Homeಮುಖಪುಟಮಹಿಳೆಯರಿಗೆ ಟಿಕೆಟ್: ಯಾವ್ಯಾವ ಪಕ್ಷಗಳು ಎಷ್ಟೆಷ್ಟು ಟಿಕೆಟ್ ನೀಡಿವೆ? ಇಲ್ಲಿದೆ ಡೀಟೈಲ್ಸ್

ಮಹಿಳೆಯರಿಗೆ ಟಿಕೆಟ್: ಯಾವ್ಯಾವ ಪಕ್ಷಗಳು ಎಷ್ಟೆಷ್ಟು ಟಿಕೆಟ್ ನೀಡಿವೆ? ಇಲ್ಲಿದೆ ಡೀಟೈಲ್ಸ್

- Advertisement -
- Advertisement -

ಆಕಾಸದ ಅರ್ಧ ನಕ್ಷತ್ರಗಳು ನಾವು, ಸಿಡಿದರೆ ಬೆಂಕಿಯ ಕಿಡಿಗಳಾಗುವೆವು – ಇದು ಮಹಿಳಾ ಚಳವಳಿಯ ಜನಪ್ರಿಯ ಘೋಷಣೆ. ರಾಜ್ಯದ ಜನಸಂಖ್ಯೆಯಲ್ಲಿ ಅರ್ಧದಷ್ಟಿರುವ ಮಹಿಳೆಯರಿಗೆ ಯಾವ ಯಾವ ಪಕ್ಷಗಳು ಎಷ್ಟೆಷ್ಟು ಟಿಕೆಟ್ ನೀಡಿವೆ ಎಂಬ ಅಂಕಿ ಅಂಶಗಳನ್ನು ನೋಡಿದರೆ ನಿರಾಸೆ ಕಾಡುತ್ತದೆ. ಏಕೆಂದರೆ ಮಹಿಳೆಯರಿಗೆ ಟಿಕೆಟ್ ನೀಡಲು ಮೂರು ಪ್ರಮುಖ ಪಕ್ಷಗಳು ಹಿಂದೇಟು ಹಾಕಿವೆ. ಇನ್ನು ಆಮ್ ಆದ್ಮಿ ಪಕ್ಷ 20 ಮಹಿಳೆಯರಿಗೆ ಟಿಕೆಟ್ ನೀಡುವ ಮೂಲಕ ಇರುವ ಪಕ್ಷಗಳಲ್ಲಿಯೇ ಉತ್ತರ ಸಾಧನೆ ಮಾಡಿದೆ. ಯಾವ್ಯಾವ ಪಕ್ಷಗಳು ಎಷ್ಟೆಷ್ಟು ಟಿಕೆಟ್ ನೀಡಿವೆ ಎಂಬುದರ ಡೀಟೈಲ್ಸ್ ಇಲ್ಲಿದೆ.

ಬಿಜೆಪಿ: 11

ಅಧಿಕಾರದಲ್ಲಿರುವ ಬಿಜೆಪಿ ಪಕ್ಷವು 224 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಅದರಲ್ಲಿ 11 ಮಹಿಳೆಯರಿಗೆ ಟಿಕೆಟ್ ನೀಡಿದೆ.

  1. ನಿಪ್ಪಾಣಿ: ಶಶಿಕಲಾ ಜೊಲ್ಲೆ
  2. ಸವದತ್ತಿ ಯಲ್ಲಮ್ಮ: ರತ್ನ ವಿಶ್ವನಾಥ್‌ ಮಾಮನಿ
  3. ಗುರುಮಠಕಲ್: ಲಲಿತಾ ಅನಾಪುರ್‌
  4. ಕೊಪ್ಪಳ: ಮಂಜುಳಾ ಅಮರೇಶ್‌ ಕರಡಿ
  5. ಕಾರವಾರ : ರೂಪಾಲಿ ನಾಯ್ಕ್‌
  6. ಹಿರಿಯೂರು: ಪೂರ್ಣಿಮಾ ಶ್ರೀನಿವಾಸ್‌
  7. ಕೆಜಿಎಫ್: ಅಶ್ವಿನಿ ಸಂಪಂಗಿ
  8. ಮಹದೇವಪುರ: ಮಂಜುಳಾ ಅರವಿಂದ್‌ ಲಿಂಬಾವಳಿ
  9. ನಾಗಮಂಗಲ: ಸುಧಾ ಶಿವರಾಮೇಗೌಡ
  10. ಪುತ್ತೂರು: ಆಶಾ ತಿಮ್ಮಪ್ಪ
  11. ಸುಳ್ಯ : ಭಾಗೀರಥಿ ಮುರುಳ್ಯ

ಕಾಂಗ್ರೆಸ್: 11

ಪ್ರತಿಪಕ್ಷ ಕಾಂಗ್ರೆಸ್ 223 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು ಅದರಲ್ಲಿ 11 ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ನೀಡಿದೆ.

  1. ಬೆಳಗಾವಿ ಗ್ರಾಮೀಣ: ಲಕ್ಷ್ಮೀ ಹೆಬ್ಬಾಳ್ಕರ್
  2. ಬೆಳಗಾವಿ ದಕ್ಷಿಣ: ಪ್ರಭಾವತಿ ಮಾಸ್ತಮರ್ಡಿ
  3. ಖಾನಪುರ: ಅಂಜಲಿ ನಿಂಬಾಳ್ಕರ್
  4. ಗುಲ್ಬರ್ಗ ಉತ್ತರ: ಕನೀಝ್‌ ಪತಿಮಾ
  5. ದೇವದುರ್ಗ: ಶ್ರೀದೇವಿ ಆರ್.ನಾಯಕ್
  6. ಶಿರಹಟ್ಟಿ: ಸುಜಾತ ಎನ್ ದೊಡ್ಡಮನಿ
  7. ಕುಂದಗೋಳ: ಕುಸುಮವತಿ ಶಿವಳ್ಳಿ
  8. ಮೂಡಿಗೆರೆ: ನಯನ ಜ್ಯೋತಿ
  9. ಕೆಜಿಎಫ್: ರೂಪಕಲಾ ಎಂ.
  10. ರಾಜರಾಜೇಶ್ವರಿ ನಗರ: ಎಚ್.ಕುಸುಮಾ
  11. ಜಯನಗರ: ಸೌಮ್ಯ ರೆಡ್ಡಿ
Photo Courtesy: Feminism in India

ಜೆಡಿಎಸ್ – 13

ಮತ್ತೊಂದು ಪ್ರತಿಪಕ್ಷ ಜೆಡಿಎಸ್ 208 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು 13 ಮಹಿಳೆಯರಿಗೆ ಟಿಕೆಟ್ ನೀಡಿದೆ.

  1. ಕಿತ್ತೂರು: ಅಶ್ವಿನಿ ಪೂಜೇರ್
  2. ಸಿಂದಗಿ: ವಿಶಾಲಾಕ್ಷಿ ಶಿವಾನಂದ
  3. ಆಳಂದ: ಮಹೇಶ್ವರಿ ವಾಲೆ
  4. ದೇವದುರ್ಗ: ಕರೆಮ್ಮಾ ಜಿ ನಾಯಕ್
  5. ಕಾರವಾರ: ಚೈತ್ರಾ ಕೋಟಕಾರ್
  6. ಬ್ಯಾಡಗಿ: ಸುನೀತಾ ಎಂ ಪೂಜಾರ್
  7. ಶಿವಮೊಗ್ಗ ಗ್ರಾಮೀಣ: ಶಾರಾದ ಪೂರ್ಯ ನಾಯಕ್
  8. ಭದ್ರಾವತಿ: ಶಾರದ ಅಪ್ಪಾಜಿಗೌಡ
  9. ಕಾಪು: ಸಬೀನಾ ಸಮದ್
  10. ಪುಲಿಕೇಶಿನಗರ: ಅನುರಾಧ
  11. ಮೂಡಬಿದರೆ: ಅಮರಶ್ರೀ
  12. ಮಂಗಳೂರು ನಗರ ದಕ್ಷಿಣ: ಸುಮತಿ ಹೆಗಡೆ
  13. ಪುತ್ತೂರು: ದಿವ್ಯಾಪ್ರಭಾ

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು 199 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು 13 ಮಹಿಳೆಯರಿಗೆ ಟಿಕೆಟ್ ನೀಡಿದೆ.

ಆಮ್ ಆದ್ಮಿ ಪಕ್ಷವು 212 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು 20 ಮಹಿಳೆಯರಿಗೆ ಟಿಕೆಟ್ ನೀಡಿದೆ. ಆ ಮೂಲಕ ಅತಿ ಹೆಚ್ಚು ಮಹಿಳೆಯರಿಗೆ ಟಿಕೆಟ್ ನೀಡಿದ ಪಕ್ಷ ಎನಿಸಿಕೊಂಡಿದೆ.

ಇದನ್ನೂ ಓದಿ: ವರುಣಾ: ಸೋಮಣ್ಣನವರಿಗೆ ಘೇರಾವ್, ಸಿದ್ದರಾಮಯ್ಯನವರಿಗೆ ಜೈಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...