Homeಅಂತರಾಷ್ಟ್ರೀಯಅಮೇರಿಕಾದ ಹೂಡಿಕೆದಾರರಿಗೆ ತನ್ನ ಪಾಲನ್ನು ಮಾರಾಟ ಮಾಡಲಿದೆಯೆ ಟಿಕ್‌ಟಾಕ್‌‌?

ಅಮೇರಿಕಾದ ಹೂಡಿಕೆದಾರರಿಗೆ ತನ್ನ ಪಾಲನ್ನು ಮಾರಾಟ ಮಾಡಲಿದೆಯೆ ಟಿಕ್‌ಟಾಕ್‌‌?

ಟಿಕ್‌ಟಾಕ್ ಸೇರಿದಂತೆ 59 ಚೀನೀ ಅಪ್ಲಿಕೇಶನ್‌ಗಳನ್ನು ಭಾರತ ನಿಷೇಧಿಸಿದ ನಂತರ, ಯುಎಸ್ ಮತ್ತು ಆಸ್ಟ್ರೇಲಿಯಾದಂತಹ ದೇಶಗಳು ತಮ್ಮ ದೇಶಗಳಲ್ಲಿನ ಡೇಟಾ ಸುರಕ್ಷತೆ ಮತ್ತು ಗೌಪ್ಯತೆ ವಿಷಯಗಳ ಬಗ್ಗೆ ಈ ಕಂಪನಿಯನ್ನು ಸ್ಕ್ಯಾನರ್ ಅಡಿಯಲ್ಲಿ ತಂದಿವೆ.

- Advertisement -
- Advertisement -

ಟಿಕ್‌ಟಾಕ್ ಅಪ್ಲಿಕೇಷನ್ ನಿಷೇಧವನ್ನು ತಪ್ಪಿಸಲು ಟಿಕ್‌ಟಾಕ್ ಸಂಸ್ಥೆಯು ಅಮೇರಿಕಾ ಮೂಲದ ಹೂಡಿಕೆದಾರರಾದ ಜನರಲ್ ಅಟ್ಲಾಂಟಿಕ್ ಮತ್ತು ಸಿಕ್ವೊಯ ಕ್ಯಾಪಿಟಲ್‌ಗೆ ಹೆಚ್ಚಿನ ಪಾಲನ್ನು ಮಾರಾಟ ಮಾಡಬಹುದು ಎಂದು ದಿ ನ್ಯೂಯಾರ್ಕ್ ಟೈಮ್ಸ್ ವರದಿ ತಿಳಿಸಿದೆ.

ಟಿಕ್‌ಟಾಕ್ ಸೇರಿದಂತೆ 59 ಚೀನೀ ಅಪ್ಲಿಕೇಶನ್‌ಗಳನ್ನು ಭಾರತ ನಿಷೇಧಿಸಿದ ನಂತರ, ಅಮೆರಿಕಾ ಮತ್ತು ಆಸ್ಟ್ರೇಲಿಯಾದಂತಹ ದೇಶಗಳು ತಮ್ಮ ದೇಶಗಳಲ್ಲಿನ ಡೇಟಾ ಸುರಕ್ಷತೆ ಮತ್ತು ಗೌಪ್ಯತೆ ವಿಷಯಗಳ ಬಗ್ಗೆ ಈ ಕಂಪನಿಯನ್ನು ಸ್ಕ್ಯಾನರ್ ಅಡಿಯಲ್ಲಿ ತಂದಿವೆ.

ಟೈಗರ್ ಗ್ಲೋಬಲ್ ಮತ್ತು ಸಾಫ್ಟ್‌ಬ್ಯಾಂಕ್ ಅನ್ನು ಚೀನಾ ಒಡೆತನದ ಕಂಪನಿಯ ದೊಡ್ಡ ಹೂಡಿಕೆದಾರರು ಎಂದು ಪರಿಗಣಿಸಲಾಗುತ್ತದೆ.

“ಹೂಡಿಕೆದಾರರ ಬದಲಾವಣೆಯು ಅಪ್ಲಿಕೇಶನ್ ಅನ್ನು ಜಾಗತಿಕವಾಗಿ ಉಳಿಸಬಹುದು. ಅಮೇರಿಕಾ ಹೂಡಿಕೆದಾರರು ಅದರ ಕೆಲವು ಸ್ಪರ್ಧಾತ್ಮಕ ಪ್ಲಾಟ್‌ಫಾರ್ಮ್‌ಗಳಿಗೆ ನೇರ ಅಥವಾ ಪರೋಕ್ಷ ಸಂಪರ್ಕವನ್ನು ಹೊಂದಿರುವುದರಿಂದ ಇದು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಅವಕಾಶಗಳನ್ನು ಪುನರುಜ್ಜೀವನಗೊಳಿಸಬಹುದು” ಎಂದು ಉದ್ಯಮದ ಮೂಲವೊಂದು ತಿಳಿಸಿದೆ.

ಟಿಕ್‌ಟಾಕ್ ಹೂಡಿಕೆದಾರರ ಎರಡೂ ಕಂಪನಿಗಳು ಒಂದು ರೀತಿಯಲ್ಲಿ ಆಯಾ ದೇಶಗಳಲ್ಲಿ ಮಾರುಕಟ್ಟೆ ಪಾಲನ್ನು ಪಡೆಯಲು ಟಿಕ್‌ಟಾಕ್‌ನೊಂದಿಗೆ ಸ್ಪರ್ಧಿಸುತ್ತಿವೆ. ಮಾಲೀಕತ್ವವನ್ನು ಅಮೇರಿಕಾ ಹೂಡಿಕೆದಾರರಿಗೆ ವರ್ಗಾಯಿಸಿದರೆ, ಅದು ಭಾರತದ ಕಿರು-ವಿಡಿಯೋ ವಿಭಾಗದಲ್ಲಿ ರಿಲಯನ್ಸ್ ಮತ್ತು ಅಮೇರಿಕಾ ಮಾರುಕಟ್ಟೆಯಲ್ಲಿ ಫೇಸ್‌ಬುಕ್ ಅಥವಾ ಇನ್‌ಸ್ಟಾಗ್ರಾಮ್ ಮಾರುಕಟ್ಟೆಯನ್ನು ಎತ್ತಿಹಿಡಿಯಬಹುದು.

ಮಾರುಕಟ್ಟೆಯ ಮೇಲೆ ಹಿಡಿತ ಸಾಧಿಸಲು ಹೂಡಿಕೆದಾರರು ಕೆಲವು ವಿಭಾಗಗಳಲ್ಲಿ ವಿಲೀನಗೊಳ್ಳುವಂತೆ ಒತ್ತಾಯಿಸಬಹುದು.

ನಿಷೇಧದ ನಂತರ, ಟಿಕ್‌ಟಾಕ್‌ ಚೀನಾ ಸರ್ಕಾರದೊಂದಿಗೆ ಯಾವುದೇ ಸಂಪರ್ಕವನ್ನು ಇಟ್ಟುಕೊಳ್ಳದಂತೆ ದೂರವಿತ್ತು. ಭಾರತೀಯ ಕಾನೂನಿನ ವ್ಯಾಪ್ತಿಯಲ್ಲಿ ಅದು ಉತ್ತಮವಾಗಿ ಕಾರ್ಯನಿರ್ವಹಿಸುತತ್ತಿದೆ ಎಂದು ಭಾರತ ಸರ್ಕಾರಕ್ಕೆ ಭರವಸೆ ನೀಡಿತ್ತು.

ಆದಾಗ್ಯೂ, ಗಡಿ ಉದ್ವಿಗ್ನತೆ ಹೆಚ್ಚುತ್ತಿರುವಾಗ ಅಪ್ಲಿಕೇಷನ್ ಕುರಿತ ನಿಯಮಗಳನ್ನು ಸುಲಭಗೊಳಿಸುವಂತೆ  ಭಾರತ ಸರ್ಕಾರ ಪಟ್ಟುಹಿಡಿದಿದೆ.

ಭಾರತ ಸರ್ಕಾರ ಪ್ರತಿಕ್ರಿಯಿಸಲು ಮೂರು ವಾರಗಳ ಕಾಲಾವಕಾಶ ನೀಡಿತ್ತು. ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಉಲ್ಲಂಘನೆ ಕುರಿತು ಚೀನಾದ ಕಂಪನಿಗಳಿಗೆ 70 ಪ್ರಶ್ನೆಗಳನ್ನು ಕೇಳಿದೆ. ಪ್ರತಿಕ್ರಿಯಿಸಲು ನೀಡಲಾದ ಕಾಲಾವಧಿ ಈ ವಾರ ಕೊನೆಗೊಂಡಿದ್ದರೂ, ಕಂಪನಿಗಳು ಭಾರತ ಸರ್ಕಾರದೊಂದಿಗೆ ಸಭೆ ನಡೆಸುತ್ತಿದ್ದರೂ, ಈ ವಿಷಯವು ಇನ್ನೂ ಯಾವುದೇ ಮುನ್ನಡೆಯನ್ನೂ ಕಾಣದೇ ಹಾಗೇ ಉಳಿದಿದೆ.

ವಾಸ್ತವವಾಗಿ, ಜುಲೈ 21 ರಂದು Electronics and Information Technology ಸಚಿವಾಲಯವು ಚೀನಾದ ಸಂಸ್ಥೆಗಳಿಗೆ ಮತ್ತೊಂದು ಎಚ್ಚರಿಕೆ ನೀಡಿತು. ಇದು, ನಿಷೇಧಿತ ಅಪ್ಲಿಕೇಶನ್‌ಗಳ ಲಭ್ಯತೆ ಮತ್ತು ಕಾರ್ಯಾಚರಣೆಯು ನೇರವಾಗಿ ಅಥವಾ ಪರೋಕ್ಷವಾಗಿ ಐಟಿ ಕಾಯ್ದೆಯಡಿ ಅಪರಾಧವಾಗಿದೆ. ಹಾಗಾಗಿ ಕಾನೂನಿನ ಮೂಲಕ ವ್ಯವಹರಿಸುವಂತೆ ಕಟ್ಟುನಿಟ್ಟಾಗಿ ಹೇಳಿದೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದಲ್ಲಿ ಟಿಕ್‌ಟಾಕ್ ಮೇಲೆ ಇದೇ ರೀತಿಯ ನಿಷೇಧವನ್ನು ತರಬೇಕೆಂದಿದ್ದಾರೆ ಎನ್ನಲಾಗಿದೆ. ಈ ಅಪ್ಲಿಕೇಶನ್ ಅಮೇರಿಕಾದಲ್ಲಿ ಸುಮಾರು 50 ಮಿಲಿಯನ್ ಬಳಕೆದಾರರನ್ನು, 800 ಮಿಲಿಯನ್ ಜಾಗತಿಕ ಬಳಕೆದಾರರನ್ನು ಮತ್ತು $ 100 ಬಿಲಿಯನ್ ಮೌಲ್ಯ ಹೊಂದಿದೆ.

ಕಳೆದ ವಾರ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ, ಟ್ರಂಪ್ ಟಿಕ್‌ಟಾಕ್ ಅಮೆರಿಕನ್ ಬಳಕೆದಾರರ ಮೇಲೆ “ಬೇಹುಗಾರಿಕೆ” ನಡೆಸುತ್ತಿದೆ ಎಂದು ಆರೋಪಿಸಿದರು.

ಚೀನಾದ ಮಾಲೀಕತ್ವದಿಂದ ದೂರವಿರುವ ಕಾರ್ಯತಂತ್ರದ ಭಾಗವಾಗಿ ಟಿಕ್‌ಟಾಕ್ ತನ್ನ ಪ್ರಧಾನ ಕಛೇರಿಯನ್ನು ಲಂಡನ್‌ಗೆ ಸ್ಥಳಾಂತರಿಸುವ ಯೋಜನೆಯ ಬಗ್ಗೆ ವರದಿಯೊಂದು ಹೊರಬಿದ್ದಿದೆ.

ಇದರ ಮಧ್ಯೆ ಪಾಕಿಸ್ತಾನವು ಜನಪ್ರಿಯ ಆಟ PUBG ಯನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ. ಜೊತೆಗೆ ಚೀನಾದ ಲೈವ್-ಸ್ಟ್ರೀಮಿಂಗ್ ಅಪ್ಲಿಕೇಶನ್ ಬಿಗೊ (Bigo)ವನ್ನು ನಿಷೇಧಿಸಿದೆ.


ಇದನ್ನೂ ಓದಿ: 59 ಚೀನಿ ಆಪ್‌ಗಳ ನಿಷೇಧ: ಸ್ಪಷ್ಟೀಕರಣ ನೀಡಿದ ಟಿಕ್‌ಟಾಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...