HomeUncategorizedಟಿಕೆಟ್ ಯಾರಿಗೆ?: ಶಿರಾ ಉಪಚುನಾವಣೆ ಘೋಷಣೆಯಾಗದಿದ್ದರೂ ಚರ್ಚೆ ಜೋರು

ಟಿಕೆಟ್ ಯಾರಿಗೆ?: ಶಿರಾ ಉಪಚುನಾವಣೆ ಘೋಷಣೆಯಾಗದಿದ್ದರೂ ಚರ್ಚೆ ಜೋರು

ನಿಖಿಲ್‌ರನ್ನು ಕಣಕ್ಕಿಳಿಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಿಂತನೆ ನಡೆಸಿದ್ದರೆ, ಹಾಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಪುತ್ರ ವಿಜಯೇಂದ್ರರನ್ನು ಸ್ಪರ್ಧೆಗೆ ಇಳಿಸಿ ಗೆಲ್ಲಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಂಬ ಚರ್ಚೆ ಜೋರಾಗಿಯೇ ನಡೆಯುತ್ತಿದೆ.

- Advertisement -
- Advertisement -

ಶಿರಾ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಸತ್ಯನಾರಾಯಣ ಅವರು ನಿಧನರಾಗಿ ತಿಂಗಳೂ ಕೂಡ ಕಳೆದಿಲ್ಲ. ಜೊತೆಗೆ ಉಪಚುನಾವಣೆಯೂ ಘೋಷಣೆ ಆಗಿಲ್ಲ. ಆದರೆ ಕ್ಷೇತ್ರದಲ್ಲಿ ರಾಜಕೀಯ ಚರ್ಚೆಗಳು ಬಿರುಸಾಗಿ ನಡೆಯತೊಡಗಿವೆ. ಸ್ಪರ್ದೆಗೆ ಇಳಿಯುವ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದರೂ ನಾಲ್ಕು ಹೆಸರುಗಳು ಕ್ಷೇತ್ರದ ಜನರ ಬಾಯಿಯಲ್ಲಿ ನಿತ್ಯವೂ ಗುನುಗುತ್ತಿವೆ. ಮೂರೂ ಪಕ್ಷಗಳು ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ತಂತ್ರಗಳನ್ನು ಎಣೆಯುತ್ತಿವೆ. ಯಾರನ್ನು ಕಣಕ್ಕಿಸಿದರೆ ಗೆಲುವು ಸಾಧ್ಯ ಎಂಬ ಬಗ್ಗೆ ಲೆಕ್ಕಾಚಾರ ಮಾಡುತ್ತಿವೆ.

ಪ್ರಮುಖವಾಗಿ ಜೆಡಿಎಸ್‌ನಿಂದ ನಿಖಿಲ್ ಕುಮಾರಸ್ವಾಮಿ, ಬಿಜೆಪಿಯಿಂದ ವಿಜಯೇಂದ್ರ ಮತ್ತು ಕಾಂಗ್ರೆಸ್‌ನಿಂದ ಹಿರಿಯ ನಾಯಕ ಟಿ.ಬಿ.ಜಯಚಂದ್ರ ಅವರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತು ಕ್ಷೇತ್ರದಲ್ಲಿ ಹರಿದಾಡುತ್ತಿವೆ. ನಿಖಿಲ್ ಮತ್ತು ವಿಜಯೇಂದ್ರ ಮಾಜಿ, ಹಾಲಿ ಮುಖ್ಯಮಂತ್ರಿಗಳ ಪುತ್ರರು. ಯುವಕರು, ಪೈಪೋಟಿ ನೀಡಬಲ್ಲವರು. ನಿಖಿಲ್‌ರನ್ನು ಕಣಕ್ಕಿಳಿಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಿಂತನೆ ನಡೆಸಿದ್ದರೆ, ಹಾಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಪುತ್ರ ವಿಜಯೇಂದ್ರರನ್ನು ಸ್ಪರ್ಧೆಗೆ ಇಳಿಸಿ ಗೆಲ್ಲಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಂಬ ಚರ್ಚೆ ಜೋರಾಗಿಯೇ ನಡೆಯುತ್ತಿದೆ. ಆದರೆ ನಿಖಿಲ್ ಇದನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿ: ಬಿ. ಸತ್ಯನಾರಾಯಣ್ ಆಮಿಷಕ್ಕೆ ಬಲಿಯಾಗದ ನಿಷ್ಠಾವಂತ ವ್ಯಕ್ತಿ: ಮಾಜಿ ಪ್ರಧಾನಿ ದೇವೇಗೌಡ

ಜೆಡಿಎಸ್ ಹೇಗಾದರೂ ಮಾಡಿ ಶಿರಾ ಕ್ಷೇತ್ರವನ್ನು ತನ್ನದನ್ನಾಗಿಸಿಕೊಳ್ಳಲು ಶತಪ್ರಯತ್ನ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶಾಸಕ ಬಿ.ಸತ್ಯನಾರಾಯರಣ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು. ಈ ಮೂಲಕ ಕ್ಷೇತ್ರದಲ್ಲಿನ ಜನರ ನಾಡಿ ಮಿಡಿತ ಅರಿಯುವ ಪ್ರಯತ್ನ ಮಾಡಿದ್ದಾರೆ. ಸತ್ಯನಾರಾಯಣ್ ಪತ್ನಿ ಅಮ್ಮಾಜಮ್ಮ ಇಲ್ಲವೇ ಪುತ್ರ ಸತ್ಯಪ್ರಕಾಶ್ ಅವರಲ್ಲಿ ಯಾರನ್ನು ಕಣಕ್ಕಿಳಿಸಿದರೆ ಅನುಕೂಲ, ಪಕ್ಷಕ್ಕೆ ಲಾಭ ತಂದುಕೊಡಲಿದೆ ಎಂಬ ಬಗ್ಗೆ ದೊಡ್ಡಗೌಡರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.

ಶಾಸಕ ಬಿ. ಸತ್ಯನಾರಾಯಣ ನಿಧನದಿಂದ ಕ್ಷೇತ್ರದಲ್ಲಿ ಎದ್ದಿರುವ ಅನುಕಂಪದ ಅಲೆಯ ಲಾಭ ಪಡೆಯಲು ಜೆಡಿಎಸ್ ಯೋಚಿಸುತ್ತಿದೆ. ಜಿಲ್ಲೆಯಲ್ಲಿ ಜೆಡಿಎಸ್ ಕೋಟೆಗೆ ಲಗ್ಗೆ ಇಟ್ಟ ಬಿಜೆಪಿ ಐದು ಸ್ಥಾನಗಳನ್ನು ಪಡೆದಿತ್ತು. ಜೆಡಿಎಸ್ ಕಳೆದ ಚುನಾವಣೆಯಲ್ಲಿ ಎರಡು ಸ್ಥಾನಗಳನ್ನು ಕಳೆದುಕೊಂಡಿತ್ತು. ತುರುವೇಕೆರೆ ಮತ್ತು ಚಿಕ್ಕನಾಯಕನಹಳ್ಳಿ ಕ್ಷೇತ್ರಗಳು ಜೆಡಿಎಸ್ ಕೈತಪ್ಪಿದ್ದವು. ಈಗ ಶಿರಾ ಕ್ಷೇತ್ರವೂ ಕೈತಪ್ಪಿದರೆ ಜೆಡಿಎಸ್ ಜಿಲ್ಲೆಯಲ್ಲಿ ಮತ್ತಷ್ಟು ದುರ್ಬಲವಾಗಲಿದೆ ಎಂಬ ಅರಿವು ಹಿರಿಯ ಮುಖಂಡರಲ್ಲಿದೆ. ಅದೇ ಕಾರಣಕ್ಕೇ ನಿಖಿಲ್ ಕುಮಾರಸ್ವಾಮಿ ದಾಳ ಉರುಳಿಸಿ ಕ್ಷೇತ್ರದ ಜನರ ಸ್ಪಂದನೆ ಹೇಗಿದೆ ಎಂಬ ಲೆಕ್ಕಾಚಾರ ಹಾಕಿದೆ ಜೆಡಿಎಸ್.

ಇದೇ ಕಾರಣಕ್ಕೆ ನಿಖಿಲ್ ಕುಮಾರಸ್ವಾಮಿ ತಾನು ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಎಚ್.ಡಿ.ದೇವೇಗೌಡರು ಮತ್ತು ಎಚ್.ಡಿ.ಕುಮಾರಸ್ವಾಮಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕ್ಷೇತ್ರದಲ್ಲಂತೂ ಸತ್ಯನಾರಾಯಣ ಪತ್ನಿ ಅಮ್ಮಾಜಮ್ಮ ಅಥವಾ ಪುತ್ರ ಸತ್ಯಪ್ರಕಾಶ್ ಅವರಲ್ಲಿ ಒಬ್ಬರಿಗೆ ಟಿಕೆಟ್ ನೀಡಿದರೆ ಗೆಲ್ಲಿಸಿಕೊಂಡು ಬರುತ್ತೇವೆ ಎಂಬ ಭರವಸೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಪಕ್ಷದ ವರಿಷ್ಠರ ನಿಲುವು ಏನಿದೆ ಎಂಬುದು ಇದುವರೆಗೂ ಹೊರಬಿದ್ದಿಲ್ಲ.

ಇದನ್ನೂ ಓದಿ: ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಪಟ್ಟು: ಬೆಳಗಾವಿ ಚಲೋಗೆ ಭಾರೀ ಜನಬೆಂಬಲ

ಜೆಡಿಎಸ್ ಮುಖಂಡರು ಶಿರಾ ಕ್ಷೇತ್ರದ ಅಭ್ಯರ್ಥಿ ಯಾರೆಂಬುದನ್ನು ಸ್ಪಷ್ಟಪಡಿಸದೇ ಇರುವುದರಿಂದ ಗೊಂದಲ ಉಂಟಾಗಿದೆ. ಸತ್ಯಪ್ರಕಾಶ್ ಅವರಿಗೆ ಟಿಕೆಟ್ ಕೊಡದಿದ್ದರೆ ಅವರು ಬಿಜೆಪಿಯ ಅಭ್ಯರ್ಥಿಯಾಗುವುದು ಖಚಿತ ಎಂದು ಜೆಡಿಎಸ್ ಬೆಂಬಲಿಗರು ಹೇಳುವ ಮಾತು. ಹಾಗಾಗಿಯೇ ಬಿಜೆಪಿ ಮುಖಂಡರ ಜೊತೆಯೂ ಸತ್ಯ ಪ್ರಕಾಶ್ ಎರಡು ಸುತ್ತಿನ ಮಾತುಕತೆ ನಡೆಸಿದ್ದಾರೆ. ಡಿಸಿಎಂ ಅಶ್ವತ್ಥನಾರಾಯಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಜೊತೆ ಚರ್ಚಿಸಿರುವ ಸತ್ಯಪ್ರಕಾಶ್ ತಮಗೆ ಟಿಕೆಟ್ ನೀಡಬೇಕೆಂಬುದನ್ನು ಖಚಿತಪಡಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಶಾಸಕ ಬಿ.ಸತ್ಯನಾರಾಯಣ್ ಕುಟುಂಬದವರೊಬ್ಬರಿಗೆ ಟಿಕೆಟ್ ನೀಡಿದರೆ ಗೆಲ್ಲುವುದು ಖಚಿತ. ನಿಖಿಲ್ ಮತ್ತು ವಿಜಯೇಂದ್ರ ಅವರನ್ನು ಸ್ಪರ್ಧೆಗೆ ಇಳಿಸಿದರೆ ಅನಾಯಾಸವಾಗಿ ಕಾಂಗ್ರೆಸ್‌ನ ಟಿ.ಬಿ.ಜಯಚಂದ್ರ ಗೆದ್ದೇ ಗೆಲ್ಲುತ್ತಾರೆ. ಇದು ಪಕ್ಷದ ವರಿಷ್ಠರಿಗೂ ಗೊತ್ತಿದೆ. ವರಿಷ್ಠರು ತಪ್ಪು ಮಾಡುವುದಿಲ್ಲ. ಕ್ಷೇತ್ರ ಉಳಿಸಿಕೊಳ್ಳುವುದು ವರಿಷ್ಠರಿಗೂ ಸವಾಲಾಗಿದೆ. ಹಾಗಾಗಿ ಸತ್ಯನಾರಾಯಣ್ ಕುಟುಂಬದ ಸದಸ್ಯರೊಬ್ಬರಿಗೆ ಟಿಕೆಟ್ ಕೊಡುತ್ತಾರೆ ಎಂಬ ವಿಶ್ವಾಸ ಸ್ಥಳೀಯ ಮುಖಂಡರದ್ದು.

ಶಿರಾ ಕ್ಷೇತ್ರದಲ್ಲಿ ಬಿಜೆಪಿಗೆ ನೆಲೆ ಇಲ್ಲ. ಆದರೆ ಕಳೆದ ಎರಡು ಚುನಾವಣೆಗಳಲ್ಲಿ ಮತ ಗಳಿಕೆಯನ್ನು ಹೆಚ್ಚಳ ಮಾಡಿಕೊಂಡಿದ್ದು ಬಿಟ್ಟರೆ ಹೇಳಿಕೊಳ್ಳುವಂತಹ ಸಾಧನೆಯನ್ನೇನೂ ಮಾಡಿಲ್ಲ. ಹಾಗಾಗಿ ಇಲ್ಲಿ ಕಾಂಗ್ರೆಸ್‌ನ ಟಿ.ಬಿ.ಜಯಚಂದ್ರ ಮತ್ತು ಜೆಡಿಎಸ್ ನಡುವೆ ಪ್ರಬಲ ಪೈಪೋಟಿ ಇದೆ. ಜೆಡಿಎಸ್‌ನಲ್ಲಿ ಕಳೆದ 7 ಸಾರ್ವತ್ರಿಕ ಚುನಾವಣೆಯಲ್ಲೂ ಸತ್ಯನಾರಾಯಣ್ ಅವರಿಗೆ ಟಿಕೆಟ್ ನೀಡಲಾಗಿದೆ. ಈಗ ಕುಟುಂಬದ ಸದಸ್ಯರನ್ನು ಬಿಟ್ಟು ಬೇರೆಯವರಿಗೆ ಟಿಕೆಟ್ ಕೊಡಬೇಕು ಎಂಬ ಒತ್ತಾಯವೂ ಕೇಳಿಬರುತ್ತಿದೆ.

ಜೆಡಿಎಸ್‌ನಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿ.ಆರ್. ಉಮೇಶ್, ಮೂರು ಬಾರಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಆರ್. ಉಗ್ರೇಶ್ ಅವರೂ ಕೂಡ ಸ್ಪರ್ಧಾ ಆಕಾಂಕ್ಷಿಗಳಾಗಿದ್ದಾರೆ. ಆದರೆ ಜೆಡಿಎಸ್ ವರಿಷ್ಟರ ಒಲವು ಯಾರ ಪರವಾಗಿದೆ ಎಂಬುದು ಕೆಲವೇ ದಿನಗಳಲ್ಲಿ ಹೊರಬೀಳಲಿದೆ.


ಇದನ್ನೂ ಓದಿ: ಶಿರಾ ಶಾಸಕ, ಮಾಜಿ ಸಚಿವ ಬಿ.ಸತ್ಯನಾರಾಯಣ್ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...