Homeಮುಖಪುಟಊರಿಗೆ ತೆರಳಲು ಬಸ್‌: ಟಿಕೆಟ್ ಬೆಲೆ ಮೂರು ಪಟ್ಟು ಹೆಚ್ಚು, ಸಂಕಷ್ಟದಲ್ಲಿ ಕಣ್ಣೀರಿಡುತ್ತಿರುವ ಕಾರ್ಮಿಕರು

ಊರಿಗೆ ತೆರಳಲು ಬಸ್‌: ಟಿಕೆಟ್ ಬೆಲೆ ಮೂರು ಪಟ್ಟು ಹೆಚ್ಚು, ಸಂಕಷ್ಟದಲ್ಲಿ ಕಣ್ಣೀರಿಡುತ್ತಿರುವ ಕಾರ್ಮಿಕರು

ಯಾವು ಯಾವುದಕ್ಕೋ ಕೋಟ್ಯಾಂತರ ಹಣ ಖರ್ಚು ಮಾಡುವ ಸರ್ಕಾರ ನಮ್ಮ ನಾಡು ಕಟ್ಟುವ ಕಾರ್ಮಿಕರಿಗೆ ಕೆಲವು ಲಕ್ಷ ಕೋಟಿಗಳನ್ನು ವ್ಯಯಿಸಿದರೆ ಕಳೆದುಕೊಳ್ಳುವುದು ಏನು ಇಲ್ಲ. ಇಲ್ಲವಾದರೆ ಕಾರ್ಮಿಕರ ಕಣ್ಣೀರು ಮತ್ತಷ್ಟು ಹೆಚ್ಚಾಗಲಿದ್ದು, ಅವರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ.

- Advertisement -
- Advertisement -

ಲಾಕ್‌ಡೌನ್‌ ಮುಂದುವರೆಯುತ್ತಲೇ ಇದೆ. ಈ ಸಂದರ್ಭದಲ್ಲಿ ಊರಿಗೆ ತೆರಳಲಾರದೇ ಬೆಂಗಳೂರಿನಲ್ಲಿ ಸಿಕ್ಕಿಕೊಂಡಿರುವ ಕಾರ್ಮಿಕರಿಗೆ ಊರಿಗೆ ಹೋಗಲು ಸರ್ಕಾರ ಬಸ್‌ ವ್ಯವಸ್ಥೆ ಮಾಡಿದೆ. ಆದರೆ ಆ ಕಾರ್ಮಿಕರು ಊರಿಗೆ ಹೋಗುವಂತಿಲ್ಲ, ಇಲ್ಲಿಯೂ ಇರುವಂತಿಲ್ಲದೇ ನರಳುವಂತಹ ಪರಿಸ್ಥಿತಿ ಬಂದಿದೆ.

ಏಕೆ ಹೀಗಾಯಿತು?

ಗುರುವಾರ ಸಂಜೆ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಮಾಧುಸ್ವಾಮಿ ನಾಳೆಯಿಂದಲೇ ಕಾರ್ಮಿಕರು ತಮ್ಮ ಊರುಗಳಿಗೆ ಮರಳಲು ಬಸ್‌ ವ್ಯವಸ್ಥೆ ಮಾಡಲಾಗುವುದು ಎಂದು ಘೋಷಿಸಿದರು. ಅದರಂತರೆ ಕಂದಾಯಭವನದ ಎದುರಿನ ಬನ್ನಪ್ಪ ಪಾರ್ಕ್‌ ನಿಂದ ಬಸ್‌ ತೆರಳುತ್ತವೆ ಎಂದು ತಿಳಿಯುತ್ತಲೇ ಕಾರ್ಮಿಕರು ಅಲ್ಲಿ ಜಮಾಯಿಸಿದರು.

ಕೊರೊನಾ ಹರಡದಂತೆ ಟೆಸ್ಟ್‌ ಮಾಡಿಸಿಕೊಂಡಿರಬೇಕು, ಟಿಕೇಟ್‌ ಖರೀದಿಸಿ ಪ್ರಯಾಣಿಸಬೇಕು ಮತ್ತು ಒಂದು ಬಸ್‌ನಲ್ಲಿ ಒಟ್ಟು ಬಸ್‌ ಸಾಮರ್ಥ್ಯದ ಶೇ.40% ಜನ ಮಾತ್ರ ಪ್ರಯಾಣಿಸಬಹುದು ಎಂದು ನಿಯಮಗಳನ್ನು ಸರ್ಕಾರ ವಿಧಿಸಿತ್ತು. ಆದರೆ ಪ್ರಯಾಣ ದರ ಮೂರು ಪಟ್ಟು ಹೆಚ್ಚಾಗಿದೆ ಎಂದು ಅವರು ಬಾಯಿಬಿಟ್ಟಿರಲಿಲ್ಲ. ಇದರಿಂದ ಇತ್ತ ಒಂದೂವರೆ ತಿಂಗಳಿನಿಂದ ಬೆಂಗಳೂರಿನಲ್ಲಿ ಲಾಕ್‌ಡೌನ್‌ನಲ್ಲಿ ಸಿಕ್ಕಿಬಿದ್ದು ಹೊಟ್ಟೆ ಬಟ್ಟೆಗಿಲ್ಲದೇ ಕಷ್ಟ ಅನುಭವಿಸಿದ್ದ ಕಾರ್ಮಿಕರು ಅಂತೂ ತಮ್ಮೂರು ತಲುಪುವ ಆಸೆಯಲ್ಲಿ ಬನ್ನಪ್ಪ ಪಾರ್ಕ್‌ ಬಳಿ ಬಂದರೆ ಅವರಿಗೆ ನಿರಾಶೆ ಕಾದಿತ್ತು.

ಏಕೆಂದರೆ ಕಾರ್ಮಿಕನೊಬ್ಬ 450 ರೂ ಕೊಟ್ಟು ರಾಯಚೂರಿಗೆ ಪ್ರಯಾಣಿಸುವುದೇ ಲಾಕ್‌ಡೌನ್‌ನಿಂದಾಗಿ ಕಷ್ಟವಾಗಿರುವಾಗ, ಸರ್ಕಾರ ರಾಯಚೂರಿಗೆ ಒಬ್ಬರಿಗೆ 1203 ರೂ ನಿಗಧಿಪಡಿಸಿದೆ! ಉತ್ತರ ಕನ್ನಡಕ್ಕೆ 1493 ರೂ! ಯಾದಗಿರಿಗೆ 1411ರೂ! ಹೆಚ್ಚು ಕಮ್ಮಿ ಎರಡು ತಿಂಗಳು ಯಾವುದೇ ಕೆಲಸವಿಲ್ಲ, ಕೂಲಿಯಿಲ್ಲದೇ ಇದ್ದಬದ್ದ ಹಣವನ್ನೆಲ್ಲಾ ದಿನಬಳಕೆಯ ವಸ್ತುಗಳಿಗಾಗಿ ಬಳಸಿರುವ ಆ ಕಾರ್ಮಿಕರು ಇಷ್ಟೊಂದು ಹಣವನ್ನು ಭರಿಸುವುದೇಗೆ ಎನ್ನುವ ಸಣ್ಣ ಕಾಮನ್‌ ಸೆನ್ಸ್‌ ಕೂಡ ಸರ್ಕಾರಕ್ಕಿಲ್ಲ.

ಸರ್ಕಾರ ನಿಗಧಿಪಡಿಸಿರುವ ದರಪಟ್ಟಿ

ಮೂರು ನಾಲ್ಕು ಜನ ಇರುವ ಕುಟುಂಬವೊಂದು ಉತ್ತರ ಕರ್ನಾಟಕದ ತಮ್ಮ ಹಳ್ಳಿಗೆ ಮರಳಬೇಕಾದರೆ ಕನಿಷ್ಟ 5-6 ಸಾವಿರ ಹಣ ಹೊಂದಿರಬೇಕಾಗುತ್ತದೆ. ಅಷ್ಟು ಹಣವನ್ನು ಅವರು ಹೊಂದಿಸುವುದೇಗೆ? ತಮ್ಮದಲ್ಲದ ತಪ್ಪಿಗೆ ಈ ಕಾರ್ಮಿಕರೇಕೆ ಇಷ್ಟು ನೋವು ಅನುಭವಿಸಬೇಕು? ಕಾರ್ಮಿಕರ ಕುರಿತಾಗಿ ಸರ್ಕಾರ ಇಷ್ಟು ಅಮಾನವೀಯವಾಗಿ ವರ್ತಿಸಬಾರದಿತ್ತು ಎಂಬ ಆಕ್ರೋಶ ತೀವ್ರವಾಗಿ ಕೇಳಿಬಂದಿದೆ.

ಸರ್ಕಾರದ ವಾದವೇನು?

ಈಗಾಗಲೇ ಕೆ.ಎಸ್‌.ಆರ್‌.ಟಿ.ಸಿ ನಷ್ಟದಲ್ಲಿದೆ. ಅಲ್ಲದೇ ಕೇವಲ 40% ಜನರನ್ನು ಮಾತ್ರ ಕೊಂಡೊಯ್ಯಬೇಕು. ವಾಪಸ್‌ ಬೆಂಗಳೂರಿಗೆ ಬಸ್‌ ಖಾಲಿ ಬರಬೇಕು. ಇದೆಲ್ಲವನ್ನು ಕೂಡಿಸಿ ಆ ಭಾರವನ್ನು ಕಾರ್ಮಿಕರ ತಲೆಯ ಮೇಲೆ ಹಾಕಲು ಸರ್ಕಾರ ನಿರ್ಧರಿಸಿದೆ. ಒಂದೂವರೆ ತಿಂಗಳು ನೋವುಂಡು ಜರ್ಜರಿತವಾಗಿರುವ ಕಾರ್ಮಿಕರನ್ನು ಉಚಿತವಾಗಿ ಅವರ ಊರುಗಳಿಗೆ ಕಳಿಸಬೇಕಾದ ಸರ್ಕಾರ ಅವರಿಂದಲೇ ಲೂಟಿಗೆ ಇಳಿದಿರುವುದು ನಾಗರೀಕ ಸಮಾಜ ತಲೆ ತಗ್ಗಿಸುವಂತೆ ಆಗಿದೆ ಎಂದು ಹಲವಾರು ಕಾರ್ಮಿಕರು ದೂರಿದ್ದಾರೆ.

ಕಾರಣರಾರು?

ಸಂಪುಟ ಸಭೆಯಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಹಣವನ್ನು ನಿಗಧಿಪಡಿಸಬೇಕೆಂದು ಸೂಚಿಸಿದವರು ಸಾರಿಗೆ ಸಚಿವ ಮತ್ತು ಉಪಮುಖ್ಯಮಂತ್ರಿ ಲಕ್ಷ್ಮಣ್‌ ಸವದಿ ಎಂದು ಹೇಳಲಾಗುತ್ತಿದೆ. ಅಲ್ಲದೇ ಮತ್ತೊಬ್ಬ ಉಪಮುಖ್ಯಮಂತ್ರಿ ಅಶ್ವಥ್‌ ನಾರಾಯಣ್‌ ಇದಕ್ಕೆ ಒತ್ತಾಯಿಸಿದ್ದಾರೆ ಎಂದು  ಹೆಸರು ಹೇಳಲಿಚ್ಚಿಸದ ಹಿರಿಯ ಐಎಎಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉತ್ತರ ಕರ್ನಾಟಕದವರೇ ಆದ, ಸಾರಿಗೆ ಸಚಿವನಾಗಿ, ಉಪಮುಖ್ಯಮಂತ್ರಿಯಾಗಿ ಲಕ್ಷ್ಮಣ್‌ ಸವದಿಯವರ ಈ ನಿರ್ಧಾರ ಅಮಾನವೀಯವಾದುದ್ದಾಗಿದೆ. ಬಹುತೇಕ ವಲಸೆ ಕಾರ್ಮಿಕರು ಉತ್ತರ ಕರ್ನಾಟಕದವರೆ ಆಗಿದ್ದು ಅವರಿಗಾಗಿ  ಕೆಲಸ ಮಾಡಲಾಗದೇ ಇಂದು ಇಂತಹ ನಿರ್ಧಾರ ತೆಗೆದುಕೊಂಡಿರುವುದು ಕಾರ್ಮಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನು ಐಟಿಬಿಟಿ ಸಚಿವ ಮತ್ತು ಉಪಮುಖ್ಯಮಂತ್ರಿ ಅಶ್ವಥ್‌ ನಾರಾಯಣ್‌ಗೆ ಕಾರ್ಮಿಕರ ಸಂಕಷ್ಟಕ್ಕಿಂತ ಬೆಂಗಳೂರಿನ ರಿಯಲ್‌ ಎಸ್ಟೇಟ್‌ ಕುಳಗಳ ಹಿತವೇ ಮುಖ್ಯವಾಗಿದೆ. ಕಾರ್ಮಿಕರೆಲ್ಲ ತಮ್ಮ ಊರುಗಳಿಗೆ ಹೊರಟುಹೋದರೆ ಇನ್ನು ಕೆಲವೇ ದಿನಗಳಲ್ಲಿ ಕಟ್ಟಡ ಕಾಮಗಾರಿ ಆರಂಭವಾದರೆ ಕಾರ್ಮಿಕರ ಕೊರತೆ ಉಂಟಾಗುತ್ತದೆ ಎಂಬ ದೂರಾಲೋಚನೆ ಅವರದು. ಒಟ್ಟಿನಲ್ಲಿ ಇದರಲ್ಲಿ ನಲುಗಿಹೋಗಿರುವವರು ಮಾತ್ರ ಕಾರ್ಮಿಕರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ನಮ್ಮಲ್ಲಿ ತಿಳಿಸಿದರು.

ಮುಖ್ಯಮಂತ್ರಿಗಳನ್ನು ಭೇಟಿಯಾಗುತ್ತೇನೆ: ಪ್ರಿಯಾಂಕ್‌ ಖರ್ಗೆ

ಈ ಕುರಿತು ನಾನುಗೌರಿ.ಕಾಂ ಮಾಜಿ ಸಚಿವರಾದ ಪ್ರಿಯಾಂಕ್‌ ಖರ್ಗೆಯವರನ್ನು ಮಾತಾಡಿಸಿತು. ಅವರು “ಈಗಾಗಲೇ ಎರಡು ತಿಂಗಳಿನಿಂದ ಕಾರ್ಮಿಕರಿಗೆ ಕೆಲಸ, ಕೂಲಿ ಸಿಗದೇ ಸಂಕಷ್ಟದಲ್ಲಿದ್ದಾರೆ. ಇನ್ನು ನಮ್ಮ ಜೀವನ ಸಾಕು ನಮ್ಮೂರಿಗೆ ಹೋಗಿ, ನಮ್ಮ ಮಣ್ಣಿನಲ್ಲಿ ಪ್ರಾಣ ಬಿಡೋಣ ಎಂದು ನಿರ್ಧರಿಸಿದ್ದಾರೆ. ಅದಕ್ಕೂ ಈ ಸರ್ಕಾರ ಅವಕಾಶ ಕೊಡದಷ್ಟು ಅಮಾನವೀಯವಾಗಿಬಿಟ್ಟಿದೆ. ಟಿಕೆಟ್‌ ಬೆಲೆಯನ್ನು ಹೆಚ್ಚಿಸುವ ಮೂಲಕ ಸಂಕಷ್ಟದಲ್ಲಿರುವ ಬಡವರ ಮೇಲೆ ಸರ್ಕಾರ ಮತ್ತೊಮ್ಮೆ ಬರೆ ಎಳೆಯುತ್ತಿದೆ. ಕಾಮಿರ್ಕರು 5-6 ಸಾವಿರ ಕೊಟ್ಟು ಊರಿಗೆ ಹೋಗುವಷ್ಟು ಶ್ರೀಮಂತರಾಗಿದ್ದರೆ ಅವರಿಗೆ ಸರ್ಕಾರ ಏಕೆ ರೇಷನ್‌ ಮತ್ತು ಆಹಾರ ಕಿಟ್‌ ಕೊಡಬೇಕಿತ್ತು ಹೇಳಿ? ಈ ಸರ್ಕಾರಕ್ಕೆ ಯಾರು ಸಲಹೆ ಕೊಡುತ್ತಿದ್ದಾರೆ ಗೊತ್ತಾಗತ್ತಿಲ್ಲ” ಎಂದು ಕಿಡಿಕಾರಿದರು.

ಪ್ರಿಯಾಂಕ್‌ ಖರ್ಗೆ

ಅಮಿತ್‌ ಶಾರವರು ಉತ್ತರಖಂಡದಿಂದ 1800 ಕಾರ್ಮಿಕರನ್ನು ಉಚಿತವಾಗಿ ವಾಪಸ್‌ ಕರೆಸಿಕೊಳ್ಳುತ್ತಾರೆ. ಕೇರಳದವರು ರಾಜಸ್ಥಾನದಿಂದ ತಮ್ಮ ಕಾರ್ಮಿಕರನ್ನು ಉಚಿತವಾಗಿ ಕರೆಸಿಕೊಳ್ಳುತ್ತಾರೆ. ತೆಲಂಗಾಣದಿಂದ ಜಾರ್ಖಂಡ್‌ ಕಾರ್ಮಿಕರು ಉಚಿತರವಾಗಿ ತೆರಳಿದ್ದಾರೆ. ಆದರೆ ನಮ್ಮ ಕರ್ನಾಟಕದಿಂದ ಕರ್ನಾಟಕದ ಇನ್ನೊಂದು ಜಿಲ್ಲೆಗೆ ಹೋಗಲು ಇಷ್ಟು ಸಾವಿರ ಹಣ ಕೊಡಬೇಕು ಎಂದರೆ ಯಾವ ನ್ಯಾಯ? ಈ ಕುರಿತು ಸಿಎಂಗೆ ಪತ್ರ ಬರೆಯುತ್ತಿದ್ದು, ಇಂದೇ ಅವರನ್ನು ಭೇಟಿಯಾಗಿ ಚರ್ಚಿಸುತ್ತೇನೆ ಎಂದರು.

ಸರಕಾರದ ದಿವಾಳಿತನಕ್ಕೆ ಸಾಕ್ಷಿ: ರಜಾಕ್‌ ಉಸ್ತಾದ್‌

ರಜಾಕ್‌ ಉಸ್ತಾದ್

ಅದೇ ರೀತಿಯಾಗಿ ಹೈದರಾಬಾದ್‌ ಕರ್ನಾಟಕ ಹೋರಾಟಗಾರರಾದ ರಜಾಕ್‌ ಉಸ್ತಾದ್‌ರವರು ಪ್ರತಿಕ್ರಿಯಿಸಿ “ಸರಕಾರ ಲಾಕಡೌನ್‌ ಘೋಷಿಸಿದ ನಂತರ ಬಡವರು, ನಿರ್ಗತಿಕರು, ಕೂಲಿಕಾರ್ಮಿಕರ ಬಗ್ಗೆ ಯಾವುದೇ ಪರಿಹಾರ ಕಾರ್ಯಕ್ರಮ ನೀಡದೇ, ಈಗ ಕಾರ್ಮಿಕರನ್ನು ಅವರ ಊರುಗಳಿಗೆ ತೆರಳಲು ಬಸ್ ಗಳ ವ್ಯವಸ್ಥೆ ಮಾಡುವದಾಗಿ ಹೇಳಿದ ಸರಕಾರ ಬಸ್ ದರವನ್ನು ಮೂರುಪಟ್ಟು ಹೆಚ್ಚಿಗೆ ಹಣವನ್ನು ಪಡೆಯುವದರ ಮೂಲಕ ಹಗಲು ದರೋಡೆಗೆ ಇಳಿದಿದೆ. ಬಡವರ ಬಡತನವನ್ನು ದುರುಪಯೋಗ ಪಡಿಸಿಕೊಂಡು ಅವರ ಸುಲಿಗೆಗೆ ಇಳಿದಿರುವದು ಸರಕಾರದ ದಿವಾಳಿತನಕ್ಕೆ ಸಾಕ್ಷಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕರ ಸಂಕಷ್ಟದ ಕುರಿತಾಗಿ ನಡೆಯುತ್ತಿರುವ ಸರ್ವೆಯ ಭಾಗವಾಗಿ ಕೆಲ ಕಾರ್ಮಿಕರಿಗೆ ಸ್ವಯಂಸೇವಕರು ಫೋನ್‌ ಮಾಡಿದಾಗ “ಅವರು ಸರ್‌ ದಯವಿಟ್ಟು ನಮ್ಮೂರಿಗೆ ತೆರಳಲು ಅವಕಾಶ ಮಾಡಿಕೊಡಿ, ಒಂದಷ್ಟು ಸಾಲ ಕೊಡಿ ಎಂದು ಅವಲತ್ತುಕೊಳ್ಳುತ್ತಿರುವ” ದೃಶ್ಯಗಳು ಸಾಮಾನ್ಯವಾಗಿವೆ. ಇನ್ನು ಕೆಲವರು ಗರ್ಭಿಣಿ ಸ್ತ್ರೀಯರಿದ್ದು ಊರಿಗೆ ಹೋಗಲು ಹಣವಿಲ್ಲದೇ ಒದ್ದಾಡುವ ಪರಿಸ್ಥಿತಿಯನ್ನು ವಿವರಿಸುತ್ತಿದ್ದಾರೆ. ಹಾಗಾಗಿ ಸರ್ಕಾರ ಕೂಡಲೇ ಉಚಿತವಾಗಿ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಅವಕಾಶಮಾಡಿಕೊಡಬೇಕಿದೆ. ಯಾವು ಯಾವುದಕ್ಕೋ ಕೋಟ್ಯಾಂತರ ಹಣ ಖರ್ಚು ಮಾಡುವ ಸರ್ಕಾರ ನಮ್ಮ ನಾಡು ಕಟ್ಟುವ ಕಾರ್ಮಿಕರಿಗೆ ಕೆಲವು ಲಕ್ಷ ಕೋಟಿಗಳನ್ನು ವ್ಯಯಿಸಿದರೆ ಕಳೆದುಕೊಳ್ಳುವುದು ಏನು ಇಲ್ಲ. ಇಲ್ಲವಾದರೆ ಕಾರ್ಮಿಕರ ಕಣ್ಣೀರು ಮತ್ತಷ್ಟು ಹೆಚ್ಚಾಗಲಿದ್ದು, ಅವರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...