Homeಅಂತರಾಷ್ಟ್ರೀಯ500 ಮಿಲಿಯನ್ ಡಾಲರ್‌ ಖರ್ಚಿನಲ್ಲಿ ಡಾಟಾ ಸೆಂಟರ್‌ ಸ್ಥಾಪಿಸುತ್ತಿರುವ ಟಿಕ್‌ಟಾಕ್!

500 ಮಿಲಿಯನ್ ಡಾಲರ್‌ ಖರ್ಚಿನಲ್ಲಿ ಡಾಟಾ ಸೆಂಟರ್‌ ಸ್ಥಾಪಿಸುತ್ತಿರುವ ಟಿಕ್‌ಟಾಕ್!

ಚೀನಾ ಮೂಲದ ಮೂಲ ಕಂಪನಿ ಬೈಟ್‌ಡ್ಯಾನ್ಸ್ ಲಿಮಿಟೆಡ್ ವಿದೇಶಿ ನಿಯಂತ್ರಕರನ್ನು ಸಮಾಧಾನಪಡಿಸುವ ಸಲುವಾಗಿ ತನ್ನ ದೇಶೀಯ ಚೀನೀ ಕಾರ್ಯಾಚರಣೆಯನ್ನು ಟಿಕ್‌ಟಾಕ್‌ನಿಂದ ದೂರವಿರಿಸಲು ಕೆಲಸ ಮಾಡುತ್ತಿದೆ.

- Advertisement -
- Advertisement -

ಅಮೆರಿಕಾ-ಚೀನಾ ಉದ್ವಿಗ್ನತೆ ಮುಂದುವರೆಯುತ್ತಿರುವ ಮಧ್ಯೆ ಐರ್ಲೆಂಡ್‌‌ನಲ್ಲಿ 420 ಮಿಲಿಯನ್ ಯುರೋಗಳಷ್ಟು (500 ಮಿಲಿಯನ್ ಡಾಲರ್‌) ಹೂಡಿಕೆಯೊಂದಿಗೆ ಯುರೋಪಿನಲ್ಲಿ ತನ್ನ ಮೊದಲ ದತ್ತಾಂಶ ಕೇಂದ್ರ( ಡಾಟಾ ಸೆಂಟರ್‌ )ವನ್ನು ಟಿಕ್‌ಟಾಕ್ ಸ್ಥಾಪಿಸುತ್ತಿದೆ.

ನೂರಾರು ಉದ್ಯೋಗಗಳ ಸೃಷ್ಟಿ, ಟಿಕ್‌ಟಾಕ್ ಬಳಕೆದಾರರ ಡೇಟಾದ ಸುರಕ್ಷತೆ ಮತ್ತು ರಕ್ಷಣೆಯನ್ನು ಸುಧಾರಿಸುವುದು, ಯುರೋಪಿನ ಬಳಕೆದಾರರಿಗೆ ಲೋಡಿಂಗ್ ಸಮಯವನ್ನು ಕಡಿಮೆ ಮಾಡುವುವ ಭರವಸೆ ನೀಡಿರುವ ಈ ಹೊಸ ದತ್ತಾಂಶ ಕೇಂದ್ರವು 2022 ರ ಆರಂಭದಲ್ಲಿ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ.

ಒಮ್ಮೆ ಆನ್‌ಲೈನ್‌ಗೆ ಹೋದರೆ, ಯುರೋಪಿಯನ್ ಬಳಕೆದಾರರ ಡೇಟಾ ಆ ಸ್ಥಳದಲ್ಲಿ ಸಂಗ್ರಹಿಸಲಾಗುತ್ತದೆ ಎಂದು ಟಿಕ್‌ಟಾಕ್ ಹೇಳಿದೆ. ವರ್ಷದ ಆರಂಭದಲ್ಲಿ ಅದು ಡಬ್ಲಿನ್‌ನಲ್ಲಿ ತನ್ನ ಇಎಂಇಎ ಟ್ರಸ್ಟ್ ಮತ್ತು ಸೇಫ್ಟಿ ಹಬ್ ಅನ್ನು ಸ್ಥಾಪಿಸಿತು. ಹೊಸ ಹೂಡಿಕೆ ಐರ್ಲೆಂಡ್‌ಗೆ ನಮ್ಮ ದೀರ್ಘಕಾಲೀನ ಬದ್ಧತೆಯನ್ನು ಸಂಕೇತಿಸುತ್ತದೆ ಎಂದು ಅದು ಹೇಳಿದೆ.

ಚೀನಾ ಮೂಲದ ಮೂಲ ಕಂಪನಿ ಬೈಟ್‌ಡ್ಯಾನ್ಸ್ ಲಿಮಿಟೆಡ್ ವಿದೇಶಿ ನಿಯಂತ್ರಕರನ್ನು ಸಮಾಧಾನಪಡಿಸುವ ಸಲುವಾಗಿ ತನ್ನ ದೇಶೀಯ ಚೀನೀ ಕಾರ್ಯಾಚರಣೆಯನ್ನು ಟಿಕ್‌ಟಾಕ್‌ನಿಂದ ದೂರವಿರಿಸಲು ಕೆಲಸ ಮಾಡುತ್ತಿದೆ.

ಅಮೆರಿಕಾ ಸಂಸದರು ಮತ್ತು ಟ್ರಂಪ್ ಆಡಳಿತವು ಟಿಕ್‌ಟಾಕ್ ಬಳಕೆದಾರರ ಡೇಟಾವನ್ನು ಸಂಗ್ರಹಿಸಿ ರಾಷ್ಟ್ರೀಯ ಭದ್ರತಾ ಅಪಾಯವನ್ನು ಸೃಷ್ಟಿಸಿದೆ ಎಂದು ಆರೋಪಿಸಿದ್ದರು. ಅಲ್ಲದೆ ಪ್ರಸ್ತುತ ಟಿಕ್‌ಟಾಕ್‌‌ ಅಮೆರಿಕಾದಲ್ಲಿನ ತನ್ನ ಕಾರ್ಯಾಚರಣೆಯನ್ನು ಮೈಕ್ರೋಸಾಫ್ಟ್‌ ಅಥವಾ ಬೇರೆ ಅಮೇರಿಕಾ ಕಂಪೆನಿಗೆ ಮಾರಾಟ ಮಾಡುವ ಆರು ವಾರಗಳ ಗಡುವನ್ನು ಎದುರಿಸುತ್ತಿದೆ.

ಪ್ರಸ್ತುತ ಇದು ಅಮೆರಿಕಾ ಮತ್ತು ಸಿಂಗಾಪುರದ ಸರ್ವರ್‌ಗಳಲ್ಲಿ ಅಂತರರಾಷ್ಟ್ರೀಯ ಬಳಕೆದಾರರ ಡೇಟಾವನ್ನು ಸಂಗ್ರಹಿಸುತ್ತದೆ.


ಓದಿ: ಟಿಕ್‌ಟಾಕ್‌ ಖರೀದಿಗೆ ಟ್ರಂಪ್‌ ಜೊತೆ ಮೈಕ್ರೋಸಾಫ್ಟ್‌‌ ಮಾತುಕತೆ: ಸತ್ಯ ನಾದೆಲ್ಲಾ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...