Homeಮುಖಪುಟಕುಟುಂಬ ರಾಜಕಾರಣ ವಿರೋಧಿಸುವ ಬಿಜೆಪಿ: ಶಾಸಕರ ಮಕ್ಕಳು, ಪತ್ನಿಯರಿಗೆ ಟಿಕೆಟ್ ನೀಡಿದ್ದೇಕೆ?

ಕುಟುಂಬ ರಾಜಕಾರಣ ವಿರೋಧಿಸುವ ಬಿಜೆಪಿ: ಶಾಸಕರ ಮಕ್ಕಳು, ಪತ್ನಿಯರಿಗೆ ಟಿಕೆಟ್ ನೀಡಿದ್ದೇಕೆ?

- Advertisement -
- Advertisement -

ಪಾರ್ಟಿ ವಿತ್ ಎ ಡಿಫರೆನ್ಸ್ ಎಂದು ಹೇಳುವ ಬಿಜೆಪಿ ಪಕ್ಷವು ಕುಟುಂಬ ರಾಜಕಾರಣವನ್ನು ವಿರೋಧಿಸುತ್ತದೆ. ದೇಶದಲ್ಲಿ ನೆಹರೂ ಕುಟುಂಬವನ್ನು ಮತ್ತು ರಾಜ್ಯದಲ್ಲಿ ದೇವೇಗೌಡರ ಕುಟುಂಬ ರಾಜಕಾರಣದ ವಿರುದ್ಧ ಎಗ್ಗಿಲ್ಲದೇ ಟೀಕೆ ಮಾಡುತ್ತದೆ. ಆದರೆ ಸ್ವತಃ ಬಿಜೆಪಿ ಕುಟುಂಬ ರಾಜಕಾರಣವನ್ನು ಪೋಷಿಸುತ್ತದೆ ಎಂಬುದಕ್ಕೆ ಮಂಗಳವಾರ ಘೋಷಿಸಿರುವ ಅಭ್ಯರ್ಥಿಗಳ ಟಿಕೆಟ್ ಪಟ್ಟಿಯೇ ಸಾಕ್ಷಿಯಾಗಿದೆ.

ಮೊದಲ ಪಟ್ಟಿಯಲ್ಲಿ ಹಲವು ಹಿರಿಯ ನಾಯಕರ ಮಕ್ಕಳಿಗೆ, ಅವರ ಪತ್ನಿಯರಿಗೆ ಬಿಜೆಪಿ ಟಿಕೆಟ್ ನೀಡುವ ಮೂಲಕ ಕುಟುಂಬ ರಾಜಕಾರಣವನ್ನು ಬೆಳೆಸುತ್ತಿದೆ. ಅದರ ವಿವರ ಇಲ್ಲಿದೆ.

ಮಾಜಿ ಸಿಎಂ ಯಡಿಯೂರಪ್ಪನವರ ಪುತ್ರ ಬಿ.ವೈ ರಾಘವೇಂದ್ರ ಹಾಲಿ ಶಿವಮೊಗ್ಗದ ಸಂಸದರು. ಅವರ ಮತ್ತೊಬ್ಬ ಪುತ್ರ ವಿಜಯೇಂದ್ರನಿಗೆ ಶಿಕಾರಿಪುರದಲ್ಲಿ ಟಿಕೆಟ್ ನೀಡಲಾಗಿದೆ.

ಹುಕ್ಕೇರಿಯಲ್ಲಿ ಉಮೇಶ್ ಕತ್ತಿ ಮಗ ನಿಖಿಲ್ ಕತ್ತಿಗೆ ಟಿಕೆಟ್ ನೀಡಲಾಗಿದೆ.

ನಾಗಮಂಗಲದಲ್ಲಿ ಮಾಜಿ ಸಂಸದ, ಮಾಜಿ ಶಾಸಕ ಎಲ್ ಆರ್ ಶಿವರಾಮೇಗೌಡರ ಪತ್ನಿ ಸುಧಾ ಶಿವರಾಮೇಗೌಡರಿಗೆ ಟಿಕೆಟ್ ನೀಡಲಾಗಿದೆ.

ವಿಜಯನಗರದಲ್ಲಿ ಆನಂದ್ ಸಿಂಗ್ ಮಗ ಸಿದ್ಧಾರ್ಥ ಸಿಂಗ್‌ಗೆ ಬಿಜೆಪಿ ಟಿಕೆಟ್ ಸಿಕ್ಕಿದೆ.

ತುಮಕೂರು ನಗರದಲ್ಲಿ ಸಂಸದ ಬಸವರಾಜು ಮಗ ಜ್ಯೋತಿ ಗಣೇಶ್‌ರವರಿಗೆ ಮತ್ತೆ ಟಿಕೆಟ್ ಸಿಕ್ಕಿದೆ.

ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ವಿಶ್ವನಾಥ್‌ ಮಾಮನಿಯವರ ಪತ್ನಿ ರತ್ನಾ ವಿಶ್ವನಾಥ್‌ ಮಾಮನಿಯವರಿಗೆ ಟಿಕೆಟ್ ನೀಡಲಾಗಿದೆ.

ಇನ್ನು ವಿ.ಸೋಮಣ್ಣನವರು ತಮ್ಮ ಪುತ್ರ ಅರುಣ್ ಸೋಮಣ್ಣನವರಿಗೆ ಟಿಕೆಟ್ ಕೇಳುತ್ತಿದ್ದು, ಬಹುಶಃ ಗೋವಿಂದರಾಜನಗರದಲ್ಲಿ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆಯಿದೆ.

ಅದೇ ರೀತಿ ರಾಜಕೀಯ ನಿವೃತ್ತಿ ಘೋಷಿಸಿದ ಕೆ.ಎಸ್ ಈಶ್ವರಪ್ಪನವರು ತಮ್ಮ ಪುತ್ರ ಕಾಂತೇಶ್‌ಗೆ ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಕೇಳುತ್ತಿದ್ದಾರೆ.

ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ್ ಮಗ ಜಿ.ಎಸ್. ಅನಿತ್‌ಗಾಗಿ ದಾವಣಗೆರೆ ಉತ್ತರ ಅಥವಾ ಚಿತ್ರದುರ್ಗದಲ್ಲಿದ ಬಿಜೆಪಿ ಟಿಕೆಟ್ ಕೇಳುತ್ತಿದ್ದಾರೆ.

ಇದನ್ನೂ ಓದಿ; ಮಂಡ್ಯ: ಕಾರ್ಯಕರ್ತರಿಗಿಲ್ಲ ಬಿಜೆಪಿ ಟಿಕೆಟ್, ಪಕ್ಷಾಂತರಿಗಳಿಗೆ ಮಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...