Homeಅಂತರಾಷ್ಟ್ರೀಯಅಮೇರಿಕಾದ ಹೂಡಿಕೆದಾರರಿಗೆ ತನ್ನ ಪಾಲನ್ನು ಮಾರಾಟ ಮಾಡಲಿದೆಯೆ ಟಿಕ್‌ಟಾಕ್‌‌?

ಅಮೇರಿಕಾದ ಹೂಡಿಕೆದಾರರಿಗೆ ತನ್ನ ಪಾಲನ್ನು ಮಾರಾಟ ಮಾಡಲಿದೆಯೆ ಟಿಕ್‌ಟಾಕ್‌‌?

ಟಿಕ್‌ಟಾಕ್ ಸೇರಿದಂತೆ 59 ಚೀನೀ ಅಪ್ಲಿಕೇಶನ್‌ಗಳನ್ನು ಭಾರತ ನಿಷೇಧಿಸಿದ ನಂತರ, ಯುಎಸ್ ಮತ್ತು ಆಸ್ಟ್ರೇಲಿಯಾದಂತಹ ದೇಶಗಳು ತಮ್ಮ ದೇಶಗಳಲ್ಲಿನ ಡೇಟಾ ಸುರಕ್ಷತೆ ಮತ್ತು ಗೌಪ್ಯತೆ ವಿಷಯಗಳ ಬಗ್ಗೆ ಈ ಕಂಪನಿಯನ್ನು ಸ್ಕ್ಯಾನರ್ ಅಡಿಯಲ್ಲಿ ತಂದಿವೆ.

- Advertisement -
- Advertisement -

ಟಿಕ್‌ಟಾಕ್ ಅಪ್ಲಿಕೇಷನ್ ನಿಷೇಧವನ್ನು ತಪ್ಪಿಸಲು ಟಿಕ್‌ಟಾಕ್ ಸಂಸ್ಥೆಯು ಅಮೇರಿಕಾ ಮೂಲದ ಹೂಡಿಕೆದಾರರಾದ ಜನರಲ್ ಅಟ್ಲಾಂಟಿಕ್ ಮತ್ತು ಸಿಕ್ವೊಯ ಕ್ಯಾಪಿಟಲ್‌ಗೆ ಹೆಚ್ಚಿನ ಪಾಲನ್ನು ಮಾರಾಟ ಮಾಡಬಹುದು ಎಂದು ದಿ ನ್ಯೂಯಾರ್ಕ್ ಟೈಮ್ಸ್ ವರದಿ ತಿಳಿಸಿದೆ.

ಟಿಕ್‌ಟಾಕ್ ಸೇರಿದಂತೆ 59 ಚೀನೀ ಅಪ್ಲಿಕೇಶನ್‌ಗಳನ್ನು ಭಾರತ ನಿಷೇಧಿಸಿದ ನಂತರ, ಅಮೆರಿಕಾ ಮತ್ತು ಆಸ್ಟ್ರೇಲಿಯಾದಂತಹ ದೇಶಗಳು ತಮ್ಮ ದೇಶಗಳಲ್ಲಿನ ಡೇಟಾ ಸುರಕ್ಷತೆ ಮತ್ತು ಗೌಪ್ಯತೆ ವಿಷಯಗಳ ಬಗ್ಗೆ ಈ ಕಂಪನಿಯನ್ನು ಸ್ಕ್ಯಾನರ್ ಅಡಿಯಲ್ಲಿ ತಂದಿವೆ.

ಟೈಗರ್ ಗ್ಲೋಬಲ್ ಮತ್ತು ಸಾಫ್ಟ್‌ಬ್ಯಾಂಕ್ ಅನ್ನು ಚೀನಾ ಒಡೆತನದ ಕಂಪನಿಯ ದೊಡ್ಡ ಹೂಡಿಕೆದಾರರು ಎಂದು ಪರಿಗಣಿಸಲಾಗುತ್ತದೆ.

“ಹೂಡಿಕೆದಾರರ ಬದಲಾವಣೆಯು ಅಪ್ಲಿಕೇಶನ್ ಅನ್ನು ಜಾಗತಿಕವಾಗಿ ಉಳಿಸಬಹುದು. ಅಮೇರಿಕಾ ಹೂಡಿಕೆದಾರರು ಅದರ ಕೆಲವು ಸ್ಪರ್ಧಾತ್ಮಕ ಪ್ಲಾಟ್‌ಫಾರ್ಮ್‌ಗಳಿಗೆ ನೇರ ಅಥವಾ ಪರೋಕ್ಷ ಸಂಪರ್ಕವನ್ನು ಹೊಂದಿರುವುದರಿಂದ ಇದು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಅವಕಾಶಗಳನ್ನು ಪುನರುಜ್ಜೀವನಗೊಳಿಸಬಹುದು” ಎಂದು ಉದ್ಯಮದ ಮೂಲವೊಂದು ತಿಳಿಸಿದೆ.

ಟಿಕ್‌ಟಾಕ್ ಹೂಡಿಕೆದಾರರ ಎರಡೂ ಕಂಪನಿಗಳು ಒಂದು ರೀತಿಯಲ್ಲಿ ಆಯಾ ದೇಶಗಳಲ್ಲಿ ಮಾರುಕಟ್ಟೆ ಪಾಲನ್ನು ಪಡೆಯಲು ಟಿಕ್‌ಟಾಕ್‌ನೊಂದಿಗೆ ಸ್ಪರ್ಧಿಸುತ್ತಿವೆ. ಮಾಲೀಕತ್ವವನ್ನು ಅಮೇರಿಕಾ ಹೂಡಿಕೆದಾರರಿಗೆ ವರ್ಗಾಯಿಸಿದರೆ, ಅದು ಭಾರತದ ಕಿರು-ವಿಡಿಯೋ ವಿಭಾಗದಲ್ಲಿ ರಿಲಯನ್ಸ್ ಮತ್ತು ಅಮೇರಿಕಾ ಮಾರುಕಟ್ಟೆಯಲ್ಲಿ ಫೇಸ್‌ಬುಕ್ ಅಥವಾ ಇನ್‌ಸ್ಟಾಗ್ರಾಮ್ ಮಾರುಕಟ್ಟೆಯನ್ನು ಎತ್ತಿಹಿಡಿಯಬಹುದು.

ಮಾರುಕಟ್ಟೆಯ ಮೇಲೆ ಹಿಡಿತ ಸಾಧಿಸಲು ಹೂಡಿಕೆದಾರರು ಕೆಲವು ವಿಭಾಗಗಳಲ್ಲಿ ವಿಲೀನಗೊಳ್ಳುವಂತೆ ಒತ್ತಾಯಿಸಬಹುದು.

ನಿಷೇಧದ ನಂತರ, ಟಿಕ್‌ಟಾಕ್‌ ಚೀನಾ ಸರ್ಕಾರದೊಂದಿಗೆ ಯಾವುದೇ ಸಂಪರ್ಕವನ್ನು ಇಟ್ಟುಕೊಳ್ಳದಂತೆ ದೂರವಿತ್ತು. ಭಾರತೀಯ ಕಾನೂನಿನ ವ್ಯಾಪ್ತಿಯಲ್ಲಿ ಅದು ಉತ್ತಮವಾಗಿ ಕಾರ್ಯನಿರ್ವಹಿಸುತತ್ತಿದೆ ಎಂದು ಭಾರತ ಸರ್ಕಾರಕ್ಕೆ ಭರವಸೆ ನೀಡಿತ್ತು.

ಆದಾಗ್ಯೂ, ಗಡಿ ಉದ್ವಿಗ್ನತೆ ಹೆಚ್ಚುತ್ತಿರುವಾಗ ಅಪ್ಲಿಕೇಷನ್ ಕುರಿತ ನಿಯಮಗಳನ್ನು ಸುಲಭಗೊಳಿಸುವಂತೆ  ಭಾರತ ಸರ್ಕಾರ ಪಟ್ಟುಹಿಡಿದಿದೆ.

ಭಾರತ ಸರ್ಕಾರ ಪ್ರತಿಕ್ರಿಯಿಸಲು ಮೂರು ವಾರಗಳ ಕಾಲಾವಕಾಶ ನೀಡಿತ್ತು. ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಉಲ್ಲಂಘನೆ ಕುರಿತು ಚೀನಾದ ಕಂಪನಿಗಳಿಗೆ 70 ಪ್ರಶ್ನೆಗಳನ್ನು ಕೇಳಿದೆ. ಪ್ರತಿಕ್ರಿಯಿಸಲು ನೀಡಲಾದ ಕಾಲಾವಧಿ ಈ ವಾರ ಕೊನೆಗೊಂಡಿದ್ದರೂ, ಕಂಪನಿಗಳು ಭಾರತ ಸರ್ಕಾರದೊಂದಿಗೆ ಸಭೆ ನಡೆಸುತ್ತಿದ್ದರೂ, ಈ ವಿಷಯವು ಇನ್ನೂ ಯಾವುದೇ ಮುನ್ನಡೆಯನ್ನೂ ಕಾಣದೇ ಹಾಗೇ ಉಳಿದಿದೆ.

ವಾಸ್ತವವಾಗಿ, ಜುಲೈ 21 ರಂದು Electronics and Information Technology ಸಚಿವಾಲಯವು ಚೀನಾದ ಸಂಸ್ಥೆಗಳಿಗೆ ಮತ್ತೊಂದು ಎಚ್ಚರಿಕೆ ನೀಡಿತು. ಇದು, ನಿಷೇಧಿತ ಅಪ್ಲಿಕೇಶನ್‌ಗಳ ಲಭ್ಯತೆ ಮತ್ತು ಕಾರ್ಯಾಚರಣೆಯು ನೇರವಾಗಿ ಅಥವಾ ಪರೋಕ್ಷವಾಗಿ ಐಟಿ ಕಾಯ್ದೆಯಡಿ ಅಪರಾಧವಾಗಿದೆ. ಹಾಗಾಗಿ ಕಾನೂನಿನ ಮೂಲಕ ವ್ಯವಹರಿಸುವಂತೆ ಕಟ್ಟುನಿಟ್ಟಾಗಿ ಹೇಳಿದೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದಲ್ಲಿ ಟಿಕ್‌ಟಾಕ್ ಮೇಲೆ ಇದೇ ರೀತಿಯ ನಿಷೇಧವನ್ನು ತರಬೇಕೆಂದಿದ್ದಾರೆ ಎನ್ನಲಾಗಿದೆ. ಈ ಅಪ್ಲಿಕೇಶನ್ ಅಮೇರಿಕಾದಲ್ಲಿ ಸುಮಾರು 50 ಮಿಲಿಯನ್ ಬಳಕೆದಾರರನ್ನು, 800 ಮಿಲಿಯನ್ ಜಾಗತಿಕ ಬಳಕೆದಾರರನ್ನು ಮತ್ತು $ 100 ಬಿಲಿಯನ್ ಮೌಲ್ಯ ಹೊಂದಿದೆ.

ಕಳೆದ ವಾರ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ, ಟ್ರಂಪ್ ಟಿಕ್‌ಟಾಕ್ ಅಮೆರಿಕನ್ ಬಳಕೆದಾರರ ಮೇಲೆ “ಬೇಹುಗಾರಿಕೆ” ನಡೆಸುತ್ತಿದೆ ಎಂದು ಆರೋಪಿಸಿದರು.

ಚೀನಾದ ಮಾಲೀಕತ್ವದಿಂದ ದೂರವಿರುವ ಕಾರ್ಯತಂತ್ರದ ಭಾಗವಾಗಿ ಟಿಕ್‌ಟಾಕ್ ತನ್ನ ಪ್ರಧಾನ ಕಛೇರಿಯನ್ನು ಲಂಡನ್‌ಗೆ ಸ್ಥಳಾಂತರಿಸುವ ಯೋಜನೆಯ ಬಗ್ಗೆ ವರದಿಯೊಂದು ಹೊರಬಿದ್ದಿದೆ.

ಇದರ ಮಧ್ಯೆ ಪಾಕಿಸ್ತಾನವು ಜನಪ್ರಿಯ ಆಟ PUBG ಯನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ. ಜೊತೆಗೆ ಚೀನಾದ ಲೈವ್-ಸ್ಟ್ರೀಮಿಂಗ್ ಅಪ್ಲಿಕೇಶನ್ ಬಿಗೊ (Bigo)ವನ್ನು ನಿಷೇಧಿಸಿದೆ.


ಇದನ್ನೂ ಓದಿ: 59 ಚೀನಿ ಆಪ್‌ಗಳ ನಿಷೇಧ: ಸ್ಪಷ್ಟೀಕರಣ ನೀಡಿದ ಟಿಕ್‌ಟಾಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...