Homeಮುಖಪುಟಊರಿಗೆ ತೆರಳಲು ಬಸ್‌: ಟಿಕೆಟ್ ಬೆಲೆ ಮೂರು ಪಟ್ಟು ಹೆಚ್ಚು, ಸಂಕಷ್ಟದಲ್ಲಿ ಕಣ್ಣೀರಿಡುತ್ತಿರುವ ಕಾರ್ಮಿಕರು

ಊರಿಗೆ ತೆರಳಲು ಬಸ್‌: ಟಿಕೆಟ್ ಬೆಲೆ ಮೂರು ಪಟ್ಟು ಹೆಚ್ಚು, ಸಂಕಷ್ಟದಲ್ಲಿ ಕಣ್ಣೀರಿಡುತ್ತಿರುವ ಕಾರ್ಮಿಕರು

ಯಾವು ಯಾವುದಕ್ಕೋ ಕೋಟ್ಯಾಂತರ ಹಣ ಖರ್ಚು ಮಾಡುವ ಸರ್ಕಾರ ನಮ್ಮ ನಾಡು ಕಟ್ಟುವ ಕಾರ್ಮಿಕರಿಗೆ ಕೆಲವು ಲಕ್ಷ ಕೋಟಿಗಳನ್ನು ವ್ಯಯಿಸಿದರೆ ಕಳೆದುಕೊಳ್ಳುವುದು ಏನು ಇಲ್ಲ. ಇಲ್ಲವಾದರೆ ಕಾರ್ಮಿಕರ ಕಣ್ಣೀರು ಮತ್ತಷ್ಟು ಹೆಚ್ಚಾಗಲಿದ್ದು, ಅವರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ.

- Advertisement -
- Advertisement -

ಲಾಕ್‌ಡೌನ್‌ ಮುಂದುವರೆಯುತ್ತಲೇ ಇದೆ. ಈ ಸಂದರ್ಭದಲ್ಲಿ ಊರಿಗೆ ತೆರಳಲಾರದೇ ಬೆಂಗಳೂರಿನಲ್ಲಿ ಸಿಕ್ಕಿಕೊಂಡಿರುವ ಕಾರ್ಮಿಕರಿಗೆ ಊರಿಗೆ ಹೋಗಲು ಸರ್ಕಾರ ಬಸ್‌ ವ್ಯವಸ್ಥೆ ಮಾಡಿದೆ. ಆದರೆ ಆ ಕಾರ್ಮಿಕರು ಊರಿಗೆ ಹೋಗುವಂತಿಲ್ಲ, ಇಲ್ಲಿಯೂ ಇರುವಂತಿಲ್ಲದೇ ನರಳುವಂತಹ ಪರಿಸ್ಥಿತಿ ಬಂದಿದೆ.

ಏಕೆ ಹೀಗಾಯಿತು?

ಗುರುವಾರ ಸಂಜೆ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಮಾಧುಸ್ವಾಮಿ ನಾಳೆಯಿಂದಲೇ ಕಾರ್ಮಿಕರು ತಮ್ಮ ಊರುಗಳಿಗೆ ಮರಳಲು ಬಸ್‌ ವ್ಯವಸ್ಥೆ ಮಾಡಲಾಗುವುದು ಎಂದು ಘೋಷಿಸಿದರು. ಅದರಂತರೆ ಕಂದಾಯಭವನದ ಎದುರಿನ ಬನ್ನಪ್ಪ ಪಾರ್ಕ್‌ ನಿಂದ ಬಸ್‌ ತೆರಳುತ್ತವೆ ಎಂದು ತಿಳಿಯುತ್ತಲೇ ಕಾರ್ಮಿಕರು ಅಲ್ಲಿ ಜಮಾಯಿಸಿದರು.

ಕೊರೊನಾ ಹರಡದಂತೆ ಟೆಸ್ಟ್‌ ಮಾಡಿಸಿಕೊಂಡಿರಬೇಕು, ಟಿಕೇಟ್‌ ಖರೀದಿಸಿ ಪ್ರಯಾಣಿಸಬೇಕು ಮತ್ತು ಒಂದು ಬಸ್‌ನಲ್ಲಿ ಒಟ್ಟು ಬಸ್‌ ಸಾಮರ್ಥ್ಯದ ಶೇ.40% ಜನ ಮಾತ್ರ ಪ್ರಯಾಣಿಸಬಹುದು ಎಂದು ನಿಯಮಗಳನ್ನು ಸರ್ಕಾರ ವಿಧಿಸಿತ್ತು. ಆದರೆ ಪ್ರಯಾಣ ದರ ಮೂರು ಪಟ್ಟು ಹೆಚ್ಚಾಗಿದೆ ಎಂದು ಅವರು ಬಾಯಿಬಿಟ್ಟಿರಲಿಲ್ಲ. ಇದರಿಂದ ಇತ್ತ ಒಂದೂವರೆ ತಿಂಗಳಿನಿಂದ ಬೆಂಗಳೂರಿನಲ್ಲಿ ಲಾಕ್‌ಡೌನ್‌ನಲ್ಲಿ ಸಿಕ್ಕಿಬಿದ್ದು ಹೊಟ್ಟೆ ಬಟ್ಟೆಗಿಲ್ಲದೇ ಕಷ್ಟ ಅನುಭವಿಸಿದ್ದ ಕಾರ್ಮಿಕರು ಅಂತೂ ತಮ್ಮೂರು ತಲುಪುವ ಆಸೆಯಲ್ಲಿ ಬನ್ನಪ್ಪ ಪಾರ್ಕ್‌ ಬಳಿ ಬಂದರೆ ಅವರಿಗೆ ನಿರಾಶೆ ಕಾದಿತ್ತು.

ಏಕೆಂದರೆ ಕಾರ್ಮಿಕನೊಬ್ಬ 450 ರೂ ಕೊಟ್ಟು ರಾಯಚೂರಿಗೆ ಪ್ರಯಾಣಿಸುವುದೇ ಲಾಕ್‌ಡೌನ್‌ನಿಂದಾಗಿ ಕಷ್ಟವಾಗಿರುವಾಗ, ಸರ್ಕಾರ ರಾಯಚೂರಿಗೆ ಒಬ್ಬರಿಗೆ 1203 ರೂ ನಿಗಧಿಪಡಿಸಿದೆ! ಉತ್ತರ ಕನ್ನಡಕ್ಕೆ 1493 ರೂ! ಯಾದಗಿರಿಗೆ 1411ರೂ! ಹೆಚ್ಚು ಕಮ್ಮಿ ಎರಡು ತಿಂಗಳು ಯಾವುದೇ ಕೆಲಸವಿಲ್ಲ, ಕೂಲಿಯಿಲ್ಲದೇ ಇದ್ದಬದ್ದ ಹಣವನ್ನೆಲ್ಲಾ ದಿನಬಳಕೆಯ ವಸ್ತುಗಳಿಗಾಗಿ ಬಳಸಿರುವ ಆ ಕಾರ್ಮಿಕರು ಇಷ್ಟೊಂದು ಹಣವನ್ನು ಭರಿಸುವುದೇಗೆ ಎನ್ನುವ ಸಣ್ಣ ಕಾಮನ್‌ ಸೆನ್ಸ್‌ ಕೂಡ ಸರ್ಕಾರಕ್ಕಿಲ್ಲ.

ಸರ್ಕಾರ ನಿಗಧಿಪಡಿಸಿರುವ ದರಪಟ್ಟಿ

ಮೂರು ನಾಲ್ಕು ಜನ ಇರುವ ಕುಟುಂಬವೊಂದು ಉತ್ತರ ಕರ್ನಾಟಕದ ತಮ್ಮ ಹಳ್ಳಿಗೆ ಮರಳಬೇಕಾದರೆ ಕನಿಷ್ಟ 5-6 ಸಾವಿರ ಹಣ ಹೊಂದಿರಬೇಕಾಗುತ್ತದೆ. ಅಷ್ಟು ಹಣವನ್ನು ಅವರು ಹೊಂದಿಸುವುದೇಗೆ? ತಮ್ಮದಲ್ಲದ ತಪ್ಪಿಗೆ ಈ ಕಾರ್ಮಿಕರೇಕೆ ಇಷ್ಟು ನೋವು ಅನುಭವಿಸಬೇಕು? ಕಾರ್ಮಿಕರ ಕುರಿತಾಗಿ ಸರ್ಕಾರ ಇಷ್ಟು ಅಮಾನವೀಯವಾಗಿ ವರ್ತಿಸಬಾರದಿತ್ತು ಎಂಬ ಆಕ್ರೋಶ ತೀವ್ರವಾಗಿ ಕೇಳಿಬಂದಿದೆ.

ಸರ್ಕಾರದ ವಾದವೇನು?

ಈಗಾಗಲೇ ಕೆ.ಎಸ್‌.ಆರ್‌.ಟಿ.ಸಿ ನಷ್ಟದಲ್ಲಿದೆ. ಅಲ್ಲದೇ ಕೇವಲ 40% ಜನರನ್ನು ಮಾತ್ರ ಕೊಂಡೊಯ್ಯಬೇಕು. ವಾಪಸ್‌ ಬೆಂಗಳೂರಿಗೆ ಬಸ್‌ ಖಾಲಿ ಬರಬೇಕು. ಇದೆಲ್ಲವನ್ನು ಕೂಡಿಸಿ ಆ ಭಾರವನ್ನು ಕಾರ್ಮಿಕರ ತಲೆಯ ಮೇಲೆ ಹಾಕಲು ಸರ್ಕಾರ ನಿರ್ಧರಿಸಿದೆ. ಒಂದೂವರೆ ತಿಂಗಳು ನೋವುಂಡು ಜರ್ಜರಿತವಾಗಿರುವ ಕಾರ್ಮಿಕರನ್ನು ಉಚಿತವಾಗಿ ಅವರ ಊರುಗಳಿಗೆ ಕಳಿಸಬೇಕಾದ ಸರ್ಕಾರ ಅವರಿಂದಲೇ ಲೂಟಿಗೆ ಇಳಿದಿರುವುದು ನಾಗರೀಕ ಸಮಾಜ ತಲೆ ತಗ್ಗಿಸುವಂತೆ ಆಗಿದೆ ಎಂದು ಹಲವಾರು ಕಾರ್ಮಿಕರು ದೂರಿದ್ದಾರೆ.

ಕಾರಣರಾರು?

ಸಂಪುಟ ಸಭೆಯಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಹಣವನ್ನು ನಿಗಧಿಪಡಿಸಬೇಕೆಂದು ಸೂಚಿಸಿದವರು ಸಾರಿಗೆ ಸಚಿವ ಮತ್ತು ಉಪಮುಖ್ಯಮಂತ್ರಿ ಲಕ್ಷ್ಮಣ್‌ ಸವದಿ ಎಂದು ಹೇಳಲಾಗುತ್ತಿದೆ. ಅಲ್ಲದೇ ಮತ್ತೊಬ್ಬ ಉಪಮುಖ್ಯಮಂತ್ರಿ ಅಶ್ವಥ್‌ ನಾರಾಯಣ್‌ ಇದಕ್ಕೆ ಒತ್ತಾಯಿಸಿದ್ದಾರೆ ಎಂದು  ಹೆಸರು ಹೇಳಲಿಚ್ಚಿಸದ ಹಿರಿಯ ಐಎಎಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉತ್ತರ ಕರ್ನಾಟಕದವರೇ ಆದ, ಸಾರಿಗೆ ಸಚಿವನಾಗಿ, ಉಪಮುಖ್ಯಮಂತ್ರಿಯಾಗಿ ಲಕ್ಷ್ಮಣ್‌ ಸವದಿಯವರ ಈ ನಿರ್ಧಾರ ಅಮಾನವೀಯವಾದುದ್ದಾಗಿದೆ. ಬಹುತೇಕ ವಲಸೆ ಕಾರ್ಮಿಕರು ಉತ್ತರ ಕರ್ನಾಟಕದವರೆ ಆಗಿದ್ದು ಅವರಿಗಾಗಿ  ಕೆಲಸ ಮಾಡಲಾಗದೇ ಇಂದು ಇಂತಹ ನಿರ್ಧಾರ ತೆಗೆದುಕೊಂಡಿರುವುದು ಕಾರ್ಮಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನು ಐಟಿಬಿಟಿ ಸಚಿವ ಮತ್ತು ಉಪಮುಖ್ಯಮಂತ್ರಿ ಅಶ್ವಥ್‌ ನಾರಾಯಣ್‌ಗೆ ಕಾರ್ಮಿಕರ ಸಂಕಷ್ಟಕ್ಕಿಂತ ಬೆಂಗಳೂರಿನ ರಿಯಲ್‌ ಎಸ್ಟೇಟ್‌ ಕುಳಗಳ ಹಿತವೇ ಮುಖ್ಯವಾಗಿದೆ. ಕಾರ್ಮಿಕರೆಲ್ಲ ತಮ್ಮ ಊರುಗಳಿಗೆ ಹೊರಟುಹೋದರೆ ಇನ್ನು ಕೆಲವೇ ದಿನಗಳಲ್ಲಿ ಕಟ್ಟಡ ಕಾಮಗಾರಿ ಆರಂಭವಾದರೆ ಕಾರ್ಮಿಕರ ಕೊರತೆ ಉಂಟಾಗುತ್ತದೆ ಎಂಬ ದೂರಾಲೋಚನೆ ಅವರದು. ಒಟ್ಟಿನಲ್ಲಿ ಇದರಲ್ಲಿ ನಲುಗಿಹೋಗಿರುವವರು ಮಾತ್ರ ಕಾರ್ಮಿಕರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ನಮ್ಮಲ್ಲಿ ತಿಳಿಸಿದರು.

ಮುಖ್ಯಮಂತ್ರಿಗಳನ್ನು ಭೇಟಿಯಾಗುತ್ತೇನೆ: ಪ್ರಿಯಾಂಕ್‌ ಖರ್ಗೆ

ಈ ಕುರಿತು ನಾನುಗೌರಿ.ಕಾಂ ಮಾಜಿ ಸಚಿವರಾದ ಪ್ರಿಯಾಂಕ್‌ ಖರ್ಗೆಯವರನ್ನು ಮಾತಾಡಿಸಿತು. ಅವರು “ಈಗಾಗಲೇ ಎರಡು ತಿಂಗಳಿನಿಂದ ಕಾರ್ಮಿಕರಿಗೆ ಕೆಲಸ, ಕೂಲಿ ಸಿಗದೇ ಸಂಕಷ್ಟದಲ್ಲಿದ್ದಾರೆ. ಇನ್ನು ನಮ್ಮ ಜೀವನ ಸಾಕು ನಮ್ಮೂರಿಗೆ ಹೋಗಿ, ನಮ್ಮ ಮಣ್ಣಿನಲ್ಲಿ ಪ್ರಾಣ ಬಿಡೋಣ ಎಂದು ನಿರ್ಧರಿಸಿದ್ದಾರೆ. ಅದಕ್ಕೂ ಈ ಸರ್ಕಾರ ಅವಕಾಶ ಕೊಡದಷ್ಟು ಅಮಾನವೀಯವಾಗಿಬಿಟ್ಟಿದೆ. ಟಿಕೆಟ್‌ ಬೆಲೆಯನ್ನು ಹೆಚ್ಚಿಸುವ ಮೂಲಕ ಸಂಕಷ್ಟದಲ್ಲಿರುವ ಬಡವರ ಮೇಲೆ ಸರ್ಕಾರ ಮತ್ತೊಮ್ಮೆ ಬರೆ ಎಳೆಯುತ್ತಿದೆ. ಕಾಮಿರ್ಕರು 5-6 ಸಾವಿರ ಕೊಟ್ಟು ಊರಿಗೆ ಹೋಗುವಷ್ಟು ಶ್ರೀಮಂತರಾಗಿದ್ದರೆ ಅವರಿಗೆ ಸರ್ಕಾರ ಏಕೆ ರೇಷನ್‌ ಮತ್ತು ಆಹಾರ ಕಿಟ್‌ ಕೊಡಬೇಕಿತ್ತು ಹೇಳಿ? ಈ ಸರ್ಕಾರಕ್ಕೆ ಯಾರು ಸಲಹೆ ಕೊಡುತ್ತಿದ್ದಾರೆ ಗೊತ್ತಾಗತ್ತಿಲ್ಲ” ಎಂದು ಕಿಡಿಕಾರಿದರು.

ಪ್ರಿಯಾಂಕ್‌ ಖರ್ಗೆ

ಅಮಿತ್‌ ಶಾರವರು ಉತ್ತರಖಂಡದಿಂದ 1800 ಕಾರ್ಮಿಕರನ್ನು ಉಚಿತವಾಗಿ ವಾಪಸ್‌ ಕರೆಸಿಕೊಳ್ಳುತ್ತಾರೆ. ಕೇರಳದವರು ರಾಜಸ್ಥಾನದಿಂದ ತಮ್ಮ ಕಾರ್ಮಿಕರನ್ನು ಉಚಿತವಾಗಿ ಕರೆಸಿಕೊಳ್ಳುತ್ತಾರೆ. ತೆಲಂಗಾಣದಿಂದ ಜಾರ್ಖಂಡ್‌ ಕಾರ್ಮಿಕರು ಉಚಿತರವಾಗಿ ತೆರಳಿದ್ದಾರೆ. ಆದರೆ ನಮ್ಮ ಕರ್ನಾಟಕದಿಂದ ಕರ್ನಾಟಕದ ಇನ್ನೊಂದು ಜಿಲ್ಲೆಗೆ ಹೋಗಲು ಇಷ್ಟು ಸಾವಿರ ಹಣ ಕೊಡಬೇಕು ಎಂದರೆ ಯಾವ ನ್ಯಾಯ? ಈ ಕುರಿತು ಸಿಎಂಗೆ ಪತ್ರ ಬರೆಯುತ್ತಿದ್ದು, ಇಂದೇ ಅವರನ್ನು ಭೇಟಿಯಾಗಿ ಚರ್ಚಿಸುತ್ತೇನೆ ಎಂದರು.

ಸರಕಾರದ ದಿವಾಳಿತನಕ್ಕೆ ಸಾಕ್ಷಿ: ರಜಾಕ್‌ ಉಸ್ತಾದ್‌

ರಜಾಕ್‌ ಉಸ್ತಾದ್

ಅದೇ ರೀತಿಯಾಗಿ ಹೈದರಾಬಾದ್‌ ಕರ್ನಾಟಕ ಹೋರಾಟಗಾರರಾದ ರಜಾಕ್‌ ಉಸ್ತಾದ್‌ರವರು ಪ್ರತಿಕ್ರಿಯಿಸಿ “ಸರಕಾರ ಲಾಕಡೌನ್‌ ಘೋಷಿಸಿದ ನಂತರ ಬಡವರು, ನಿರ್ಗತಿಕರು, ಕೂಲಿಕಾರ್ಮಿಕರ ಬಗ್ಗೆ ಯಾವುದೇ ಪರಿಹಾರ ಕಾರ್ಯಕ್ರಮ ನೀಡದೇ, ಈಗ ಕಾರ್ಮಿಕರನ್ನು ಅವರ ಊರುಗಳಿಗೆ ತೆರಳಲು ಬಸ್ ಗಳ ವ್ಯವಸ್ಥೆ ಮಾಡುವದಾಗಿ ಹೇಳಿದ ಸರಕಾರ ಬಸ್ ದರವನ್ನು ಮೂರುಪಟ್ಟು ಹೆಚ್ಚಿಗೆ ಹಣವನ್ನು ಪಡೆಯುವದರ ಮೂಲಕ ಹಗಲು ದರೋಡೆಗೆ ಇಳಿದಿದೆ. ಬಡವರ ಬಡತನವನ್ನು ದುರುಪಯೋಗ ಪಡಿಸಿಕೊಂಡು ಅವರ ಸುಲಿಗೆಗೆ ಇಳಿದಿರುವದು ಸರಕಾರದ ದಿವಾಳಿತನಕ್ಕೆ ಸಾಕ್ಷಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕರ ಸಂಕಷ್ಟದ ಕುರಿತಾಗಿ ನಡೆಯುತ್ತಿರುವ ಸರ್ವೆಯ ಭಾಗವಾಗಿ ಕೆಲ ಕಾರ್ಮಿಕರಿಗೆ ಸ್ವಯಂಸೇವಕರು ಫೋನ್‌ ಮಾಡಿದಾಗ “ಅವರು ಸರ್‌ ದಯವಿಟ್ಟು ನಮ್ಮೂರಿಗೆ ತೆರಳಲು ಅವಕಾಶ ಮಾಡಿಕೊಡಿ, ಒಂದಷ್ಟು ಸಾಲ ಕೊಡಿ ಎಂದು ಅವಲತ್ತುಕೊಳ್ಳುತ್ತಿರುವ” ದೃಶ್ಯಗಳು ಸಾಮಾನ್ಯವಾಗಿವೆ. ಇನ್ನು ಕೆಲವರು ಗರ್ಭಿಣಿ ಸ್ತ್ರೀಯರಿದ್ದು ಊರಿಗೆ ಹೋಗಲು ಹಣವಿಲ್ಲದೇ ಒದ್ದಾಡುವ ಪರಿಸ್ಥಿತಿಯನ್ನು ವಿವರಿಸುತ್ತಿದ್ದಾರೆ. ಹಾಗಾಗಿ ಸರ್ಕಾರ ಕೂಡಲೇ ಉಚಿತವಾಗಿ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಅವಕಾಶಮಾಡಿಕೊಡಬೇಕಿದೆ. ಯಾವು ಯಾವುದಕ್ಕೋ ಕೋಟ್ಯಾಂತರ ಹಣ ಖರ್ಚು ಮಾಡುವ ಸರ್ಕಾರ ನಮ್ಮ ನಾಡು ಕಟ್ಟುವ ಕಾರ್ಮಿಕರಿಗೆ ಕೆಲವು ಲಕ್ಷ ಕೋಟಿಗಳನ್ನು ವ್ಯಯಿಸಿದರೆ ಕಳೆದುಕೊಳ್ಳುವುದು ಏನು ಇಲ್ಲ. ಇಲ್ಲವಾದರೆ ಕಾರ್ಮಿಕರ ಕಣ್ಣೀರು ಮತ್ತಷ್ಟು ಹೆಚ್ಚಾಗಲಿದ್ದು, ಅವರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...