Homeಕರ್ನಾಟಕತುಮಕೂರು: ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರ ಅಟ್ಟಹಾಸ; ಡಿವೈಎಸ್ಪಿಗೆ ಗಾಯ

ತುಮಕೂರು: ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರ ಅಟ್ಟಹಾಸ; ಡಿವೈಎಸ್ಪಿಗೆ ಗಾಯ

- Advertisement -
- Advertisement -

ರಾಜ್ಯಸಭಾ ಚುನಾವಣೆಯಲ್ಲಿ ನಾಸೀರ್‌ ಹುಸೇನ್‌ ಗೆಲುವಿನ ಬಳಿಕ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸುವ ವೇಳೆ ಪಾಕಿಸ್ತಾನ ಝಿಂದಾಬಾದ್‌ ಎಂದು ಘೋಷಣೆ ಕೂಗಿದ್ದಾರೆ ಎಂದು ಮಾದ್ಯಮಗಳು ಮತ್ತು ಬಿಜೆಪಿ ನಾಯಕರು ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದರು. ಇದರ ಬೆನ್ನಲ್ಲಿ ಬಿಜೆಪಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಜೊತೆಗೆ ಪ್ರತಿಭಟನೆಗೆ ಕರೆ ಕೊಟ್ಟಿದೆ. ತುಮಕೂರಿನಲ್ಲಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಮುಂದಾದ ಬಿಜೆಪಿ ಕಾರ್ಯಕರ್ತರು ರಂಪಾಟವನ್ನು ಮೆರೆದಿದ್ದು ಡಿವೈಎಸ್ಪಿಯ ಮೂಗಿಗೆ ಗಾಯವಾಗಿದೆ.

ತುಮಕೂರಿನ ಭದ್ರಮ್ಮ ವೃತ್ತದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ನಿಯಂತ್ರಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಅಟ್ಟಹಾಸವನ್ನು ಮೆರೆದಿದ್ದು, ಡಿವೈಎಸ್‌ಪಿ ಚಂದ್ರಶೇಖರ್ ಮೂಗಿಗೆ ಗಾಯವಾಗಿದೆ.

ಈ ಘಟನೆಯ ಬಗ್ಗೆ ಖುದ್ದು ಡಿವೈಎಸ್‌ಪಿ ಚಂದ್ರಶೇಖರ್ ಅವರ ಹೇಳಿಕೆಯ ವಿಡಿಯೋ ವೈರಲ್‌ ಆಗಿದೆ. ಚಂದ್ರಶೇಖರ್ ಅವರ ಮೂಗಿನಲ್ಲಿ ಸ್ವಲ್ಪ ರಕ್ತ ಸೋರಿಕೆಯಾಗುತ್ತಿರವುದು ಕಂಡು ಬಂದಿದೆ. ವಿಡಿಯೋದಲ್ಲಿ ಮ್ಯಾನ್ ಹ್ಯಾಂಡಲಿಂಗ್ ಮಾಡ್ತೀರಾ? ಎಷ್ಟು ಧೈರ್ಯ ನಿಮಗೆ ಪೊಲೀಸರ ಮೇಲೆ ಕೈ ಹಾಕಲಿಕ್ಕೆ? ಯಾರ್ಯಾರಿದ್ದಾರೆ ಎಲ್ಲರ ವಿಡಿಯೋ ಮಾಡಿ ಎಫ್‌ಐಆರ್‌ ಹಾಕಿ ಎಂದು ಡಿವೈಎಸ್‌ಪಿ ಚಂದ್ರಶೇಖರ್ ಅವರು ಸ್ಥಳದಲ್ಲೇ ಬಿಜೆಪಿ ಕಾರ್ಯಕರ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವುದು ಸೆರೆಯಾಗಿದೆ.

ಪ್ರತಿಭಟನೆಯ ವೇಳೆ ತುಮಕೂರು ಸಂಸದ ಜಿಎಸ್ ಬಸವರಾಜು ಕೂಡ ಸ್ಥಳದಲ್ಲಿದ್ದರು ಎಂದು ಹೇಳಲಾಗಿದೆ.

ನಾಸೀರ್‌ ಹುಸೇನ್‌ ಗೆಲುವಿನ ಬಳಿಕ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸುವ ವೇಳೆ ಪಾಕಿಸ್ತಾನ ಝಿಂದಾಬಾದ್‌ ಎಂದು ಘೋಷಣೆ ಕೂಗಿದ್ದಾರೆ ಎಂಬುವುದು ಬಿಜೆಪಿಗರ ಆರೋಪವಾಗಿದೆ. ಈ ಬಗ್ಗೆ ಎಫ್‌ಎಸ್‌ಎಲ್‌ ತನಿಖೆಗೆ ಈಗಾಗಲೇ ವಿಡಿಯೋವನ್ನು ರವಾನಿಸಿರುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಅವರು ಹೇಳಿದ್ದಾರೆ. ಆದರೆ ಈ ಬಗ್ಗೆ ಬಿಜೆಪಿ ಸದನದ ಒಳಗೆ ಮತ್ತು ಹೊರಗೆ ಚರ್ಚೆಯನ್ನು ಸೃಷ್ಟಿಸಿದೆ.

ಇದನ್ನು ಓದಿ: ಸರಸ್ವತಿಯನ್ನು ಆರಾಧಿಸದ ದಲಿತ ಶಿಕ್ಷಕಿಗೆ ಕಿರುಕುಳ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...