HomeUncategorizedಟಿಕೆಟ್ ಯಾರಿಗೆ?: ಶಿರಾ ಉಪಚುನಾವಣೆ ಘೋಷಣೆಯಾಗದಿದ್ದರೂ ಚರ್ಚೆ ಜೋರು

ಟಿಕೆಟ್ ಯಾರಿಗೆ?: ಶಿರಾ ಉಪಚುನಾವಣೆ ಘೋಷಣೆಯಾಗದಿದ್ದರೂ ಚರ್ಚೆ ಜೋರು

ನಿಖಿಲ್‌ರನ್ನು ಕಣಕ್ಕಿಳಿಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಿಂತನೆ ನಡೆಸಿದ್ದರೆ, ಹಾಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಪುತ್ರ ವಿಜಯೇಂದ್ರರನ್ನು ಸ್ಪರ್ಧೆಗೆ ಇಳಿಸಿ ಗೆಲ್ಲಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಂಬ ಚರ್ಚೆ ಜೋರಾಗಿಯೇ ನಡೆಯುತ್ತಿದೆ.

- Advertisement -
- Advertisement -

ಶಿರಾ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಸತ್ಯನಾರಾಯಣ ಅವರು ನಿಧನರಾಗಿ ತಿಂಗಳೂ ಕೂಡ ಕಳೆದಿಲ್ಲ. ಜೊತೆಗೆ ಉಪಚುನಾವಣೆಯೂ ಘೋಷಣೆ ಆಗಿಲ್ಲ. ಆದರೆ ಕ್ಷೇತ್ರದಲ್ಲಿ ರಾಜಕೀಯ ಚರ್ಚೆಗಳು ಬಿರುಸಾಗಿ ನಡೆಯತೊಡಗಿವೆ. ಸ್ಪರ್ದೆಗೆ ಇಳಿಯುವ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದರೂ ನಾಲ್ಕು ಹೆಸರುಗಳು ಕ್ಷೇತ್ರದ ಜನರ ಬಾಯಿಯಲ್ಲಿ ನಿತ್ಯವೂ ಗುನುಗುತ್ತಿವೆ. ಮೂರೂ ಪಕ್ಷಗಳು ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ತಂತ್ರಗಳನ್ನು ಎಣೆಯುತ್ತಿವೆ. ಯಾರನ್ನು ಕಣಕ್ಕಿಸಿದರೆ ಗೆಲುವು ಸಾಧ್ಯ ಎಂಬ ಬಗ್ಗೆ ಲೆಕ್ಕಾಚಾರ ಮಾಡುತ್ತಿವೆ.

ಪ್ರಮುಖವಾಗಿ ಜೆಡಿಎಸ್‌ನಿಂದ ನಿಖಿಲ್ ಕುಮಾರಸ್ವಾಮಿ, ಬಿಜೆಪಿಯಿಂದ ವಿಜಯೇಂದ್ರ ಮತ್ತು ಕಾಂಗ್ರೆಸ್‌ನಿಂದ ಹಿರಿಯ ನಾಯಕ ಟಿ.ಬಿ.ಜಯಚಂದ್ರ ಅವರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತು ಕ್ಷೇತ್ರದಲ್ಲಿ ಹರಿದಾಡುತ್ತಿವೆ. ನಿಖಿಲ್ ಮತ್ತು ವಿಜಯೇಂದ್ರ ಮಾಜಿ, ಹಾಲಿ ಮುಖ್ಯಮಂತ್ರಿಗಳ ಪುತ್ರರು. ಯುವಕರು, ಪೈಪೋಟಿ ನೀಡಬಲ್ಲವರು. ನಿಖಿಲ್‌ರನ್ನು ಕಣಕ್ಕಿಳಿಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಿಂತನೆ ನಡೆಸಿದ್ದರೆ, ಹಾಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಪುತ್ರ ವಿಜಯೇಂದ್ರರನ್ನು ಸ್ಪರ್ಧೆಗೆ ಇಳಿಸಿ ಗೆಲ್ಲಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಂಬ ಚರ್ಚೆ ಜೋರಾಗಿಯೇ ನಡೆಯುತ್ತಿದೆ. ಆದರೆ ನಿಖಿಲ್ ಇದನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿ: ಬಿ. ಸತ್ಯನಾರಾಯಣ್ ಆಮಿಷಕ್ಕೆ ಬಲಿಯಾಗದ ನಿಷ್ಠಾವಂತ ವ್ಯಕ್ತಿ: ಮಾಜಿ ಪ್ರಧಾನಿ ದೇವೇಗೌಡ

ಜೆಡಿಎಸ್ ಹೇಗಾದರೂ ಮಾಡಿ ಶಿರಾ ಕ್ಷೇತ್ರವನ್ನು ತನ್ನದನ್ನಾಗಿಸಿಕೊಳ್ಳಲು ಶತಪ್ರಯತ್ನ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶಾಸಕ ಬಿ.ಸತ್ಯನಾರಾಯರಣ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು. ಈ ಮೂಲಕ ಕ್ಷೇತ್ರದಲ್ಲಿನ ಜನರ ನಾಡಿ ಮಿಡಿತ ಅರಿಯುವ ಪ್ರಯತ್ನ ಮಾಡಿದ್ದಾರೆ. ಸತ್ಯನಾರಾಯಣ್ ಪತ್ನಿ ಅಮ್ಮಾಜಮ್ಮ ಇಲ್ಲವೇ ಪುತ್ರ ಸತ್ಯಪ್ರಕಾಶ್ ಅವರಲ್ಲಿ ಯಾರನ್ನು ಕಣಕ್ಕಿಳಿಸಿದರೆ ಅನುಕೂಲ, ಪಕ್ಷಕ್ಕೆ ಲಾಭ ತಂದುಕೊಡಲಿದೆ ಎಂಬ ಬಗ್ಗೆ ದೊಡ್ಡಗೌಡರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.

ಶಾಸಕ ಬಿ. ಸತ್ಯನಾರಾಯಣ ನಿಧನದಿಂದ ಕ್ಷೇತ್ರದಲ್ಲಿ ಎದ್ದಿರುವ ಅನುಕಂಪದ ಅಲೆಯ ಲಾಭ ಪಡೆಯಲು ಜೆಡಿಎಸ್ ಯೋಚಿಸುತ್ತಿದೆ. ಜಿಲ್ಲೆಯಲ್ಲಿ ಜೆಡಿಎಸ್ ಕೋಟೆಗೆ ಲಗ್ಗೆ ಇಟ್ಟ ಬಿಜೆಪಿ ಐದು ಸ್ಥಾನಗಳನ್ನು ಪಡೆದಿತ್ತು. ಜೆಡಿಎಸ್ ಕಳೆದ ಚುನಾವಣೆಯಲ್ಲಿ ಎರಡು ಸ್ಥಾನಗಳನ್ನು ಕಳೆದುಕೊಂಡಿತ್ತು. ತುರುವೇಕೆರೆ ಮತ್ತು ಚಿಕ್ಕನಾಯಕನಹಳ್ಳಿ ಕ್ಷೇತ್ರಗಳು ಜೆಡಿಎಸ್ ಕೈತಪ್ಪಿದ್ದವು. ಈಗ ಶಿರಾ ಕ್ಷೇತ್ರವೂ ಕೈತಪ್ಪಿದರೆ ಜೆಡಿಎಸ್ ಜಿಲ್ಲೆಯಲ್ಲಿ ಮತ್ತಷ್ಟು ದುರ್ಬಲವಾಗಲಿದೆ ಎಂಬ ಅರಿವು ಹಿರಿಯ ಮುಖಂಡರಲ್ಲಿದೆ. ಅದೇ ಕಾರಣಕ್ಕೇ ನಿಖಿಲ್ ಕುಮಾರಸ್ವಾಮಿ ದಾಳ ಉರುಳಿಸಿ ಕ್ಷೇತ್ರದ ಜನರ ಸ್ಪಂದನೆ ಹೇಗಿದೆ ಎಂಬ ಲೆಕ್ಕಾಚಾರ ಹಾಕಿದೆ ಜೆಡಿಎಸ್.

ಇದೇ ಕಾರಣಕ್ಕೆ ನಿಖಿಲ್ ಕುಮಾರಸ್ವಾಮಿ ತಾನು ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಎಚ್.ಡಿ.ದೇವೇಗೌಡರು ಮತ್ತು ಎಚ್.ಡಿ.ಕುಮಾರಸ್ವಾಮಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕ್ಷೇತ್ರದಲ್ಲಂತೂ ಸತ್ಯನಾರಾಯಣ ಪತ್ನಿ ಅಮ್ಮಾಜಮ್ಮ ಅಥವಾ ಪುತ್ರ ಸತ್ಯಪ್ರಕಾಶ್ ಅವರಲ್ಲಿ ಒಬ್ಬರಿಗೆ ಟಿಕೆಟ್ ನೀಡಿದರೆ ಗೆಲ್ಲಿಸಿಕೊಂಡು ಬರುತ್ತೇವೆ ಎಂಬ ಭರವಸೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಪಕ್ಷದ ವರಿಷ್ಠರ ನಿಲುವು ಏನಿದೆ ಎಂಬುದು ಇದುವರೆಗೂ ಹೊರಬಿದ್ದಿಲ್ಲ.

ಇದನ್ನೂ ಓದಿ: ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಪಟ್ಟು: ಬೆಳಗಾವಿ ಚಲೋಗೆ ಭಾರೀ ಜನಬೆಂಬಲ

ಜೆಡಿಎಸ್ ಮುಖಂಡರು ಶಿರಾ ಕ್ಷೇತ್ರದ ಅಭ್ಯರ್ಥಿ ಯಾರೆಂಬುದನ್ನು ಸ್ಪಷ್ಟಪಡಿಸದೇ ಇರುವುದರಿಂದ ಗೊಂದಲ ಉಂಟಾಗಿದೆ. ಸತ್ಯಪ್ರಕಾಶ್ ಅವರಿಗೆ ಟಿಕೆಟ್ ಕೊಡದಿದ್ದರೆ ಅವರು ಬಿಜೆಪಿಯ ಅಭ್ಯರ್ಥಿಯಾಗುವುದು ಖಚಿತ ಎಂದು ಜೆಡಿಎಸ್ ಬೆಂಬಲಿಗರು ಹೇಳುವ ಮಾತು. ಹಾಗಾಗಿಯೇ ಬಿಜೆಪಿ ಮುಖಂಡರ ಜೊತೆಯೂ ಸತ್ಯ ಪ್ರಕಾಶ್ ಎರಡು ಸುತ್ತಿನ ಮಾತುಕತೆ ನಡೆಸಿದ್ದಾರೆ. ಡಿಸಿಎಂ ಅಶ್ವತ್ಥನಾರಾಯಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಜೊತೆ ಚರ್ಚಿಸಿರುವ ಸತ್ಯಪ್ರಕಾಶ್ ತಮಗೆ ಟಿಕೆಟ್ ನೀಡಬೇಕೆಂಬುದನ್ನು ಖಚಿತಪಡಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಶಾಸಕ ಬಿ.ಸತ್ಯನಾರಾಯಣ್ ಕುಟುಂಬದವರೊಬ್ಬರಿಗೆ ಟಿಕೆಟ್ ನೀಡಿದರೆ ಗೆಲ್ಲುವುದು ಖಚಿತ. ನಿಖಿಲ್ ಮತ್ತು ವಿಜಯೇಂದ್ರ ಅವರನ್ನು ಸ್ಪರ್ಧೆಗೆ ಇಳಿಸಿದರೆ ಅನಾಯಾಸವಾಗಿ ಕಾಂಗ್ರೆಸ್‌ನ ಟಿ.ಬಿ.ಜಯಚಂದ್ರ ಗೆದ್ದೇ ಗೆಲ್ಲುತ್ತಾರೆ. ಇದು ಪಕ್ಷದ ವರಿಷ್ಠರಿಗೂ ಗೊತ್ತಿದೆ. ವರಿಷ್ಠರು ತಪ್ಪು ಮಾಡುವುದಿಲ್ಲ. ಕ್ಷೇತ್ರ ಉಳಿಸಿಕೊಳ್ಳುವುದು ವರಿಷ್ಠರಿಗೂ ಸವಾಲಾಗಿದೆ. ಹಾಗಾಗಿ ಸತ್ಯನಾರಾಯಣ್ ಕುಟುಂಬದ ಸದಸ್ಯರೊಬ್ಬರಿಗೆ ಟಿಕೆಟ್ ಕೊಡುತ್ತಾರೆ ಎಂಬ ವಿಶ್ವಾಸ ಸ್ಥಳೀಯ ಮುಖಂಡರದ್ದು.

ಶಿರಾ ಕ್ಷೇತ್ರದಲ್ಲಿ ಬಿಜೆಪಿಗೆ ನೆಲೆ ಇಲ್ಲ. ಆದರೆ ಕಳೆದ ಎರಡು ಚುನಾವಣೆಗಳಲ್ಲಿ ಮತ ಗಳಿಕೆಯನ್ನು ಹೆಚ್ಚಳ ಮಾಡಿಕೊಂಡಿದ್ದು ಬಿಟ್ಟರೆ ಹೇಳಿಕೊಳ್ಳುವಂತಹ ಸಾಧನೆಯನ್ನೇನೂ ಮಾಡಿಲ್ಲ. ಹಾಗಾಗಿ ಇಲ್ಲಿ ಕಾಂಗ್ರೆಸ್‌ನ ಟಿ.ಬಿ.ಜಯಚಂದ್ರ ಮತ್ತು ಜೆಡಿಎಸ್ ನಡುವೆ ಪ್ರಬಲ ಪೈಪೋಟಿ ಇದೆ. ಜೆಡಿಎಸ್‌ನಲ್ಲಿ ಕಳೆದ 7 ಸಾರ್ವತ್ರಿಕ ಚುನಾವಣೆಯಲ್ಲೂ ಸತ್ಯನಾರಾಯಣ್ ಅವರಿಗೆ ಟಿಕೆಟ್ ನೀಡಲಾಗಿದೆ. ಈಗ ಕುಟುಂಬದ ಸದಸ್ಯರನ್ನು ಬಿಟ್ಟು ಬೇರೆಯವರಿಗೆ ಟಿಕೆಟ್ ಕೊಡಬೇಕು ಎಂಬ ಒತ್ತಾಯವೂ ಕೇಳಿಬರುತ್ತಿದೆ.

ಜೆಡಿಎಸ್‌ನಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿ.ಆರ್. ಉಮೇಶ್, ಮೂರು ಬಾರಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಆರ್. ಉಗ್ರೇಶ್ ಅವರೂ ಕೂಡ ಸ್ಪರ್ಧಾ ಆಕಾಂಕ್ಷಿಗಳಾಗಿದ್ದಾರೆ. ಆದರೆ ಜೆಡಿಎಸ್ ವರಿಷ್ಟರ ಒಲವು ಯಾರ ಪರವಾಗಿದೆ ಎಂಬುದು ಕೆಲವೇ ದಿನಗಳಲ್ಲಿ ಹೊರಬೀಳಲಿದೆ.


ಇದನ್ನೂ ಓದಿ: ಶಿರಾ ಶಾಸಕ, ಮಾಜಿ ಸಚಿವ ಬಿ.ಸತ್ಯನಾರಾಯಣ್ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...