Homeಮುಖಪುಟಕುಟುಂಬ ರಾಜಕಾರಣ ವಿರೋಧಿಸುವ ಬಿಜೆಪಿ: ಶಾಸಕರ ಮಕ್ಕಳು, ಪತ್ನಿಯರಿಗೆ ಟಿಕೆಟ್ ನೀಡಿದ್ದೇಕೆ?

ಕುಟುಂಬ ರಾಜಕಾರಣ ವಿರೋಧಿಸುವ ಬಿಜೆಪಿ: ಶಾಸಕರ ಮಕ್ಕಳು, ಪತ್ನಿಯರಿಗೆ ಟಿಕೆಟ್ ನೀಡಿದ್ದೇಕೆ?

- Advertisement -
- Advertisement -

ಪಾರ್ಟಿ ವಿತ್ ಎ ಡಿಫರೆನ್ಸ್ ಎಂದು ಹೇಳುವ ಬಿಜೆಪಿ ಪಕ್ಷವು ಕುಟುಂಬ ರಾಜಕಾರಣವನ್ನು ವಿರೋಧಿಸುತ್ತದೆ. ದೇಶದಲ್ಲಿ ನೆಹರೂ ಕುಟುಂಬವನ್ನು ಮತ್ತು ರಾಜ್ಯದಲ್ಲಿ ದೇವೇಗೌಡರ ಕುಟುಂಬ ರಾಜಕಾರಣದ ವಿರುದ್ಧ ಎಗ್ಗಿಲ್ಲದೇ ಟೀಕೆ ಮಾಡುತ್ತದೆ. ಆದರೆ ಸ್ವತಃ ಬಿಜೆಪಿ ಕುಟುಂಬ ರಾಜಕಾರಣವನ್ನು ಪೋಷಿಸುತ್ತದೆ ಎಂಬುದಕ್ಕೆ ಮಂಗಳವಾರ ಘೋಷಿಸಿರುವ ಅಭ್ಯರ್ಥಿಗಳ ಟಿಕೆಟ್ ಪಟ್ಟಿಯೇ ಸಾಕ್ಷಿಯಾಗಿದೆ.

ಮೊದಲ ಪಟ್ಟಿಯಲ್ಲಿ ಹಲವು ಹಿರಿಯ ನಾಯಕರ ಮಕ್ಕಳಿಗೆ, ಅವರ ಪತ್ನಿಯರಿಗೆ ಬಿಜೆಪಿ ಟಿಕೆಟ್ ನೀಡುವ ಮೂಲಕ ಕುಟುಂಬ ರಾಜಕಾರಣವನ್ನು ಬೆಳೆಸುತ್ತಿದೆ. ಅದರ ವಿವರ ಇಲ್ಲಿದೆ.

ಮಾಜಿ ಸಿಎಂ ಯಡಿಯೂರಪ್ಪನವರ ಪುತ್ರ ಬಿ.ವೈ ರಾಘವೇಂದ್ರ ಹಾಲಿ ಶಿವಮೊಗ್ಗದ ಸಂಸದರು. ಅವರ ಮತ್ತೊಬ್ಬ ಪುತ್ರ ವಿಜಯೇಂದ್ರನಿಗೆ ಶಿಕಾರಿಪುರದಲ್ಲಿ ಟಿಕೆಟ್ ನೀಡಲಾಗಿದೆ.

ಹುಕ್ಕೇರಿಯಲ್ಲಿ ಉಮೇಶ್ ಕತ್ತಿ ಮಗ ನಿಖಿಲ್ ಕತ್ತಿಗೆ ಟಿಕೆಟ್ ನೀಡಲಾಗಿದೆ.

ನಾಗಮಂಗಲದಲ್ಲಿ ಮಾಜಿ ಸಂಸದ, ಮಾಜಿ ಶಾಸಕ ಎಲ್ ಆರ್ ಶಿವರಾಮೇಗೌಡರ ಪತ್ನಿ ಸುಧಾ ಶಿವರಾಮೇಗೌಡರಿಗೆ ಟಿಕೆಟ್ ನೀಡಲಾಗಿದೆ.

ವಿಜಯನಗರದಲ್ಲಿ ಆನಂದ್ ಸಿಂಗ್ ಮಗ ಸಿದ್ಧಾರ್ಥ ಸಿಂಗ್‌ಗೆ ಬಿಜೆಪಿ ಟಿಕೆಟ್ ಸಿಕ್ಕಿದೆ.

ತುಮಕೂರು ನಗರದಲ್ಲಿ ಸಂಸದ ಬಸವರಾಜು ಮಗ ಜ್ಯೋತಿ ಗಣೇಶ್‌ರವರಿಗೆ ಮತ್ತೆ ಟಿಕೆಟ್ ಸಿಕ್ಕಿದೆ.

ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ವಿಶ್ವನಾಥ್‌ ಮಾಮನಿಯವರ ಪತ್ನಿ ರತ್ನಾ ವಿಶ್ವನಾಥ್‌ ಮಾಮನಿಯವರಿಗೆ ಟಿಕೆಟ್ ನೀಡಲಾಗಿದೆ.

ಇನ್ನು ವಿ.ಸೋಮಣ್ಣನವರು ತಮ್ಮ ಪುತ್ರ ಅರುಣ್ ಸೋಮಣ್ಣನವರಿಗೆ ಟಿಕೆಟ್ ಕೇಳುತ್ತಿದ್ದು, ಬಹುಶಃ ಗೋವಿಂದರಾಜನಗರದಲ್ಲಿ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆಯಿದೆ.

ಅದೇ ರೀತಿ ರಾಜಕೀಯ ನಿವೃತ್ತಿ ಘೋಷಿಸಿದ ಕೆ.ಎಸ್ ಈಶ್ವರಪ್ಪನವರು ತಮ್ಮ ಪುತ್ರ ಕಾಂತೇಶ್‌ಗೆ ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಕೇಳುತ್ತಿದ್ದಾರೆ.

ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ್ ಮಗ ಜಿ.ಎಸ್. ಅನಿತ್‌ಗಾಗಿ ದಾವಣಗೆರೆ ಉತ್ತರ ಅಥವಾ ಚಿತ್ರದುರ್ಗದಲ್ಲಿದ ಬಿಜೆಪಿ ಟಿಕೆಟ್ ಕೇಳುತ್ತಿದ್ದಾರೆ.

ಇದನ್ನೂ ಓದಿ; ಮಂಡ್ಯ: ಕಾರ್ಯಕರ್ತರಿಗಿಲ್ಲ ಬಿಜೆಪಿ ಟಿಕೆಟ್, ಪಕ್ಷಾಂತರಿಗಳಿಗೆ ಮಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...