Homeಮುಖಪುಟಊರಿಗೆ ತೆರಳಲು ಬಸ್‌: ಟಿಕೆಟ್ ಬೆಲೆ ಮೂರು ಪಟ್ಟು ಹೆಚ್ಚು, ಸಂಕಷ್ಟದಲ್ಲಿ ಕಣ್ಣೀರಿಡುತ್ತಿರುವ ಕಾರ್ಮಿಕರು

ಊರಿಗೆ ತೆರಳಲು ಬಸ್‌: ಟಿಕೆಟ್ ಬೆಲೆ ಮೂರು ಪಟ್ಟು ಹೆಚ್ಚು, ಸಂಕಷ್ಟದಲ್ಲಿ ಕಣ್ಣೀರಿಡುತ್ತಿರುವ ಕಾರ್ಮಿಕರು

ಯಾವು ಯಾವುದಕ್ಕೋ ಕೋಟ್ಯಾಂತರ ಹಣ ಖರ್ಚು ಮಾಡುವ ಸರ್ಕಾರ ನಮ್ಮ ನಾಡು ಕಟ್ಟುವ ಕಾರ್ಮಿಕರಿಗೆ ಕೆಲವು ಲಕ್ಷ ಕೋಟಿಗಳನ್ನು ವ್ಯಯಿಸಿದರೆ ಕಳೆದುಕೊಳ್ಳುವುದು ಏನು ಇಲ್ಲ. ಇಲ್ಲವಾದರೆ ಕಾರ್ಮಿಕರ ಕಣ್ಣೀರು ಮತ್ತಷ್ಟು ಹೆಚ್ಚಾಗಲಿದ್ದು, ಅವರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ.

- Advertisement -
- Advertisement -

ಲಾಕ್‌ಡೌನ್‌ ಮುಂದುವರೆಯುತ್ತಲೇ ಇದೆ. ಈ ಸಂದರ್ಭದಲ್ಲಿ ಊರಿಗೆ ತೆರಳಲಾರದೇ ಬೆಂಗಳೂರಿನಲ್ಲಿ ಸಿಕ್ಕಿಕೊಂಡಿರುವ ಕಾರ್ಮಿಕರಿಗೆ ಊರಿಗೆ ಹೋಗಲು ಸರ್ಕಾರ ಬಸ್‌ ವ್ಯವಸ್ಥೆ ಮಾಡಿದೆ. ಆದರೆ ಆ ಕಾರ್ಮಿಕರು ಊರಿಗೆ ಹೋಗುವಂತಿಲ್ಲ, ಇಲ್ಲಿಯೂ ಇರುವಂತಿಲ್ಲದೇ ನರಳುವಂತಹ ಪರಿಸ್ಥಿತಿ ಬಂದಿದೆ.

ಏಕೆ ಹೀಗಾಯಿತು?

ಗುರುವಾರ ಸಂಜೆ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಮಾಧುಸ್ವಾಮಿ ನಾಳೆಯಿಂದಲೇ ಕಾರ್ಮಿಕರು ತಮ್ಮ ಊರುಗಳಿಗೆ ಮರಳಲು ಬಸ್‌ ವ್ಯವಸ್ಥೆ ಮಾಡಲಾಗುವುದು ಎಂದು ಘೋಷಿಸಿದರು. ಅದರಂತರೆ ಕಂದಾಯಭವನದ ಎದುರಿನ ಬನ್ನಪ್ಪ ಪಾರ್ಕ್‌ ನಿಂದ ಬಸ್‌ ತೆರಳುತ್ತವೆ ಎಂದು ತಿಳಿಯುತ್ತಲೇ ಕಾರ್ಮಿಕರು ಅಲ್ಲಿ ಜಮಾಯಿಸಿದರು.

ಕೊರೊನಾ ಹರಡದಂತೆ ಟೆಸ್ಟ್‌ ಮಾಡಿಸಿಕೊಂಡಿರಬೇಕು, ಟಿಕೇಟ್‌ ಖರೀದಿಸಿ ಪ್ರಯಾಣಿಸಬೇಕು ಮತ್ತು ಒಂದು ಬಸ್‌ನಲ್ಲಿ ಒಟ್ಟು ಬಸ್‌ ಸಾಮರ್ಥ್ಯದ ಶೇ.40% ಜನ ಮಾತ್ರ ಪ್ರಯಾಣಿಸಬಹುದು ಎಂದು ನಿಯಮಗಳನ್ನು ಸರ್ಕಾರ ವಿಧಿಸಿತ್ತು. ಆದರೆ ಪ್ರಯಾಣ ದರ ಮೂರು ಪಟ್ಟು ಹೆಚ್ಚಾಗಿದೆ ಎಂದು ಅವರು ಬಾಯಿಬಿಟ್ಟಿರಲಿಲ್ಲ. ಇದರಿಂದ ಇತ್ತ ಒಂದೂವರೆ ತಿಂಗಳಿನಿಂದ ಬೆಂಗಳೂರಿನಲ್ಲಿ ಲಾಕ್‌ಡೌನ್‌ನಲ್ಲಿ ಸಿಕ್ಕಿಬಿದ್ದು ಹೊಟ್ಟೆ ಬಟ್ಟೆಗಿಲ್ಲದೇ ಕಷ್ಟ ಅನುಭವಿಸಿದ್ದ ಕಾರ್ಮಿಕರು ಅಂತೂ ತಮ್ಮೂರು ತಲುಪುವ ಆಸೆಯಲ್ಲಿ ಬನ್ನಪ್ಪ ಪಾರ್ಕ್‌ ಬಳಿ ಬಂದರೆ ಅವರಿಗೆ ನಿರಾಶೆ ಕಾದಿತ್ತು.

ಏಕೆಂದರೆ ಕಾರ್ಮಿಕನೊಬ್ಬ 450 ರೂ ಕೊಟ್ಟು ರಾಯಚೂರಿಗೆ ಪ್ರಯಾಣಿಸುವುದೇ ಲಾಕ್‌ಡೌನ್‌ನಿಂದಾಗಿ ಕಷ್ಟವಾಗಿರುವಾಗ, ಸರ್ಕಾರ ರಾಯಚೂರಿಗೆ ಒಬ್ಬರಿಗೆ 1203 ರೂ ನಿಗಧಿಪಡಿಸಿದೆ! ಉತ್ತರ ಕನ್ನಡಕ್ಕೆ 1493 ರೂ! ಯಾದಗಿರಿಗೆ 1411ರೂ! ಹೆಚ್ಚು ಕಮ್ಮಿ ಎರಡು ತಿಂಗಳು ಯಾವುದೇ ಕೆಲಸವಿಲ್ಲ, ಕೂಲಿಯಿಲ್ಲದೇ ಇದ್ದಬದ್ದ ಹಣವನ್ನೆಲ್ಲಾ ದಿನಬಳಕೆಯ ವಸ್ತುಗಳಿಗಾಗಿ ಬಳಸಿರುವ ಆ ಕಾರ್ಮಿಕರು ಇಷ್ಟೊಂದು ಹಣವನ್ನು ಭರಿಸುವುದೇಗೆ ಎನ್ನುವ ಸಣ್ಣ ಕಾಮನ್‌ ಸೆನ್ಸ್‌ ಕೂಡ ಸರ್ಕಾರಕ್ಕಿಲ್ಲ.

ಸರ್ಕಾರ ನಿಗಧಿಪಡಿಸಿರುವ ದರಪಟ್ಟಿ

ಮೂರು ನಾಲ್ಕು ಜನ ಇರುವ ಕುಟುಂಬವೊಂದು ಉತ್ತರ ಕರ್ನಾಟಕದ ತಮ್ಮ ಹಳ್ಳಿಗೆ ಮರಳಬೇಕಾದರೆ ಕನಿಷ್ಟ 5-6 ಸಾವಿರ ಹಣ ಹೊಂದಿರಬೇಕಾಗುತ್ತದೆ. ಅಷ್ಟು ಹಣವನ್ನು ಅವರು ಹೊಂದಿಸುವುದೇಗೆ? ತಮ್ಮದಲ್ಲದ ತಪ್ಪಿಗೆ ಈ ಕಾರ್ಮಿಕರೇಕೆ ಇಷ್ಟು ನೋವು ಅನುಭವಿಸಬೇಕು? ಕಾರ್ಮಿಕರ ಕುರಿತಾಗಿ ಸರ್ಕಾರ ಇಷ್ಟು ಅಮಾನವೀಯವಾಗಿ ವರ್ತಿಸಬಾರದಿತ್ತು ಎಂಬ ಆಕ್ರೋಶ ತೀವ್ರವಾಗಿ ಕೇಳಿಬಂದಿದೆ.

ಸರ್ಕಾರದ ವಾದವೇನು?

ಈಗಾಗಲೇ ಕೆ.ಎಸ್‌.ಆರ್‌.ಟಿ.ಸಿ ನಷ್ಟದಲ್ಲಿದೆ. ಅಲ್ಲದೇ ಕೇವಲ 40% ಜನರನ್ನು ಮಾತ್ರ ಕೊಂಡೊಯ್ಯಬೇಕು. ವಾಪಸ್‌ ಬೆಂಗಳೂರಿಗೆ ಬಸ್‌ ಖಾಲಿ ಬರಬೇಕು. ಇದೆಲ್ಲವನ್ನು ಕೂಡಿಸಿ ಆ ಭಾರವನ್ನು ಕಾರ್ಮಿಕರ ತಲೆಯ ಮೇಲೆ ಹಾಕಲು ಸರ್ಕಾರ ನಿರ್ಧರಿಸಿದೆ. ಒಂದೂವರೆ ತಿಂಗಳು ನೋವುಂಡು ಜರ್ಜರಿತವಾಗಿರುವ ಕಾರ್ಮಿಕರನ್ನು ಉಚಿತವಾಗಿ ಅವರ ಊರುಗಳಿಗೆ ಕಳಿಸಬೇಕಾದ ಸರ್ಕಾರ ಅವರಿಂದಲೇ ಲೂಟಿಗೆ ಇಳಿದಿರುವುದು ನಾಗರೀಕ ಸಮಾಜ ತಲೆ ತಗ್ಗಿಸುವಂತೆ ಆಗಿದೆ ಎಂದು ಹಲವಾರು ಕಾರ್ಮಿಕರು ದೂರಿದ್ದಾರೆ.

ಕಾರಣರಾರು?

ಸಂಪುಟ ಸಭೆಯಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಹಣವನ್ನು ನಿಗಧಿಪಡಿಸಬೇಕೆಂದು ಸೂಚಿಸಿದವರು ಸಾರಿಗೆ ಸಚಿವ ಮತ್ತು ಉಪಮುಖ್ಯಮಂತ್ರಿ ಲಕ್ಷ್ಮಣ್‌ ಸವದಿ ಎಂದು ಹೇಳಲಾಗುತ್ತಿದೆ. ಅಲ್ಲದೇ ಮತ್ತೊಬ್ಬ ಉಪಮುಖ್ಯಮಂತ್ರಿ ಅಶ್ವಥ್‌ ನಾರಾಯಣ್‌ ಇದಕ್ಕೆ ಒತ್ತಾಯಿಸಿದ್ದಾರೆ ಎಂದು  ಹೆಸರು ಹೇಳಲಿಚ್ಚಿಸದ ಹಿರಿಯ ಐಎಎಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉತ್ತರ ಕರ್ನಾಟಕದವರೇ ಆದ, ಸಾರಿಗೆ ಸಚಿವನಾಗಿ, ಉಪಮುಖ್ಯಮಂತ್ರಿಯಾಗಿ ಲಕ್ಷ್ಮಣ್‌ ಸವದಿಯವರ ಈ ನಿರ್ಧಾರ ಅಮಾನವೀಯವಾದುದ್ದಾಗಿದೆ. ಬಹುತೇಕ ವಲಸೆ ಕಾರ್ಮಿಕರು ಉತ್ತರ ಕರ್ನಾಟಕದವರೆ ಆಗಿದ್ದು ಅವರಿಗಾಗಿ  ಕೆಲಸ ಮಾಡಲಾಗದೇ ಇಂದು ಇಂತಹ ನಿರ್ಧಾರ ತೆಗೆದುಕೊಂಡಿರುವುದು ಕಾರ್ಮಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನು ಐಟಿಬಿಟಿ ಸಚಿವ ಮತ್ತು ಉಪಮುಖ್ಯಮಂತ್ರಿ ಅಶ್ವಥ್‌ ನಾರಾಯಣ್‌ಗೆ ಕಾರ್ಮಿಕರ ಸಂಕಷ್ಟಕ್ಕಿಂತ ಬೆಂಗಳೂರಿನ ರಿಯಲ್‌ ಎಸ್ಟೇಟ್‌ ಕುಳಗಳ ಹಿತವೇ ಮುಖ್ಯವಾಗಿದೆ. ಕಾರ್ಮಿಕರೆಲ್ಲ ತಮ್ಮ ಊರುಗಳಿಗೆ ಹೊರಟುಹೋದರೆ ಇನ್ನು ಕೆಲವೇ ದಿನಗಳಲ್ಲಿ ಕಟ್ಟಡ ಕಾಮಗಾರಿ ಆರಂಭವಾದರೆ ಕಾರ್ಮಿಕರ ಕೊರತೆ ಉಂಟಾಗುತ್ತದೆ ಎಂಬ ದೂರಾಲೋಚನೆ ಅವರದು. ಒಟ್ಟಿನಲ್ಲಿ ಇದರಲ್ಲಿ ನಲುಗಿಹೋಗಿರುವವರು ಮಾತ್ರ ಕಾರ್ಮಿಕರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ನಮ್ಮಲ್ಲಿ ತಿಳಿಸಿದರು.

ಮುಖ್ಯಮಂತ್ರಿಗಳನ್ನು ಭೇಟಿಯಾಗುತ್ತೇನೆ: ಪ್ರಿಯಾಂಕ್‌ ಖರ್ಗೆ

ಈ ಕುರಿತು ನಾನುಗೌರಿ.ಕಾಂ ಮಾಜಿ ಸಚಿವರಾದ ಪ್ರಿಯಾಂಕ್‌ ಖರ್ಗೆಯವರನ್ನು ಮಾತಾಡಿಸಿತು. ಅವರು “ಈಗಾಗಲೇ ಎರಡು ತಿಂಗಳಿನಿಂದ ಕಾರ್ಮಿಕರಿಗೆ ಕೆಲಸ, ಕೂಲಿ ಸಿಗದೇ ಸಂಕಷ್ಟದಲ್ಲಿದ್ದಾರೆ. ಇನ್ನು ನಮ್ಮ ಜೀವನ ಸಾಕು ನಮ್ಮೂರಿಗೆ ಹೋಗಿ, ನಮ್ಮ ಮಣ್ಣಿನಲ್ಲಿ ಪ್ರಾಣ ಬಿಡೋಣ ಎಂದು ನಿರ್ಧರಿಸಿದ್ದಾರೆ. ಅದಕ್ಕೂ ಈ ಸರ್ಕಾರ ಅವಕಾಶ ಕೊಡದಷ್ಟು ಅಮಾನವೀಯವಾಗಿಬಿಟ್ಟಿದೆ. ಟಿಕೆಟ್‌ ಬೆಲೆಯನ್ನು ಹೆಚ್ಚಿಸುವ ಮೂಲಕ ಸಂಕಷ್ಟದಲ್ಲಿರುವ ಬಡವರ ಮೇಲೆ ಸರ್ಕಾರ ಮತ್ತೊಮ್ಮೆ ಬರೆ ಎಳೆಯುತ್ತಿದೆ. ಕಾಮಿರ್ಕರು 5-6 ಸಾವಿರ ಕೊಟ್ಟು ಊರಿಗೆ ಹೋಗುವಷ್ಟು ಶ್ರೀಮಂತರಾಗಿದ್ದರೆ ಅವರಿಗೆ ಸರ್ಕಾರ ಏಕೆ ರೇಷನ್‌ ಮತ್ತು ಆಹಾರ ಕಿಟ್‌ ಕೊಡಬೇಕಿತ್ತು ಹೇಳಿ? ಈ ಸರ್ಕಾರಕ್ಕೆ ಯಾರು ಸಲಹೆ ಕೊಡುತ್ತಿದ್ದಾರೆ ಗೊತ್ತಾಗತ್ತಿಲ್ಲ” ಎಂದು ಕಿಡಿಕಾರಿದರು.

ಪ್ರಿಯಾಂಕ್‌ ಖರ್ಗೆ

ಅಮಿತ್‌ ಶಾರವರು ಉತ್ತರಖಂಡದಿಂದ 1800 ಕಾರ್ಮಿಕರನ್ನು ಉಚಿತವಾಗಿ ವಾಪಸ್‌ ಕರೆಸಿಕೊಳ್ಳುತ್ತಾರೆ. ಕೇರಳದವರು ರಾಜಸ್ಥಾನದಿಂದ ತಮ್ಮ ಕಾರ್ಮಿಕರನ್ನು ಉಚಿತವಾಗಿ ಕರೆಸಿಕೊಳ್ಳುತ್ತಾರೆ. ತೆಲಂಗಾಣದಿಂದ ಜಾರ್ಖಂಡ್‌ ಕಾರ್ಮಿಕರು ಉಚಿತರವಾಗಿ ತೆರಳಿದ್ದಾರೆ. ಆದರೆ ನಮ್ಮ ಕರ್ನಾಟಕದಿಂದ ಕರ್ನಾಟಕದ ಇನ್ನೊಂದು ಜಿಲ್ಲೆಗೆ ಹೋಗಲು ಇಷ್ಟು ಸಾವಿರ ಹಣ ಕೊಡಬೇಕು ಎಂದರೆ ಯಾವ ನ್ಯಾಯ? ಈ ಕುರಿತು ಸಿಎಂಗೆ ಪತ್ರ ಬರೆಯುತ್ತಿದ್ದು, ಇಂದೇ ಅವರನ್ನು ಭೇಟಿಯಾಗಿ ಚರ್ಚಿಸುತ್ತೇನೆ ಎಂದರು.

ಸರಕಾರದ ದಿವಾಳಿತನಕ್ಕೆ ಸಾಕ್ಷಿ: ರಜಾಕ್‌ ಉಸ್ತಾದ್‌

ರಜಾಕ್‌ ಉಸ್ತಾದ್

ಅದೇ ರೀತಿಯಾಗಿ ಹೈದರಾಬಾದ್‌ ಕರ್ನಾಟಕ ಹೋರಾಟಗಾರರಾದ ರಜಾಕ್‌ ಉಸ್ತಾದ್‌ರವರು ಪ್ರತಿಕ್ರಿಯಿಸಿ “ಸರಕಾರ ಲಾಕಡೌನ್‌ ಘೋಷಿಸಿದ ನಂತರ ಬಡವರು, ನಿರ್ಗತಿಕರು, ಕೂಲಿಕಾರ್ಮಿಕರ ಬಗ್ಗೆ ಯಾವುದೇ ಪರಿಹಾರ ಕಾರ್ಯಕ್ರಮ ನೀಡದೇ, ಈಗ ಕಾರ್ಮಿಕರನ್ನು ಅವರ ಊರುಗಳಿಗೆ ತೆರಳಲು ಬಸ್ ಗಳ ವ್ಯವಸ್ಥೆ ಮಾಡುವದಾಗಿ ಹೇಳಿದ ಸರಕಾರ ಬಸ್ ದರವನ್ನು ಮೂರುಪಟ್ಟು ಹೆಚ್ಚಿಗೆ ಹಣವನ್ನು ಪಡೆಯುವದರ ಮೂಲಕ ಹಗಲು ದರೋಡೆಗೆ ಇಳಿದಿದೆ. ಬಡವರ ಬಡತನವನ್ನು ದುರುಪಯೋಗ ಪಡಿಸಿಕೊಂಡು ಅವರ ಸುಲಿಗೆಗೆ ಇಳಿದಿರುವದು ಸರಕಾರದ ದಿವಾಳಿತನಕ್ಕೆ ಸಾಕ್ಷಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕರ ಸಂಕಷ್ಟದ ಕುರಿತಾಗಿ ನಡೆಯುತ್ತಿರುವ ಸರ್ವೆಯ ಭಾಗವಾಗಿ ಕೆಲ ಕಾರ್ಮಿಕರಿಗೆ ಸ್ವಯಂಸೇವಕರು ಫೋನ್‌ ಮಾಡಿದಾಗ “ಅವರು ಸರ್‌ ದಯವಿಟ್ಟು ನಮ್ಮೂರಿಗೆ ತೆರಳಲು ಅವಕಾಶ ಮಾಡಿಕೊಡಿ, ಒಂದಷ್ಟು ಸಾಲ ಕೊಡಿ ಎಂದು ಅವಲತ್ತುಕೊಳ್ಳುತ್ತಿರುವ” ದೃಶ್ಯಗಳು ಸಾಮಾನ್ಯವಾಗಿವೆ. ಇನ್ನು ಕೆಲವರು ಗರ್ಭಿಣಿ ಸ್ತ್ರೀಯರಿದ್ದು ಊರಿಗೆ ಹೋಗಲು ಹಣವಿಲ್ಲದೇ ಒದ್ದಾಡುವ ಪರಿಸ್ಥಿತಿಯನ್ನು ವಿವರಿಸುತ್ತಿದ್ದಾರೆ. ಹಾಗಾಗಿ ಸರ್ಕಾರ ಕೂಡಲೇ ಉಚಿತವಾಗಿ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಅವಕಾಶಮಾಡಿಕೊಡಬೇಕಿದೆ. ಯಾವು ಯಾವುದಕ್ಕೋ ಕೋಟ್ಯಾಂತರ ಹಣ ಖರ್ಚು ಮಾಡುವ ಸರ್ಕಾರ ನಮ್ಮ ನಾಡು ಕಟ್ಟುವ ಕಾರ್ಮಿಕರಿಗೆ ಕೆಲವು ಲಕ್ಷ ಕೋಟಿಗಳನ್ನು ವ್ಯಯಿಸಿದರೆ ಕಳೆದುಕೊಳ್ಳುವುದು ಏನು ಇಲ್ಲ. ಇಲ್ಲವಾದರೆ ಕಾರ್ಮಿಕರ ಕಣ್ಣೀರು ಮತ್ತಷ್ಟು ಹೆಚ್ಚಾಗಲಿದ್ದು, ಅವರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...