Homeಮುಖಪುಟಮಹಿಳೆಯರಿಗೆ ಟಿಕೆಟ್: ಯಾವ್ಯಾವ ಪಕ್ಷಗಳು ಎಷ್ಟೆಷ್ಟು ಟಿಕೆಟ್ ನೀಡಿವೆ? ಇಲ್ಲಿದೆ ಡೀಟೈಲ್ಸ್

ಮಹಿಳೆಯರಿಗೆ ಟಿಕೆಟ್: ಯಾವ್ಯಾವ ಪಕ್ಷಗಳು ಎಷ್ಟೆಷ್ಟು ಟಿಕೆಟ್ ನೀಡಿವೆ? ಇಲ್ಲಿದೆ ಡೀಟೈಲ್ಸ್

- Advertisement -
- Advertisement -

ಆಕಾಸದ ಅರ್ಧ ನಕ್ಷತ್ರಗಳು ನಾವು, ಸಿಡಿದರೆ ಬೆಂಕಿಯ ಕಿಡಿಗಳಾಗುವೆವು – ಇದು ಮಹಿಳಾ ಚಳವಳಿಯ ಜನಪ್ರಿಯ ಘೋಷಣೆ. ರಾಜ್ಯದ ಜನಸಂಖ್ಯೆಯಲ್ಲಿ ಅರ್ಧದಷ್ಟಿರುವ ಮಹಿಳೆಯರಿಗೆ ಯಾವ ಯಾವ ಪಕ್ಷಗಳು ಎಷ್ಟೆಷ್ಟು ಟಿಕೆಟ್ ನೀಡಿವೆ ಎಂಬ ಅಂಕಿ ಅಂಶಗಳನ್ನು ನೋಡಿದರೆ ನಿರಾಸೆ ಕಾಡುತ್ತದೆ. ಏಕೆಂದರೆ ಮಹಿಳೆಯರಿಗೆ ಟಿಕೆಟ್ ನೀಡಲು ಮೂರು ಪ್ರಮುಖ ಪಕ್ಷಗಳು ಹಿಂದೇಟು ಹಾಕಿವೆ. ಇನ್ನು ಆಮ್ ಆದ್ಮಿ ಪಕ್ಷ 20 ಮಹಿಳೆಯರಿಗೆ ಟಿಕೆಟ್ ನೀಡುವ ಮೂಲಕ ಇರುವ ಪಕ್ಷಗಳಲ್ಲಿಯೇ ಉತ್ತರ ಸಾಧನೆ ಮಾಡಿದೆ. ಯಾವ್ಯಾವ ಪಕ್ಷಗಳು ಎಷ್ಟೆಷ್ಟು ಟಿಕೆಟ್ ನೀಡಿವೆ ಎಂಬುದರ ಡೀಟೈಲ್ಸ್ ಇಲ್ಲಿದೆ.

ಬಿಜೆಪಿ: 11

ಅಧಿಕಾರದಲ್ಲಿರುವ ಬಿಜೆಪಿ ಪಕ್ಷವು 224 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಅದರಲ್ಲಿ 11 ಮಹಿಳೆಯರಿಗೆ ಟಿಕೆಟ್ ನೀಡಿದೆ.

  1. ನಿಪ್ಪಾಣಿ: ಶಶಿಕಲಾ ಜೊಲ್ಲೆ
  2. ಸವದತ್ತಿ ಯಲ್ಲಮ್ಮ: ರತ್ನ ವಿಶ್ವನಾಥ್‌ ಮಾಮನಿ
  3. ಗುರುಮಠಕಲ್: ಲಲಿತಾ ಅನಾಪುರ್‌
  4. ಕೊಪ್ಪಳ: ಮಂಜುಳಾ ಅಮರೇಶ್‌ ಕರಡಿ
  5. ಕಾರವಾರ : ರೂಪಾಲಿ ನಾಯ್ಕ್‌
  6. ಹಿರಿಯೂರು: ಪೂರ್ಣಿಮಾ ಶ್ರೀನಿವಾಸ್‌
  7. ಕೆಜಿಎಫ್: ಅಶ್ವಿನಿ ಸಂಪಂಗಿ
  8. ಮಹದೇವಪುರ: ಮಂಜುಳಾ ಅರವಿಂದ್‌ ಲಿಂಬಾವಳಿ
  9. ನಾಗಮಂಗಲ: ಸುಧಾ ಶಿವರಾಮೇಗೌಡ
  10. ಪುತ್ತೂರು: ಆಶಾ ತಿಮ್ಮಪ್ಪ
  11. ಸುಳ್ಯ : ಭಾಗೀರಥಿ ಮುರುಳ್ಯ

ಕಾಂಗ್ರೆಸ್: 11

ಪ್ರತಿಪಕ್ಷ ಕಾಂಗ್ರೆಸ್ 223 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು ಅದರಲ್ಲಿ 11 ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ನೀಡಿದೆ.

  1. ಬೆಳಗಾವಿ ಗ್ರಾಮೀಣ: ಲಕ್ಷ್ಮೀ ಹೆಬ್ಬಾಳ್ಕರ್
  2. ಬೆಳಗಾವಿ ದಕ್ಷಿಣ: ಪ್ರಭಾವತಿ ಮಾಸ್ತಮರ್ಡಿ
  3. ಖಾನಪುರ: ಅಂಜಲಿ ನಿಂಬಾಳ್ಕರ್
  4. ಗುಲ್ಬರ್ಗ ಉತ್ತರ: ಕನೀಝ್‌ ಪತಿಮಾ
  5. ದೇವದುರ್ಗ: ಶ್ರೀದೇವಿ ಆರ್.ನಾಯಕ್
  6. ಶಿರಹಟ್ಟಿ: ಸುಜಾತ ಎನ್ ದೊಡ್ಡಮನಿ
  7. ಕುಂದಗೋಳ: ಕುಸುಮವತಿ ಶಿವಳ್ಳಿ
  8. ಮೂಡಿಗೆರೆ: ನಯನ ಜ್ಯೋತಿ
  9. ಕೆಜಿಎಫ್: ರೂಪಕಲಾ ಎಂ.
  10. ರಾಜರಾಜೇಶ್ವರಿ ನಗರ: ಎಚ್.ಕುಸುಮಾ
  11. ಜಯನಗರ: ಸೌಮ್ಯ ರೆಡ್ಡಿ
Photo Courtesy: Feminism in India

ಜೆಡಿಎಸ್ – 13

ಮತ್ತೊಂದು ಪ್ರತಿಪಕ್ಷ ಜೆಡಿಎಸ್ 208 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು 13 ಮಹಿಳೆಯರಿಗೆ ಟಿಕೆಟ್ ನೀಡಿದೆ.

  1. ಕಿತ್ತೂರು: ಅಶ್ವಿನಿ ಪೂಜೇರ್
  2. ಸಿಂದಗಿ: ವಿಶಾಲಾಕ್ಷಿ ಶಿವಾನಂದ
  3. ಆಳಂದ: ಮಹೇಶ್ವರಿ ವಾಲೆ
  4. ದೇವದುರ್ಗ: ಕರೆಮ್ಮಾ ಜಿ ನಾಯಕ್
  5. ಕಾರವಾರ: ಚೈತ್ರಾ ಕೋಟಕಾರ್
  6. ಬ್ಯಾಡಗಿ: ಸುನೀತಾ ಎಂ ಪೂಜಾರ್
  7. ಶಿವಮೊಗ್ಗ ಗ್ರಾಮೀಣ: ಶಾರಾದ ಪೂರ್ಯ ನಾಯಕ್
  8. ಭದ್ರಾವತಿ: ಶಾರದ ಅಪ್ಪಾಜಿಗೌಡ
  9. ಕಾಪು: ಸಬೀನಾ ಸಮದ್
  10. ಪುಲಿಕೇಶಿನಗರ: ಅನುರಾಧ
  11. ಮೂಡಬಿದರೆ: ಅಮರಶ್ರೀ
  12. ಮಂಗಳೂರು ನಗರ ದಕ್ಷಿಣ: ಸುಮತಿ ಹೆಗಡೆ
  13. ಪುತ್ತೂರು: ದಿವ್ಯಾಪ್ರಭಾ

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು 199 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು 13 ಮಹಿಳೆಯರಿಗೆ ಟಿಕೆಟ್ ನೀಡಿದೆ.

ಆಮ್ ಆದ್ಮಿ ಪಕ್ಷವು 212 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು 20 ಮಹಿಳೆಯರಿಗೆ ಟಿಕೆಟ್ ನೀಡಿದೆ. ಆ ಮೂಲಕ ಅತಿ ಹೆಚ್ಚು ಮಹಿಳೆಯರಿಗೆ ಟಿಕೆಟ್ ನೀಡಿದ ಪಕ್ಷ ಎನಿಸಿಕೊಂಡಿದೆ.

ಇದನ್ನೂ ಓದಿ: ವರುಣಾ: ಸೋಮಣ್ಣನವರಿಗೆ ಘೇರಾವ್, ಸಿದ್ದರಾಮಯ್ಯನವರಿಗೆ ಜೈಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...