕೃತ ಪಠ್ಯ ಕಸದ ಬುಟ್ಟಿಗೆ ಎಸೆಯಿರಿ: ಸಿದ್ದರಾಮಯ್ಯ

“ಬಸವಣ್ಣ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಿಂದೂ ಧರ್ಮವನ್ನು ತ್ಯಜಿಸಿದವರು ಎನ್ನುವ ಕಾರಣಕ್ಕೆ ಅವರನ್ನು ನಿರ್ಲಕ್ಷಿಸಲಾಯಿತೇ?” ಎಂದು ಸಿದ್ದರಾಮಯ್ಯ ಕೇಳಿದ್ದಾರೆ

- Advertisement -
- Advertisement -

“ಕನ್ನಡಿಗರ ಸಹನೆಯನ್ನು ಪರೀಕ್ಷಿಸಲು ಹೋಗಬೇಡಿ, ಮೊದಲು ಈ ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಹಾಕಿರುವ ಅವರು, “ವಿಕೃತ ಮನಸ್ಸಿನ ಕಿಡಿಗೇಡಿ ಅಧ್ಯಕ್ಷ ತಯಾರಿಸಿರುವ ಪರಿಷ್ಕೃತ ಪಠ್ಯದಿಂದ ಬಹುಸಂಖ್ಯಾತ ಹಿಂದೂಗಳ ಮನಸ್ಸಿಗೆ ಮಾತ್ರವಲ್ಲ, ರಾಜ್ಯದ ಆರೂವರೆ ಕೋಟಿ ಕನ್ನಡಿಗರ ಮನಸ್ಸಿಗೆ ಘಾಸಿಯಾಗಿದೆ” ಎಂದು ಎಚ್ಚರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯಪರಿಷ್ಕರಣೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅಸಲಿ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಈ ಹಿಂದೂಗಳು ಯಾರು? ಎನ್ನುವುದನ್ನು ಸನ್ಮಾನ್ಯ ಸಚಿವರು ಬಹಿರಂಗ ಪಡಿಸಿ, ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

‘ಪರಿಷ್ಕೃತ ಪಠ್ಯದಲ್ಲಿ ಬಸವಣ್ಣ, ಅಂಬೇಡ್ಕರ್, ಸಾವಿತ್ರಿಬಾಯಿ ಪುಲೆ, ನಾರಾಯಣ ಗುರು, ಕುವೆಂಪು ಸೇರಿದಂತೆ ಹಲವಾರು ಮಹನೀಯರ ವ್ಯಕ್ತಿತ್ವವನ್ನು ಕಡೆಗಣಿಸಲಾಗಿದೆ, ಇವರನ್ನು ಪರಿಷ್ಕೃತ ಸಮಿತಿಯ ಕಿಡಿಗೇಡಿ ಅಧ್ಯಕ್ಷ ತುಚ್ಛೀಕರಿಸಿದ್ದಾನೆ’ ಎಂದು ಪ್ರತಿಭಟಿಸುತ್ತಿರುವವರು ಅನ್ಯಧರ್ಮೀಯರಲ್ಲ, ಹಿಂದೂಗಳೇ ಅಲ್ವಾ ಸಚಿವರೇ? ಎಂದು ಪ್ರಶ್ನಿಸಿದ್ದಾರೆ.

ಪಠ್ಯ ಪರಿಷ್ಕರಣಾ ಸಮಿತಿಯಲ್ಲಿ ದಲಿತ ಮತ್ತು ಹಿಂದುಳಿದ ಜಾತಿಗಳ ವಿದ್ವಾಂಸರಿಗೆ ಪ್ರಾತಿನಿಧ್ಯವೇ ನೀಡಿಲ್ಲವಲ್ಲಾ? ಶಿಕ್ಷಣ ಸಚಿವರು ಕಾಳಜಿ ತೋರುತ್ತಿರುವ ಹಿಂದೂಗಳ ವ್ಯಾಖ್ಯಾನದಲ್ಲಿ ಈ ಸಮುದಾಯಗಳು ಸೇರಿಕೊಳ್ಳುವುದಿಲ್ಲವೇ? ಈ ಕಾರಣಕ್ಕಾಗಿ ಅವರಿಗೆ ಪ್ರಾತಿನಿಧ್ಯ ನೀಡಿಲ್ಲವೇ ಸಚಿವರೇ? ಎಂದು ಕೇಳಿದ್ದಾರೆ.

ಇದನ್ನೂ ಓದಿರಿ: ಅಂಬೇಡ್ಕರ್‌ ಕುರಿತ ಪದ್ಯ ತೆರವು; ಕೆದಕಿದಷ್ಟೂ ಸಿಗುತ್ತಿವೆ ಚಕ್ರತೀರ್ಥ ಸಮಿತಿಯ ಹುಳುಕು!

ಬಸವಣ್ಣ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಿಂದೂ ಧರ್ಮವನ್ನು ತ್ಯಜಿಸಿದವರು ಎನ್ನುವ ಕಾರಣಕ್ಕೆ ಅವರನ್ನು ನಿರ್ಲಕ್ಷಿಸಲಾಯಿತೇ? ಅವಮಾನ ಮಾಡಲಾಯಿತೇ? ನಾರಾಯಣ ಗುರು, ಪೆರಿಯಾರ್, ಕುವೆಂಪು ಅವರು ಹಿಂದೂ ಧರ್ಮದ ದೋಷಗಳನ್ನು ಎತ್ತಿತೋರಿಸಿದ್ದಕ್ಕಾಗಿ ನಿರ್ಲಕ್ಷ್ಯ ಮಾಡಲಾಯಿತೇ? ಹಾಗೆಂದು ಹೇಳಿಬಿಡಿ ಎಂದಿದ್ದಾರೆ.

ಈ ದೇಶದ ಬಡವರಲ್ಲಿ ಬಹುಸಂಖ್ಯೆಯಲ್ಲಿರುವುದು ಹಿಂದೂ ಧರ್ಮದಲ್ಲಿರುವ ದಲಿತರು ಮತ್ತು ಹಿಂದುಳಿದ ಜಾತಿಗಳು. ಸರ್ಕಾರಿ ಶಾಲೆಗಳಲ್ಲಿ ಈ ಮಕ್ಕಳ ಸಂಖ್ಯೆಯೇ ಹೆಚ್ಚು. ಬುದ್ಧ, ಬಸವ, ಅಂಬೇಡ್ಕರ್, ಸಾವಿತ್ರಿಬಾಯಿ ಪುಲೆ, ನಾರಾಯಣ ಗುರು, ಕುವೆಂಪು ಅವರಿಗೆ ಆಗಿರುವ ಅವಮಾನದಿಂದ ಈ ಮಕ್ಕಳ ಭಾವನೆಗೂ ಧಕ್ಕೆಯಾಗಿದೆಯಲ್ವಾ? ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...