Homeಕರ್ನಾಟಕತುಮಕೂರು: ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರ ಅಟ್ಟಹಾಸ; ಡಿವೈಎಸ್ಪಿಗೆ ಗಾಯ

ತುಮಕೂರು: ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರ ಅಟ್ಟಹಾಸ; ಡಿವೈಎಸ್ಪಿಗೆ ಗಾಯ

- Advertisement -
- Advertisement -

ರಾಜ್ಯಸಭಾ ಚುನಾವಣೆಯಲ್ಲಿ ನಾಸೀರ್‌ ಹುಸೇನ್‌ ಗೆಲುವಿನ ಬಳಿಕ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸುವ ವೇಳೆ ಪಾಕಿಸ್ತಾನ ಝಿಂದಾಬಾದ್‌ ಎಂದು ಘೋಷಣೆ ಕೂಗಿದ್ದಾರೆ ಎಂದು ಮಾದ್ಯಮಗಳು ಮತ್ತು ಬಿಜೆಪಿ ನಾಯಕರು ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದರು. ಇದರ ಬೆನ್ನಲ್ಲಿ ಬಿಜೆಪಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಜೊತೆಗೆ ಪ್ರತಿಭಟನೆಗೆ ಕರೆ ಕೊಟ್ಟಿದೆ. ತುಮಕೂರಿನಲ್ಲಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಮುಂದಾದ ಬಿಜೆಪಿ ಕಾರ್ಯಕರ್ತರು ರಂಪಾಟವನ್ನು ಮೆರೆದಿದ್ದು ಡಿವೈಎಸ್ಪಿಯ ಮೂಗಿಗೆ ಗಾಯವಾಗಿದೆ.

ತುಮಕೂರಿನ ಭದ್ರಮ್ಮ ವೃತ್ತದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ನಿಯಂತ್ರಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಅಟ್ಟಹಾಸವನ್ನು ಮೆರೆದಿದ್ದು, ಡಿವೈಎಸ್‌ಪಿ ಚಂದ್ರಶೇಖರ್ ಮೂಗಿಗೆ ಗಾಯವಾಗಿದೆ.

ಈ ಘಟನೆಯ ಬಗ್ಗೆ ಖುದ್ದು ಡಿವೈಎಸ್‌ಪಿ ಚಂದ್ರಶೇಖರ್ ಅವರ ಹೇಳಿಕೆಯ ವಿಡಿಯೋ ವೈರಲ್‌ ಆಗಿದೆ. ಚಂದ್ರಶೇಖರ್ ಅವರ ಮೂಗಿನಲ್ಲಿ ಸ್ವಲ್ಪ ರಕ್ತ ಸೋರಿಕೆಯಾಗುತ್ತಿರವುದು ಕಂಡು ಬಂದಿದೆ. ವಿಡಿಯೋದಲ್ಲಿ ಮ್ಯಾನ್ ಹ್ಯಾಂಡಲಿಂಗ್ ಮಾಡ್ತೀರಾ? ಎಷ್ಟು ಧೈರ್ಯ ನಿಮಗೆ ಪೊಲೀಸರ ಮೇಲೆ ಕೈ ಹಾಕಲಿಕ್ಕೆ? ಯಾರ್ಯಾರಿದ್ದಾರೆ ಎಲ್ಲರ ವಿಡಿಯೋ ಮಾಡಿ ಎಫ್‌ಐಆರ್‌ ಹಾಕಿ ಎಂದು ಡಿವೈಎಸ್‌ಪಿ ಚಂದ್ರಶೇಖರ್ ಅವರು ಸ್ಥಳದಲ್ಲೇ ಬಿಜೆಪಿ ಕಾರ್ಯಕರ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವುದು ಸೆರೆಯಾಗಿದೆ.

ಪ್ರತಿಭಟನೆಯ ವೇಳೆ ತುಮಕೂರು ಸಂಸದ ಜಿಎಸ್ ಬಸವರಾಜು ಕೂಡ ಸ್ಥಳದಲ್ಲಿದ್ದರು ಎಂದು ಹೇಳಲಾಗಿದೆ.

ನಾಸೀರ್‌ ಹುಸೇನ್‌ ಗೆಲುವಿನ ಬಳಿಕ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸುವ ವೇಳೆ ಪಾಕಿಸ್ತಾನ ಝಿಂದಾಬಾದ್‌ ಎಂದು ಘೋಷಣೆ ಕೂಗಿದ್ದಾರೆ ಎಂಬುವುದು ಬಿಜೆಪಿಗರ ಆರೋಪವಾಗಿದೆ. ಈ ಬಗ್ಗೆ ಎಫ್‌ಎಸ್‌ಎಲ್‌ ತನಿಖೆಗೆ ಈಗಾಗಲೇ ವಿಡಿಯೋವನ್ನು ರವಾನಿಸಿರುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಅವರು ಹೇಳಿದ್ದಾರೆ. ಆದರೆ ಈ ಬಗ್ಗೆ ಬಿಜೆಪಿ ಸದನದ ಒಳಗೆ ಮತ್ತು ಹೊರಗೆ ಚರ್ಚೆಯನ್ನು ಸೃಷ್ಟಿಸಿದೆ.

ಇದನ್ನು ಓದಿ: ಸರಸ್ವತಿಯನ್ನು ಆರಾಧಿಸದ ದಲಿತ ಶಿಕ್ಷಕಿಗೆ ಕಿರುಕುಳ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...